Homeಕರ್ನಾಟಕಬೆಂಗಳೂರಿನಲ್ಲಿ ಶವ ಸುಡಲೂ ಸೌದೆಯ ಕೊರತೆ: ಬೆಡ್ ಎತ್ತಿಕೊಂಡು ಸಂಸದ ಸೂರ್ಯ ನಾಪತ್ತೆ!

ಬೆಂಗಳೂರಿನಲ್ಲಿ ಶವ ಸುಡಲೂ ಸೌದೆಯ ಕೊರತೆ: ಬೆಡ್ ಎತ್ತಿಕೊಂಡು ಸಂಸದ ಸೂರ್ಯ ನಾಪತ್ತೆ!

ಕೋವಿಡ್ ಸಾವುಗಳ ಸಂಖ್ಯೆ ಹೆಚ್ಚಿದಂತೆ ಬೆಂಗಳೂರಿನ ಸ್ಮಶಾನಗಳಲ್ಲಿ ಪಾಳೆ ಹೆಚ್ಚುತ್ತಿದೆ. ಆದರೆ ಇನ್ನೊಂದು ಕಡೆ ಶವ ಸುಡಲು ಸೌದೆ (ಕಟ್ಟಿಗೆ) ಕೊರತೆ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿದೆ.

- Advertisement -
- Advertisement -

ಬೆಂಗಳೂರಿನ ಜನಪ್ರತಿನಿಧಿಗಳು, ಮುಖ್ಯವಾಗಿ ಆಡಳಿತ ಪಕ್ಷಕ್ಕೆ ಸಂಬಂಧಿಸಿದವರು ಪಲಾಯನ ಮಾಡಿದ್ದಾರೆ. ಬೆಡ್ ಬ್ಲಾಕಿಂಗ್ ಬಗ್ಗೆ ‘ಹವಾ’ ಎಬ್ಬಿಸಿದ ಸಂಸದ ತೇಜಸ್ವಿ ಸೂರ್ಯ ಕೂಡಾ ಈಗ ನಾಪತ್ತೆಯಾಗಿದ್ದಾರೆ. ಅವರೀಗ ಯಾವ ಮಾಧ್ಯಮದ ಫೋನ್ ಕರೆಯನ್ನು ಸ್ವೀಕರಿಸದ ಮಟ್ಟಿಗೆ ಜನದ್ರೋಹಿಯಾಗಿದ್ದಾರೆ.

ಹತ್ತು ದಿನಗಳ ಹಿಂದಷ್ಟೆ, ಆಕ್ಸಿಜನ್ ಮತ್ತು ಬೆಡ್‌ಗಳ ಕೊರತೆಯಿದ್ದಾಗ ಕಂದಾಯ ಸಚಿವ, ಬೆಂಗಳೂರಿನ ಶಾಸಕ ಆರ್. ಅಶೋಕ್ ಹೊಸ ಸ್ಮಶಾನ ನಿರ್ಮಿಸುತ್ತೇವೆ ಎಂದರು. ಅದು ಇನ್ನೂವರೆಗೂ ಆಗಿಲ್ಲ. ರಿಯಲ್ ಎಸ್ಟೇಟ್ ಮಾಡುವ ಜನರಿಗೆ ‘ಅಮೂಲ್ಯ’ ಭೂಮಿಯನ್ನು ಸ್ಮಶಾನಕ್ಕೆ ಪಡೆಯಲು ಮನಸ್ಸು ಒಪ್ಪುತ್ತದೆಯೇ ಎಂಬ ಪ್ರಶ್ನೆ ಬೆಂಗಳೂರಿಗರನ್ನು ಈಗ ಕಾಡುತ್ತಿದೆ.

ಇದನ್ನೂ ಓದಿ: ಕೇಂದ್ರವೇ ಏಕೆ ಎಲ್ಲಾ ಲಸಿಕೆ ಖರೀದಿಸಬಾರದು? ಲಸಿಕೆ ದರದಲ್ಲಿ ತಾರತಮ್ಯವೇಕೆ: ಸುಪ್ರೀಂ ಪ್ರಶ್ನೆ

ಸೂರ್ಯ ಮತ್ತೆ ಪ್ರತ್ಯಕ್ಷರಾಗಿ, ಸೌದೆ ಕದ್ದ ಮುಸ್ಲಿಮರು ಎಂದೂ ಹೇಳುವ ಸಾಧ್ಯತೆಗಳಿವೆ! ಜೀವವಿರೋಧಿ ಸಿದ್ದಾಂತದವರನ್ನು ಮತ್ತು ರಿಯಲ್ ಎಸ್ಟೇಟ್ ದಂಧೆಯವರನ್ನು (ಬಹುಪಾಲು ಅವರೇ ಇದ್ದಾರೆ) ಜನಪ್ರತಿನಿಧಿಗಳನ್ನಾಗಿ ಆರಿಸಿದ ಬೆಂಗಳೂರಿನ ಜನತೆಗೆ ಈಗ ಆಸ್ಪತ್ರೆಯಲ್ಲಿ ಬೆಡ್ ಸಿಗುತ್ತಿಲ್ಲ, ಸಿಕ್ಕರೆ ಆಕ್ಸಿಜನ್, ಚಿಕಿತ್ಸೆ ಸಿಗುತ್ತಿಲ್ಲ. ಆಕಸ್ಮಿಕ ಅಸು ನೀಗಿದರೆ ಸ್ಮಶಾನಗಳಲ್ಲಿ ಕಾಯಬೇಕು. ಅಲ್ಲೂ ಈಗ ಹೊಸ ಸಮಸ್ಯೆ ತಲೆದೋರಿದೆ. ಅಲ್ಲೀಗ ಶವ ಸುಡಲು ಸೌದೆಯ ಅಭಾವ ಉಂಟಾಗಿದೆ.

