Homeಕರ್ನಾಟಕಮೈಸೂರು ಜಿಲ್ಲಾಡಳಿತದ ವಿರುದ್ಧ ಪ್ರತಾಪ್ ಸಿಂಹ ಸಮರ! ಬಿಜೆಪಿ v/s ಬಿಜೆಪಿ?

ಮೈಸೂರು ಜಿಲ್ಲಾಡಳಿತದ ವಿರುದ್ಧ ಪ್ರತಾಪ್ ಸಿಂಹ ಸಮರ! ಬಿಜೆಪಿ v/s ಬಿಜೆಪಿ?

ಕೇಂದ್ರದಲ್ಲೂ, ರಾಜ್ಯದಲ್ಲೂ ಬಿಜೆಪಿ ನೇತೃತ್ವದ ಸರ್ಕಾರವಿದೆ. ಆದರೂ ಪ್ರತಾಪ್ ಸಿಂಹ ಅವರು, ದೇವಾಲಯ ತೆರವು ಕಾರ್ಯಾಚರಣೆಗೆ ಈ ರೀತಿ ಪ್ರತಿಕ್ರಿಯೆ ನೀಡುತ್ತಿರುವ ಉದ್ದೇಶವೇನು?

- Advertisement -
- Advertisement -

ಕೇಂದ್ರದಲ್ಲೂ ಬಿಜೆಪಿ, ರಾಜ್ಯದಲ್ಲೂ ಬಿಜೆಪಿ ನೇತೃತ್ವದ ಸರ್ಕಾರವಿದೆ. ಆದರೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರು, ದೇವಾಲಯ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸಾರ್ವಜನಿಕ ಪ್ರತಿಕ್ರಿಯೆ ನೀಡುತ್ತಿರುವ ಉದ್ದೇಶವೇನು ಎಂಬ ಪ್ರಶ್ನೆಗಳ ನಡುವೆಯೇ ಅವರು ಭಾನುವಾರ ಪತ್ರಿಕಾಗೋಷ್ಠಿ ನಡೆಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ದೇವಾಲಯಗಳ ತೆರವು ಕಾರ್ಯಾಚರಣೆ ಮಾಡದಂತೆ ಮೈಸೂರು ಜಿಲ್ಲಾಡಳಿತದ ವಿರುದ್ಧ ಪ್ರತಾಪ್ ಸಿಂಹ ಗುಡುಗಿದ್ದಾರೆ. ಕಾರ್ಯಾಚರಣೆ ಮುಂದುವರಿಸಿದರೆ ದೇವಸ್ಥಾನ ಉಳಿಸಿ ಜನಾಂದೋಲನ ಕೈಗೊಳ್ಳಲಾಗುವುದು ಎಂದಿದ್ದಾರೆ.

