Homeಕರ್ನಾಟಕಬೆಂಗಳೂರಿನಲ್ಲಿ ಶವ ಸುಡಲೂ ಸೌದೆಯ ಕೊರತೆ: ಬೆಡ್ ಎತ್ತಿಕೊಂಡು ಸಂಸದ ಸೂರ್ಯ ನಾಪತ್ತೆ!

ಬೆಂಗಳೂರಿನಲ್ಲಿ ಶವ ಸುಡಲೂ ಸೌದೆಯ ಕೊರತೆ: ಬೆಡ್ ಎತ್ತಿಕೊಂಡು ಸಂಸದ ಸೂರ್ಯ ನಾಪತ್ತೆ!

ಕೋವಿಡ್ ಸಾವುಗಳ ಸಂಖ್ಯೆ ಹೆಚ್ಚಿದಂತೆ ಬೆಂಗಳೂರಿನ ಸ್ಮಶಾನಗಳಲ್ಲಿ ಪಾಳೆ ಹೆಚ್ಚುತ್ತಿದೆ. ಆದರೆ ಇನ್ನೊಂದು ಕಡೆ ಶವ ಸುಡಲು ಸೌದೆ (ಕಟ್ಟಿಗೆ) ಕೊರತೆ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿದೆ.

- Advertisement -
- Advertisement -

ಬೆಂಗಳೂರಿನ ಜನಪ್ರತಿನಿಧಿಗಳು, ಮುಖ್ಯವಾಗಿ ಆಡಳಿತ ಪಕ್ಷಕ್ಕೆ ಸಂಬಂಧಿಸಿದವರು ಪಲಾಯನ ಮಾಡಿದ್ದಾರೆ. ಬೆಡ್ ಬ್ಲಾಕಿಂಗ್ ಬಗ್ಗೆ ‘ಹವಾ’ ಎಬ್ಬಿಸಿದ ಸಂಸದ ತೇಜಸ್ವಿ ಸೂರ್ಯ ಕೂಡಾ ಈಗ ನಾಪತ್ತೆಯಾಗಿದ್ದಾರೆ. ಅವರೀಗ ಯಾವ ಮಾಧ್ಯಮದ ಫೋನ್ ಕರೆಯನ್ನು ಸ್ವೀಕರಿಸದ ಮಟ್ಟಿಗೆ ಜನದ್ರೋಹಿಯಾಗಿದ್ದಾರೆ.

ಹತ್ತು ದಿನಗಳ ಹಿಂದಷ್ಟೆ, ಆಕ್ಸಿಜನ್ ಮತ್ತು ಬೆಡ್‌ಗಳ ಕೊರತೆಯಿದ್ದಾಗ ಕಂದಾಯ ಸಚಿವ, ಬೆಂಗಳೂರಿನ ಶಾಸಕ ಆರ್. ಅಶೋಕ್ ಹೊಸ ಸ್ಮಶಾನ ನಿರ್ಮಿಸುತ್ತೇವೆ ಎಂದರು. ಅದು ಇನ್ನೂವರೆಗೂ ಆಗಿಲ್ಲ. ರಿಯಲ್ ಎಸ್ಟೇಟ್ ಮಾಡುವ ಜನರಿಗೆ ‘ಅಮೂಲ್ಯ’ ಭೂಮಿಯನ್ನು ಸ್ಮಶಾನಕ್ಕೆ ಪಡೆಯಲು ಮನಸ್ಸು ಒಪ್ಪುತ್ತದೆಯೇ ಎಂಬ ಪ್ರಶ್ನೆ ಬೆಂಗಳೂರಿಗರನ್ನು ಈಗ ಕಾಡುತ್ತಿದೆ.

ಇದನ್ನೂ ಓದಿ: ಕೇಂದ್ರವೇ ಏಕೆ ಎಲ್ಲಾ ಲಸಿಕೆ ಖರೀದಿಸಬಾರದು? ಲಸಿಕೆ ದರದಲ್ಲಿ ತಾರತಮ್ಯವೇಕೆ: ಸುಪ್ರೀಂ ಪ್ರಶ್ನೆ

ಸೂರ್ಯ ಮತ್ತೆ ಪ್ರತ್ಯಕ್ಷರಾಗಿ, ಸೌದೆ ಕದ್ದ ಮುಸ್ಲಿಮರು ಎಂದೂ ಹೇಳುವ ಸಾಧ್ಯತೆಗಳಿವೆ! ಜೀವವಿರೋಧಿ ಸಿದ್ದಾಂತದವರನ್ನು ಮತ್ತು ರಿಯಲ್ ಎಸ್ಟೇಟ್ ದಂಧೆಯವರನ್ನು (ಬಹುಪಾಲು ಅವರೇ ಇದ್ದಾರೆ) ಜನಪ್ರತಿನಿಧಿಗಳನ್ನಾಗಿ ಆರಿಸಿದ ಬೆಂಗಳೂರಿನ ಜನತೆಗೆ ಈಗ ಆಸ್ಪತ್ರೆಯಲ್ಲಿ ಬೆಡ್ ಸಿಗುತ್ತಿಲ್ಲ, ಸಿಕ್ಕರೆ ಆಕ್ಸಿಜನ್, ಚಿಕಿತ್ಸೆ ಸಿಗುತ್ತಿಲ್ಲ. ಆಕಸ್ಮಿಕ ಅಸು ನೀಗಿದರೆ ಸ್ಮಶಾನಗಳಲ್ಲಿ ಕಾಯಬೇಕು. ಅಲ್ಲೂ ಈಗ ಹೊಸ ಸಮಸ್ಯೆ ತಲೆದೋರಿದೆ. ಅಲ್ಲೀಗ ಶವ ಸುಡಲು ಸೌದೆಯ ಅಭಾವ ಉಂಟಾಗಿದೆ.

