Homeಕರ್ನಾಟಕಬೆಂಗಳೂರಿನಲ್ಲಿ ಶವ ಸುಡಲೂ ಸೌದೆಯ ಕೊರತೆ: ಬೆಡ್ ಎತ್ತಿಕೊಂಡು ಸಂಸದ ಸೂರ್ಯ ನಾಪತ್ತೆ!

ಬೆಂಗಳೂರಿನಲ್ಲಿ ಶವ ಸುಡಲೂ ಸೌದೆಯ ಕೊರತೆ: ಬೆಡ್ ಎತ್ತಿಕೊಂಡು ಸಂಸದ ಸೂರ್ಯ ನಾಪತ್ತೆ!

ಕೋವಿಡ್ ಸಾವುಗಳ ಸಂಖ್ಯೆ ಹೆಚ್ಚಿದಂತೆ ಬೆಂಗಳೂರಿನ ಸ್ಮಶಾನಗಳಲ್ಲಿ ಪಾಳೆ ಹೆಚ್ಚುತ್ತಿದೆ. ಆದರೆ ಇನ್ನೊಂದು ಕಡೆ ಶವ ಸುಡಲು ಸೌದೆ (ಕಟ್ಟಿಗೆ) ಕೊರತೆ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿದೆ.

- Advertisement -
- Advertisement -

ಬೆಂಗಳೂರಿನ ಜನಪ್ರತಿನಿಧಿಗಳು, ಮುಖ್ಯವಾಗಿ ಆಡಳಿತ ಪಕ್ಷಕ್ಕೆ ಸಂಬಂಧಿಸಿದವರು ಪಲಾಯನ ಮಾಡಿದ್ದಾರೆ. ಬೆಡ್ ಬ್ಲಾಕಿಂಗ್ ಬಗ್ಗೆ ‘ಹವಾ’ ಎಬ್ಬಿಸಿದ ಸಂಸದ ತೇಜಸ್ವಿ ಸೂರ್ಯ ಕೂಡಾ ಈಗ ನಾಪತ್ತೆಯಾಗಿದ್ದಾರೆ. ಅವರೀಗ ಯಾವ ಮಾಧ್ಯಮದ ಫೋನ್ ಕರೆಯನ್ನು ಸ್ವೀಕರಿಸದ ಮಟ್ಟಿಗೆ ಜನದ್ರೋಹಿಯಾಗಿದ್ದಾರೆ.

ಹತ್ತು ದಿನಗಳ ಹಿಂದಷ್ಟೆ, ಆಕ್ಸಿಜನ್ ಮತ್ತು ಬೆಡ್‌ಗಳ ಕೊರತೆಯಿದ್ದಾಗ ಕಂದಾಯ ಸಚಿವ, ಬೆಂಗಳೂರಿನ ಶಾಸಕ ಆರ್. ಅಶೋಕ್ ಹೊಸ ಸ್ಮಶಾನ ನಿರ್ಮಿಸುತ್ತೇವೆ ಎಂದರು. ಅದು ಇನ್ನೂವರೆಗೂ ಆಗಿಲ್ಲ. ರಿಯಲ್ ಎಸ್ಟೇಟ್ ಮಾಡುವ ಜನರಿಗೆ ‘ಅಮೂಲ್ಯ’ ಭೂಮಿಯನ್ನು ಸ್ಮಶಾನಕ್ಕೆ ಪಡೆಯಲು ಮನಸ್ಸು ಒಪ್ಪುತ್ತದೆಯೇ ಎಂಬ ಪ್ರಶ್ನೆ ಬೆಂಗಳೂರಿಗರನ್ನು ಈಗ ಕಾಡುತ್ತಿದೆ.

ಇದನ್ನೂ ಓದಿ: ಕೇಂದ್ರವೇ ಏಕೆ ಎಲ್ಲಾ ಲಸಿಕೆ ಖರೀದಿಸಬಾರದು? ಲಸಿಕೆ ದರದಲ್ಲಿ ತಾರತಮ್ಯವೇಕೆ: ಸುಪ್ರೀಂ ಪ್ರಶ್ನೆ

ಸೂರ್ಯ ಮತ್ತೆ ಪ್ರತ್ಯಕ್ಷರಾಗಿ, ಸೌದೆ ಕದ್ದ ಮುಸ್ಲಿಮರು ಎಂದೂ ಹೇಳುವ ಸಾಧ್ಯತೆಗಳಿವೆ! ಜೀವವಿರೋಧಿ ಸಿದ್ದಾಂತದವರನ್ನು ಮತ್ತು ರಿಯಲ್ ಎಸ್ಟೇಟ್ ದಂಧೆಯವರನ್ನು (ಬಹುಪಾಲು ಅವರೇ ಇದ್ದಾರೆ) ಜನಪ್ರತಿನಿಧಿಗಳನ್ನಾಗಿ ಆರಿಸಿದ ಬೆಂಗಳೂರಿನ ಜನತೆಗೆ ಈಗ ಆಸ್ಪತ್ರೆಯಲ್ಲಿ ಬೆಡ್ ಸಿಗುತ್ತಿಲ್ಲ, ಸಿಕ್ಕರೆ ಆಕ್ಸಿಜನ್, ಚಿಕಿತ್ಸೆ ಸಿಗುತ್ತಿಲ್ಲ. ಆಕಸ್ಮಿಕ ಅಸು ನೀಗಿದರೆ ಸ್ಮಶಾನಗಳಲ್ಲಿ ಕಾಯಬೇಕು. ಅಲ್ಲೂ ಈಗ ಹೊಸ ಸಮಸ್ಯೆ ತಲೆದೋರಿದೆ. ಅಲ್ಲೀಗ ಶವ ಸುಡಲು ಸೌದೆಯ ಅಭಾವ ಉಂಟಾಗಿದೆ.