ಸುಪ್ರೀಂಕೋರ್ಟ್‌ನ ಆದೇಶವನ್ನು ಜಿಲ್ಲಾಡಳಿತ ಸರಿಯಾಗಿ ಅರ್ಥಮಾಡಿಕೊಂಡಿಲ್ಲ ಎಂದು ಆರೋಪಿಸಿರುವ ಅವರು, ಸಾರ್ವಜನಿಕವಾಗಿ ತಲೆ ಎತ್ತಿರುವ ಧಾರ್ಮಿಕ ಸ್ಥಳಗಳನ್ನು ಪ್ರತ್ಯೇಕವಾಗಿ ಪರಿಗಣಿಸಿ ಸೂಕ್ತ ಕ್ರಮ ಜರುಗಿಸಬೇಕು. ಸರ್ಕಾರ 2010ರಲ್ಲಿ ಹೊರಡಿಸಿರುವ ಆದೇಶವನ್ನು ವಾಪಸ್ ಪಡೆಯಬೇಕು. ಪ್ರತಿ ದೇಗುಲವನ್ನೂ ಪ್ರತ್ಯೇಕವಾಗಿ ಪರಿಗಣಿಸಿ, ಬದಲಿ ಸ್ಥಳ ನೀಡುವುದು, ಸಾಧ್ಯವಾದರೆ ಸಕ್ರಮಗೊಳಿಸುವುದು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುವ ಮೂಲಕ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಸುಪ್ರೀಂಕೋರ್ಟ್ ಆದೇಶವನ್ನು ಪಾಲಿಸುತ್ತಿರುವ ಜಿಲ್ಲಾಡಳಿತದ ವಿರುದ್ಧ ಪ್ರತಾಪ್ ಸಿಂಹ ಸಮರ ಸಾರುತ್ತಿರುವುದೇಕೆ? ಕೋರ್ಟ್ ಆದೇಶದಂತೆ ಎಲ್ಲ ಧರ್ಮಗಳ ಅನಧಿಕೃತ ಧಾರ್ಮಿಕ ಕೇಂದ್ರಗಳನ್ನು ಜಿಲ್ಲಾಡಳಿತ ತೆರವು ಮಾಡುವವರೆಗೂ ಸುಮ್ಮನಿರುತ್ತಿಲ್ಲವೇಕೆ? ದೇವಾಲಯ ಹೆಸರಲ್ಲಿ ಸಂಸದರು ರಾಜಕೀಯ ಮಾಡಲು ಹೊರಟಿದ್ದಾರೆ. ಅನ್ಯಧರ್ಮೀಯರ ಮೇಲೆ ಅಸಹಿಷ್ಣುತೆ ಬೆಳೆಸಲು ಈ ವಿದ್ಯಮಾನವನ್ನು ಬಳಸಿಕೊಳ್ಳುತ್ತಿದ್ದಾರೆ. ಧಾರ್ಮಿಕ ವಿಚಾರಗಳಿಗೆ ಪ್ರತಿಕ್ರಿಯೆ ನೀಡುವುದನ್ನು ಬಿಟ್ಟು, ಅಭಿವೃದ್ಧಿ ವಿಚಾರಗಳತ್ತ ಸಂಸದರು ಯೋಚಿಸಬೇಕು ಎಂದು ಪ್ರಜ್ಞಾವಂತರು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ.

ಇದನ್ನೂ ಓದಿ: ಸಂಸದ ಪ್ರತಾಪ್ ಸಿಂಹ ನನ್ನ ಮೇಲೆ ವೈಯಕ್ತಿಕ ದಾಳಿ ನಡೆಸುತ್ತಿದ್ದಾರೆ: ಡಿಸಿ ರೋಹಿಣಿ ಸಿಂಧೂರಿ

ಐಎಎಸ್ ಅಧಿಕಾರಿಗಳಾದ ರೋಹಿಣಿ ಸಿಂಧೂರಿ ಮತ್ತು ಶಿಲ್ಪಾನಾಗ್ ನಡುವಿನ ಗಲಾಟೆ ಪ್ರಕರಣದಲ್ಲೂ ಪ್ರತಾಪ್ ಸಿಂಹ ಅವರ ಹೆಸರು ಮುಂಚೂಣಿಯಲ್ಲಿತ್ತು. ಈ ಅಧಿಕಾರಿಗಳನ್ನು ಮೈಸೂರಿನಿಂದ ಎತ್ತಂಗಡಿ ಮಾಡುವ ಮೂಲಕ ವಿವಾದವನ್ನು ತಣ್ಣಗಾಗಿಸಲಾಗಿತ್ತು. ಕೋವಿಡ್ ಸಮಯದಲ್ಲಿ ಜನರತ್ತ ಗಮನ ಹರಿಸದೆ ಅಧಿಕಾರಿಗಳು ಹಾಗೂ ರಾಜಕಾರಣಿಗಳು ಅಗ್ಗಜಗ್ಗಾಟದಲ್ಲಿ ಕಳೆದುಹೋಗಿದ್ದರು. ವಿವಾದಗಳಿಂದಲೇ ಎಷ್ಟು ಕಾಲ ಅಧಿಕಾರ ನಡೆಸಲು ಸಾಧ್ಯ? ಅಧಿಕಾರಿಗಳ ವಿರುದ್ಧ ಹೀಗೆ ಹೇಳಿಕೆ ನೀಡುವ ಉದ್ದೇಶವೇನು? ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆಯೇ? ಎಂಬ ಪ್ರಶ್ನೆಯನ್ನು ಜನರು ಕೇಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...