Homeಕರ್ನಾಟಕಬೆಂಗಳೂರಿನಲ್ಲಿ ಶವ ಸುಡಲೂ ಸೌದೆಯ ಕೊರತೆ: ಬೆಡ್ ಎತ್ತಿಕೊಂಡು ಸಂಸದ ಸೂರ್ಯ ನಾಪತ್ತೆ!

ಬೆಂಗಳೂರಿನಲ್ಲಿ ಶವ ಸುಡಲೂ ಸೌದೆಯ ಕೊರತೆ: ಬೆಡ್ ಎತ್ತಿಕೊಂಡು ಸಂಸದ ಸೂರ್ಯ ನಾಪತ್ತೆ!

ಕೋವಿಡ್ ಸಾವುಗಳ ಸಂಖ್ಯೆ ಹೆಚ್ಚಿದಂತೆ ಬೆಂಗಳೂರಿನ ಸ್ಮಶಾನಗಳಲ್ಲಿ ಪಾಳೆ ಹೆಚ್ಚುತ್ತಿದೆ. ಆದರೆ ಇನ್ನೊಂದು ಕಡೆ ಶವ ಸುಡಲು ಸೌದೆ (ಕಟ್ಟಿಗೆ) ಕೊರತೆ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿದೆ.

- Advertisement -
- Advertisement -

ಬೆಂಗಳೂರಿನ ಜನಪ್ರತಿನಿಧಿಗಳು, ಮುಖ್ಯವಾಗಿ ಆಡಳಿತ ಪಕ್ಷಕ್ಕೆ ಸಂಬಂಧಿಸಿದವರು ಪಲಾಯನ ಮಾಡಿದ್ದಾರೆ. ಬೆಡ್ ಬ್ಲಾಕಿಂಗ್ ಬಗ್ಗೆ ‘ಹವಾ’ ಎಬ್ಬಿಸಿದ ಸಂಸದ ತೇಜಸ್ವಿ ಸೂರ್ಯ ಕೂಡಾ ಈಗ ನಾಪತ್ತೆಯಾಗಿದ್ದಾರೆ. ಅವರೀಗ ಯಾವ ಮಾಧ್ಯಮದ ಫೋನ್ ಕರೆಯನ್ನು ಸ್ವೀಕರಿಸದ ಮಟ್ಟಿಗೆ ಜನದ್ರೋಹಿಯಾಗಿದ್ದಾರೆ.

ಹತ್ತು ದಿನಗಳ ಹಿಂದಷ್ಟೆ, ಆಕ್ಸಿಜನ್ ಮತ್ತು ಬೆಡ್‌ಗಳ ಕೊರತೆಯಿದ್ದಾಗ ಕಂದಾಯ ಸಚಿವ, ಬೆಂಗಳೂರಿನ ಶಾಸಕ ಆರ್. ಅಶೋಕ್ ಹೊಸ ಸ್ಮಶಾನ ನಿರ್ಮಿಸುತ್ತೇವೆ ಎಂದರು. ಅದು ಇನ್ನೂವರೆಗೂ ಆಗಿಲ್ಲ. ರಿಯಲ್ ಎಸ್ಟೇಟ್ ಮಾಡುವ ಜನರಿಗೆ ‘ಅಮೂಲ್ಯ’ ಭೂಮಿಯನ್ನು ಸ್ಮಶಾನಕ್ಕೆ ಪಡೆಯಲು ಮನಸ್ಸು ಒಪ್ಪುತ್ತದೆಯೇ ಎಂಬ ಪ್ರಶ್ನೆ ಬೆಂಗಳೂರಿಗರನ್ನು ಈಗ ಕಾಡುತ್ತಿದೆ.

