Homeಕರ್ನಾಟಕಮೈಸೂರು ಜಿಲ್ಲಾಡಳಿತದ ವಿರುದ್ಧ ಪ್ರತಾಪ್ ಸಿಂಹ ಸಮರ! ಬಿಜೆಪಿ v/s ಬಿಜೆಪಿ?

ಮೈಸೂರು ಜಿಲ್ಲಾಡಳಿತದ ವಿರುದ್ಧ ಪ್ರತಾಪ್ ಸಿಂಹ ಸಮರ! ಬಿಜೆಪಿ v/s ಬಿಜೆಪಿ?

ಕೇಂದ್ರದಲ್ಲೂ, ರಾಜ್ಯದಲ್ಲೂ ಬಿಜೆಪಿ ನೇತೃತ್ವದ ಸರ್ಕಾರವಿದೆ. ಆದರೂ ಪ್ರತಾಪ್ ಸಿಂಹ ಅವರು, ದೇವಾಲಯ ತೆರವು ಕಾರ್ಯಾಚರಣೆಗೆ ಈ ರೀತಿ ಪ್ರತಿಕ್ರಿಯೆ ನೀಡುತ್ತಿರುವ ಉದ್ದೇಶವೇನು?

- Advertisement -
- Advertisement -

ಕೇಂದ್ರದಲ್ಲೂ ಬಿಜೆಪಿ, ರಾಜ್ಯದಲ್ಲೂ ಬಿಜೆಪಿ ನೇತೃತ್ವದ ಸರ್ಕಾರವಿದೆ. ಆದರೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರು, ದೇವಾಲಯ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸಾರ್ವಜನಿಕ ಪ್ರತಿಕ್ರಿಯೆ ನೀಡುತ್ತಿರುವ ಉದ್ದೇಶವೇನು ಎಂಬ ಪ್ರಶ್ನೆಗಳ ನಡುವೆಯೇ ಅವರು ಭಾನುವಾರ ಪತ್ರಿಕಾಗೋಷ್ಠಿ ನಡೆಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ದೇವಾಲಯಗಳ ತೆರವು ಕಾರ್ಯಾಚರಣೆ ಮಾಡದಂತೆ ಮೈಸೂರು ಜಿಲ್ಲಾಡಳಿತದ ವಿರುದ್ಧ ಪ್ರತಾಪ್ ಸಿಂಹ ಗುಡುಗಿದ್ದಾರೆ. ಕಾರ್ಯಾಚರಣೆ ಮುಂದುವರಿಸಿದರೆ ದೇವಸ್ಥಾನ ಉಳಿಸಿ ಜನಾಂದೋಲನ ಕೈಗೊಳ್ಳಲಾಗುವುದು ಎಂದಿದ್ದಾರೆ.

