Homeಮುಖಪುಟಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿಯಲ್ಲಿ ಸಂಸದ ಪ್ರತಾಪ್ ಸಿಂಹ ಕೋಟ್ಯಾಂತರ ರೂ ಕಮಿಷನ್ ತಿಂದಿದ್ದಾರೆ: ಎಚ್.ವಿಶ್ವನಾಥ್

ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿಯಲ್ಲಿ ಸಂಸದ ಪ್ರತಾಪ್ ಸಿಂಹ ಕೋಟ್ಯಾಂತರ ರೂ ಕಮಿಷನ್ ತಿಂದಿದ್ದಾರೆ: ಎಚ್.ವಿಶ್ವನಾಥ್

ನಾನು ರಾಜಕಾರಣಕ್ಕೆ ಬಂದು 50 ವರ್ಷ ಆಯ್ತು. ನನ್ನ ಮನೆಯನ್ನು ನೋಡಿ ಮತ್ತು ಈಗ ಪ್ರತಾಪ್ ಸಿಂಹ ಕಟ್ಟಿಸುತ್ತಿರುವ ಮನೆಯನ್ನು ನೋಡಿ. ಎಷ್ಟು ದೊಡ್ಡ ಮನೆ ಕಟ್ಟಿಸುತ್ತಿದ್ದಾರೆ ಗೊತ್ತೆ?

- Advertisement -
- Advertisement -

ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿಯಲ್ಲಿ ಸಂಸದ ಪ್ರತಾಪ್ ಸಿಂಹ ಕೋಟ್ಯಾಂತರ ರೂ ಕಮಿಷನ್ ತಿಂದಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಆರೋಪಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ದುಬಾರಿ ಟೋಲ್ ವಸೂಲಿ ಮಾಡುತ್ತಿರುವುದರ ವಿರುದ್ಧ​ ಮಾರ್ಚ್ 17ರಂದು ಹೆದ್ದಾರಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.

ಕಾಮಗಾರಿಯಲ್ಲಿ ದೊಡ್ಡ ಅಕ್ರಮವಾಗಿದ್ದು, ಹೆದ್ದಾರಿಗೆ ಸರಬರಾಜು ಆಗಿರುವ ಸಾಮಗ್ರಿಗಳು ಪ್ರತಾಪ್ ಸಿಂಹ ಬೆಂಬಲಿಗರಿಗೆ ಸೇರಿದ್ದಾಗಿವೆ. ಆ ರೀತಿಯಲ್ಲಿ ಕೋಟ್ಯಾಂತರ ರೂ ಕಮಿಷನ್ ಹೊಡೆದಿದ್ದಾರೆ. ನಾನು ರಾಜಕಾರಣಕ್ಕೆ ಬಂದು 50 ವರ್ಷ ಆಯ್ತು. ನನ್ನ ಮನೆಯನ್ನು ನೋಡಿ ಮತ್ತು ಈಗ ಪ್ರತಾಪ್ ಸಿಂಹ ಕಟ್ಟಿಸುತ್ತಿರುವ ಮನೆಯನ್ನು ನೋಡಿ. ಎಷ್ಟು ದೊಡ್ಡ ಮನೆ ಕಟ್ಟಿಸುತ್ತಿದ್ದಾರೆ ಗೊತ್ತೆ ಎಂದು ಪ್ರಶ್ನಿಸಿದರು.

ದಶಪಥ ರಸ್ತೆ ಬಗ್ಗೆ ಸಾಮಾನ್ಯ ಜನರಿಗೆ ಗೊತ್ತಿಲ್ಲ. ಒಂದು ಕಡೆ ಪ್ರತಾಪ್ ಸಿಂಹ ನಾನೇ ಇದರ ರುವಾರಿ ಅಂತಾರೆ. ಆದರೆ 2014 ರಲ್ಲಿ ನಾನು, ಧ್ರುವನಾರಾಯಣ್ ಸಂಸದರಾಗಿದ್ದೆವು. ಮೊದಲು ಇದ್ದ 4 ಪಥದ ರಸ್ತೆಗೆ ಎಸ್. ಎಂ ಕೃಷ್ಣ ಅವರ ಕಾಲಾವಧಿಯಲ್ಲಿ ಅನುಮೋದನೆ ಸಿಕ್ಕಿತ್ತು. ನಂತರ ಎಚ್.ಸಿ ಮಹಾದೇವಪ್ಪ ಅವರು ಪಿಡಬ್ಲ್ಯುಡಿ ಸಚಿವರಾಗಿದ್ದಾಗ ಈ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸಲಾಯಿತು. ಯುಪಿಎ ಸರ್ಕಾರದ ಮನಮೋಹನ್ ಸಿಂಗ್ ಈ ರಸ್ತೆ ಅಭಿವೃದ್ಧಿಗೆ ಅನುಮೋದನೆ ಕೊಟ್ಟಿದ್ದರು. ಈಗ ಬಿಜೆಪಿಯವರು ನಾವು ಮಾಡಿಸಿದ್ದು ಅಂತ ಬೊಗಳೆ ಬಿಡುತ್ತಿದ್ದಾರೆ. ಯಾರಪ್ಪನ ದುಡ್ಡು ತಂದು ಕೊಟ್ಟಿದ್ದೀರೀ? ಜನರ ಬೆವರಿನ ದುಡ್ಡಿನಿಂದ ಮಾಡಿಸಿದ್ದು ಇದು. ನಿಮ್ಮ ಮನೆಯಿಂದ ತಂದಿದ್ದ ದುಡ್ಡಲ್ಲ ಎಂದರು.