ಇದನ್ನೂ ಓದಿ: ಕೇಂದ್ರವೇ ಏಕೆ ಎಲ್ಲಾ ಲಸಿಕೆ ಖರೀದಿಸಬಾರದು? ಲಸಿಕೆ ದರದಲ್ಲಿ ತಾರತಮ್ಯವೇಕೆ: ಸುಪ್ರೀಂ ಪ್ರಶ್ನೆ

ಸೂರ್ಯ ಮತ್ತೆ ಪ್ರತ್ಯಕ್ಷರಾಗಿ, ಸೌದೆ ಕದ್ದ ಮುಸ್ಲಿಮರು ಎಂದೂ ಹೇಳುವ ಸಾಧ್ಯತೆಗಳಿವೆ! ಜೀವವಿರೋಧಿ ಸಿದ್ದಾಂತದವರನ್ನು ಮತ್ತು ರಿಯಲ್ ಎಸ್ಟೇಟ್ ದಂಧೆಯವರನ್ನು (ಬಹುಪಾಲು ಅವರೇ ಇದ್ದಾರೆ) ಜನಪ್ರತಿನಿಧಿಗಳನ್ನಾಗಿ ಆರಿಸಿದ ಬೆಂಗಳೂರಿನ ಜನತೆಗೆ ಈಗ ಆಸ್ಪತ್ರೆಯಲ್ಲಿ ಬೆಡ್ ಸಿಗುತ್ತಿಲ್ಲ, ಸಿಕ್ಕರೆ ಆಕ್ಸಿಜನ್, ಚಿಕಿತ್ಸೆ ಸಿಗುತ್ತಿಲ್ಲ. ಆಕಸ್ಮಿಕ ಅಸು ನೀಗಿದರೆ ಸ್ಮಶಾನಗಳಲ್ಲಿ ಕಾಯಬೇಕು. ಅಲ್ಲೂ ಈಗ ಹೊಸ ಸಮಸ್ಯೆ ತಲೆದೋರಿದೆ. ಅಲ್ಲೀಗ ಶವ ಸುಡಲು ಸೌದೆಯ ಅಭಾವ ಉಂಟಾಗಿದೆ.

ಶವಗಾರದಲ್ಲಿ ಶವ ಸುಡಲು ಸೌದೆ ಕೊರತೆ ಈಗ ಎದುರಾಗಿದ್ದು, ಇದು ಬರುವ ದಿನಗಳಲ್ಲಿ ಇನ್ನಷ್ಟು ಸಮಸ್ಯೆ ಉಂಟಾಗಲಿದೆ. ಶವ ಹೂಳುವ ಪದ್ಧತಿ ಅಚರಿಸುವವರೂ ಕೂಡ ಈಗ ಅನಿವಾರ್ಯವಾಗಿ ಸುಡುವ ಪದ್ಧತಿ ಒಪ್ಪಿಕೊಂಡಿದ್ದಾರೆ. ಒಂದು ಕಡೆ ಸ್ಮಶಾನದಲ್ಲಿ ಕ್ಯೂ, ಇನ್ನೊಂದು ಕಡೆ ಸೌದೆ ಕೊರತೆ.

