Homeಮುಖಪುಟಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿಯಲ್ಲಿ ಸಂಸದ ಪ್ರತಾಪ್ ಸಿಂಹ ಕೋಟ್ಯಾಂತರ ರೂ ಕಮಿಷನ್ ತಿಂದಿದ್ದಾರೆ: ಎಚ್.ವಿಶ್ವನಾಥ್

ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿಯಲ್ಲಿ ಸಂಸದ ಪ್ರತಾಪ್ ಸಿಂಹ ಕೋಟ್ಯಾಂತರ ರೂ ಕಮಿಷನ್ ತಿಂದಿದ್ದಾರೆ: ಎಚ್.ವಿಶ್ವನಾಥ್

ನಾನು ರಾಜಕಾರಣಕ್ಕೆ ಬಂದು 50 ವರ್ಷ ಆಯ್ತು. ನನ್ನ ಮನೆಯನ್ನು ನೋಡಿ ಮತ್ತು ಈಗ ಪ್ರತಾಪ್ ಸಿಂಹ ಕಟ್ಟಿಸುತ್ತಿರುವ ಮನೆಯನ್ನು ನೋಡಿ. ಎಷ್ಟು ದೊಡ್ಡ ಮನೆ ಕಟ್ಟಿಸುತ್ತಿದ್ದಾರೆ ಗೊತ್ತೆ?

- Advertisement -
- Advertisement -

ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿಯಲ್ಲಿ ಸಂಸದ ಪ್ರತಾಪ್ ಸಿಂಹ ಕೋಟ್ಯಾಂತರ ರೂ ಕಮಿಷನ್ ತಿಂದಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಆರೋಪಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ದುಬಾರಿ ಟೋಲ್ ವಸೂಲಿ ಮಾಡುತ್ತಿರುವುದರ ವಿರುದ್ಧ​ ಮಾರ್ಚ್ 17ರಂದು ಹೆದ್ದಾರಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.

ಕಾಮಗಾರಿಯಲ್ಲಿ ದೊಡ್ಡ ಅಕ್ರಮವಾಗಿದ್ದು, ಹೆದ್ದಾರಿಗೆ ಸರಬರಾಜು ಆಗಿರುವ ಸಾಮಗ್ರಿಗಳು ಪ್ರತಾಪ್ ಸಿಂಹ ಬೆಂಬಲಿಗರಿಗೆ ಸೇರಿದ್ದಾಗಿವೆ. ಆ ರೀತಿಯಲ್ಲಿ ಕೋಟ್ಯಾಂತರ ರೂ ಕಮಿಷನ್ ಹೊಡೆದಿದ್ದಾರೆ. ನಾನು ರಾಜಕಾರಣಕ್ಕೆ ಬಂದು 50 ವರ್ಷ ಆಯ್ತು. ನನ್ನ ಮನೆಯನ್ನು ನೋಡಿ ಮತ್ತು ಈಗ ಪ್ರತಾಪ್ ಸಿಂಹ ಕಟ್ಟಿಸುತ್ತಿರುವ ಮನೆಯನ್ನು ನೋಡಿ. ಎಷ್ಟು ದೊಡ್ಡ ಮನೆ ಕಟ್ಟಿಸುತ್ತಿದ್ದಾರೆ ಗೊತ್ತೆ ಎಂದು ಪ್ರಶ್ನಿಸಿದರು.

ದಶಪಥ ರಸ್ತೆ ಬಗ್ಗೆ ಸಾಮಾನ್ಯ ಜನರಿಗೆ ಗೊತ್ತಿಲ್ಲ. ಒಂದು ಕಡೆ ಪ್ರತಾಪ್ ಸಿಂಹ ನಾನೇ ಇದರ ರುವಾರಿ ಅಂತಾರೆ. ಆದರೆ 2014 ರಲ್ಲಿ ನಾನು, ಧ್ರುವನಾರಾಯಣ್ ಸಂಸದರಾಗಿದ್ದೆವು. ಮೊದಲು ಇದ್ದ 4 ಪಥದ ರಸ್ತೆಗೆ ಎಸ್. ಎಂ ಕೃಷ್ಣ ಅವರ ಕಾಲಾವಧಿಯಲ್ಲಿ ಅನುಮೋದನೆ ಸಿಕ್ಕಿತ್ತು. ನಂತರ ಎಚ್.ಸಿ ಮಹಾದೇವಪ್ಪ ಅವರು ಪಿಡಬ್ಲ್ಯುಡಿ ಸಚಿವರಾಗಿದ್ದಾಗ ಈ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸಲಾಯಿತು. ಯುಪಿಎ ಸರ್ಕಾರದ ಮನಮೋಹನ್ ಸಿಂಗ್ ಈ ರಸ್ತೆ ಅಭಿವೃದ್ಧಿಗೆ ಅನುಮೋದನೆ ಕೊಟ್ಟಿದ್ದರು. ಈಗ ಬಿಜೆಪಿಯವರು ನಾವು ಮಾಡಿಸಿದ್ದು ಅಂತ ಬೊಗಳೆ ಬಿಡುತ್ತಿದ್ದಾರೆ. ಯಾರಪ್ಪನ ದುಡ್ಡು ತಂದು ಕೊಟ್ಟಿದ್ದೀರೀ? ಜನರ ಬೆವರಿನ ದುಡ್ಡಿನಿಂದ ಮಾಡಿಸಿದ್ದು ಇದು. ನಿಮ್ಮ ಮನೆಯಿಂದ ತಂದಿದ್ದ ದುಡ್ಡಲ್ಲ ಎಂದರು.

