Homeಕರ್ನಾಟಕಬೆಂಗಳೂರಿನಲ್ಲಿ ಶವ ಸುಡಲೂ ಸೌದೆಯ ಕೊರತೆ: ಬೆಡ್ ಎತ್ತಿಕೊಂಡು ಸಂಸದ ಸೂರ್ಯ ನಾಪತ್ತೆ!

ಬೆಂಗಳೂರಿನಲ್ಲಿ ಶವ ಸುಡಲೂ ಸೌದೆಯ ಕೊರತೆ: ಬೆಡ್ ಎತ್ತಿಕೊಂಡು ಸಂಸದ ಸೂರ್ಯ ನಾಪತ್ತೆ!

ಕೋವಿಡ್ ಸಾವುಗಳ ಸಂಖ್ಯೆ ಹೆಚ್ಚಿದಂತೆ ಬೆಂಗಳೂರಿನ ಸ್ಮಶಾನಗಳಲ್ಲಿ ಪಾಳೆ ಹೆಚ್ಚುತ್ತಿದೆ. ಆದರೆ ಇನ್ನೊಂದು ಕಡೆ ಶವ ಸುಡಲು ಸೌದೆ (ಕಟ್ಟಿಗೆ) ಕೊರತೆ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿದೆ.

- Advertisement -
- Advertisement -

ಬೆಂಗಳೂರಿನ ಜನಪ್ರತಿನಿಧಿಗಳು, ಮುಖ್ಯವಾಗಿ ಆಡಳಿತ ಪಕ್ಷಕ್ಕೆ ಸಂಬಂಧಿಸಿದವರು ಪಲಾಯನ ಮಾಡಿದ್ದಾರೆ. ಬೆಡ್ ಬ್ಲಾಕಿಂಗ್ ಬಗ್ಗೆ ‘ಹವಾ’ ಎಬ್ಬಿಸಿದ ಸಂಸದ ತೇಜಸ್ವಿ ಸೂರ್ಯ ಕೂಡಾ ಈಗ ನಾಪತ್ತೆಯಾಗಿದ್ದಾರೆ. ಅವರೀಗ ಯಾವ ಮಾಧ್ಯಮದ ಫೋನ್ ಕರೆಯನ್ನು ಸ್ವೀಕರಿಸದ ಮಟ್ಟಿಗೆ ಜನದ್ರೋಹಿಯಾಗಿದ್ದಾರೆ.

ಹತ್ತು ದಿನಗಳ ಹಿಂದಷ್ಟೆ, ಆಕ್ಸಿಜನ್ ಮತ್ತು ಬೆಡ್‌ಗಳ ಕೊರತೆಯಿದ್ದಾಗ ಕಂದಾಯ ಸಚಿವ, ಬೆಂಗಳೂರಿನ ಶಾಸಕ ಆರ್. ಅಶೋಕ್ ಹೊಸ ಸ್ಮಶಾನ ನಿರ್ಮಿಸುತ್ತೇವೆ ಎಂದರು. ಅದು ಇನ್ನೂವರೆಗೂ ಆಗಿಲ್ಲ. ರಿಯಲ್ ಎಸ್ಟೇಟ್ ಮಾಡುವ ಜನರಿಗೆ ‘ಅಮೂಲ್ಯ’ ಭೂಮಿಯನ್ನು ಸ್ಮಶಾನಕ್ಕೆ ಪಡೆಯಲು ಮನಸ್ಸು ಒಪ್ಪುತ್ತದೆಯೇ ಎಂಬ ಪ್ರಶ್ನೆ ಬೆಂಗಳೂರಿಗರನ್ನು ಈಗ ಕಾಡುತ್ತಿದೆ.

ಇದನ್ನೂ ಓದಿ: ಕೇಂದ್ರವೇ ಏಕೆ ಎಲ್ಲಾ ಲಸಿಕೆ ಖರೀದಿಸಬಾರದು? ಲಸಿಕೆ ದರದಲ್ಲಿ ತಾರತಮ್ಯವೇಕೆ: ಸುಪ್ರೀಂ ಪ್ರಶ್ನೆ

