Homeಮುಖಪುಟಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿಯಲ್ಲಿ ಸಂಸದ ಪ್ರತಾಪ್ ಸಿಂಹ ಕೋಟ್ಯಾಂತರ ರೂ ಕಮಿಷನ್ ತಿಂದಿದ್ದಾರೆ: ಎಚ್.ವಿಶ್ವನಾಥ್

ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿಯಲ್ಲಿ ಸಂಸದ ಪ್ರತಾಪ್ ಸಿಂಹ ಕೋಟ್ಯಾಂತರ ರೂ ಕಮಿಷನ್ ತಿಂದಿದ್ದಾರೆ: ಎಚ್.ವಿಶ್ವನಾಥ್

ನಾನು ರಾಜಕಾರಣಕ್ಕೆ ಬಂದು 50 ವರ್ಷ ಆಯ್ತು. ನನ್ನ ಮನೆಯನ್ನು ನೋಡಿ ಮತ್ತು ಈಗ ಪ್ರತಾಪ್ ಸಿಂಹ ಕಟ್ಟಿಸುತ್ತಿರುವ ಮನೆಯನ್ನು ನೋಡಿ. ಎಷ್ಟು ದೊಡ್ಡ ಮನೆ ಕಟ್ಟಿಸುತ್ತಿದ್ದಾರೆ ಗೊತ್ತೆ?

- Advertisement -
- Advertisement -

ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿಯಲ್ಲಿ ಸಂಸದ ಪ್ರತಾಪ್ ಸಿಂಹ ಕೋಟ್ಯಾಂತರ ರೂ ಕಮಿಷನ್ ತಿಂದಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಆರೋಪಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ದುಬಾರಿ ಟೋಲ್ ವಸೂಲಿ ಮಾಡುತ್ತಿರುವುದರ ವಿರುದ್ಧ​ ಮಾರ್ಚ್ 17ರಂದು ಹೆದ್ದಾರಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.

ಕಾಮಗಾರಿಯಲ್ಲಿ ದೊಡ್ಡ ಅಕ್ರಮವಾಗಿದ್ದು, ಹೆದ್ದಾರಿಗೆ ಸರಬರಾಜು ಆಗಿರುವ ಸಾಮಗ್ರಿಗಳು ಪ್ರತಾಪ್ ಸಿಂಹ ಬೆಂಬಲಿಗರಿಗೆ ಸೇರಿದ್ದಾಗಿವೆ. ಆ ರೀತಿಯಲ್ಲಿ ಕೋಟ್ಯಾಂತರ ರೂ ಕಮಿಷನ್ ಹೊಡೆದಿದ್ದಾರೆ. ನಾನು ರಾಜಕಾರಣಕ್ಕೆ ಬಂದು 50 ವರ್ಷ ಆಯ್ತು. ನನ್ನ ಮನೆಯನ್ನು ನೋಡಿ ಮತ್ತು ಈಗ ಪ್ರತಾಪ್ ಸಿಂಹ ಕಟ್ಟಿಸುತ್ತಿರುವ ಮನೆಯನ್ನು ನೋಡಿ. ಎಷ್ಟು ದೊಡ್ಡ ಮನೆ ಕಟ್ಟಿಸುತ್ತಿದ್ದಾರೆ ಗೊತ್ತೆ ಎಂದು ಪ್ರಶ್ನಿಸಿದರು.

