Homeಕರ್ನಾಟಕಬೆಂಗಳೂರಿನಲ್ಲಿ ಶವ ಸುಡಲೂ ಸೌದೆಯ ಕೊರತೆ: ಬೆಡ್ ಎತ್ತಿಕೊಂಡು ಸಂಸದ ಸೂರ್ಯ ನಾಪತ್ತೆ!

ಬೆಂಗಳೂರಿನಲ್ಲಿ ಶವ ಸುಡಲೂ ಸೌದೆಯ ಕೊರತೆ: ಬೆಡ್ ಎತ್ತಿಕೊಂಡು ಸಂಸದ ಸೂರ್ಯ ನಾಪತ್ತೆ!

ಕೋವಿಡ್ ಸಾವುಗಳ ಸಂಖ್ಯೆ ಹೆಚ್ಚಿದಂತೆ ಬೆಂಗಳೂರಿನ ಸ್ಮಶಾನಗಳಲ್ಲಿ ಪಾಳೆ ಹೆಚ್ಚುತ್ತಿದೆ. ಆದರೆ ಇನ್ನೊಂದು ಕಡೆ ಶವ ಸುಡಲು ಸೌದೆ (ಕಟ್ಟಿಗೆ) ಕೊರತೆ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿದೆ.

- Advertisement -
- Advertisement -

ಬೆಂಗಳೂರಿನ ಜನಪ್ರತಿನಿಧಿಗಳು, ಮುಖ್ಯವಾಗಿ ಆಡಳಿತ ಪಕ್ಷಕ್ಕೆ ಸಂಬಂಧಿಸಿದವರು ಪಲಾಯನ ಮಾಡಿದ್ದಾರೆ. ಬೆಡ್ ಬ್ಲಾಕಿಂಗ್ ಬಗ್ಗೆ ‘ಹವಾ’ ಎಬ್ಬಿಸಿದ ಸಂಸದ ತೇಜಸ್ವಿ ಸೂರ್ಯ ಕೂಡಾ ಈಗ ನಾಪತ್ತೆಯಾಗಿದ್ದಾರೆ. ಅವರೀಗ ಯಾವ ಮಾಧ್ಯಮದ ಫೋನ್ ಕರೆಯನ್ನು ಸ್ವೀಕರಿಸದ ಮಟ್ಟಿಗೆ ಜನದ್ರೋಹಿಯಾಗಿದ್ದಾರೆ.

ಹತ್ತು ದಿನಗಳ ಹಿಂದಷ್ಟೆ, ಆಕ್ಸಿಜನ್ ಮತ್ತು ಬೆಡ್‌ಗಳ ಕೊರತೆಯಿದ್ದಾಗ ಕಂದಾಯ ಸಚಿವ, ಬೆಂಗಳೂರಿನ ಶಾಸಕ ಆರ್. ಅಶೋಕ್ ಹೊಸ ಸ್ಮಶಾನ ನಿರ್ಮಿಸುತ್ತೇವೆ ಎಂದರು. ಅದು ಇನ್ನೂವರೆಗೂ ಆಗಿಲ್ಲ. ರಿಯಲ್ ಎಸ್ಟೇಟ್ ಮಾಡುವ ಜನರಿಗೆ ‘ಅಮೂಲ್ಯ’ ಭೂಮಿಯನ್ನು ಸ್ಮಶಾನಕ್ಕೆ ಪಡೆಯಲು ಮನಸ್ಸು ಒಪ್ಪುತ್ತದೆಯೇ ಎಂಬ ಪ್ರಶ್ನೆ ಬೆಂಗಳೂರಿಗರನ್ನು ಈಗ ಕಾಡುತ್ತಿದೆ.

ಇದನ್ನೂ ಓದಿ: ಕೇಂದ್ರವೇ ಏಕೆ ಎಲ್ಲಾ ಲಸಿಕೆ ಖರೀದಿಸಬಾರದು? ಲಸಿಕೆ ದರದಲ್ಲಿ ತಾರತಮ್ಯವೇಕೆ: ಸುಪ್ರೀಂ ಪ್ರಶ್ನೆ

ಸೂರ್ಯ ಮತ್ತೆ ಪ್ರತ್ಯಕ್ಷರಾಗಿ, ಸೌದೆ ಕದ್ದ ಮುಸ್ಲಿಮರು ಎಂದೂ ಹೇಳುವ ಸಾಧ್ಯತೆಗಳಿವೆ! ಜೀವವಿರೋಧಿ ಸಿದ್ದಾಂತದವರನ್ನು ಮತ್ತು ರಿಯಲ್ ಎಸ್ಟೇಟ್ ದಂಧೆಯವರನ್ನು (ಬಹುಪಾಲು ಅವರೇ ಇದ್ದಾರೆ) ಜನಪ್ರತಿನಿಧಿಗಳನ್ನಾಗಿ ಆರಿಸಿದ ಬೆಂಗಳೂರಿನ ಜನತೆಗೆ ಈಗ ಆಸ್ಪತ್ರೆಯಲ್ಲಿ ಬೆಡ್ ಸಿಗುತ್ತಿಲ್ಲ, ಸಿಕ್ಕರೆ ಆಕ್ಸಿಜನ್, ಚಿಕಿತ್ಸೆ ಸಿಗುತ್ತಿಲ್ಲ. ಆಕಸ್ಮಿಕ ಅಸು ನೀಗಿದರೆ ಸ್ಮಶಾನಗಳಲ್ಲಿ ಕಾಯಬೇಕು. ಅಲ್ಲೂ ಈಗ ಹೊಸ ಸಮಸ್ಯೆ ತಲೆದೋರಿದೆ. ಅಲ್ಲೀಗ ಶವ ಸುಡಲು ಸೌದೆಯ ಅಭಾವ ಉಂಟಾಗಿದೆ.

