Homeಕರ್ನಾಟಕಬೆಂಗಳೂರಿನಲ್ಲಿ ಶವ ಸುಡಲೂ ಸೌದೆಯ ಕೊರತೆ: ಬೆಡ್ ಎತ್ತಿಕೊಂಡು ಸಂಸದ ಸೂರ್ಯ ನಾಪತ್ತೆ!

ಬೆಂಗಳೂರಿನಲ್ಲಿ ಶವ ಸುಡಲೂ ಸೌದೆಯ ಕೊರತೆ: ಬೆಡ್ ಎತ್ತಿಕೊಂಡು ಸಂಸದ ಸೂರ್ಯ ನಾಪತ್ತೆ!

ಕೋವಿಡ್ ಸಾವುಗಳ ಸಂಖ್ಯೆ ಹೆಚ್ಚಿದಂತೆ ಬೆಂಗಳೂರಿನ ಸ್ಮಶಾನಗಳಲ್ಲಿ ಪಾಳೆ ಹೆಚ್ಚುತ್ತಿದೆ. ಆದರೆ ಇನ್ನೊಂದು ಕಡೆ ಶವ ಸುಡಲು ಸೌದೆ (ಕಟ್ಟಿಗೆ) ಕೊರತೆ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿದೆ.

- Advertisement -
- Advertisement -

ಬೆಂಗಳೂರಿನ ಜನಪ್ರತಿನಿಧಿಗಳು, ಮುಖ್ಯವಾಗಿ ಆಡಳಿತ ಪಕ್ಷಕ್ಕೆ ಸಂಬಂಧಿಸಿದವರು ಪಲಾಯನ ಮಾಡಿದ್ದಾರೆ. ಬೆಡ್ ಬ್ಲಾಕಿಂಗ್ ಬಗ್ಗೆ ‘ಹವಾ’ ಎಬ್ಬಿಸಿದ ಸಂಸದ ತೇಜಸ್ವಿ ಸೂರ್ಯ ಕೂಡಾ ಈಗ ನಾಪತ್ತೆಯಾಗಿದ್ದಾರೆ. ಅವರೀಗ ಯಾವ ಮಾಧ್ಯಮದ ಫೋನ್ ಕರೆಯನ್ನು ಸ್ವೀಕರಿಸದ ಮಟ್ಟಿಗೆ ಜನದ್ರೋಹಿಯಾಗಿದ್ದಾರೆ.

ಹತ್ತು ದಿನಗಳ ಹಿಂದಷ್ಟೆ, ಆಕ್ಸಿಜನ್ ಮತ್ತು ಬೆಡ್‌ಗಳ ಕೊರತೆಯಿದ್ದಾಗ ಕಂದಾಯ ಸಚಿವ, ಬೆಂಗಳೂರಿನ ಶಾಸಕ ಆರ್. ಅಶೋಕ್ ಹೊಸ ಸ್ಮಶಾನ ನಿರ್ಮಿಸುತ್ತೇವೆ ಎಂದರು. ಅದು ಇನ್ನೂವರೆಗೂ ಆಗಿಲ್ಲ. ರಿಯಲ್ ಎಸ್ಟೇಟ್ ಮಾಡುವ ಜನರಿಗೆ ‘ಅಮೂಲ್ಯ’ ಭೂಮಿಯನ್ನು ಸ್ಮಶಾನಕ್ಕೆ ಪಡೆಯಲು ಮನಸ್ಸು ಒಪ್ಪುತ್ತದೆಯೇ ಎಂಬ ಪ್ರಶ್ನೆ ಬೆಂಗಳೂರಿಗರನ್ನು ಈಗ ಕಾಡುತ್ತಿದೆ.

ಇದನ್ನೂ ಓದಿ: ಕೇಂದ್ರವೇ ಏಕೆ ಎಲ್ಲಾ ಲಸಿಕೆ ಖರೀದಿಸಬಾರದು? ಲಸಿಕೆ ದರದಲ್ಲಿ ತಾರತಮ್ಯವೇಕೆ: ಸುಪ್ರೀಂ ಪ್ರಶ್ನೆ