ಬಿಜೆಪಿ ಅವರು ತಮ್ಮ ಮನೆಯಿಂದ ತಂದು ಮಾಡಿಸಿದ ಹಾಗೆ ಮಾತಾಡುತ್ತಾರೆ. ಯುಪಿಎ ಸರ್ಕಾರದಲ್ಲಿ ಸುಮಾರು 3 ಸಾವಿರ ಕೋಟಿಗೆ ಅನುಮೋದನೆ ಸಿಕ್ಕಿತ್ತು. ನಂತರ ಬಿಜೆಪಿ ಸರ್ಕಾರ 6 ಸಾವಿರ ಕೋಟಿಗೆ ತಂತು. ಈಗ 9 ಸಾವಿರ ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿದ್ದಾರೆ. ಇದು ಖಾಸಗಿ ಹೆದ್ದಾರಿ ನಿರ್ಮಾಣ ಕಂಪನಿ ವತಿಯಿಂದ ನಿರ್ಮಿಸಲಾಗುತ್ತಿದೆ. ಇವರು ಗಡ್ಕರಿ ಸಂಬಂಧಿ. 40% ಸರ್ಕಾರ ಕೊಟ್ಟರೆ ಇನ್ನು ಉಳಿದ 60% ಹಣವನ್ನು ಟೋಲ್ ಮೂಲಕ ಸಂಗ್ರಹಿಸಲಾಗುತ್ತದೆ ಎಂದು ಆರೋಪಿಸಿದರು.

ಅರ್ಧ ಶೇವ್ ಮಾಡಿದ ಹಾಗೆ ಇನ್ನೂ ಕಾಮಗಾರಿ ಮುಗಿಯದಿದ್ದರೂ ಟೋಲ್ ಸಂಗ್ರಹಿಸಿಲು ಸರ್ಕಾರ ಹೊರಟಿದೆ. ಇನ್ನೂ ಸರ್ವೀಸ್ ರಸ್ತೆ ಕಾಮಗಾರಿ ಮುಗಿದಿಲ್ಲ. ಅವೈಜ್ಞಾನಿಕವಾಗಿ ರಸ್ತೆ ನಿರ್ಮಾಣ ಮಾಡಿದ್ದಾರೆ. ಇದರಿಂದಾಗಿ ರಸ್ತೆ ಬದಿಯಲ್ಲಿ ವ್ಯಾಪಾರ ನಡೆಸುತ್ತಿದ್ದ ಸಾವಿರಾರು ಜನರ ಜೀವನ ಬೀದಿಗೆ ಬಿದ್ದಿದೆ. ಇದೆಲ್ಲದರ ವಿರುದ್ಧ ಪ್ರತಿಭಟನೆ ನಡೆಸುತ್ತೇನೆ ಎಂದು ವಿಶ್ವನಾಥ್ ಹೇಳಿದ್ದಾರೆ.

ಇದನ್ನೂ ಓದಿ; ಲಂಚಾರೋಪಿ ಮಾಡಾಳ್ ಜಾಮೀನು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಲೋಕಾಯುಕ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೊಲ್ಲುವಂತೆ ಪೊಲೀಸರೇ ನನ್ನ ಸಹೋದರನಿಗೆ ಪ್ರಚೋದಿಸಿದರು..’; ಪ್ರೇಮಿಯ ಶವವನ್ನು ‘ಮದುವೆ’ಯಾದ ಯುವತಿಯ ಗಂಭೀರ ಆರೋಪ

ಮರ್ಯಾದೆಗೇಡು ಹತ್ಯೆ ಬಳಿಕ ತನ್ನ ಪ್ರೇಮಿಯ ಶವವನ್ನು 'ಮದುವೆ'ಯಾದ ಮಹಾರಾಷ್ಟ್ರದ ಯುವತಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನನ್ನ ಗೆಳೆಯನನ್ನು ಇಬ್ಬರು ಪೊಲೀಸರು ನಿಂದಿಸಿದ ಬಳಿಕ ನನ್ನ ಸಹೋದರ ಕೊಂದಿದ್ದಾನೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ...