ಶವಗಾರದಲ್ಲಿ ಶವ ಸುಡಲು ಸೌದೆ ಕೊರತೆ ಈಗ ಎದುರಾಗಿದ್ದು, ಇದು ಬರುವ ದಿನಗಳಲ್ಲಿ ಇನ್ನಷ್ಟು ಸಮಸ್ಯೆ ಉಂಟಾಗಲಿದೆ. ಶವ ಹೂಳುವ ಪದ್ಧತಿ ಅಚರಿಸುವವರೂ ಕೂಡ ಈಗ ಅನಿವಾರ್ಯವಾಗಿ ಸುಡುವ ಪದ್ಧತಿ ಒಪ್ಪಿಕೊಂಡಿದ್ದಾರೆ. ಒಂದು ಕಡೆ ಸ್ಮಶಾನದಲ್ಲಿ ಕ್ಯೂ, ಇನ್ನೊಂದು ಕಡೆ ಸೌದೆ ಕೊರತೆ.

ಇಂತಹ ಹೊತ್ತಿನಲ್ಲೇ ‘ಸ್ಮಶಾನಕ್ಕೆ ಹೋಗುವ ದಾರಿ’ ಎಂಬ ಫ್ಲೆಕ್ಸ್ ಬೋರ್ಡ್ ಹಾಕಿ, ಅಲ್ಲಿ ನೀರು, ಚಹಾ ವಿತರಣೆ ಮಾಡುತ್ತೇವೆ ಎಂದು ಹೆಮ್ಮೆ ಪಡುವ ಬಿಜೆಪಿ ಶಾಸಕರ ಕ್ರೌರ್ಯವೂ ಜನರನ್ನು ಆಕ್ರೋಶಿತರನ್ನಾಗಿ ಮಾಡಿದೆ. ಜನರಿಗೆ ನೆರವು ನೀಡದ ಈ ಜನಪ್ರತಿನಿಧಿಗಳು ಅಕ್ಷರಶಃ ‘ಸ್ಮಶಾನಕ್ಕೆ ತಲುಪುವ ದಾರಿ’ಯನ್ನು ಸೃಷ್ಟಿ ಮಾಡಿದ್ದಾರೆ.
ಪ್ರತಿ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಸುಮಾರು 1,500 ಕೆ.ಜಿ ಕಟ್ಟಿಗೆ ಬೇಕು ಎನ್ನಲಾಗಿದೆ. ನಿತ್ಯ ಸೌದೆ ಸಂಗ್ರಹ ಬಿಬಿಎಂಪಿಗೆ ಭಾರಿ ತಲೆನೋವು ಉಂಟು ಮಾಡಿದೆ. ಶವ ಸುಡಲು ಸೌದೆಗೂ ಶುರುವಾಗುತ್ತಾ ಹಾಹಾಕಾರ ಎಂಬ ಪ್ರಶ್ನೆ ಎದ್ದಿದೆ. ಪ್ರತಿ ಸ್ಮಶಾನದಲ್ಲಿ ನಿತ್ಯ 40 ಕ್ಕಿಂತ ಹೆಚ್ಚು ಶವ ಸುಡಲಾಗುತ್ತಿದೆ.

ಇದನ್ನೂ ಓದಿ: Explainer: ಸದ್ಯಕ್ಕೆ ಲಭ್ಯವಿರುವ ಲಸಿಕೆಗಳೆಷ್ಟು? ತಡವಾಗಲು ಕಾರಣವೇನು?

ಪರಿಸ್ಥಿತಿ ನಿಭಾಯಿಸಲು ಹೆಚ್ಚು ಮರಗಳನ್ನು ಕಡಿಯುವತ್ತ ಪಾಲಿಕೆಯ ಅರಣ್ಯ ವಿಭಾಗ ಮುಂದಾಗಬಹುದು ಎನ್ನಲಾಗಿದೆ.