ಇಂತಹ ಹೊತ್ತಿನಲ್ಲೇ ‘ಸ್ಮಶಾನಕ್ಕೆ ಹೋಗುವ ದಾರಿ’ ಎಂಬ ಫ್ಲೆಕ್ಸ್ ಬೋರ್ಡ್ ಹಾಕಿ, ಅಲ್ಲಿ ನೀರು, ಚಹಾ ವಿತರಣೆ ಮಾಡುತ್ತೇವೆ ಎಂದು ಹೆಮ್ಮೆ ಪಡುವ ಬಿಜೆಪಿ ಶಾಸಕರ ಕ್ರೌರ್ಯವೂ ಜನರನ್ನು ಆಕ್ರೋಶಿತರನ್ನಾಗಿ ಮಾಡಿದೆ. ಜನರಿಗೆ ನೆರವು ನೀಡದ ಈ ಜನಪ್ರತಿನಿಧಿಗಳು ಅಕ್ಷರಶಃ ‘ಸ್ಮಶಾನಕ್ಕೆ ತಲುಪುವ ದಾರಿ’ಯನ್ನು ಸೃಷ್ಟಿ ಮಾಡಿದ್ದಾರೆ.
ಪ್ರತಿ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಸುಮಾರು 1,500 ಕೆ.ಜಿ ಕಟ್ಟಿಗೆ ಬೇಕು ಎನ್ನಲಾಗಿದೆ. ನಿತ್ಯ ಸೌದೆ ಸಂಗ್ರಹ ಬಿಬಿಎಂಪಿಗೆ ಭಾರಿ ತಲೆನೋವು ಉಂಟು ಮಾಡಿದೆ. ಶವ ಸುಡಲು ಸೌದೆಗೂ ಶುರುವಾಗುತ್ತಾ ಹಾಹಾಕಾರ ಎಂಬ ಪ್ರಶ್ನೆ ಎದ್ದಿದೆ. ಪ್ರತಿ ಸ್ಮಶಾನದಲ್ಲಿ ನಿತ್ಯ 40 ಕ್ಕಿಂತ ಹೆಚ್ಚು ಶವ ಸುಡಲಾಗುತ್ತಿದೆ.

ಇದನ್ನೂ ಓದಿ: Explainer: ಸದ್ಯಕ್ಕೆ ಲಭ್ಯವಿರುವ ಲಸಿಕೆಗಳೆಷ್ಟು? ತಡವಾಗಲು ಕಾರಣವೇನು?

ಪರಿಸ್ಥಿತಿ ನಿಭಾಯಿಸಲು ಹೆಚ್ಚು ಮರಗಳನ್ನು ಕಡಿಯುವತ್ತ ಪಾಲಿಕೆಯ ಅರಣ್ಯ ವಿಭಾಗ ಮುಂದಾಗಬಹುದು ಎನ್ನಲಾಗಿದೆ.

ಬಿಬಿಎಂಪಿಯ 198 ವಾರ್ಡ್‌ಗಳಲ್ಲಿ ತಲಾ ಒಂದು ಅಥವಾ ಎರಡು ಸ್ಮಶಾನಗಳಿದ್ದು, ಅವು ಈಗ ಕೋವಿಡ್ ಶವಗಳ ದಟ್ಟಣೆಗೆ ತತ್ತರಿಸಿವೆ. ಈಗ ಸೌದೆಯ ಕೊರತೆಯೂ ಸೇರಿಕೊಂಡು ಅಂತ್ಯಸಂಸ್ಕಾರವೇ ಒಂದು ದೊಡ್ಡ ಸಮಸ್ಯೆಯಾಗಿದೆ. ಸುಡುವ ಈ ಹೊತ್ತಿನಲ್ಲಿ ಬೆಡ್ ವಿಚಾರದಲ್ಲಿ ಕೋಮುವಾದೀಕರಣ ಮಾಡಿ ಪರಾರಿಯಾದ ಸಂಸದರು ಯಾರ ಫೋನಿಗೂ ಸಿಗುತ್ತಿಲ್ಲ. ಕೊಲ್ಲುವ ಸಿದ್ದಾಂತದ ಜನರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?

ದೊಡ್ಡ ನಗರಗಳ ಸಮಸ್ಯೆ!

ಕಳೆದ ತಿಂಗಳಿನಿಂದ ಭಾರತವು ಇತರ ದೇಶಗಳಿಗಿಂತ ಹೆಚ್ಚು ಕೋವಿಡ್ ಪ್ರಕರಣಗಳನ್ನು ಕಂಡಿದೆ.
ಜನರು ಹಾಸಿಗೆಗಳಿಗಾಗಿ ಕಾಯುತ್ತ ಸಾವನ್ನಪ್ಪಿದ್ದಾರೆ, ಇನ್ನೊಂದು ಕಡೆ, ಆಮ್ಲಜನಕದ ಸರಬರಾಜು ಕಡಿಮೆಯಾಗಿ ಸಾವುಗಳು ಸಂಭವಿಸುತ್ತಿವೆ.