ಸುಪ್ರೀಂಕೋರ್ಟ್‌ನ ಆದೇಶವನ್ನು ಜಿಲ್ಲಾಡಳಿತ ಸರಿಯಾಗಿ ಅರ್ಥಮಾಡಿಕೊಂಡಿಲ್ಲ ಎಂದು ಆರೋಪಿಸಿರುವ ಅವರು, ಸಾರ್ವಜನಿಕವಾಗಿ ತಲೆ ಎತ್ತಿರುವ ಧಾರ್ಮಿಕ ಸ್ಥಳಗಳನ್ನು ಪ್ರತ್ಯೇಕವಾಗಿ ಪರಿಗಣಿಸಿ ಸೂಕ್ತ ಕ್ರಮ ಜರುಗಿಸಬೇಕು. ಸರ್ಕಾರ 2010ರಲ್ಲಿ ಹೊರಡಿಸಿರುವ ಆದೇಶವನ್ನು ವಾಪಸ್ ಪಡೆಯಬೇಕು. ಪ್ರತಿ ದೇಗುಲವನ್ನೂ ಪ್ರತ್ಯೇಕವಾಗಿ ಪರಿಗಣಿಸಿ, ಬದಲಿ ಸ್ಥಳ ನೀಡುವುದು, ಸಾಧ್ಯವಾದರೆ ಸಕ್ರಮಗೊಳಿಸುವುದು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುವ ಮೂಲಕ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಸುಪ್ರೀಂಕೋರ್ಟ್ ಆದೇಶವನ್ನು ಪಾಲಿಸುತ್ತಿರುವ ಜಿಲ್ಲಾಡಳಿತದ ವಿರುದ್ಧ ಪ್ರತಾಪ್ ಸಿಂಹ ಸಮರ ಸಾರುತ್ತಿರುವುದೇಕೆ? ಕೋರ್ಟ್ ಆದೇಶದಂತೆ ಎಲ್ಲ ಧರ್ಮಗಳ ಅನಧಿಕೃತ ಧಾರ್ಮಿಕ ಕೇಂದ್ರಗಳನ್ನು ಜಿಲ್ಲಾಡಳಿತ ತೆರವು ಮಾಡುವವರೆಗೂ ಸುಮ್ಮನಿರುತ್ತಿಲ್ಲವೇಕೆ? ದೇವಾಲಯ ಹೆಸರಲ್ಲಿ ಸಂಸದರು ರಾಜಕೀಯ ಮಾಡಲು ಹೊರಟಿದ್ದಾರೆ. ಅನ್ಯಧರ್ಮೀಯರ ಮೇಲೆ ಅಸಹಿಷ್ಣುತೆ ಬೆಳೆಸಲು ಈ ವಿದ್ಯಮಾನವನ್ನು ಬಳಸಿಕೊಳ್ಳುತ್ತಿದ್ದಾರೆ. ಧಾರ್ಮಿಕ ವಿಚಾರಗಳಿಗೆ ಪ್ರತಿಕ್ರಿಯೆ ನೀಡುವುದನ್ನು ಬಿಟ್ಟು, ಅಭಿವೃದ್ಧಿ ವಿಚಾರಗಳತ್ತ ಸಂಸದರು ಯೋಚಿಸಬೇಕು ಎಂದು ಪ್ರಜ್ಞಾವಂತರು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ.

ಇದನ್ನೂ ಓದಿ: ಸಂಸದ ಪ್ರತಾಪ್ ಸಿಂಹ ನನ್ನ ಮೇಲೆ ವೈಯಕ್ತಿಕ ದಾಳಿ ನಡೆಸುತ್ತಿದ್ದಾರೆ: ಡಿಸಿ ರೋಹಿಣಿ ಸಿಂಧೂರಿ

ಐಎಎಸ್ ಅಧಿಕಾರಿಗಳಾದ ರೋಹಿಣಿ ಸಿಂಧೂರಿ ಮತ್ತು ಶಿಲ್ಪಾನಾಗ್ ನಡುವಿನ ಗಲಾಟೆ ಪ್ರಕರಣದಲ್ಲೂ ಪ್ರತಾಪ್ ಸಿಂಹ ಅವರ ಹೆಸರು ಮುಂಚೂಣಿಯಲ್ಲಿತ್ತು. ಈ ಅಧಿಕಾರಿಗಳನ್ನು ಮೈಸೂರಿನಿಂದ ಎತ್ತಂಗಡಿ ಮಾಡುವ ಮೂಲಕ ವಿವಾದವನ್ನು ತಣ್ಣಗಾಗಿಸಲಾಗಿತ್ತು. ಕೋವಿಡ್ ಸಮಯದಲ್ಲಿ ಜನರತ್ತ ಗಮನ ಹರಿಸದೆ ಅಧಿಕಾರಿಗಳು ಹಾಗೂ ರಾಜಕಾರಣಿಗಳು ಅಗ್ಗಜಗ್ಗಾಟದಲ್ಲಿ ಕಳೆದುಹೋಗಿದ್ದರು. ವಿವಾದಗಳಿಂದಲೇ ಎಷ್ಟು ಕಾಲ ಅಧಿಕಾರ ನಡೆಸಲು ಸಾಧ್ಯ? ಅಧಿಕಾರಿಗಳ ವಿರುದ್ಧ ಹೀಗೆ ಹೇಳಿಕೆ ನೀಡುವ ಉದ್ದೇಶವೇನು? ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆಯೇ? ಎಂಬ ಪ್ರಶ್ನೆಯನ್ನು ಜನರು ಕೇಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...