Homeಕರ್ನಾಟಕಬೆಂಗಳೂರಿನಲ್ಲಿ ಶವ ಸುಡಲೂ ಸೌದೆಯ ಕೊರತೆ: ಬೆಡ್ ಎತ್ತಿಕೊಂಡು ಸಂಸದ ಸೂರ್ಯ ನಾಪತ್ತೆ!

ಬೆಂಗಳೂರಿನಲ್ಲಿ ಶವ ಸುಡಲೂ ಸೌದೆಯ ಕೊರತೆ: ಬೆಡ್ ಎತ್ತಿಕೊಂಡು ಸಂಸದ ಸೂರ್ಯ ನಾಪತ್ತೆ!

ಕೋವಿಡ್ ಸಾವುಗಳ ಸಂಖ್ಯೆ ಹೆಚ್ಚಿದಂತೆ ಬೆಂಗಳೂರಿನ ಸ್ಮಶಾನಗಳಲ್ಲಿ ಪಾಳೆ ಹೆಚ್ಚುತ್ತಿದೆ. ಆದರೆ ಇನ್ನೊಂದು ಕಡೆ ಶವ ಸುಡಲು ಸೌದೆ (ಕಟ್ಟಿಗೆ) ಕೊರತೆ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿದೆ.

- Advertisement -
- Advertisement -

ಬೆಂಗಳೂರಿನ ಜನಪ್ರತಿನಿಧಿಗಳು, ಮುಖ್ಯವಾಗಿ ಆಡಳಿತ ಪಕ್ಷಕ್ಕೆ ಸಂಬಂಧಿಸಿದವರು ಪಲಾಯನ ಮಾಡಿದ್ದಾರೆ. ಬೆಡ್ ಬ್ಲಾಕಿಂಗ್ ಬಗ್ಗೆ ‘ಹವಾ’ ಎಬ್ಬಿಸಿದ ಸಂಸದ ತೇಜಸ್ವಿ ಸೂರ್ಯ ಕೂಡಾ ಈಗ ನಾಪತ್ತೆಯಾಗಿದ್ದಾರೆ. ಅವರೀಗ ಯಾವ ಮಾಧ್ಯಮದ ಫೋನ್ ಕರೆಯನ್ನು ಸ್ವೀಕರಿಸದ ಮಟ್ಟಿಗೆ ಜನದ್ರೋಹಿಯಾಗಿದ್ದಾರೆ.

ಹತ್ತು ದಿನಗಳ ಹಿಂದಷ್ಟೆ, ಆಕ್ಸಿಜನ್ ಮತ್ತು ಬೆಡ್‌ಗಳ ಕೊರತೆಯಿದ್ದಾಗ ಕಂದಾಯ ಸಚಿವ, ಬೆಂಗಳೂರಿನ ಶಾಸಕ ಆರ್. ಅಶೋಕ್ ಹೊಸ ಸ್ಮಶಾನ ನಿರ್ಮಿಸುತ್ತೇವೆ ಎಂದರು. ಅದು ಇನ್ನೂವರೆಗೂ ಆಗಿಲ್ಲ. ರಿಯಲ್ ಎಸ್ಟೇಟ್ ಮಾಡುವ ಜನರಿಗೆ ‘ಅಮೂಲ್ಯ’ ಭೂಮಿಯನ್ನು ಸ್ಮಶಾನಕ್ಕೆ ಪಡೆಯಲು ಮನಸ್ಸು ಒಪ್ಪುತ್ತದೆಯೇ ಎಂಬ ಪ್ರಶ್ನೆ ಬೆಂಗಳೂರಿಗರನ್ನು ಈಗ ಕಾಡುತ್ತಿದೆ.

ಇದನ್ನೂ ಓದಿ: ಕೇಂದ್ರವೇ ಏಕೆ ಎಲ್ಲಾ ಲಸಿಕೆ ಖರೀದಿಸಬಾರದು? ಲಸಿಕೆ ದರದಲ್ಲಿ ತಾರತಮ್ಯವೇಕೆ: ಸುಪ್ರೀಂ ಪ್ರಶ್ನೆ

ಸೂರ್ಯ ಮತ್ತೆ ಪ್ರತ್ಯಕ್ಷರಾಗಿ, ಸೌದೆ ಕದ್ದ ಮುಸ್ಲಿಮರು ಎಂದೂ ಹೇಳುವ ಸಾಧ್ಯತೆಗಳಿವೆ! ಜೀವವಿರೋಧಿ ಸಿದ್ದಾಂತದವರನ್ನು ಮತ್ತು ರಿಯಲ್ ಎಸ್ಟೇಟ್ ದಂಧೆಯವರನ್ನು (ಬಹುಪಾಲು ಅವರೇ ಇದ್ದಾರೆ) ಜನಪ್ರತಿನಿಧಿಗಳನ್ನಾಗಿ ಆರಿಸಿದ ಬೆಂಗಳೂರಿನ ಜನತೆಗೆ ಈಗ ಆಸ್ಪತ್ರೆಯಲ್ಲಿ ಬೆಡ್ ಸಿಗುತ್ತಿಲ್ಲ, ಸಿಕ್ಕರೆ ಆಕ್ಸಿಜನ್, ಚಿಕಿತ್ಸೆ ಸಿಗುತ್ತಿಲ್ಲ. ಆಕಸ್ಮಿಕ ಅಸು ನೀಗಿದರೆ ಸ್ಮಶಾನಗಳಲ್ಲಿ ಕಾಯಬೇಕು. ಅಲ್ಲೂ ಈಗ ಹೊಸ ಸಮಸ್ಯೆ ತಲೆದೋರಿದೆ. ಅಲ್ಲೀಗ ಶವ ಸುಡಲು ಸೌದೆಯ ಅಭಾವ ಉಂಟಾಗಿದೆ.