ಈಗ ಸ್ಮಶಾನಗಳಲ್ಲಿ ಸಹ ಸ್ಥಳಾವಕಾಶವಿಲ್ಲ, ಸ್ಮಶಾನದ ಕಾರ್ಮಿಕರು ಶವಗಳನ್ನು ಸುಡುತ್ತಲೇ ಬೆಂದು ಹೋಗಿದ್ದಾರೆ.

ಇದನ್ನೂ ಓದಿ: ಬೆಂಬಲಿಗರನ್ನು ಸೆಳೆಯಲು ‘ಪಾಕಿಸ್ತಾನಿ’ ಯುವತಿಯ ಫೋಟೊ ಬಳಸುತ್ತಿರುವ BJP ಐಟಿ ಸೆಲ್!

ಹಿಂದೂ ಧರ್ಮದಲ್ಲಿ, ಶವಸಂಸ್ಕಾರವು ಸಾಂಪ್ರದಾಯಿಕವಾಗಿ ಅಂತ್ಯಕ್ರಿಯೆಯ ವಿಧಿಗಳಲ್ಲಿ ಪ್ರಮುಖ ಭಾಗವಾಗಿದೆ. ಏಕೆಂದರೆ ಆತ್ಮವನ್ನು ಅದರಿಂದ ಬೇರ್ಪಡಿಸುವಂತೆ ಒತ್ತಾಯಿಸಲು ದೇಹವನ್ನು ನಾಶಪಡಿಸಬೇಕು ಎಂದು ಹಿಂದೂಗಳು ನಂಬುತ್ತಾರೆ.

ಭಾರತದ ರಾಜಧಾನಿ ದೆಹಲಿಯಲ್ಲಿ, ತಾತ್ಕಾಲಿಕ ಅಂತ್ಯಕ್ರಿಯೆಯ ನೆರವೇರಿಸಲು ಸೌದೆ ಬಳಸಿ ಸುಡುವಂತೆ ಸ್ಮಶಾನ ಕಾರ್ಮಿಕರು ಮತ್ತು ಪೌರ ಕಾರ್ಮಿಕರನ್ನು ಒತ್ತಾಯಿಸಲಾಗಿದೆ, ಉದ್ಯಾನವನಗಳು ಮತ್ತು ಇತರ ಖಾಲಿ ಸ್ಥಳಗಳನ್ನು ಶವಸಂಸ್ಕಾರಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ.

ಉರುವಲುಗಳಾಗಿ ಬಳಸಲು ಅಧಿಕಾರಿಗಳು ದೆಹಲಿ ನಗರದ ಉದ್ಯಾನವನಗಳಲ್ಲಿನ ಮರಗಳನ್ನು ಕಡಿದಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ. ಈಗ ಬೆಂಗಳೂರಿನ ಉದ್ಯಾನವನಗಳ ಮರಗಳನ್ನು ಕತ್ತರಿಸದೇ ಅನ್ಯಮಾರ್ಗವಿಲ್ಲೆವೇನೋ?

ಇದನ್ನೂ ಓದಿ: ‘ಬೆನ್ನೆಲುಬಿಲ್ಲದ ಮೋದಿ’ ‘ಡೈಪರ್‌ ಸೂರ್ಯ ಎಕ್ಸ್‌ಪೋಸ್ಡ್’- ಟ್ವಿಟರ್‌ನಲ್ಲಿ BJP ವಿರೋಧಿ ಹವಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುತ್ತಿಗೆ ಕಾರ್ಮಿಕ ಪದ್ಧತಿ ರದ್ದುಪಡಿಸಿ, ನೇರ ವೇತನ ಪಾವತಿ ಜಾರಿಗೊಳಿಸಿ, ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸಲು ಆಗ್ರಹಿಸಿ ಎಐಸಿಸಿಟಿಯು ಪ್ರತಿಭಟನೆ

