Homeಕರ್ನಾಟಕಮರಗಳ್ಳತನ ಪ್ರಕರಣ: ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರನ ಬಂಧನ

ಮರಗಳ್ಳತನ ಪ್ರಕರಣ: ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರನ ಬಂಧನ

- Advertisement -
- Advertisement -

ಮರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಮ್ ಸಿಂಹ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶನಿವಾರ ಬಂಧಿಸಿದ್ದು, ನಂದಗೋಡನಹಳ್ಳಿಯಲ್ಲಿ ಮರ ಕಡಿದು ಸಾಗಿಸಿದ ಆರೋಪದಡಿ ವಿಕ್ರಮ್ ಸಿಂಹ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೊಂಡನಹಳ್ಳಿಯ ಸರ್ಕಾರಿ ಜಮೀನಿನಲ್ಲಿದ್ದ 126 ಮರಗಳನ್ನು ಅಕ್ರಮವಾಗಿ ಕಡಿದ ಆರೋಪ ವಿಕ್ರಂ ಮೇಲಿತ್ತು. ಬೇಲೂರು ತಹಶೀಲ್ದಾರ್ ಮಮತಾ ಅವರ ವರದಿ ಮೇರೆಗೆ ಡಿ.16ರಂದು ಅರಣ್ಯ ಇಲಾಖೆಗೆ ಮರಗಳ್ಳತನ ವಿಷಯ ತಿಳಿದಿದೆ. ಶುಂಠಿ ಕೃಷಿ ಮಾಡಲು ಮರಗಳನ್ನು ಕಡಿಯಲಾಗಿದೆ ಎಂದು ಹೇಳಲಾಗಿತ್ತು.

ದೂರು ದಾಖಲಾದ ನಂತರ ವಿಕ್ರಮ್ ಸಿಂಹ ಅವರು ಆರಂಭದಲ್ಲಿ ತನಿಖಾಧಿಕಾರಿಯ ಮುಂದೆ ಹಾಜರಾಗಿದ್ದರು ಎಂದು ಅರಣ್ಯ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ. ಆದರೆ ನಂತರ ಅವರು ಅಧಿಕಾರಿಗಳಿಂದ ತಪ್ಪಿಸಿಕೊಂಡಿದ್ದರು. ಅವರ ಕುರಿತ ಸಾಕ್ಷ್ಯ ಸಂಗ್ರಹದ ಬಳಿಕ ಅರಣ್ಯಾಧಿಕಾರಿಗಳು ಅವರ ಬಂಧನಕ್ಕೆ ಬಲೆ ಬೀಸಿದ್ದರು ಎನ್ನಲಾಗಿದೆ.