ಶವಗಾರದಲ್ಲಿ ಶವ ಸುಡಲು ಸೌದೆ ಕೊರತೆ ಈಗ ಎದುರಾಗಿದ್ದು, ಇದು ಬರುವ ದಿನಗಳಲ್ಲಿ ಇನ್ನಷ್ಟು ಸಮಸ್ಯೆ ಉಂಟಾಗಲಿದೆ. ಶವ ಹೂಳುವ ಪದ್ಧತಿ ಅಚರಿಸುವವರೂ ಕೂಡ ಈಗ ಅನಿವಾರ್ಯವಾಗಿ ಸುಡುವ ಪದ್ಧತಿ ಒಪ್ಪಿಕೊಂಡಿದ್ದಾರೆ. ಒಂದು ಕಡೆ ಸ್ಮಶಾನದಲ್ಲಿ ಕ್ಯೂ, ಇನ್ನೊಂದು ಕಡೆ ಸೌದೆ ಕೊರತೆ.

ಇಂತಹ ಹೊತ್ತಿನಲ್ಲೇ ‘ಸ್ಮಶಾನಕ್ಕೆ ಹೋಗುವ ದಾರಿ’ ಎಂಬ ಫ್ಲೆಕ್ಸ್ ಬೋರ್ಡ್ ಹಾಕಿ, ಅಲ್ಲಿ ನೀರು, ಚಹಾ ವಿತರಣೆ ಮಾಡುತ್ತೇವೆ ಎಂದು ಹೆಮ್ಮೆ ಪಡುವ ಬಿಜೆಪಿ ಶಾಸಕರ ಕ್ರೌರ್ಯವೂ ಜನರನ್ನು ಆಕ್ರೋಶಿತರನ್ನಾಗಿ ಮಾಡಿದೆ. ಜನರಿಗೆ ನೆರವು ನೀಡದ ಈ ಜನಪ್ರತಿನಿಧಿಗಳು ಅಕ್ಷರಶಃ ‘ಸ್ಮಶಾನಕ್ಕೆ ತಲುಪುವ ದಾರಿ’ಯನ್ನು ಸೃಷ್ಟಿ ಮಾಡಿದ್ದಾರೆ.
ಪ್ರತಿ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಸುಮಾರು 1,500 ಕೆ.ಜಿ ಕಟ್ಟಿಗೆ ಬೇಕು ಎನ್ನಲಾಗಿದೆ. ನಿತ್ಯ ಸೌದೆ ಸಂಗ್ರಹ ಬಿಬಿಎಂಪಿಗೆ ಭಾರಿ ತಲೆನೋವು ಉಂಟು ಮಾಡಿದೆ. ಶವ ಸುಡಲು ಸೌದೆಗೂ ಶುರುವಾಗುತ್ತಾ ಹಾಹಾಕಾರ ಎಂಬ ಪ್ರಶ್ನೆ ಎದ್ದಿದೆ. ಪ್ರತಿ ಸ್ಮಶಾನದಲ್ಲಿ ನಿತ್ಯ 40 ಕ್ಕಿಂತ ಹೆಚ್ಚು ಶವ ಸುಡಲಾಗುತ್ತಿದೆ.

ಇದನ್ನೂ ಓದಿ: Explainer: ಸದ್ಯಕ್ಕೆ ಲಭ್ಯವಿರುವ ಲಸಿಕೆಗಳೆಷ್ಟು? ತಡವಾಗಲು ಕಾರಣವೇನು?

ಪರಿಸ್ಥಿತಿ ನಿಭಾಯಿಸಲು ಹೆಚ್ಚು ಮರಗಳನ್ನು ಕಡಿಯುವತ್ತ ಪಾಲಿಕೆಯ ಅರಣ್ಯ ವಿಭಾಗ ಮುಂದಾಗಬಹುದು ಎನ್ನಲಾಗಿದೆ.