ಬಿಜೆಪಿ ಅವರು ತಮ್ಮ ಮನೆಯಿಂದ ತಂದು ಮಾಡಿಸಿದ ಹಾಗೆ ಮಾತಾಡುತ್ತಾರೆ. ಯುಪಿಎ ಸರ್ಕಾರದಲ್ಲಿ ಸುಮಾರು 3 ಸಾವಿರ ಕೋಟಿಗೆ ಅನುಮೋದನೆ ಸಿಕ್ಕಿತ್ತು. ನಂತರ ಬಿಜೆಪಿ ಸರ್ಕಾರ 6 ಸಾವಿರ ಕೋಟಿಗೆ ತಂತು. ಈಗ 9 ಸಾವಿರ ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿದ್ದಾರೆ. ಇದು ಖಾಸಗಿ ಹೆದ್ದಾರಿ ನಿರ್ಮಾಣ ಕಂಪನಿ ವತಿಯಿಂದ ನಿರ್ಮಿಸಲಾಗುತ್ತಿದೆ. ಇವರು ಗಡ್ಕರಿ ಸಂಬಂಧಿ. 40% ಸರ್ಕಾರ ಕೊಟ್ಟರೆ ಇನ್ನು ಉಳಿದ 60% ಹಣವನ್ನು ಟೋಲ್ ಮೂಲಕ ಸಂಗ್ರಹಿಸಲಾಗುತ್ತದೆ ಎಂದು ಆರೋಪಿಸಿದರು.

ಅರ್ಧ ಶೇವ್ ಮಾಡಿದ ಹಾಗೆ ಇನ್ನೂ ಕಾಮಗಾರಿ ಮುಗಿಯದಿದ್ದರೂ ಟೋಲ್ ಸಂಗ್ರಹಿಸಿಲು ಸರ್ಕಾರ ಹೊರಟಿದೆ. ಇನ್ನೂ ಸರ್ವೀಸ್ ರಸ್ತೆ ಕಾಮಗಾರಿ ಮುಗಿದಿಲ್ಲ. ಅವೈಜ್ಞಾನಿಕವಾಗಿ ರಸ್ತೆ ನಿರ್ಮಾಣ ಮಾಡಿದ್ದಾರೆ. ಇದರಿಂದಾಗಿ ರಸ್ತೆ ಬದಿಯಲ್ಲಿ ವ್ಯಾಪಾರ ನಡೆಸುತ್ತಿದ್ದ ಸಾವಿರಾರು ಜನರ ಜೀವನ ಬೀದಿಗೆ ಬಿದ್ದಿದೆ. ಇದೆಲ್ಲದರ ವಿರುದ್ಧ ಪ್ರತಿಭಟನೆ ನಡೆಸುತ್ತೇನೆ ಎಂದು ವಿಶ್ವನಾಥ್ ಹೇಳಿದ್ದಾರೆ.

ಇದನ್ನೂ ಓದಿ; ಲಂಚಾರೋಪಿ ಮಾಡಾಳ್ ಜಾಮೀನು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಲೋಕಾಯುಕ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

"ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...

ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ – ಸಿಎಂ ಸಿದ್ದರಾಮಯ್ಯ ಘೋಷಣೆ

ಮಾರ್ಚ್ 6, ಶುಕ್ರವಾರದಂದು 2026 ರ ರಾಜ್ಯ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸುವುದಾಗಿ ಘೋಷಿಸಿದರು. "ಮಕ್ಕಳ ಮೇಲೆ ಹೆಚ್ಚುತ್ತಿರುವ ಮೊಬೈಲ್...