Homeಮುಖಪುಟಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿಯಲ್ಲಿ ಸಂಸದ ಪ್ರತಾಪ್ ಸಿಂಹ ಕೋಟ್ಯಾಂತರ ರೂ ಕಮಿಷನ್ ತಿಂದಿದ್ದಾರೆ: ಎಚ್.ವಿಶ್ವನಾಥ್

ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿಯಲ್ಲಿ ಸಂಸದ ಪ್ರತಾಪ್ ಸಿಂಹ ಕೋಟ್ಯಾಂತರ ರೂ ಕಮಿಷನ್ ತಿಂದಿದ್ದಾರೆ: ಎಚ್.ವಿಶ್ವನಾಥ್

ನಾನು ರಾಜಕಾರಣಕ್ಕೆ ಬಂದು 50 ವರ್ಷ ಆಯ್ತು. ನನ್ನ ಮನೆಯನ್ನು ನೋಡಿ ಮತ್ತು ಈಗ ಪ್ರತಾಪ್ ಸಿಂಹ ಕಟ್ಟಿಸುತ್ತಿರುವ ಮನೆಯನ್ನು ನೋಡಿ. ಎಷ್ಟು ದೊಡ್ಡ ಮನೆ ಕಟ್ಟಿಸುತ್ತಿದ್ದಾರೆ ಗೊತ್ತೆ?

- Advertisement -
- Advertisement -

ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿಯಲ್ಲಿ ಸಂಸದ ಪ್ರತಾಪ್ ಸಿಂಹ ಕೋಟ್ಯಾಂತರ ರೂ ಕಮಿಷನ್ ತಿಂದಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಆರೋಪಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ದುಬಾರಿ ಟೋಲ್ ವಸೂಲಿ ಮಾಡುತ್ತಿರುವುದರ ವಿರುದ್ಧ​ ಮಾರ್ಚ್ 17ರಂದು ಹೆದ್ದಾರಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.

ಕಾಮಗಾರಿಯಲ್ಲಿ ದೊಡ್ಡ ಅಕ್ರಮವಾಗಿದ್ದು, ಹೆದ್ದಾರಿಗೆ ಸರಬರಾಜು ಆಗಿರುವ ಸಾಮಗ್ರಿಗಳು ಪ್ರತಾಪ್ ಸಿಂಹ ಬೆಂಬಲಿಗರಿಗೆ ಸೇರಿದ್ದಾಗಿವೆ. ಆ ರೀತಿಯಲ್ಲಿ ಕೋಟ್ಯಾಂತರ ರೂ ಕಮಿಷನ್ ಹೊಡೆದಿದ್ದಾರೆ. ನಾನು ರಾಜಕಾರಣಕ್ಕೆ ಬಂದು 50 ವರ್ಷ ಆಯ್ತು. ನನ್ನ ಮನೆಯನ್ನು ನೋಡಿ ಮತ್ತು ಈಗ ಪ್ರತಾಪ್ ಸಿಂಹ ಕಟ್ಟಿಸುತ್ತಿರುವ ಮನೆಯನ್ನು ನೋಡಿ. ಎಷ್ಟು ದೊಡ್ಡ ಮನೆ ಕಟ್ಟಿಸುತ್ತಿದ್ದಾರೆ ಗೊತ್ತೆ ಎಂದು ಪ್ರಶ್ನಿಸಿದರು.