ಬಿಬಿಎಂಪಿಯ 198 ವಾರ್ಡ್‌ಗಳಲ್ಲಿ ತಲಾ ಒಂದು ಅಥವಾ ಎರಡು ಸ್ಮಶಾನಗಳಿದ್ದು, ಅವು ಈಗ ಕೋವಿಡ್ ಶವಗಳ ದಟ್ಟಣೆಗೆ ತತ್ತರಿಸಿವೆ. ಈಗ ಸೌದೆಯ ಕೊರತೆಯೂ ಸೇರಿಕೊಂಡು ಅಂತ್ಯಸಂಸ್ಕಾರವೇ ಒಂದು ದೊಡ್ಡ ಸಮಸ್ಯೆಯಾಗಿದೆ. ಸುಡುವ ಈ ಹೊತ್ತಿನಲ್ಲಿ ಬೆಡ್ ವಿಚಾರದಲ್ಲಿ ಕೋಮುವಾದೀಕರಣ ಮಾಡಿ ಪರಾರಿಯಾದ ಸಂಸದರು ಯಾರ ಫೋನಿಗೂ ಸಿಗುತ್ತಿಲ್ಲ. ಕೊಲ್ಲುವ ಸಿದ್ದಾಂತದ ಜನರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?

ದೊಡ್ಡ ನಗರಗಳ ಸಮಸ್ಯೆ!

ಕಳೆದ ತಿಂಗಳಿನಿಂದ ಭಾರತವು ಇತರ ದೇಶಗಳಿಗಿಂತ ಹೆಚ್ಚು ಕೋವಿಡ್ ಪ್ರಕರಣಗಳನ್ನು ಕಂಡಿದೆ.
ಜನರು ಹಾಸಿಗೆಗಳಿಗಾಗಿ ಕಾಯುತ್ತ ಸಾವನ್ನಪ್ಪಿದ್ದಾರೆ, ಇನ್ನೊಂದು ಕಡೆ, ಆಮ್ಲಜನಕದ ಸರಬರಾಜು ಕಡಿಮೆಯಾಗಿ ಸಾವುಗಳು ಸಂಭವಿಸುತ್ತಿವೆ.

ಈಗ ಸ್ಮಶಾನಗಳಲ್ಲಿ ಸಹ ಸ್ಥಳಾವಕಾಶವಿಲ್ಲ, ಸ್ಮಶಾನದ ಕಾರ್ಮಿಕರು ಶವಗಳನ್ನು ಸುಡುತ್ತಲೇ ಬೆಂದು ಹೋಗಿದ್ದಾರೆ.

ಇದನ್ನೂ ಓದಿ: ಬೆಂಬಲಿಗರನ್ನು ಸೆಳೆಯಲು ‘ಪಾಕಿಸ್ತಾನಿ’ ಯುವತಿಯ ಫೋಟೊ ಬಳಸುತ್ತಿರುವ BJP ಐಟಿ ಸೆಲ್!

ಹಿಂದೂ ಧರ್ಮದಲ್ಲಿ, ಶವಸಂಸ್ಕಾರವು ಸಾಂಪ್ರದಾಯಿಕವಾಗಿ ಅಂತ್ಯಕ್ರಿಯೆಯ ವಿಧಿಗಳಲ್ಲಿ ಪ್ರಮುಖ ಭಾಗವಾಗಿದೆ. ಏಕೆಂದರೆ ಆತ್ಮವನ್ನು ಅದರಿಂದ ಬೇರ್ಪಡಿಸುವಂತೆ ಒತ್ತಾಯಿಸಲು ದೇಹವನ್ನು ನಾಶಪಡಿಸಬೇಕು ಎಂದು ಹಿಂದೂಗಳು ನಂಬುತ್ತಾರೆ.

ಭಾರತದ ರಾಜಧಾನಿ ದೆಹಲಿಯಲ್ಲಿ, ತಾತ್ಕಾಲಿಕ ಅಂತ್ಯಕ್ರಿಯೆಯ ನೆರವೇರಿಸಲು ಸೌದೆ ಬಳಸಿ ಸುಡುವಂತೆ ಸ್ಮಶಾನ ಕಾರ್ಮಿಕರು ಮತ್ತು ಪೌರ ಕಾರ್ಮಿಕರನ್ನು ಒತ್ತಾಯಿಸಲಾಗಿದೆ, ಉದ್ಯಾನವನಗಳು ಮತ್ತು ಇತರ ಖಾಲಿ ಸ್ಥಳಗಳನ್ನು ಶವಸಂಸ್ಕಾರಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ.

ಉರುವಲುಗಳಾಗಿ ಬಳಸಲು ಅಧಿಕಾರಿಗಳು ದೆಹಲಿ ನಗರದ ಉದ್ಯಾನವನಗಳಲ್ಲಿನ ಮರಗಳನ್ನು ಕಡಿದಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ. ಈಗ ಬೆಂಗಳೂರಿನ ಉದ್ಯಾನವನಗಳ ಮರಗಳನ್ನು ಕತ್ತರಿಸದೇ ಅನ್ಯಮಾರ್ಗವಿಲ್ಲೆವೇನೋ?

ಇದನ್ನೂ ಓದಿ: ‘ಬೆನ್ನೆಲುಬಿಲ್ಲದ ಮೋದಿ’ ‘ಡೈಪರ್‌ ಸೂರ್ಯ ಎಕ್ಸ್‌ಪೋಸ್ಡ್’- ಟ್ವಿಟರ್‌ನಲ್ಲಿ BJP ವಿರೋಧಿ ಹವಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...