ಸೂರ್ಯ ಮತ್ತೆ ಪ್ರತ್ಯಕ್ಷರಾಗಿ, ಸೌದೆ ಕದ್ದ ಮುಸ್ಲಿಮರು ಎಂದೂ ಹೇಳುವ ಸಾಧ್ಯತೆಗಳಿವೆ! ಜೀವವಿರೋಧಿ ಸಿದ್ದಾಂತದವರನ್ನು ಮತ್ತು ರಿಯಲ್ ಎಸ್ಟೇಟ್ ದಂಧೆಯವರನ್ನು (ಬಹುಪಾಲು ಅವರೇ ಇದ್ದಾರೆ) ಜನಪ್ರತಿನಿಧಿಗಳನ್ನಾಗಿ ಆರಿಸಿದ ಬೆಂಗಳೂರಿನ ಜನತೆಗೆ ಈಗ ಆಸ್ಪತ್ರೆಯಲ್ಲಿ ಬೆಡ್ ಸಿಗುತ್ತಿಲ್ಲ, ಸಿಕ್ಕರೆ ಆಕ್ಸಿಜನ್, ಚಿಕಿತ್ಸೆ ಸಿಗುತ್ತಿಲ್ಲ. ಆಕಸ್ಮಿಕ ಅಸು ನೀಗಿದರೆ ಸ್ಮಶಾನಗಳಲ್ಲಿ ಕಾಯಬೇಕು. ಅಲ್ಲೂ ಈಗ ಹೊಸ ಸಮಸ್ಯೆ ತಲೆದೋರಿದೆ. ಅಲ್ಲೀಗ ಶವ ಸುಡಲು ಸೌದೆಯ ಅಭಾವ ಉಂಟಾಗಿದೆ.

ಶವಗಾರದಲ್ಲಿ ಶವ ಸುಡಲು ಸೌದೆ ಕೊರತೆ ಈಗ ಎದುರಾಗಿದ್ದು, ಇದು ಬರುವ ದಿನಗಳಲ್ಲಿ ಇನ್ನಷ್ಟು ಸಮಸ್ಯೆ ಉಂಟಾಗಲಿದೆ. ಶವ ಹೂಳುವ ಪದ್ಧತಿ ಅಚರಿಸುವವರೂ ಕೂಡ ಈಗ ಅನಿವಾರ್ಯವಾಗಿ ಸುಡುವ ಪದ್ಧತಿ ಒಪ್ಪಿಕೊಂಡಿದ್ದಾರೆ. ಒಂದು ಕಡೆ ಸ್ಮಶಾನದಲ್ಲಿ ಕ್ಯೂ, ಇನ್ನೊಂದು ಕಡೆ ಸೌದೆ ಕೊರತೆ.

ಇಂತಹ ಹೊತ್ತಿನಲ್ಲೇ ‘ಸ್ಮಶಾನಕ್ಕೆ ಹೋಗುವ ದಾರಿ’ ಎಂಬ ಫ್ಲೆಕ್ಸ್ ಬೋರ್ಡ್ ಹಾಕಿ, ಅಲ್ಲಿ ನೀರು, ಚಹಾ ವಿತರಣೆ ಮಾಡುತ್ತೇವೆ ಎಂದು ಹೆಮ್ಮೆ ಪಡುವ ಬಿಜೆಪಿ ಶಾಸಕರ ಕ್ರೌರ್ಯವೂ ಜನರನ್ನು ಆಕ್ರೋಶಿತರನ್ನಾಗಿ ಮಾಡಿದೆ. ಜನರಿಗೆ ನೆರವು ನೀಡದ ಈ ಜನಪ್ರತಿನಿಧಿಗಳು ಅಕ್ಷರಶಃ ‘ಸ್ಮಶಾನಕ್ಕೆ ತಲುಪುವ ದಾರಿ’ಯನ್ನು ಸೃಷ್ಟಿ ಮಾಡಿದ್ದಾರೆ.
ಪ್ರತಿ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಸುಮಾರು 1,500 ಕೆ.ಜಿ ಕಟ್ಟಿಗೆ ಬೇಕು ಎನ್ನಲಾಗಿದೆ. ನಿತ್ಯ ಸೌದೆ ಸಂಗ್ರಹ ಬಿಬಿಎಂಪಿಗೆ ಭಾರಿ ತಲೆನೋವು ಉಂಟು ಮಾಡಿದೆ. ಶವ ಸುಡಲು ಸೌದೆಗೂ ಶುರುವಾಗುತ್ತಾ ಹಾಹಾಕಾರ ಎಂಬ ಪ್ರಶ್ನೆ ಎದ್ದಿದೆ. ಪ್ರತಿ ಸ್ಮಶಾನದಲ್ಲಿ ನಿತ್ಯ 40 ಕ್ಕಿಂತ ಹೆಚ್ಚು ಶವ ಸುಡಲಾಗುತ್ತಿದೆ.