ಸೂರ್ಯ ಮತ್ತೆ ಪ್ರತ್ಯಕ್ಷರಾಗಿ, ಸೌದೆ ಕದ್ದ ಮುಸ್ಲಿಮರು ಎಂದೂ ಹೇಳುವ ಸಾಧ್ಯತೆಗಳಿವೆ! ಜೀವವಿರೋಧಿ ಸಿದ್ದಾಂತದವರನ್ನು ಮತ್ತು ರಿಯಲ್ ಎಸ್ಟೇಟ್ ದಂಧೆಯವರನ್ನು (ಬಹುಪಾಲು ಅವರೇ ಇದ್ದಾರೆ) ಜನಪ್ರತಿನಿಧಿಗಳನ್ನಾಗಿ ಆರಿಸಿದ ಬೆಂಗಳೂರಿನ ಜನತೆಗೆ ಈಗ ಆಸ್ಪತ್ರೆಯಲ್ಲಿ ಬೆಡ್ ಸಿಗುತ್ತಿಲ್ಲ, ಸಿಕ್ಕರೆ ಆಕ್ಸಿಜನ್, ಚಿಕಿತ್ಸೆ ಸಿಗುತ್ತಿಲ್ಲ. ಆಕಸ್ಮಿಕ ಅಸು ನೀಗಿದರೆ ಸ್ಮಶಾನಗಳಲ್ಲಿ ಕಾಯಬೇಕು. ಅಲ್ಲೂ ಈಗ ಹೊಸ ಸಮಸ್ಯೆ ತಲೆದೋರಿದೆ. ಅಲ್ಲೀಗ ಶವ ಸುಡಲು ಸೌದೆಯ ಅಭಾವ ಉಂಟಾಗಿದೆ.

ಶವಗಾರದಲ್ಲಿ ಶವ ಸುಡಲು ಸೌದೆ ಕೊರತೆ ಈಗ ಎದುರಾಗಿದ್ದು, ಇದು ಬರುವ ದಿನಗಳಲ್ಲಿ ಇನ್ನಷ್ಟು ಸಮಸ್ಯೆ ಉಂಟಾಗಲಿದೆ. ಶವ ಹೂಳುವ ಪದ್ಧತಿ ಅಚರಿಸುವವರೂ ಕೂಡ ಈಗ ಅನಿವಾರ್ಯವಾಗಿ ಸುಡುವ ಪದ್ಧತಿ ಒಪ್ಪಿಕೊಂಡಿದ್ದಾರೆ. ಒಂದು ಕಡೆ ಸ್ಮಶಾನದಲ್ಲಿ ಕ್ಯೂ, ಇನ್ನೊಂದು ಕಡೆ ಸೌದೆ ಕೊರತೆ.

ಇಂತಹ ಹೊತ್ತಿನಲ್ಲೇ ‘ಸ್ಮಶಾನಕ್ಕೆ ಹೋಗುವ ದಾರಿ’ ಎಂಬ ಫ್ಲೆಕ್ಸ್ ಬೋರ್ಡ್ ಹಾಕಿ, ಅಲ್ಲಿ ನೀರು, ಚಹಾ ವಿತರಣೆ ಮಾಡುತ್ತೇವೆ ಎಂದು ಹೆಮ್ಮೆ ಪಡುವ ಬಿಜೆಪಿ ಶಾಸಕರ ಕ್ರೌರ್ಯವೂ ಜನರನ್ನು ಆಕ್ರೋಶಿತರನ್ನಾಗಿ ಮಾಡಿದೆ. ಜನರಿಗೆ ನೆರವು ನೀಡದ ಈ ಜನಪ್ರತಿನಿಧಿಗಳು ಅಕ್ಷರಶಃ ‘ಸ್ಮಶಾನಕ್ಕೆ ತಲುಪುವ ದಾರಿ’ಯನ್ನು ಸೃಷ್ಟಿ ಮಾಡಿದ್ದಾರೆ.
ಪ್ರತಿ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಸುಮಾರು 1,500 ಕೆ.ಜಿ ಕಟ್ಟಿಗೆ ಬೇಕು ಎನ್ನಲಾಗಿದೆ. ನಿತ್ಯ ಸೌದೆ ಸಂಗ್ರಹ ಬಿಬಿಎಂಪಿಗೆ ಭಾರಿ ತಲೆನೋವು ಉಂಟು ಮಾಡಿದೆ. ಶವ ಸುಡಲು ಸೌದೆಗೂ ಶುರುವಾಗುತ್ತಾ ಹಾಹಾಕಾರ ಎಂಬ ಪ್ರಶ್ನೆ ಎದ್ದಿದೆ. ಪ್ರತಿ ಸ್ಮಶಾನದಲ್ಲಿ ನಿತ್ಯ 40 ಕ್ಕಿಂತ ಹೆಚ್ಚು ಶವ ಸುಡಲಾಗುತ್ತಿದೆ.