ಬೆಂಗಳೂರು: ರಾಜ್ಯಾದ್ಯಂತ ವಿವಿಧ ವಲಯಗಳಲ್ಲಿ ದುಡಿಯುತ್ತಿರುವ ಗುತ್ತಿಗೆ, ಹೊರಗುತ್ತಿಗೆ, ದಿನಗೂಲಿ ಹಾಗೂ ತಾತ್ಕಾಲಿಕ ಕಾರ್ಮಿಕರ ಶೋಷಣೆ ತಡೆಗಟ್ಟಿ, ಅವರಿಗೆ ಉದ್ಯೋಗ ಭದ್ರತೆ ಮತ್ತು ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ...

ಯುಜಿಸಿ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ ಸರ್ಕಾರ

ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟುವ ಕುರಿತಾದ 2026 ರ ವಿಶ್ವವಿದ್ಯಾಲಯ ಅನುದಾನ ಆಯೋಗದ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಜನವರಿ 29 ರಂದು, ಸುಪ್ರೀಂ...

ಅಲ್ಪಸಂಖ್ಯಾತರ ಮೇಲಿನ ದಾಳಿ ಹಿನ್ನೆಲೆ: ಭಾಗವತ್ ಭೇಟಿಗೂ ಮುನ್ನ ಆರ್‌ಎಸ್‌ಎಸ್ ನಾಯಕರನ್ನು ದೂರವಿಡುವಂತೆ ವಾಷಿಂಗ್ಟನ್‌ಗೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ ಒತ್ತಾಯ

ವಾಷಿಂಗ್ಟನ್: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಅಮೆರಿಕ ಭೇಟಿಗೆ ಮುನ್ನ, ಅವರೊಂದಿಗೆ ಉನ್ನತ ಮಟ್ಟದ ರಾಜತಾಂತ್ರಿಕ ಮಾತುಕತೆಗಳನ್ನು ತಡೆಹಿಡಿಯಬೇಕು ಮತ್ತು ಸಂಘದ ಪ್ರಮುಖ ನಾಯಕರ ವಿರುದ್ಧ ನಿರ್ಬಂಧಗಳನ್ನು...

ಮೋಹನ್ ಭಾಗವತ್‌ ಅಮೆರಿಕ ಪ್ರವಾಸಕ್ಕೆ ವಿರೋಧ: RSSಗೆ ನಿರ್ಬಂಧದ ಭೀತಿ

ಆರ್‌ಎಸ್‌ಎಸ್ (RSS) ಸಂಘಟನೆಯ ವಿರುದ್ಧ ನಿರ್ಬಂಧಗಳನ್ನು ವಿಧಿಸುವಂತೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಕುರಿತ ಸಲಹಾ ಮಂಡಳಿಯ (USCIRF) ಅಧಿಕಾರಿಗಳು ಅಮೆರಿಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಶೀಘ್ರದಲ್ಲೇ ಅಮೆರಿಕಕ್ಕೆ ಭೇಟಿ ನೀಡಲಿರುವ RSS ಸರಸಂಘಚಾಲಕ ಮೋಹನ್ ಭಾಗವತ್...

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಕೇರಳದ ಟ್ರಾನ್ಸ್ ಜೆಂಡರ್ ಮೇಕಪ್ ಕಲಾವಿದೆ ಜಾನ್ಮೋನಿ ದಾಸ್ ಬಂಧನ

ಕೋಝಿಕ್ಕೋಡ್: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಸಾರ್ವಜನಿಕವಾಗಿ ಅವಮಾನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇರೆಗೆ ಕೇರಳದ ಪ್ರಸಿದ್ಧ ಸೆಲೆಬ್ರಿಟಿ ಮೇಕಪ್ ಆರ್ಟಿಸ್ಟ್ ಹಾಗೂ ಬಿಗ್ ಬಾಸ್ ಮಾಜಿ...