ಆರೋಪಿ ಹಾಸನದಿಂದ ಬೆಂಗಳೂರಿಗೆ ತೆರಳಿರುವುದನ್ನು ತಿಳಿದ ಅಧಿಕಾರಿಗಳ ತಂಡ ಆರೋಪಿಯ ಪತ್ತೆಗೆ ಸಹಕರಿಸಲು ನಗರ ಪೊಲೀಸ್ ಆಯುಕ್ತರಿಂದ ಸಹಯಾವನ್ನು ಕೋರಿದ್ದರು. ಹಾಸನದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಭುಗೌಡ ಬಿರಾದಾರ್ ಮತ್ತು ಬೆಂಗಳೂರಿನ ಅಪರಾಧ ವಿಭಾಗದ ಎಸಿಪಿ ನೇತೃತ್ವದ ಜಂಟಿ ತಂಡವು ವಿಕ್ರಮ್ ಸಿಂಹನನ್ನು ಬೆಂಗಳೂರಿನಲ್ಲಿ ಬಂಧಿಸಿದೆ. ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ನಿರ್ಲಕ್ಷ್ಯ ಮತ್ತು ಕರ್ತವ್ಯಲೋಪ ಆರೋಪದಡಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ ಮೋಹನ್ ಕುಮಾರ್ ಸೇರಿದಂತೆ ಐವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ಬೇಲೂರು ತಾಲೂಕಿನ ನಂದಗೋಡನಹಳ್ಳಿಯ 10 ಎಕರೆಯಲ್ಲಿ ಬೆಳೆದಿದ್ದ 126 ಮರಗಳನ್ನು ಕಡಿಯಲಾಗಿದ್ದು, ಈ ಸಂಬಂಧ ಬೇಲೂರು ಆರ್‌ಎಫ್‌ಒ, ಜಮೀನಿನ ಮಾಲೀಕರಾದ ಜಯಮ್ಮ, ರಾಕೇಶ್ ಶೆಟ್ಟಿ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಕಡಿದಿರುವ ಮರಗಳನ್ನು ಅರಣ್ಯ ಇಲಾಖೆ ಡಿಪೊದಲ್ಲಿ ಸಂಗ್ರಹಿಸಲಾಗಿದೆ. ಪ್ರಕರಣ ಬಯಲಾಗುತ್ತಿದ್ದಂತೆ ಪ್ರತಾಪ್ ಸಿಂಹ ಹಾಗೂ ಸಹೋದರನ ವಿರುದ್ಧ ಅಣ್ಣ ಪ್ರತಾಪ್ ಸಿಂಹ ನಾಡಕಳ್ಳ, ತಮ್ಮ ವಿಕ್ರಂ ಸಿಂಹ ಕಾಡುಗಳ್ಳ ಎಂದು ಕಾಂಗ್ರೆಸ್ ಟೀಕಿಸಿತ್ತು.

ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯೆ:

ಈ ಬಗ್ಗೆ ಮಾತನಾಡಿದ್ದ ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಖಾತೆ ಸಚಿವ ಈಶ್ವರ ಬಿ.ಖಂಡ್ರೆ, ಬೇಲೂರು ತಾಲೂಕಿನ ನಂದಗೋಡನ ಹಳ್ಳಿಯಲ್ಲಿ 126ಕ್ಕೂ ಹೆಚ್ಚು ಮರಗಳನ್ನು ಅಕ್ರಮವಾಗಿ ಕಡಿಯಲಾಗಿದೆ. ಇದರಲ್ಲಿ 60 ಬೃಹತ್‌ ಹಳೆಯ ಮರಗಳೂ ಸೇರಿವೆ. ಈ ರೀತಿ ಸ್ವಾರ್ಥಕ್ಕೆ ಯಾರೇ ಮರ ಕಡಿದರೆ ಅಪರಾಧ, ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ವಿಕ್ರಂ ಸಿಂಹ ಎಂಬವರನ್ನು ವಶಕ್ಕೆ ಪಡೆದು ಪ್ರಶ್ನಿಸುವುದು ಅಗತ್ಯವೆಂದು ಮನಗಂಡು ತನಿಖಾಧಿಕಾರಿಗಳು ಅವರನ್ನು ಬಂಧಿಸಿದ್ದಾರೆ. ಈ ಪ್ರಕರಣವನ್ನು ತಹಶೀಲ್ದಾರ್ ಅವರು ಬೆಳಕಿಗೆ ತಂದಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಯ ನಿರ್ಲಕ್ಷ್ಯ ಮೇಲ್ನೋಟಕ್ಕೆ ಕಂಡು ಬಂದಿದೆ. ತಕ್ಷಣ ಕ್ರಮ ವಹಿಸದೆ ಲೋಪ ಎಸಗಿದ ಆರೋಪದಡಿ ಐವರು ಅರಣ್ಯ ಇಲಾಖೆಯ ಸಿಬ್ಬಂದಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಉನ್ನಾವೊ ಎಸ್ಪಿ ಕಚೇರಿ ಹೊರಗೆ ಬೆಂಕಿ ಹಚ್ಚಿಕೊಂಡಿದ್ದ ದಲಿತ ಯುವಕ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...