ಇದನ್ನೂ ಓದಿ: Explainer: ಸದ್ಯಕ್ಕೆ ಲಭ್ಯವಿರುವ ಲಸಿಕೆಗಳೆಷ್ಟು? ತಡವಾಗಲು ಕಾರಣವೇನು?

ಪರಿಸ್ಥಿತಿ ನಿಭಾಯಿಸಲು ಹೆಚ್ಚು ಮರಗಳನ್ನು ಕಡಿಯುವತ್ತ ಪಾಲಿಕೆಯ ಅರಣ್ಯ ವಿಭಾಗ ಮುಂದಾಗಬಹುದು ಎನ್ನಲಾಗಿದೆ.

ಬಿಬಿಎಂಪಿಯ 198 ವಾರ್ಡ್‌ಗಳಲ್ಲಿ ತಲಾ ಒಂದು ಅಥವಾ ಎರಡು ಸ್ಮಶಾನಗಳಿದ್ದು, ಅವು ಈಗ ಕೋವಿಡ್ ಶವಗಳ ದಟ್ಟಣೆಗೆ ತತ್ತರಿಸಿವೆ. ಈಗ ಸೌದೆಯ ಕೊರತೆಯೂ ಸೇರಿಕೊಂಡು ಅಂತ್ಯಸಂಸ್ಕಾರವೇ ಒಂದು ದೊಡ್ಡ ಸಮಸ್ಯೆಯಾಗಿದೆ. ಸುಡುವ ಈ ಹೊತ್ತಿನಲ್ಲಿ ಬೆಡ್ ವಿಚಾರದಲ್ಲಿ ಕೋಮುವಾದೀಕರಣ ಮಾಡಿ ಪರಾರಿಯಾದ ಸಂಸದರು ಯಾರ ಫೋನಿಗೂ ಸಿಗುತ್ತಿಲ್ಲ. ಕೊಲ್ಲುವ ಸಿದ್ದಾಂತದ ಜನರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?

ದೊಡ್ಡ ನಗರಗಳ ಸಮಸ್ಯೆ!

ಕಳೆದ ತಿಂಗಳಿನಿಂದ ಭಾರತವು ಇತರ ದೇಶಗಳಿಗಿಂತ ಹೆಚ್ಚು ಕೋವಿಡ್ ಪ್ರಕರಣಗಳನ್ನು ಕಂಡಿದೆ.
ಜನರು ಹಾಸಿಗೆಗಳಿಗಾಗಿ ಕಾಯುತ್ತ ಸಾವನ್ನಪ್ಪಿದ್ದಾರೆ, ಇನ್ನೊಂದು ಕಡೆ, ಆಮ್ಲಜನಕದ ಸರಬರಾಜು ಕಡಿಮೆಯಾಗಿ ಸಾವುಗಳು ಸಂಭವಿಸುತ್ತಿವೆ.

ಈಗ ಸ್ಮಶಾನಗಳಲ್ಲಿ ಸಹ ಸ್ಥಳಾವಕಾಶವಿಲ್ಲ, ಸ್ಮಶಾನದ ಕಾರ್ಮಿಕರು ಶವಗಳನ್ನು ಸುಡುತ್ತಲೇ ಬೆಂದು ಹೋಗಿದ್ದಾರೆ.

ಇದನ್ನೂ ಓದಿ: ಬೆಂಬಲಿಗರನ್ನು ಸೆಳೆಯಲು ‘ಪಾಕಿಸ್ತಾನಿ’ ಯುವತಿಯ ಫೋಟೊ ಬಳಸುತ್ತಿರುವ BJP ಐಟಿ ಸೆಲ್!

ಹಿಂದೂ ಧರ್ಮದಲ್ಲಿ, ಶವಸಂಸ್ಕಾರವು ಸಾಂಪ್ರದಾಯಿಕವಾಗಿ ಅಂತ್ಯಕ್ರಿಯೆಯ ವಿಧಿಗಳಲ್ಲಿ ಪ್ರಮುಖ ಭಾಗವಾಗಿದೆ. ಏಕೆಂದರೆ ಆತ್ಮವನ್ನು ಅದರಿಂದ ಬೇರ್ಪಡಿಸುವಂತೆ ಒತ್ತಾಯಿಸಲು ದೇಹವನ್ನು ನಾಶಪಡಿಸಬೇಕು ಎಂದು ಹಿಂದೂಗಳು ನಂಬುತ್ತಾರೆ.