ಶವಗಾರದಲ್ಲಿ ಶವ ಸುಡಲು ಸೌದೆ ಕೊರತೆ ಈಗ ಎದುರಾಗಿದ್ದು, ಇದು ಬರುವ ದಿನಗಳಲ್ಲಿ ಇನ್ನಷ್ಟು ಸಮಸ್ಯೆ ಉಂಟಾಗಲಿದೆ. ಶವ ಹೂಳುವ ಪದ್ಧತಿ ಅಚರಿಸುವವರೂ ಕೂಡ ಈಗ ಅನಿವಾರ್ಯವಾಗಿ ಸುಡುವ ಪದ್ಧತಿ ಒಪ್ಪಿಕೊಂಡಿದ್ದಾರೆ. ಒಂದು ಕಡೆ ಸ್ಮಶಾನದಲ್ಲಿ ಕ್ಯೂ, ಇನ್ನೊಂದು ಕಡೆ ಸೌದೆ ಕೊರತೆ.

ಇಂತಹ ಹೊತ್ತಿನಲ್ಲೇ ‘ಸ್ಮಶಾನಕ್ಕೆ ಹೋಗುವ ದಾರಿ’ ಎಂಬ ಫ್ಲೆಕ್ಸ್ ಬೋರ್ಡ್ ಹಾಕಿ, ಅಲ್ಲಿ ನೀರು, ಚಹಾ ವಿತರಣೆ ಮಾಡುತ್ತೇವೆ ಎಂದು ಹೆಮ್ಮೆ ಪಡುವ ಬಿಜೆಪಿ ಶಾಸಕರ ಕ್ರೌರ್ಯವೂ ಜನರನ್ನು ಆಕ್ರೋಶಿತರನ್ನಾಗಿ ಮಾಡಿದೆ. ಜನರಿಗೆ ನೆರವು ನೀಡದ ಈ ಜನಪ್ರತಿನಿಧಿಗಳು ಅಕ್ಷರಶಃ ‘ಸ್ಮಶಾನಕ್ಕೆ ತಲುಪುವ ದಾರಿ’ಯನ್ನು ಸೃಷ್ಟಿ ಮಾಡಿದ್ದಾರೆ.
ಪ್ರತಿ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಸುಮಾರು 1,500 ಕೆ.ಜಿ ಕಟ್ಟಿಗೆ ಬೇಕು ಎನ್ನಲಾಗಿದೆ. ನಿತ್ಯ ಸೌದೆ ಸಂಗ್ರಹ ಬಿಬಿಎಂಪಿಗೆ ಭಾರಿ ತಲೆನೋವು ಉಂಟು ಮಾಡಿದೆ. ಶವ ಸುಡಲು ಸೌದೆಗೂ ಶುರುವಾಗುತ್ತಾ ಹಾಹಾಕಾರ ಎಂಬ ಪ್ರಶ್ನೆ ಎದ್ದಿದೆ. ಪ್ರತಿ ಸ್ಮಶಾನದಲ್ಲಿ ನಿತ್ಯ 40 ಕ್ಕಿಂತ ಹೆಚ್ಚು ಶವ ಸುಡಲಾಗುತ್ತಿದೆ.

ಇದನ್ನೂ ಓದಿ: Explainer: ಸದ್ಯಕ್ಕೆ ಲಭ್ಯವಿರುವ ಲಸಿಕೆಗಳೆಷ್ಟು? ತಡವಾಗಲು ಕಾರಣವೇನು?

ಪರಿಸ್ಥಿತಿ ನಿಭಾಯಿಸಲು ಹೆಚ್ಚು ಮರಗಳನ್ನು ಕಡಿಯುವತ್ತ ಪಾಲಿಕೆಯ ಅರಣ್ಯ ವಿಭಾಗ ಮುಂದಾಗಬಹುದು ಎನ್ನಲಾಗಿದೆ.