ಇದನ್ನೂ ಓದಿ: Explainer: ಸದ್ಯಕ್ಕೆ ಲಭ್ಯವಿರುವ ಲಸಿಕೆಗಳೆಷ್ಟು? ತಡವಾಗಲು ಕಾರಣವೇನು?

ಪರಿಸ್ಥಿತಿ ನಿಭಾಯಿಸಲು ಹೆಚ್ಚು ಮರಗಳನ್ನು ಕಡಿಯುವತ್ತ ಪಾಲಿಕೆಯ ಅರಣ್ಯ ವಿಭಾಗ ಮುಂದಾಗಬಹುದು ಎನ್ನಲಾಗಿದೆ.

ಬಿಬಿಎಂಪಿಯ 198 ವಾರ್ಡ್‌ಗಳಲ್ಲಿ ತಲಾ ಒಂದು ಅಥವಾ ಎರಡು ಸ್ಮಶಾನಗಳಿದ್ದು, ಅವು ಈಗ ಕೋವಿಡ್ ಶವಗಳ ದಟ್ಟಣೆಗೆ ತತ್ತರಿಸಿವೆ. ಈಗ ಸೌದೆಯ ಕೊರತೆಯೂ ಸೇರಿಕೊಂಡು ಅಂತ್ಯಸಂಸ್ಕಾರವೇ ಒಂದು ದೊಡ್ಡ ಸಮಸ್ಯೆಯಾಗಿದೆ. ಸುಡುವ ಈ ಹೊತ್ತಿನಲ್ಲಿ ಬೆಡ್ ವಿಚಾರದಲ್ಲಿ ಕೋಮುವಾದೀಕರಣ ಮಾಡಿ ಪರಾರಿಯಾದ ಸಂಸದರು ಯಾರ ಫೋನಿಗೂ ಸಿಗುತ್ತಿಲ್ಲ. ಕೊಲ್ಲುವ ಸಿದ್ದಾಂತದ ಜನರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?

ದೊಡ್ಡ ನಗರಗಳ ಸಮಸ್ಯೆ!

ಕಳೆದ ತಿಂಗಳಿನಿಂದ ಭಾರತವು ಇತರ ದೇಶಗಳಿಗಿಂತ ಹೆಚ್ಚು ಕೋವಿಡ್ ಪ್ರಕರಣಗಳನ್ನು ಕಂಡಿದೆ.
ಜನರು ಹಾಸಿಗೆಗಳಿಗಾಗಿ ಕಾಯುತ್ತ ಸಾವನ್ನಪ್ಪಿದ್ದಾರೆ, ಇನ್ನೊಂದು ಕಡೆ, ಆಮ್ಲಜನಕದ ಸರಬರಾಜು ಕಡಿಮೆಯಾಗಿ ಸಾವುಗಳು ಸಂಭವಿಸುತ್ತಿವೆ.

ಈಗ ಸ್ಮಶಾನಗಳಲ್ಲಿ ಸಹ ಸ್ಥಳಾವಕಾಶವಿಲ್ಲ, ಸ್ಮಶಾನದ ಕಾರ್ಮಿಕರು ಶವಗಳನ್ನು ಸುಡುತ್ತಲೇ ಬೆಂದು ಹೋಗಿದ್ದಾರೆ.

ಇದನ್ನೂ ಓದಿ: ಬೆಂಬಲಿಗರನ್ನು ಸೆಳೆಯಲು ‘ಪಾಕಿಸ್ತಾನಿ’ ಯುವತಿಯ ಫೋಟೊ ಬಳಸುತ್ತಿರುವ BJP ಐಟಿ ಸೆಲ್!

ಹಿಂದೂ ಧರ್ಮದಲ್ಲಿ, ಶವಸಂಸ್ಕಾರವು ಸಾಂಪ್ರದಾಯಿಕವಾಗಿ ಅಂತ್ಯಕ್ರಿಯೆಯ ವಿಧಿಗಳಲ್ಲಿ ಪ್ರಮುಖ ಭಾಗವಾಗಿದೆ. ಏಕೆಂದರೆ ಆತ್ಮವನ್ನು ಅದರಿಂದ ಬೇರ್ಪಡಿಸುವಂತೆ ಒತ್ತಾಯಿಸಲು ದೇಹವನ್ನು ನಾಶಪಡಿಸಬೇಕು ಎಂದು ಹಿಂದೂಗಳು ನಂಬುತ್ತಾರೆ.