ದಶಪಥ ರಸ್ತೆ ಬಗ್ಗೆ ಸಾಮಾನ್ಯ ಜನರಿಗೆ ಗೊತ್ತಿಲ್ಲ. ಒಂದು ಕಡೆ ಪ್ರತಾಪ್ ಸಿಂಹ ನಾನೇ ಇದರ ರುವಾರಿ ಅಂತಾರೆ. ಆದರೆ 2014 ರಲ್ಲಿ ನಾನು, ಧ್ರುವನಾರಾಯಣ್ ಸಂಸದರಾಗಿದ್ದೆವು. ಮೊದಲು ಇದ್ದ 4 ಪಥದ ರಸ್ತೆಗೆ ಎಸ್. ಎಂ ಕೃಷ್ಣ ಅವರ ಕಾಲಾವಧಿಯಲ್ಲಿ ಅನುಮೋದನೆ ಸಿಕ್ಕಿತ್ತು. ನಂತರ ಎಚ್.ಸಿ ಮಹಾದೇವಪ್ಪ ಅವರು ಪಿಡಬ್ಲ್ಯುಡಿ ಸಚಿವರಾಗಿದ್ದಾಗ ಈ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸಲಾಯಿತು. ಯುಪಿಎ ಸರ್ಕಾರದ ಮನಮೋಹನ್ ಸಿಂಗ್ ಈ ರಸ್ತೆ ಅಭಿವೃದ್ಧಿಗೆ ಅನುಮೋದನೆ ಕೊಟ್ಟಿದ್ದರು. ಈಗ ಬಿಜೆಪಿಯವರು ನಾವು ಮಾಡಿಸಿದ್ದು ಅಂತ ಬೊಗಳೆ ಬಿಡುತ್ತಿದ್ದಾರೆ. ಯಾರಪ್ಪನ ದುಡ್ಡು ತಂದು ಕೊಟ್ಟಿದ್ದೀರೀ? ಜನರ ಬೆವರಿನ ದುಡ್ಡಿನಿಂದ ಮಾಡಿಸಿದ್ದು ಇದು. ನಿಮ್ಮ ಮನೆಯಿಂದ ತಂದಿದ್ದ ದುಡ್ಡಲ್ಲ ಎಂದರು.

ಬಿಜೆಪಿ ಅವರು ತಮ್ಮ ಮನೆಯಿಂದ ತಂದು ಮಾಡಿಸಿದ ಹಾಗೆ ಮಾತಾಡುತ್ತಾರೆ. ಯುಪಿಎ ಸರ್ಕಾರದಲ್ಲಿ ಸುಮಾರು 3 ಸಾವಿರ ಕೋಟಿಗೆ ಅನುಮೋದನೆ ಸಿಕ್ಕಿತ್ತು. ನಂತರ ಬಿಜೆಪಿ ಸರ್ಕಾರ 6 ಸಾವಿರ ಕೋಟಿಗೆ ತಂತು. ಈಗ 9 ಸಾವಿರ ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿದ್ದಾರೆ. ಇದು ಖಾಸಗಿ ಹೆದ್ದಾರಿ ನಿರ್ಮಾಣ ಕಂಪನಿ ವತಿಯಿಂದ ನಿರ್ಮಿಸಲಾಗುತ್ತಿದೆ. ಇವರು ಗಡ್ಕರಿ ಸಂಬಂಧಿ. 40% ಸರ್ಕಾರ ಕೊಟ್ಟರೆ ಇನ್ನು ಉಳಿದ 60% ಹಣವನ್ನು ಟೋಲ್ ಮೂಲಕ ಸಂಗ್ರಹಿಸಲಾಗುತ್ತದೆ ಎಂದು ಆರೋಪಿಸಿದರು.

ಅರ್ಧ ಶೇವ್ ಮಾಡಿದ ಹಾಗೆ ಇನ್ನೂ ಕಾಮಗಾರಿ ಮುಗಿಯದಿದ್ದರೂ ಟೋಲ್ ಸಂಗ್ರಹಿಸಿಲು ಸರ್ಕಾರ ಹೊರಟಿದೆ. ಇನ್ನೂ ಸರ್ವೀಸ್ ರಸ್ತೆ ಕಾಮಗಾರಿ ಮುಗಿದಿಲ್ಲ. ಅವೈಜ್ಞಾನಿಕವಾಗಿ ರಸ್ತೆ ನಿರ್ಮಾಣ ಮಾಡಿದ್ದಾರೆ. ಇದರಿಂದಾಗಿ ರಸ್ತೆ ಬದಿಯಲ್ಲಿ ವ್ಯಾಪಾರ ನಡೆಸುತ್ತಿದ್ದ ಸಾವಿರಾರು ಜನರ ಜೀವನ ಬೀದಿಗೆ ಬಿದ್ದಿದೆ. ಇದೆಲ್ಲದರ ವಿರುದ್ಧ ಪ್ರತಿಭಟನೆ ನಡೆಸುತ್ತೇನೆ ಎಂದು ವಿಶ್ವನಾಥ್ ಹೇಳಿದ್ದಾರೆ.

ಇದನ್ನೂ ಓದಿ; ಲಂಚಾರೋಪಿ ಮಾಡಾಳ್ ಜಾಮೀನು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಲೋಕಾಯುಕ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...