ಭಾರತದ ರಾಜಧಾನಿ ದೆಹಲಿಯಲ್ಲಿ, ತಾತ್ಕಾಲಿಕ ಅಂತ್ಯಕ್ರಿಯೆಯ ನೆರವೇರಿಸಲು ಸೌದೆ ಬಳಸಿ ಸುಡುವಂತೆ ಸ್ಮಶಾನ ಕಾರ್ಮಿಕರು ಮತ್ತು ಪೌರ ಕಾರ್ಮಿಕರನ್ನು ಒತ್ತಾಯಿಸಲಾಗಿದೆ, ಉದ್ಯಾನವನಗಳು ಮತ್ತು ಇತರ ಖಾಲಿ ಸ್ಥಳಗಳನ್ನು ಶವಸಂಸ್ಕಾರಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ.

ಉರುವಲುಗಳಾಗಿ ಬಳಸಲು ಅಧಿಕಾರಿಗಳು ದೆಹಲಿ ನಗರದ ಉದ್ಯಾನವನಗಳಲ್ಲಿನ ಮರಗಳನ್ನು ಕಡಿದಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ. ಈಗ ಬೆಂಗಳೂರಿನ ಉದ್ಯಾನವನಗಳ ಮರಗಳನ್ನು ಕತ್ತರಿಸದೇ ಅನ್ಯಮಾರ್ಗವಿಲ್ಲೆವೇನೋ?

ಇದನ್ನೂ ಓದಿ: ‘ಬೆನ್ನೆಲುಬಿಲ್ಲದ ಮೋದಿ’ ‘ಡೈಪರ್‌ ಸೂರ್ಯ ಎಕ್ಸ್‌ಪೋಸ್ಡ್’- ಟ್ವಿಟರ್‌ನಲ್ಲಿ BJP ವಿರೋಧಿ ಹವಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಿಎಂ ಹುದ್ದೆಗೆ 500 ಕೋಟಿ’ : ಚರ್ಚೆಗೆ ಕಾರಣವಾದ ನವಜೋತ್ ಕೌರ್ ಹೇಳಿಕೆ; ಕಾಂಗ್ರೆಸ್‌ ಮೇಲೆ ಮುಗಿಬಿದ್ದ ಎಎಪಿ, ಬಿಜೆಪಿ

"ಐನೂರು ಕೋಟಿ ರೂಪಾಯಿಯ ಸೂಟ್ ಕೇಸ್ ಕೊಡುವವರು ಸಿಎಂ ಆಗುತ್ತಾರೆ" ಎಂಬ ಪಕ್ಷದ ನಾಯಕ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಅವರ ಹೇಳಿಕೆ ಕುರಿತು ಸ್ಪಷ್ಟನೆ ನೀಡುವಂತೆ ಪಂಜಾಬ್‌ನ...

ಡಿಕೆಶಿ ಅವಕಾಶ ಕೇಳಿದ್ರು, ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಸಮ್ಮತಿಸಿಲ್ಲ: ಯತೀಂದ್ರ ಸಿದ್ದರಾಮಯ್ಯ

ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂಬ ವಿಶ್ವಾಸ ವೈಯಕ್ತಿಕವಾಗಿ ನನಗಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಡಿಕೆಶಿ ಅವಕಾಶ ಕೇಳಿದ್ದರು. ಆದರೆ, ನಾಯಕತ್ವ ಬದಲಾವಣೆ ಪರಿಸ್ಥಿತಿ ಇಲ್ಲ ಎಂದು ಹೈಕಮಾಂಡ್...

ಇಂಡಿಗೋ ಬಿಕ್ಕಟ್ಟು : ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

ಇಂಡಿಗೋ ವಿಮಾನ ಬಿಕ್ಕಟ್ಟಿಗೆ ಸಂಬಂಧಿಸಿದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ (ಡಿಸೆಂಬರ್ 8) ನಿರಾಕರಿಸಿದೆ. ಈ ವಿಷಯದ ಬಗ್ಗೆ ಭಾರತ ಸರ್ಕಾರ ಈಗಾಗಲೇ ಗಮನ ಹರಿಸಿ ಕ್ರಮ ಕೈಗೊಂಡಿದೆ....

