Homeಮುಖಪುಟಸಂಸದ ಪ್ರತಾಪ್‌ ಸಿಂಹ ವಿಧಾನಸೌಧ ಪ್ರವೇಶಿಸದಂತೆ ತಡೆ: ಕಾರಣವೇನು?

ಸಂಸದ ಪ್ರತಾಪ್‌ ಸಿಂಹ ವಿಧಾನಸೌಧ ಪ್ರವೇಶಿಸದಂತೆ ತಡೆ: ಕಾರಣವೇನು?

- Advertisement -
- Advertisement -

ಮೈಸೂರು ಕೊಡಗು ಸಂಸದ ಪ್ರತಾಪ್‌ ಸಿಂಹರವರು ಕೆಲಸದ ನಿಮಿತ್ತ ಇಂದು ವಿಧಾನಸೌಧಕ್ಕೆ ಹೋಗಲು ಮುಂದಾದಾಗ ಅವರನ್ನು ಸಿಬ್ಬಂದಿ ತಡೆದು ವಾಪಸ್‌ ಕಳಿಸಿದ ಘಟನೆ ಜರುಗಿದೆ. ಇದಕ್ಕೆ ಮುಖ್ಯ ಕಾರಣ ಅವರು ಮಾಸ್ಕ್‌ ಧರಿಸದೇ ಬಂದಿದ್ದಾಗಿದೆ.

ಮಾಸ್ಕ್ ಧರಿಸದೆ ವಿಧಾನಸೌಧಕ್ಕೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ ಅವರನ್ನು ಆರೋಗ್ಯ ಸಿಬ್ಬಂದಿ ತಡೆದಿದ್ದಾರೆ. ವಿಧಾನಸೌಧದ ಪಶ್ಚಿಮ ಗೇಟ್ ಬಳಿ ಇದ್ದ ಆರೋಗ್ಯ ಸಿಬ್ಬಂದಿ ಪ್ರತಾಪ್ ಸಿಂಹ ಅವರ ಪ್ರವೇಶಕ್ಕೆ ಅನುಮತಿ ನೀಡಲಿಲ್ಲ. ಥರ್ಮಲ್ ಸ್ಕ್ರೀನಿಂಗ್ ಹಾಗೂ ಸ್ಯಾನಿಟೈಸ್ ಮಾಡುವ ಸಿಬ್ಬಂದಿಗಳು ಸಂಸದರಿಗೆ ಮಾಸ್ಕ್ ಧರಿಸುವಂತೆ ಒತ್ತಾಯಿಸಿದರು. ಮಾಸ್ಕ್ ಧರಿಸದೆ ವಿಧಾನಸೌಧ ಬಳಿ ಬಂದಿರುವುದಕ್ಕೆ ತಪಾಸಣಾ ಸಿಬ್ಬಂದಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧ ಮಾತ್ರವಲ್ಲ ಮನೆಯಿಂದ ಹೊರಬರಬೇಕಾದರೆ ಎಲ್ಲರೂ ಮಾಸ್ಕ್‌ ಧರಿಸುವುದು ಕಡ್ಡಾಯವಾಗಿದೆ. ಈ ಕುರಿತು ಪ್ರತಿ ದಿನ ಎಲ್ಲೆಡೆ ಪ್ರಚಾರ ಮಾಡಲಾಗುತ್ತಿದೆ. ನಿನ್ನೆ ತಾನೇ ರಾಜ್ಯದಲ್ಲಿ ಮಾಸ್ಕ್‌ ದಿನ ಆಚರಿಸಲಾಗಿದೆ. ಇಷ್ಟೆಲ್ಲಾ ತಿಳಿದಿದ್ದರೂ ಒಬ್ಬ ಜವಾಬ್ದಾರಿಯುತ ಜನಪ್ರತಿನಿಧಿಯಾಗಿ ಮಾಸ್ಕ್‌ ಧರಿಸದೇ ವಿಧಾನಸೌಧದ ಬಳಿ ಹೇಗೆ ಬಂದರು ಎಂದು ಹಲವರು ಆಕ್ಷೇಪ ವ್ಯಕ್ತಪಡಿಸಿರುವುದು ವರದಿಯಾಗಿದೆ.

ಈ ಹಿನ್ನೆಲೆಯಲ್ಲಿ ಸಂಸದ ಪ್ರತಾಪ್‌ ಸಿಂಹ ಅವರು ವಿಧಾನ ಸೌಧ ಪ್ರವೇಶಿಸಲಾಗದೇ ವಾಪಸ್‌ ತೆರಳಬೇಕಾದ ಪರಿಸ್ಥಿತಿ ಎದುರಾಗಿದೆ. ರಾಜ್ಯದಲ್ಲಿ ಮತ್ತು ದೇಶದಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದೆ. ಈಗಾಗಲೇ ಕೊರೋನಾ ವೈರಸ್ ಶಕ್ತಿಸೌಧಕ್ಕೆ ಕಾಲಿಟ್ಟಿದೆ. ಅಲ್ಲಿನ ಆಹಾರದ ವಿಭಾಗದ ಸಿಬ್ಬಂದಿಗೆ ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ ಸೀಲ್‌ಡೌನ್‌ ಮಾಡಲಾಗಿದೆ ಅಲ್ಲದೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಗಂಡನಿಗೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದೆ. ಇದರಿಂದ ಸಿಎಂ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿ ಮತ್ತು ಹಿರಿಯ ಅಧಿಕಾರಿಗಳಿಗೆ ಕೊರೋನಾ ಭೀತಿ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಸಂಸದರು ಎಚ್ಚರಿಕೆಯಿಂದ ಇರಬೇಕು ಎಂಬ ಅಭಿಪ್ರಾಯ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...