Homeಕರ್ನಾಟಕಬಿಜೆಪಿಗೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಬಿಜೆಪಿಗೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

- Advertisement -
- Advertisement -

ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಅವರು ಇಂದು ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ಇ- ಮೇಲ್ ಮೂಲಕ ರಾಜಿನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಅವರು ಕಾಂಗ್ರೆಸ್‌ ಸೇರ್ಪಡೆಯಾಗುವ ಸಾಧ್ಯತೆ ಇದೆ.

ಈ ಕುರಿತು ಮಾಹಿತಿ ನೀಡಿದ ಸಂಗಣ್ಣ ಕರಡಿ, ಲೋಕಸಭೆ ಸ್ಪೀಕರ್ ಆಗಿದ್ದ ಓಂ ಬಿರ್ಲಾ ಅವರಿಗೆ ಇ-ಮೇಲ್‌ ಮೂಲಕ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ. ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಪಕ್ಷದ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆ ಪತ್ರ ಬರೆದಿದ್ದೇನೆ ಎಂದು ಹೇಳಿದ್ದಾರೆ.

ಬಿಜೆಪಿ ಸಂಸದರಾಗಿದ್ದ ಸಂಗಣ್ಣ ಕರಡಿ ಅವರಿಗೆ ಟಿಕೆಟ್‌ ನೀಡದೆ ಕೊಪ್ಪಳದಿಂದ ಬಿಜೆಪಿ ಈ ಭಾರಿ  ಡಾ. ಬಸವರಾಜ ಕ್ಯಾವಟರ್‌ ಅವರಿಗೆ ಟಿಕೆಟ್‌ ನೀಡಿತ್ತು. ಇದರಿಂದ ಅವರು ಪಕ್ಷದ ರಾಜ್ಯ ನಾಯಕರ ವಿರುದ್ಧ ಸಿಡಿದೆದ್ದಿದ್ದರು. ಬಿ.ಎಸ್‌. ಯಡಿಯೂರಪ್ಪ, ಪ್ರಲ್ಹಾದ ಜೋಶಿ, ಬಸವರಾಜ ಬೊಮ್ಮಾಯಿ, ವಿಜಯೇಂದ್ರ ಸೇರಿದಂತೆ ಹಲವು ನಾಯಕರು ಸಂಗಣ್ಣ ಕರಡಿ ಜೊತೆ ಮಾತುಕತೆ ನಡೆಸಿ ಮನವೊಲಿಕೆಗೆ ಪ್ರಯತ್ನಿಸಿದ್ದರು. ಆದರೆ ಅವರು ಕಾಂಗ್ರೆಸ್‌ ಸೇರ್ಪಡೆಗೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಲು ಎ.17ರಂದು ಸಮಯ ನಿಗದಿಯಾಗಿದ್ದು, ಅವರ ಭೇಟಿ ಬಳಿಕ‌ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇನೆ, ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ ಕೂಡ ನನ್ನ ಜೊತೆ ಮಾತನಾಡಿದ್ದಾರೆ. ಅಲ್ಲದೆ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ ಎಂದು ಬಿಜೆಪಿ ಸಂಸದ ಸಂಗಣ್ಣ ಕರಡಿ ಈ ಮೊದಲು ಹೇಳಿದ್ದರು.

ಇದನ್ನು ಓದಿ: ಲೋಕಸಭೆ ಚುನಾವಣೆ: ‘ಮೋದಿ ಅಲೆ ಇಲ್ಲ, ಭ್ರಮೆಯಲ್ಲಿರಬೇಡಿ’ ಎಂದ ಬಿಜೆಪಿ ಅಭ್ಯರ್ಥಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...