ಶವಗಾರದಲ್ಲಿ ಶವ ಸುಡಲು ಸೌದೆ ಕೊರತೆ ಈಗ ಎದುರಾಗಿದ್ದು, ಇದು ಬರುವ ದಿನಗಳಲ್ಲಿ ಇನ್ನಷ್ಟು ಸಮಸ್ಯೆ ಉಂಟಾಗಲಿದೆ. ಶವ ಹೂಳುವ ಪದ್ಧತಿ ಅಚರಿಸುವವರೂ ಕೂಡ ಈಗ ಅನಿವಾರ್ಯವಾಗಿ ಸುಡುವ ಪದ್ಧತಿ ಒಪ್ಪಿಕೊಂಡಿದ್ದಾರೆ. ಒಂದು ಕಡೆ ಸ್ಮಶಾನದಲ್ಲಿ ಕ್ಯೂ, ಇನ್ನೊಂದು ಕಡೆ ಸೌದೆ ಕೊರತೆ.

ಇಂತಹ ಹೊತ್ತಿನಲ್ಲೇ ‘ಸ್ಮಶಾನಕ್ಕೆ ಹೋಗುವ ದಾರಿ’ ಎಂಬ ಫ್ಲೆಕ್ಸ್ ಬೋರ್ಡ್ ಹಾಕಿ, ಅಲ್ಲಿ ನೀರು, ಚಹಾ ವಿತರಣೆ ಮಾಡುತ್ತೇವೆ ಎಂದು ಹೆಮ್ಮೆ ಪಡುವ ಬಿಜೆಪಿ ಶಾಸಕರ ಕ್ರೌರ್ಯವೂ ಜನರನ್ನು ಆಕ್ರೋಶಿತರನ್ನಾಗಿ ಮಾಡಿದೆ. ಜನರಿಗೆ ನೆರವು ನೀಡದ ಈ ಜನಪ್ರತಿನಿಧಿಗಳು ಅಕ್ಷರಶಃ ‘ಸ್ಮಶಾನಕ್ಕೆ ತಲುಪುವ ದಾರಿ’ಯನ್ನು ಸೃಷ್ಟಿ ಮಾಡಿದ್ದಾರೆ.
ಪ್ರತಿ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಸುಮಾರು 1,500 ಕೆ.ಜಿ ಕಟ್ಟಿಗೆ ಬೇಕು ಎನ್ನಲಾಗಿದೆ. ನಿತ್ಯ ಸೌದೆ ಸಂಗ್ರಹ ಬಿಬಿಎಂಪಿಗೆ ಭಾರಿ ತಲೆನೋವು ಉಂಟು ಮಾಡಿದೆ. ಶವ ಸುಡಲು ಸೌದೆಗೂ ಶುರುವಾಗುತ್ತಾ ಹಾಹಾಕಾರ ಎಂಬ ಪ್ರಶ್ನೆ ಎದ್ದಿದೆ. ಪ್ರತಿ ಸ್ಮಶಾನದಲ್ಲಿ ನಿತ್ಯ 40 ಕ್ಕಿಂತ ಹೆಚ್ಚು ಶವ ಸುಡಲಾಗುತ್ತಿದೆ.

ಇದನ್ನೂ ಓದಿ: Explainer: ಸದ್ಯಕ್ಕೆ ಲಭ್ಯವಿರುವ ಲಸಿಕೆಗಳೆಷ್ಟು? ತಡವಾಗಲು ಕಾರಣವೇನು?

ಪರಿಸ್ಥಿತಿ ನಿಭಾಯಿಸಲು ಹೆಚ್ಚು ಮರಗಳನ್ನು ಕಡಿಯುವತ್ತ ಪಾಲಿಕೆಯ ಅರಣ್ಯ ವಿಭಾಗ ಮುಂದಾಗಬಹುದು ಎನ್ನಲಾಗಿದೆ.