ಬಿಬಿಎಂಪಿಯ 198 ವಾರ್ಡ್‌ಗಳಲ್ಲಿ ತಲಾ ಒಂದು ಅಥವಾ ಎರಡು ಸ್ಮಶಾನಗಳಿದ್ದು, ಅವು ಈಗ ಕೋವಿಡ್ ಶವಗಳ ದಟ್ಟಣೆಗೆ ತತ್ತರಿಸಿವೆ. ಈಗ ಸೌದೆಯ ಕೊರತೆಯೂ ಸೇರಿಕೊಂಡು ಅಂತ್ಯಸಂಸ್ಕಾರವೇ ಒಂದು ದೊಡ್ಡ ಸಮಸ್ಯೆಯಾಗಿದೆ. ಸುಡುವ ಈ ಹೊತ್ತಿನಲ್ಲಿ ಬೆಡ್ ವಿಚಾರದಲ್ಲಿ ಕೋಮುವಾದೀಕರಣ ಮಾಡಿ ಪರಾರಿಯಾದ ಸಂಸದರು ಯಾರ ಫೋನಿಗೂ ಸಿಗುತ್ತಿಲ್ಲ. ಕೊಲ್ಲುವ ಸಿದ್ದಾಂತದ ಜನರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?

ದೊಡ್ಡ ನಗರಗಳ ಸಮಸ್ಯೆ!

ಕಳೆದ ತಿಂಗಳಿನಿಂದ ಭಾರತವು ಇತರ ದೇಶಗಳಿಗಿಂತ ಹೆಚ್ಚು ಕೋವಿಡ್ ಪ್ರಕರಣಗಳನ್ನು ಕಂಡಿದೆ.
ಜನರು ಹಾಸಿಗೆಗಳಿಗಾಗಿ ಕಾಯುತ್ತ ಸಾವನ್ನಪ್ಪಿದ್ದಾರೆ, ಇನ್ನೊಂದು ಕಡೆ, ಆಮ್ಲಜನಕದ ಸರಬರಾಜು ಕಡಿಮೆಯಾಗಿ ಸಾವುಗಳು ಸಂಭವಿಸುತ್ತಿವೆ.

ಈಗ ಸ್ಮಶಾನಗಳಲ್ಲಿ ಸಹ ಸ್ಥಳಾವಕಾಶವಿಲ್ಲ, ಸ್ಮಶಾನದ ಕಾರ್ಮಿಕರು ಶವಗಳನ್ನು ಸುಡುತ್ತಲೇ ಬೆಂದು ಹೋಗಿದ್ದಾರೆ.

ಇದನ್ನೂ ಓದಿ: ಬೆಂಬಲಿಗರನ್ನು ಸೆಳೆಯಲು ‘ಪಾಕಿಸ್ತಾನಿ’ ಯುವತಿಯ ಫೋಟೊ ಬಳಸುತ್ತಿರುವ BJP ಐಟಿ ಸೆಲ್!

ಹಿಂದೂ ಧರ್ಮದಲ್ಲಿ, ಶವಸಂಸ್ಕಾರವು ಸಾಂಪ್ರದಾಯಿಕವಾಗಿ ಅಂತ್ಯಕ್ರಿಯೆಯ ವಿಧಿಗಳಲ್ಲಿ ಪ್ರಮುಖ ಭಾಗವಾಗಿದೆ. ಏಕೆಂದರೆ ಆತ್ಮವನ್ನು ಅದರಿಂದ ಬೇರ್ಪಡಿಸುವಂತೆ ಒತ್ತಾಯಿಸಲು ದೇಹವನ್ನು ನಾಶಪಡಿಸಬೇಕು ಎಂದು ಹಿಂದೂಗಳು ನಂಬುತ್ತಾರೆ.

ಭಾರತದ ರಾಜಧಾನಿ ದೆಹಲಿಯಲ್ಲಿ, ತಾತ್ಕಾಲಿಕ ಅಂತ್ಯಕ್ರಿಯೆಯ ನೆರವೇರಿಸಲು ಸೌದೆ ಬಳಸಿ ಸುಡುವಂತೆ ಸ್ಮಶಾನ ಕಾರ್ಮಿಕರು ಮತ್ತು ಪೌರ ಕಾರ್ಮಿಕರನ್ನು ಒತ್ತಾಯಿಸಲಾಗಿದೆ, ಉದ್ಯಾನವನಗಳು ಮತ್ತು ಇತರ ಖಾಲಿ ಸ್ಥಳಗಳನ್ನು ಶವಸಂಸ್ಕಾರಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ.

ಉರುವಲುಗಳಾಗಿ ಬಳಸಲು ಅಧಿಕಾರಿಗಳು ದೆಹಲಿ ನಗರದ ಉದ್ಯಾನವನಗಳಲ್ಲಿನ ಮರಗಳನ್ನು ಕಡಿದಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ. ಈಗ ಬೆಂಗಳೂರಿನ ಉದ್ಯಾನವನಗಳ ಮರಗಳನ್ನು ಕತ್ತರಿಸದೇ ಅನ್ಯಮಾರ್ಗವಿಲ್ಲೆವೇನೋ?

ಇದನ್ನೂ ಓದಿ: ‘ಬೆನ್ನೆಲುಬಿಲ್ಲದ ಮೋದಿ’ ‘ಡೈಪರ್‌ ಸೂರ್ಯ ಎಕ್ಸ್‌ಪೋಸ್ಡ್’- ಟ್ವಿಟರ್‌ನಲ್ಲಿ BJP ವಿರೋಧಿ ಹವಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...