ಭಾರತದ ರಾಜಧಾನಿ ದೆಹಲಿಯಲ್ಲಿ, ತಾತ್ಕಾಲಿಕ ಅಂತ್ಯಕ್ರಿಯೆಯ ನೆರವೇರಿಸಲು ಸೌದೆ ಬಳಸಿ ಸುಡುವಂತೆ ಸ್ಮಶಾನ ಕಾರ್ಮಿಕರು ಮತ್ತು ಪೌರ ಕಾರ್ಮಿಕರನ್ನು ಒತ್ತಾಯಿಸಲಾಗಿದೆ, ಉದ್ಯಾನವನಗಳು ಮತ್ತು ಇತರ ಖಾಲಿ ಸ್ಥಳಗಳನ್ನು ಶವಸಂಸ್ಕಾರಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ.

ಉರುವಲುಗಳಾಗಿ ಬಳಸಲು ಅಧಿಕಾರಿಗಳು ದೆಹಲಿ ನಗರದ ಉದ್ಯಾನವನಗಳಲ್ಲಿನ ಮರಗಳನ್ನು ಕಡಿದಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ. ಈಗ ಬೆಂಗಳೂರಿನ ಉದ್ಯಾನವನಗಳ ಮರಗಳನ್ನು ಕತ್ತರಿಸದೇ ಅನ್ಯಮಾರ್ಗವಿಲ್ಲೆವೇನೋ?

ಇದನ್ನೂ ಓದಿ: ‘ಬೆನ್ನೆಲುಬಿಲ್ಲದ ಮೋದಿ’ ‘ಡೈಪರ್‌ ಸೂರ್ಯ ಎಕ್ಸ್‌ಪೋಸ್ಡ್’- ಟ್ವಿಟರ್‌ನಲ್ಲಿ BJP ವಿರೋಧಿ ಹವಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...

ಮಾದಕ ವ್ಯಸನ : 10 ವರ್ಷದಲ್ಲಿ ಐವರು ಗಂಡು ಮಕ್ಕಳನ್ನು ಕಳೆದುಕೊಂಡ ವೃದ್ಧ ದಂಪತಿ

ಡ್ರಗ್ ಕಾರಣದಿಂದ ವೃದ್ದ ದಂಪತಿ ತನ್ನ ಐವರು ಗಂಡು ಮಕ್ಕಳನ್ನು ಕಳೆದುಕೊಂಡ ಹೃದಯ ವಿದ್ರಾವಕ ಮತ್ತು ಆಘಾತಕಾರಿ ವರದಿ ಪಂಜಾಬ್‌ನ ಕಪುರ್ಥಲಾ ಜಿಲ್ಲೆಯ ಸುಲ್ತಾನ್‌ಪುರ ಲೋಧಿಯಿಂದ ಬಂದಿದೆ. ಸುಲ್ತಾನ್‌ಪುರ ಲೋಧಿಯ ಪಂಡೋರಿ ಮೊಹಲ್ಲಾ ಎಂಬ ಪ್ರದೇಶದಲ್ಲಿ ವಾಸಿಸುತ್ತಿರುವ...

ಜಮ್ಮು-ಕಾಶ್ಮೀರ: 28 ವರ್ಷಗಳ ಕಾಲ ಸೇನಾ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಘೋಷಿಸಿದ ಶ್ರೀನಗರ ನ್ಯಾಯಾಲಯ

1997 ರಲ್ಲಿ ಸೇನಾ ಕಸ್ಟಡಿಗೆ ತೆಗೆದುಕೊಂಡ ಸುಮಾರು 28 ವರ್ಷಗಳ ನಂತರ ಶ್ರೀನಗರ ನ್ಯಾಯಾಲಯವು ಒಬ್ಬ ವ್ಯಕ್ತಿಯನ್ನು ಸತ್ತನೆಂದು ಘೋಷಿಸಿದೆ. ಬಂಧನದಲ್ಲಿದ್ದಾಗ ಕೊಲ್ಲಲ್ಪಟ್ಟಿದ್ದಾನೆ ಎಂಬ ತನಿಖಾ ಸಂಶೋಧನೆಗಳನ್ನು ಉಲ್ಲೇಖಿಸಿ ಮತ್ತು ಸಾವಿನ ಕಾನೂನುಬದ್ಧ...