ಬಿಬಿಎಂಪಿಯ 198 ವಾರ್ಡ್‌ಗಳಲ್ಲಿ ತಲಾ ಒಂದು ಅಥವಾ ಎರಡು ಸ್ಮಶಾನಗಳಿದ್ದು, ಅವು ಈಗ ಕೋವಿಡ್ ಶವಗಳ ದಟ್ಟಣೆಗೆ ತತ್ತರಿಸಿವೆ. ಈಗ ಸೌದೆಯ ಕೊರತೆಯೂ ಸೇರಿಕೊಂಡು ಅಂತ್ಯಸಂಸ್ಕಾರವೇ ಒಂದು ದೊಡ್ಡ ಸಮಸ್ಯೆಯಾಗಿದೆ. ಸುಡುವ ಈ ಹೊತ್ತಿನಲ್ಲಿ ಬೆಡ್ ವಿಚಾರದಲ್ಲಿ ಕೋಮುವಾದೀಕರಣ ಮಾಡಿ ಪರಾರಿಯಾದ ಸಂಸದರು ಯಾರ ಫೋನಿಗೂ ಸಿಗುತ್ತಿಲ್ಲ. ಕೊಲ್ಲುವ ಸಿದ್ದಾಂತದ ಜನರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?

ದೊಡ್ಡ ನಗರಗಳ ಸಮಸ್ಯೆ!

ಕಳೆದ ತಿಂಗಳಿನಿಂದ ಭಾರತವು ಇತರ ದೇಶಗಳಿಗಿಂತ ಹೆಚ್ಚು ಕೋವಿಡ್ ಪ್ರಕರಣಗಳನ್ನು ಕಂಡಿದೆ.
ಜನರು ಹಾಸಿಗೆಗಳಿಗಾಗಿ ಕಾಯುತ್ತ ಸಾವನ್ನಪ್ಪಿದ್ದಾರೆ, ಇನ್ನೊಂದು ಕಡೆ, ಆಮ್ಲಜನಕದ ಸರಬರಾಜು ಕಡಿಮೆಯಾಗಿ ಸಾವುಗಳು ಸಂಭವಿಸುತ್ತಿವೆ.

ಈಗ ಸ್ಮಶಾನಗಳಲ್ಲಿ ಸಹ ಸ್ಥಳಾವಕಾಶವಿಲ್ಲ, ಸ್ಮಶಾನದ ಕಾರ್ಮಿಕರು ಶವಗಳನ್ನು ಸುಡುತ್ತಲೇ ಬೆಂದು ಹೋಗಿದ್ದಾರೆ.

ಇದನ್ನೂ ಓದಿ: ಬೆಂಬಲಿಗರನ್ನು ಸೆಳೆಯಲು ‘ಪಾಕಿಸ್ತಾನಿ’ ಯುವತಿಯ ಫೋಟೊ ಬಳಸುತ್ತಿರುವ BJP ಐಟಿ ಸೆಲ್!

ಹಿಂದೂ ಧರ್ಮದಲ್ಲಿ, ಶವಸಂಸ್ಕಾರವು ಸಾಂಪ್ರದಾಯಿಕವಾಗಿ ಅಂತ್ಯಕ್ರಿಯೆಯ ವಿಧಿಗಳಲ್ಲಿ ಪ್ರಮುಖ ಭಾಗವಾಗಿದೆ. ಏಕೆಂದರೆ ಆತ್ಮವನ್ನು ಅದರಿಂದ ಬೇರ್ಪಡಿಸುವಂತೆ ಒತ್ತಾಯಿಸಲು ದೇಹವನ್ನು ನಾಶಪಡಿಸಬೇಕು ಎಂದು ಹಿಂದೂಗಳು ನಂಬುತ್ತಾರೆ.

ಭಾರತದ ರಾಜಧಾನಿ ದೆಹಲಿಯಲ್ಲಿ, ತಾತ್ಕಾಲಿಕ ಅಂತ್ಯಕ್ರಿಯೆಯ ನೆರವೇರಿಸಲು ಸೌದೆ ಬಳಸಿ ಸುಡುವಂತೆ ಸ್ಮಶಾನ ಕಾರ್ಮಿಕರು ಮತ್ತು ಪೌರ ಕಾರ್ಮಿಕರನ್ನು ಒತ್ತಾಯಿಸಲಾಗಿದೆ, ಉದ್ಯಾನವನಗಳು ಮತ್ತು ಇತರ ಖಾಲಿ ಸ್ಥಳಗಳನ್ನು ಶವಸಂಸ್ಕಾರಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ.

ಉರುವಲುಗಳಾಗಿ ಬಳಸಲು ಅಧಿಕಾರಿಗಳು ದೆಹಲಿ ನಗರದ ಉದ್ಯಾನವನಗಳಲ್ಲಿನ ಮರಗಳನ್ನು ಕಡಿದಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ. ಈಗ ಬೆಂಗಳೂರಿನ ಉದ್ಯಾನವನಗಳ ಮರಗಳನ್ನು ಕತ್ತರಿಸದೇ ಅನ್ಯಮಾರ್ಗವಿಲ್ಲೆವೇನೋ?

ಇದನ್ನೂ ಓದಿ: ‘ಬೆನ್ನೆಲುಬಿಲ್ಲದ ಮೋದಿ’ ‘ಡೈಪರ್‌ ಸೂರ್ಯ ಎಕ್ಸ್‌ಪೋಸ್ಡ್’- ಟ್ವಿಟರ್‌ನಲ್ಲಿ BJP ವಿರೋಧಿ ಹವಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...