ಮಂಡ್ಯದಲ್ಲಿ ಭೀಕರ ಅಪಘಾತ: ಸೇತುವೆಯಿಂದ ಕೆಳಗೆ ಬಿದ್ದ ಕಾರು: ಒಂದೇ ಕುಟುಂಬದ ಮೂವರು ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಸೇತುವೆಗೆ ಡಿಕ್ಕಿ ಹೊಡೆದು, ಬಳಿಕ ಹಳ್ಳಕ್ಕೆ ಬಿದ್ದಿದ್ದು, ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ನಾಗಮಂಗಲ ತಾಲ್ಲೂಕಿನ ತಿಟ್ಟನಹೊಸಹಳ್ಳಿ ಮತ್ತು ಎ.ನಾಗತಿಹಳ್ಳಿ...

ಮುಖ್ಯಮಂತ್ರಿ ಸಿದ್ದರಾಮಯ್ಯ ಆಯ್ಕೆ ಅಸಿಂಧು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದಿಂದ 2023ರಲ್ಲಿ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಈ ಸಂಬಂಧ ಪ್ರತಿಕ್ರಿಯಿಸುವಂತೆ ಸಿದ್ದರಾಮಯ್ಯ ಅವರಿಗೆ ಸೂಚಿಸಿ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಮಲಯಾಳಂ ನಟ ದಿಲೀಪ್ ಖುಲಾಸೆ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎರ್ನಾಕುಲಂನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸೋಮವಾರ (ಡಿಸೆಂಬರ್ 8) ಖುಲಾಸೆಗೊಳಿಸಿದೆ. ನ್ಯಾಯಮೂರ್ತಿ ಹನಿ ಎಂ....

ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ

ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಚರ್ಚೆಯ ನಡುವೆ ಇಂದಿನಿಂದ (ಡಿಸೆಂಬರ್ 8) ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಪ್ರಾರಂಭಗೊಂಡಿದೆ. ಉತ್ತರ ಕರ್ನಾಟಕದ ಸಮಸ್ಯೆಗಳು, ರೈತರ ಸಂಕಷ್ಟ ಮತ್ತು ಬೆಲೆ ಏರಿಕೆಯ ವಿಷಯಗಳನ್ನು ಮುಂದಿಟ್ಟುಕೊಂಡು...

ಕೆಲಸದ ಅವಧಿ ಬಳಿಕ ಯಾವುದೇ ಕರೆಗಳು, ಇಮೇಲ್‌ಗಳಿಗೆ ಉತ್ತರಿಸಬೇಕಿಲ್ಲ : ಸಂಪರ್ಕ ಕಡಿತ ಹಕ್ಕು ಮಸೂದೆ ಹೇಳುವುದೇನು?

ದೇಶದಲ್ಲಿ ಕಾರ್ಪೋರೇಟ್ ಸಂಸ್ಥೆಗಳು ಉದ್ಯೋಗಿಗಳ ಮೇಲೆ ಅತೀವ ಕೆಲಸದ ಹೊರೆಯನ್ನು ಹೇರಿ ಅವರ ಖಾಸಗಿ ಜೀವನವನ್ನು ಕಿತ್ತುಕೊಳ್ಳುವ ಮೂಲಕ ಮಾನಸಿಕ ಒತ್ತಡಕ್ಕೆ ತಳ್ಳುತ್ತಿರುವ ಪರಿಸ್ಥಿತಿ ಗಂಭೀರ ಹಂತಕ್ಕೆ ತಲುಪಿದೆ. ಅದಾಗ್ಯೂ ಕೆಲ ಕಾರ್ಪೋರೇಟ್‌...

ಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ವೇಳೆ ಯುದ್ಧ ವಿರೋಧಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದ ಚೆನ್ನೈನ ಎಸ್‌ಆರ್‌ಎಂ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಲೋರಾ ಶಾಂತಕುಮಾರ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಎಸ್‌ಆರ್‌ಎಂನ ಆಂತರಿಕ ಸಮಿತಿಯ ವರದಿಯು ಲೋರಾ...

ಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆ, ಎರಡು ವರ್ಷಗಳ ನಂತರ ಈ ಬಾರಿ ಯೇಸು ಕ್ರಿಸ್ತನ ಜನ್ಮಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ ಮರುಕಳಿಸಿದೆ. ಶನಿವಾರ (ಡಿಸೆಂಬರ್ 6) ಬೆಥ್ಲೆಹೆಮ್‌ನ ಮ್ಯಾಂಗರ್ ಸ್ಕ್ವೇರ್‌ನಲ್ಲಿರುವ ಚರ್ಚ್...