ದೆಹಲಿ: ವೇತನ ಕೇಳಿದ್ದಕ್ಕೆ ಅಪಾಯಕಾರಿ ಚರಂಡಿ ಸ್ವಚ್ಛಗೊಳಿಸಲು ಒತ್ತಾಯ; ಸುರಕ್ಷತಾ ಸಾಧನಗಳಿಲ್ಲದೆ ಚರಂಡಿಗಿಳಿದ ನೈರ್ಮಲ್ಯ ಕಾರ್ಮಿಕ ಸಾವು

ವಾಲ್ಮೀಕಿ ಸಮುದಾಯದ ಗುತ್ತಿಗೆ ನೈರ್ಮಲ್ಯ ಕಾರ್ಮಿಕ ರಾಹುಲ್ (32) ಮಾರ್ಚ್ 30 ರಂದು ದಿಲ್ಶಾದ್ ಗಾರ್ಡನ್‌ನ ತಹಿರ್‌ಪುರದಲ್ಲಿ 8 ರಿಂದ 10 ಅಡಿ ಆಳದ ಚರಂಡಿಯನ್ನು ಹಸ್ತಚಾಲಿತವಾಗಿ ಹೂಳು ತೆಗೆಯುವಾಗ ಯಾವುದೇ ಸುರಕ್ಷತಾ...

ಗಾಝಾ | ಇಸ್ರೇಲ್ ದಾಳಿಯಲ್ಲಿ ಅಲ್‌-ಜಝೀರಾ ಪತ್ರಕರ್ತ ಸಾವು : ತೀವ್ರ ಖಂಡನೆ ವ್ಯಕ್ತಪಡಿಸಿದ ಮಾಧ್ಯಮ ಸಂಸ್ಥೆ

ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಡೆಸಿದ ಡ್ರೋನ್ ದಾಳಿಯಲ್ಲಿ ಅಲ್-ಜಝೀರಾ ಮಾಧ್ಯಮ ಸಂಸ್ಥೆಯ ಪತ್ರಕರ್ತ ಮೊಹಮ್ಮದ್ ವಿಶಾಹ್ ಸಾವನ್ನಪ್ಪಿದ್ದಾರೆ. ಗಾಝಾ ನಗರದ ಪಶ್ಚಿಮ ಭಾಗದಲ್ಲಿರುವ ಕರಾವಳಿ ರಸ್ತೆಯಾದ ಅಲ್-ರಶೀದ್ ಸ್ಟ್ರೀಟ್‌ನಲ್ಲಿ ಬುಧವಾರ (ಏ.8) ಕಾರಿನ...

ಅಸ್ಸಾಂ : ಮತದಾನದ ಹಿಂದಿನ ದಿನ ಪಕ್ಷಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್ ಅಭ್ಯರ್ಥಿ!

ಅಸ್ಸಾಂ ವಿಧಾನಸಭೆ ಚುನಾವಣೆಗೆ ಕೇವಲ ಒಂದು ದಿನ ಬಾಕಿ ಇರುವಾಗ, ಉದಲ್ಗುರಿ (ಎಸ್‌ಟಿ) ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುರೇನ್ ದೈಮರಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ ಎಂದು ವರದಿಯಾಗಿದೆ. ಪಕ್ಷದ ನಾಯಕತ್ವದಿಂದ...

ವಿಧಾನಸಭೆ ಚುನಾವಣೆ : ಅಸ್ಸಾಂ, ಕೇರಳ, ಪುದುಚೇರಿಯಲ್ಲಿ ಇಂದು ಮತದಾನ

ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭೆಯ ಚುನಾವಣೆಯ ಮತದಾನ ಇಂದು (ಏ.9, 2026) ಒಂದೇ ಹಂತದಲ್ಲಿ ನಡೆಯಲಿದೆ. ಈಗಾಗಲೇ ಮತದಾನ ಆರಂಭಗೊಂಡಿದೆ. ಅಸ್ಸಾಂನ 126 ಸದಸ್ಯ ಬಲದ ವಿಧಾನಸಭೆಗೆ ನಡೆಯಲಿರುವ ಚುನಾವಣೆಯು...