ದಶಪಥ ರಸ್ತೆ ಬಗ್ಗೆ ಸಾಮಾನ್ಯ ಜನರಿಗೆ ಗೊತ್ತಿಲ್ಲ. ಒಂದು ಕಡೆ ಪ್ರತಾಪ್ ಸಿಂಹ ನಾನೇ ಇದರ ರುವಾರಿ ಅಂತಾರೆ. ಆದರೆ 2014 ರಲ್ಲಿ ನಾನು, ಧ್ರುವನಾರಾಯಣ್ ಸಂಸದರಾಗಿದ್ದೆವು. ಮೊದಲು ಇದ್ದ 4 ಪಥದ ರಸ್ತೆಗೆ ಎಸ್. ಎಂ ಕೃಷ್ಣ ಅವರ ಕಾಲಾವಧಿಯಲ್ಲಿ ಅನುಮೋದನೆ ಸಿಕ್ಕಿತ್ತು. ನಂತರ ಎಚ್.ಸಿ ಮಹಾದೇವಪ್ಪ ಅವರು ಪಿಡಬ್ಲ್ಯುಡಿ ಸಚಿವರಾಗಿದ್ದಾಗ ಈ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸಲಾಯಿತು. ಯುಪಿಎ ಸರ್ಕಾರದ ಮನಮೋಹನ್ ಸಿಂಗ್ ಈ ರಸ್ತೆ ಅಭಿವೃದ್ಧಿಗೆ ಅನುಮೋದನೆ ಕೊಟ್ಟಿದ್ದರು. ಈಗ ಬಿಜೆಪಿಯವರು ನಾವು ಮಾಡಿಸಿದ್ದು ಅಂತ ಬೊಗಳೆ ಬಿಡುತ್ತಿದ್ದಾರೆ. ಯಾರಪ್ಪನ ದುಡ್ಡು ತಂದು ಕೊಟ್ಟಿದ್ದೀರೀ? ಜನರ ಬೆವರಿನ ದುಡ್ಡಿನಿಂದ ಮಾಡಿಸಿದ್ದು ಇದು. ನಿಮ್ಮ ಮನೆಯಿಂದ ತಂದಿದ್ದ ದುಡ್ಡಲ್ಲ ಎಂದರು.

ಬಿಜೆಪಿ ಅವರು ತಮ್ಮ ಮನೆಯಿಂದ ತಂದು ಮಾಡಿಸಿದ ಹಾಗೆ ಮಾತಾಡುತ್ತಾರೆ. ಯುಪಿಎ ಸರ್ಕಾರದಲ್ಲಿ ಸುಮಾರು 3 ಸಾವಿರ ಕೋಟಿಗೆ ಅನುಮೋದನೆ ಸಿಕ್ಕಿತ್ತು. ನಂತರ ಬಿಜೆಪಿ ಸರ್ಕಾರ 6 ಸಾವಿರ ಕೋಟಿಗೆ ತಂತು. ಈಗ 9 ಸಾವಿರ ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿದ್ದಾರೆ. ಇದು ಖಾಸಗಿ ಹೆದ್ದಾರಿ ನಿರ್ಮಾಣ ಕಂಪನಿ ವತಿಯಿಂದ ನಿರ್ಮಿಸಲಾಗುತ್ತಿದೆ. ಇವರು ಗಡ್ಕರಿ ಸಂಬಂಧಿ. 40% ಸರ್ಕಾರ ಕೊಟ್ಟರೆ ಇನ್ನು ಉಳಿದ 60% ಹಣವನ್ನು ಟೋಲ್ ಮೂಲಕ ಸಂಗ್ರಹಿಸಲಾಗುತ್ತದೆ ಎಂದು ಆರೋಪಿಸಿದರು.

ಅರ್ಧ ಶೇವ್ ಮಾಡಿದ ಹಾಗೆ ಇನ್ನೂ ಕಾಮಗಾರಿ ಮುಗಿಯದಿದ್ದರೂ ಟೋಲ್ ಸಂಗ್ರಹಿಸಿಲು ಸರ್ಕಾರ ಹೊರಟಿದೆ. ಇನ್ನೂ ಸರ್ವೀಸ್ ರಸ್ತೆ ಕಾಮಗಾರಿ ಮುಗಿದಿಲ್ಲ. ಅವೈಜ್ಞಾನಿಕವಾಗಿ ರಸ್ತೆ ನಿರ್ಮಾಣ ಮಾಡಿದ್ದಾರೆ. ಇದರಿಂದಾಗಿ ರಸ್ತೆ ಬದಿಯಲ್ಲಿ ವ್ಯಾಪಾರ ನಡೆಸುತ್ತಿದ್ದ ಸಾವಿರಾರು ಜನರ ಜೀವನ ಬೀದಿಗೆ ಬಿದ್ದಿದೆ. ಇದೆಲ್ಲದರ ವಿರುದ್ಧ ಪ್ರತಿಭಟನೆ ನಡೆಸುತ್ತೇನೆ ಎಂದು ವಿಶ್ವನಾಥ್ ಹೇಳಿದ್ದಾರೆ.

ಇದನ್ನೂ ಓದಿ; ಲಂಚಾರೋಪಿ ಮಾಡಾಳ್ ಜಾಮೀನು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಲೋಕಾಯುಕ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...