ಬಿಬಿಎಂಪಿಯ 198 ವಾರ್ಡ್‌ಗಳಲ್ಲಿ ತಲಾ ಒಂದು ಅಥವಾ ಎರಡು ಸ್ಮಶಾನಗಳಿದ್ದು, ಅವು ಈಗ ಕೋವಿಡ್ ಶವಗಳ ದಟ್ಟಣೆಗೆ ತತ್ತರಿಸಿವೆ. ಈಗ ಸೌದೆಯ ಕೊರತೆಯೂ ಸೇರಿಕೊಂಡು ಅಂತ್ಯಸಂಸ್ಕಾರವೇ ಒಂದು ದೊಡ್ಡ ಸಮಸ್ಯೆಯಾಗಿದೆ. ಸುಡುವ ಈ ಹೊತ್ತಿನಲ್ಲಿ ಬೆಡ್ ವಿಚಾರದಲ್ಲಿ ಕೋಮುವಾದೀಕರಣ ಮಾಡಿ ಪರಾರಿಯಾದ ಸಂಸದರು ಯಾರ ಫೋನಿಗೂ ಸಿಗುತ್ತಿಲ್ಲ. ಕೊಲ್ಲುವ ಸಿದ್ದಾಂತದ ಜನರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?

ದೊಡ್ಡ ನಗರಗಳ ಸಮಸ್ಯೆ!

ಕಳೆದ ತಿಂಗಳಿನಿಂದ ಭಾರತವು ಇತರ ದೇಶಗಳಿಗಿಂತ ಹೆಚ್ಚು ಕೋವಿಡ್ ಪ್ರಕರಣಗಳನ್ನು ಕಂಡಿದೆ.
ಜನರು ಹಾಸಿಗೆಗಳಿಗಾಗಿ ಕಾಯುತ್ತ ಸಾವನ್ನಪ್ಪಿದ್ದಾರೆ, ಇನ್ನೊಂದು ಕಡೆ, ಆಮ್ಲಜನಕದ ಸರಬರಾಜು ಕಡಿಮೆಯಾಗಿ ಸಾವುಗಳು ಸಂಭವಿಸುತ್ತಿವೆ.

ಈಗ ಸ್ಮಶಾನಗಳಲ್ಲಿ ಸಹ ಸ್ಥಳಾವಕಾಶವಿಲ್ಲ, ಸ್ಮಶಾನದ ಕಾರ್ಮಿಕರು ಶವಗಳನ್ನು ಸುಡುತ್ತಲೇ ಬೆಂದು ಹೋಗಿದ್ದಾರೆ.

ಇದನ್ನೂ ಓದಿ: ಬೆಂಬಲಿಗರನ್ನು ಸೆಳೆಯಲು ‘ಪಾಕಿಸ್ತಾನಿ’ ಯುವತಿಯ ಫೋಟೊ ಬಳಸುತ್ತಿರುವ BJP ಐಟಿ ಸೆಲ್!

ಹಿಂದೂ ಧರ್ಮದಲ್ಲಿ, ಶವಸಂಸ್ಕಾರವು ಸಾಂಪ್ರದಾಯಿಕವಾಗಿ ಅಂತ್ಯಕ್ರಿಯೆಯ ವಿಧಿಗಳಲ್ಲಿ ಪ್ರಮುಖ ಭಾಗವಾಗಿದೆ. ಏಕೆಂದರೆ ಆತ್ಮವನ್ನು ಅದರಿಂದ ಬೇರ್ಪಡಿಸುವಂತೆ ಒತ್ತಾಯಿಸಲು ದೇಹವನ್ನು ನಾಶಪಡಿಸಬೇಕು ಎಂದು ಹಿಂದೂಗಳು ನಂಬುತ್ತಾರೆ.

ಭಾರತದ ರಾಜಧಾನಿ ದೆಹಲಿಯಲ್ಲಿ, ತಾತ್ಕಾಲಿಕ ಅಂತ್ಯಕ್ರಿಯೆಯ ನೆರವೇರಿಸಲು ಸೌದೆ ಬಳಸಿ ಸುಡುವಂತೆ ಸ್ಮಶಾನ ಕಾರ್ಮಿಕರು ಮತ್ತು ಪೌರ ಕಾರ್ಮಿಕರನ್ನು ಒತ್ತಾಯಿಸಲಾಗಿದೆ, ಉದ್ಯಾನವನಗಳು ಮತ್ತು ಇತರ ಖಾಲಿ ಸ್ಥಳಗಳನ್ನು ಶವಸಂಸ್ಕಾರಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ.

ಉರುವಲುಗಳಾಗಿ ಬಳಸಲು ಅಧಿಕಾರಿಗಳು ದೆಹಲಿ ನಗರದ ಉದ್ಯಾನವನಗಳಲ್ಲಿನ ಮರಗಳನ್ನು ಕಡಿದಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ. ಈಗ ಬೆಂಗಳೂರಿನ ಉದ್ಯಾನವನಗಳ ಮರಗಳನ್ನು ಕತ್ತರಿಸದೇ ಅನ್ಯಮಾರ್ಗವಿಲ್ಲೆವೇನೋ?

ಇದನ್ನೂ ಓದಿ: ‘ಬೆನ್ನೆಲುಬಿಲ್ಲದ ಮೋದಿ’ ‘ಡೈಪರ್‌ ಸೂರ್ಯ ಎಕ್ಸ್‌ಪೋಸ್ಡ್’- ಟ್ವಿಟರ್‌ನಲ್ಲಿ BJP ವಿರೋಧಿ ಹವಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...