ಮದುವೆ ಮನೆಯಲ್ಲಿ ಮಹಿಳೆಯರೊಂದಿಗೆ ಅನುಚಿತ ವರ್ತನೆ ಪ್ರಶ್ನಿಸಿದ್ದಕ್ಕೆ, ರಾಷ್ಟ್ರ ಮಟ್ಟದ ಬಾಡಿ ಬಿಲ್ಡರ್ ಹತ್ಯೆ

ಮದುವೆ ಸಮಾರಂಭದಲ್ಲಿ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ ಪುರುಷರ ಗುಂಪನ್ನು ಪ್ರಶ್ನಿಸಿದ್ದಕ್ಕಾಗಿ 20 ಜನ ದುಷ್ಕರ್ಮಿಗಳ ಗುಂಪು ಹೊಂಚುಹಾಕಿ, 26 ವರ್ಷದ ರಾಷ್ಟ್ರ ಮಟ್ಟದ ಬಾಡಿ ಬಿಲ್ಡರ್ ಅನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಂದಿರುವ ಘಟನೆ...

ಉತ್ತರ ಪ್ರದೇಶ| ಎಸ್‌ಐಆರ್‌ ಕೆಲಸದ ಒತ್ತಡಕ್ಕೆ ಮತ್ತೋರ್ವ ಅಧಿಕಾರಿ ಬಲಿ; ಸಾವಿಗೂ ಮೊದಲು ವಿಡಿಯೊ ಮಾಡಿ ಕಣ್ಣೀರಿಟ್ಟ ಬಿಎಲ್‌ಒ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಶೀಲನೆ (ಎಸ್‌ಐಆರ್) ಕೆಲಸದ ಒತ್ತಡಕ್ಕೆ ಸಂಬಂಧಿಸಿದಂತೆ ಮತ್ತೊಂದು ಆತ್ಮಹತ್ಯೆ ಪ್ರಕರಣ ವರದಿಯಾಗಿದೆ. ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಆಗಿ ಕೆಲಸ ಮಾಡುತ್ತಿದ್ದ 46 ವರ್ಷದ ಶಿಕ್ಷಕ ಸರ್ವೇಶ್...

ಎಸ್‌ಐಆರ್ ಚರ್ಚೆಗೆ ಪಟ್ಟು ಹಿಡಿದ ಪ್ರತಿಪಕ್ಷಗಳು : ಸಂಸತ್ತಿನ ಉಭಯ ಸದನಗಳ ಕಲಾಪ ನಾಳೆಗೆ ಮುಂದೂಡಿಕೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಕುರಿತು ಚರ್ಚೆ ನಡೆಸುವಂತೆ ಪ್ರತಿಪಕ್ಷಗಳು ಪಟ್ಟು ಹಿಡಿದು ಪ್ರತಿಭಟಿಸಿದ ಹಿನ್ನೆಲೆ, ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳು ನಾಳೆಗೆ (ಡಿಸೆಂಬರ್ 2) ಮುಂದೂಡಿಕೆಯಾಗಿದೆ. ಲೋಕಸಭೆಯಲ್ಲಿ ಪ್ರತಿಪಕ್ಷ ಸದಸ್ಯರ...

‘ನಿಜವಾದ ನಾಯಿಗಳು ಸಂಸತ್ತಿನಲ್ಲಿ ಕುಳಿತಿವೆ, ಅವು ಪ್ರತಿದಿನ ಜನರನ್ನು ಕಚ್ಚುತ್ತಿವೆ’: ಸಂಸದೆ ರೇಣುಕಾ ಚೌಧರಿ

ನವದೆಹಲಿ: ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ ಅವರು ಸೋಮವಾರ ಸಂಸತ್ತಿನ ಆವರಣಕ್ಕೆ ನಾಯಿಯೊಂದನ್ನು ಕರೆತಂದಿದ್ದು, ಕೆಲವು ಸಂಸದರು ಬೀದಿನಾಯಿಯನ್ನು ಕರೆತಂದಿದ್ದಾರೆ ಎಂದು ಆಕ್ಷೇಪಿಸಿದ್ದಾರೆ, ಮಾಧ್ಯಮಗಳ ಎದಿರು ಈ ಆಕ್ಷೇಪಣೆಗಳನ್ನು ತಳ್ಳಿಹಾಕಿರುವ ರೇಣುಕಾ ಚೌಧರಿ...

