ಬಿಜೆಪಿ ವಿರುದ್ಧ ಹಲವು ಬಾರಿ ಸಾರ್ವಜನಿಕವಾಗಿಯೇ ಹೇಳಿಕೆ ಕೊಟ್ಟು ಬಿಜೆಪಿಗೆ ಮುಜುಗರ ತರಿಸಿದ್ದ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಇದೀಗ ಬಿಜೆಪಿ ಮತ್ತು ರಾಜ್ಯ ನಾಯಕತ್ವವನ್ನು ಟೀಕಿಸಿದ್ದು, ರಾಜ್ಯದಲ್ಲಿ ಬಿಜೆಪಿ ಮುಳುಗುತ್ತಿರುವ ಹಡಗು ಎಂದು ಜನ ಮಾತಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಎಂಪಿ ರೇಣುಕಾಚಾರ್ಯ, ಬಿಜೆಪಿ ರಾಜ್ಯಾಧ್ಯಕ್ಷ, ಕೆಲ ವಿಧಾನಪರಿಷತ್ ಸದಸ್ಯರು ಸೇರಿ ಜನರನ್ನು ಸೇರಿಸಿಕೊಂಡು ತಮ್ಮದೇ ಗುಂಪು ಮಾಡಿಕೊಡಿದ್ದಾರೆ. ಗ್ರಾಮ ಪಂಚಾಯತ್ ಚುನಾವಣೆಯಲ್ಲೂ ಕೂಡ ನಿಂತು ಗೆಲ್ಲದವರು ಗುಂಪು ಕಟ್ಟಿಕೊಂಡಿದ್ದಾರೆ ಪರೋಕ್ಷವಾಗಿ ಬಿಎಲ್ ಸಂತೋಷ್ಗೆ ಟೀಕಿಸಿದ್ದಾರೆ.
ಯಡಿಯೂರಪ್ಪ ಅವರ ಕೈಕಟ್ಟಿ ಹಾಕಿದ್ದಾರೆ. ಅವರಿಗೆ ರಾಜ್ಯ ಪ್ರವಾಸ ಮಾಡಲು ಅವಕಾಶ ನೀಡುತ್ತಿಲ್ಲ. ಅವರು ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಿದರು. ಇದರ ಜೊತೆಗೆ ಪಕ್ಷವನ್ನು ಕೂಡ ಮುಗಿಸಿದರು. ಬಿಜೆಪಿಗೆ ನಾಯಕತ್ವ ಇಲ್ಲ. ಇದೇ ಕಾರಣಕ್ಕೆ ಬಿಜೆಪಿ ನಾಯಕರು ಬೇರೆ ಪಕ್ಷದ ಕಡೆ ಮುಖ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಮಾಡಿದರೆ ಒಂದು ಹೊಸ ತಂಡ ಬರುತ್ತದೆ. ಯಡಿಯೂರಪ್ಪ ಅವರ ಕೈಗೆ ರಾಜ್ಯದ ನಾಯಕತ್ವ ಕೊಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪಕ್ಷವನ್ನು ತೊರೆಯುವವರ ಸಂಖ್ಯೆ ಹೆಚ್ಚಾಗಲಿದೆ ಎಂದು ಹೇಳಿದ್ದಾರೆ.
ಇದನ್ನು ಓದಿ: ಮಧ್ಯಪ್ರದೇಶ: ಬಿಜೆಪಿ ಸಚಿವರ ಕುರಿತು ವರದಿ ಮಾಡಿದ ಪತ್ರಕರ್ತನ ವಿರುದ್ಧ 11 ಎಫ್ಐಆರ್ ದಾಖಲು