ಶವಗಾರದಲ್ಲಿ ಶವ ಸುಡಲು ಸೌದೆ ಕೊರತೆ ಈಗ ಎದುರಾಗಿದ್ದು, ಇದು ಬರುವ ದಿನಗಳಲ್ಲಿ ಇನ್ನಷ್ಟು ಸಮಸ್ಯೆ ಉಂಟಾಗಲಿದೆ. ಶವ ಹೂಳುವ ಪದ್ಧತಿ ಅಚರಿಸುವವರೂ ಕೂಡ ಈಗ ಅನಿವಾರ್ಯವಾಗಿ ಸುಡುವ ಪದ್ಧತಿ ಒಪ್ಪಿಕೊಂಡಿದ್ದಾರೆ. ಒಂದು ಕಡೆ ಸ್ಮಶಾನದಲ್ಲಿ ಕ್ಯೂ, ಇನ್ನೊಂದು ಕಡೆ ಸೌದೆ ಕೊರತೆ.

ಇಂತಹ ಹೊತ್ತಿನಲ್ಲೇ ‘ಸ್ಮಶಾನಕ್ಕೆ ಹೋಗುವ ದಾರಿ’ ಎಂಬ ಫ್ಲೆಕ್ಸ್ ಬೋರ್ಡ್ ಹಾಕಿ, ಅಲ್ಲಿ ನೀರು, ಚಹಾ ವಿತರಣೆ ಮಾಡುತ್ತೇವೆ ಎಂದು ಹೆಮ್ಮೆ ಪಡುವ ಬಿಜೆಪಿ ಶಾಸಕರ ಕ್ರೌರ್ಯವೂ ಜನರನ್ನು ಆಕ್ರೋಶಿತರನ್ನಾಗಿ ಮಾಡಿದೆ. ಜನರಿಗೆ ನೆರವು ನೀಡದ ಈ ಜನಪ್ರತಿನಿಧಿಗಳು ಅಕ್ಷರಶಃ ‘ಸ್ಮಶಾನಕ್ಕೆ ತಲುಪುವ ದಾರಿ’ಯನ್ನು ಸೃಷ್ಟಿ ಮಾಡಿದ್ದಾರೆ.
ಪ್ರತಿ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಸುಮಾರು 1,500 ಕೆ.ಜಿ ಕಟ್ಟಿಗೆ ಬೇಕು ಎನ್ನಲಾಗಿದೆ. ನಿತ್ಯ ಸೌದೆ ಸಂಗ್ರಹ ಬಿಬಿಎಂಪಿಗೆ ಭಾರಿ ತಲೆನೋವು ಉಂಟು ಮಾಡಿದೆ. ಶವ ಸುಡಲು ಸೌದೆಗೂ ಶುರುವಾಗುತ್ತಾ ಹಾಹಾಕಾರ ಎಂಬ ಪ್ರಶ್ನೆ ಎದ್ದಿದೆ. ಪ್ರತಿ ಸ್ಮಶಾನದಲ್ಲಿ ನಿತ್ಯ 40 ಕ್ಕಿಂತ ಹೆಚ್ಚು ಶವ ಸುಡಲಾಗುತ್ತಿದೆ.

ಇದನ್ನೂ ಓದಿ: Explainer: ಸದ್ಯಕ್ಕೆ ಲಭ್ಯವಿರುವ ಲಸಿಕೆಗಳೆಷ್ಟು? ತಡವಾಗಲು ಕಾರಣವೇನು?

ಪರಿಸ್ಥಿತಿ ನಿಭಾಯಿಸಲು ಹೆಚ್ಚು ಮರಗಳನ್ನು ಕಡಿಯುವತ್ತ ಪಾಲಿಕೆಯ ಅರಣ್ಯ ವಿಭಾಗ ಮುಂದಾಗಬಹುದು ಎನ್ನಲಾಗಿದೆ.