ಕರೆಯದ ಮದುವೆಗೆ ಊಟಕ್ಕೆ ಹೋದ ಬಾಲಕನಿಗೆ ಗುಂಡಿಕ್ಕಿ ಹತ್ಯೆ ; ಸಿಐಎಸ್‌ಎಫ್‌ ಹೆಡ್‌ ಕಾನ್‌ಸ್ಟೆಬಲ್‌ ಅರೆಸ್ಟ್

ಕರೆಯದ ಮದುವೆಗೆ ಊಟಕ್ಕೆ ಹೋದ ಕೊಳಗೇರಿಯ ಬಾಲಕನಿಗೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್‌) ಹೆಡ್‌ ಕಾನ್‌ಸ್ಟೆಬಲ್ ಗುಂಡಿಕ್ಕಿ ಹತ್ಯೆಗೈದ ಆಘಾತಕಾರಿ ಘಟನೆ ದೆಹಲಿಯ ಶಾಹದರಾದಲ್ಲಿ ಶನಿವಾರ (ನವೆಂಬರ್ 29) ಸಂಜೆ ನಡೆದಿದೆ. ಶಾಹದರಾದ...

ಸಿದ್ದರಾಮಯ್ಯ-ಶಿವಕುಮಾರ್ ಜಗಳದಲ್ಲಿ ಮೂರನೆ ವ್ಯಕ್ತಿ ಮೇಲೆ ಹೈಕಮಾಂಡ್‌ ಕಣ್ಣು; ಕರ್ನಾಟಕದ ಮುಂದಿನ ಸಿಎಂ ಯಾರು..?

ನವೆಂಬರ್‌ ಮಾಸ ಮುಗಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಎರಡೂವರೆ ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. 'ಈ ಹಿಂದೆ' ಮಾಡಿಕೊಂಡ ಒಪ್ಪಂದಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನಿಡಿ, ಡಿ.ಕೆ. ಶಿವಕುಮಾರ್ ಪ್ರಮಾಣವಚನ...

ಪಶ್ಚಿಮ ಬಂಗಾಳ| ಸಿಎಎ ಅಡಿಯಲ್ಲಿ ಪೌರತ್ವ ಪಡೆದ ಬಾಂಗ್ಲಾದೇಶದಿಂದ ಬಂದ 12 ಹಿಂದೂ ನಿರಾಶ್ರಿತ ಕುಟುಂಬಗಳು

ಧಾರ್ಮಿಕ ಹಿಂಸಾಚಾರದಿಂದ ತಪ್ಪಿಸಿಕೊಳ್ಳಲು ಹಲವು ವರ್ಷಗಳ ಹಿಂದೆ ಭಾರತಕ್ಕೆ ಪಲಾಯನ ಮಾಡಿದ ಬಾಂಗ್ಲಾದೇಶದ 12 ಹಿಂದೂ ನಿರಾಶ್ರಿತರಿಗೆ ಕೇಂದ್ರ ಸರ್ಕಾರ ಭಾರತೀಯ ಪೌರತ್ವ ನೀಡಿದೆ ಎಂದು 'ದಿ ಅಬ್ಸರ್ವರ್‌ ಪೋಸ್ಟ್‌' ವರದಿ ಮಾಡಿದೆ. ...

“ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವುದು ನಾಟಕವಲ್ಲ” : ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ದೆಹಲಿಯ ವಾಯು ಮಾಲಿನ್ಯದಂತಹ ನಿರ್ಣಾಯಕ ವಿಷಯಗಳನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸುವುದು ನಾಟಕವಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಧಾನಿ ನರೇಂದ್ರ...

ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ: ಸಿಬಿಐ ತನಿಖೆಗೆ ಆಗ್ರಹಿಸಿ, ಕೇರಳ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ರಾಜೀವ್ ಚಂದ್ರಶೇಖರ್

ಕೊಚ್ಚಿ: ಶಬರಿಮಲೆ ದೇವಸ್ಥಾನದಿಂದ ಚಿನ್ನ ನಾಪತ್ತೆಯಾಗಿರುವ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಘಟನೆಯ ಬಗ್ಗೆ ಸಮಗ್ರ ತನಿಖೆ ಅಗತ್ಯ ಎಂದು ಚಂದ್ರಶೇಖರ್ ತಮ್ಮ ಅರ್ಜಿಯಲ್ಲಿ...