ಬಿಬಿಎಂಪಿಯ 198 ವಾರ್ಡ್‌ಗಳಲ್ಲಿ ತಲಾ ಒಂದು ಅಥವಾ ಎರಡು ಸ್ಮಶಾನಗಳಿದ್ದು, ಅವು ಈಗ ಕೋವಿಡ್ ಶವಗಳ ದಟ್ಟಣೆಗೆ ತತ್ತರಿಸಿವೆ. ಈಗ ಸೌದೆಯ ಕೊರತೆಯೂ ಸೇರಿಕೊಂಡು ಅಂತ್ಯಸಂಸ್ಕಾರವೇ ಒಂದು ದೊಡ್ಡ ಸಮಸ್ಯೆಯಾಗಿದೆ. ಸುಡುವ ಈ ಹೊತ್ತಿನಲ್ಲಿ ಬೆಡ್ ವಿಚಾರದಲ್ಲಿ ಕೋಮುವಾದೀಕರಣ ಮಾಡಿ ಪರಾರಿಯಾದ ಸಂಸದರು ಯಾರ ಫೋನಿಗೂ ಸಿಗುತ್ತಿಲ್ಲ. ಕೊಲ್ಲುವ ಸಿದ್ದಾಂತದ ಜನರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?

ದೊಡ್ಡ ನಗರಗಳ ಸಮಸ್ಯೆ!

ಕಳೆದ ತಿಂಗಳಿನಿಂದ ಭಾರತವು ಇತರ ದೇಶಗಳಿಗಿಂತ ಹೆಚ್ಚು ಕೋವಿಡ್ ಪ್ರಕರಣಗಳನ್ನು ಕಂಡಿದೆ.
ಜನರು ಹಾಸಿಗೆಗಳಿಗಾಗಿ ಕಾಯುತ್ತ ಸಾವನ್ನಪ್ಪಿದ್ದಾರೆ, ಇನ್ನೊಂದು ಕಡೆ, ಆಮ್ಲಜನಕದ ಸರಬರಾಜು ಕಡಿಮೆಯಾಗಿ ಸಾವುಗಳು ಸಂಭವಿಸುತ್ತಿವೆ.

ಈಗ ಸ್ಮಶಾನಗಳಲ್ಲಿ ಸಹ ಸ್ಥಳಾವಕಾಶವಿಲ್ಲ, ಸ್ಮಶಾನದ ಕಾರ್ಮಿಕರು ಶವಗಳನ್ನು ಸುಡುತ್ತಲೇ ಬೆಂದು ಹೋಗಿದ್ದಾರೆ.

ಇದನ್ನೂ ಓದಿ: ಬೆಂಬಲಿಗರನ್ನು ಸೆಳೆಯಲು ‘ಪಾಕಿಸ್ತಾನಿ’ ಯುವತಿಯ ಫೋಟೊ ಬಳಸುತ್ತಿರುವ BJP ಐಟಿ ಸೆಲ್!

ಹಿಂದೂ ಧರ್ಮದಲ್ಲಿ, ಶವಸಂಸ್ಕಾರವು ಸಾಂಪ್ರದಾಯಿಕವಾಗಿ ಅಂತ್ಯಕ್ರಿಯೆಯ ವಿಧಿಗಳಲ್ಲಿ ಪ್ರಮುಖ ಭಾಗವಾಗಿದೆ. ಏಕೆಂದರೆ ಆತ್ಮವನ್ನು ಅದರಿಂದ ಬೇರ್ಪಡಿಸುವಂತೆ ಒತ್ತಾಯಿಸಲು ದೇಹವನ್ನು ನಾಶಪಡಿಸಬೇಕು ಎಂದು ಹಿಂದೂಗಳು ನಂಬುತ್ತಾರೆ.

ಭಾರತದ ರಾಜಧಾನಿ ದೆಹಲಿಯಲ್ಲಿ, ತಾತ್ಕಾಲಿಕ ಅಂತ್ಯಕ್ರಿಯೆಯ ನೆರವೇರಿಸಲು ಸೌದೆ ಬಳಸಿ ಸುಡುವಂತೆ ಸ್ಮಶಾನ ಕಾರ್ಮಿಕರು ಮತ್ತು ಪೌರ ಕಾರ್ಮಿಕರನ್ನು ಒತ್ತಾಯಿಸಲಾಗಿದೆ, ಉದ್ಯಾನವನಗಳು ಮತ್ತು ಇತರ ಖಾಲಿ ಸ್ಥಳಗಳನ್ನು ಶವಸಂಸ್ಕಾರಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ.

ಉರುವಲುಗಳಾಗಿ ಬಳಸಲು ಅಧಿಕಾರಿಗಳು ದೆಹಲಿ ನಗರದ ಉದ್ಯಾನವನಗಳಲ್ಲಿನ ಮರಗಳನ್ನು ಕಡಿದಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ. ಈಗ ಬೆಂಗಳೂರಿನ ಉದ್ಯಾನವನಗಳ ಮರಗಳನ್ನು ಕತ್ತರಿಸದೇ ಅನ್ಯಮಾರ್ಗವಿಲ್ಲೆವೇನೋ?

ಇದನ್ನೂ ಓದಿ: ‘ಬೆನ್ನೆಲುಬಿಲ್ಲದ ಮೋದಿ’ ‘ಡೈಪರ್‌ ಸೂರ್ಯ ಎಕ್ಸ್‌ಪೋಸ್ಡ್’- ಟ್ವಿಟರ್‌ನಲ್ಲಿ BJP ವಿರೋಧಿ ಹವಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...