ಎರಡು ಚರಣಗಳ ‘ವಂದೇ ಮಾತರಂ’ ನಿಲುವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್

ವಂದೇ ಮಾತರಂ ವಿವಾದ ತೀವ್ರಗೊಳ್ಳುತ್ತಿರುವಂತೆಯೇ, ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ತೀವ್ರ ಟೀಕೆಗಳ ನಡುವೆಯೂ ಕಾಂಗ್ರೆಸ್ ಪಕ್ಷವು ತನ್ನ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆಯ ಮೊದಲ ಎರಡು ಚರಣಗಳನ್ನು ಹಾಡುವ ತನ್ನ ದೀರ್ಘಕಾಲದ ಪದ್ಧತಿಯನ್ನು...

31ನೇ ದಕ್ಷಿಣ ವಲಯ ಮಂಡಳಿ ಸಭೆ : ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡುವಂತೆ ಸಿಎಂ ಡಿ.ಕೆ ಶಿವಕುಮಾರ್ ಒತ್ತಾಯ

ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ದಕ್ಷಿಣ ಭಾರತ ಬಲಿಷ್ಠವಾದಾಗ, ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ನಾವು ಭಾರತದ ಅಭಿವೃದ್ಧಿಯ ಪಾಲುದಾರರು. ನಮಗೆ ನಮ್ಮ ನಿಧಿಗಳಲ್ಲಿ, ನಮ್ಮ ಧ್ವನಿಯಲ್ಲಿ ನ್ಯಾಯ ಬೇಕು. ನಮಗೆ...

ರಾಯಚೂರು| ಬಾವಿಯಲ್ಲಿ ದಲಿತ ಯುವತಿ ಮೃತದೇಹ ಪತ್ತೆ; ಅತ್ಯಾಚಾರ-ಕೊಲೆ ಶಂಕೆ

ನಿನ್ನೆ ರಾತ್ರಿ ಬಯಲು ಶೌಚಾಲಯಕ್ಕೆಂದು ಮನೆಯಿಂದ ಹೊರಹೋಗಿದ್ದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಇಂದು ಬೆಳಗ್ಗೆ ಜಮೀನಿನಲ್ಲಿದ್ದ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಕ್ರಾಣಿ ಗ್ರಾಮದಲ್ಲಿ ಘಟನೆ ನಡೆಸಿದ್ದು, ಮೃತ...

ನಕಲಿ ಔಷಧ ಜಾಲದ ಸುಳಿವು ನೀಡಿದವರಿಗೆ ₹50,000 ನಗದು ಬಹುಮಾನ: ಆರೋಗ್ಯ ಇಲಾಖೆ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ನಕಲಿ ಔಷಧ ಜಾಲದ ವಿರುದ್ಧ ಆರೋಗ್ಯ ಇಲಾಖೆ ಸಮರ ಸಾರಿದೆ. ರಾಜ್ಯದಲ್ಲಿ ನಕಲಿ ಔಷಧಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಹಾಗೂ ಪೂರೈಕೆ ಕುರಿತು ನಿಖರ ಮಾಹಿತಿ ನೀಡುವ...

ಎಬಿವಿಪಿ ಮತ್ತು ಎಡಪಂಥೀಯ ಗುಂಪುಗಳ ನಡುವೆ ವಾಗ್ವಾದ: ಮಧ್ಯರಾತ್ರಿ ಜಾದವ್‌ಪುರ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಳಿ ನಡೆಸಿದ ಹಿಂದುತ್ವವಾದಿ ಗುಂಪು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಪ್ರತಿಷ್ಠಿತ ಜಾದವ್‌ಪುರ ವಿಶ್ವವಿದ್ಯಾಲಯದ (ಜೆ ಯು) ಕ್ಯಾಂಪಸ್‌ ಮೇಲೆ ತಡರಾತ್ರಿ ಹಿಂದುತ್ವವಾದಿ ಸಂಘಟನೆಗೆ ಸೇರಿದ ಗುಂಪೊಂದು ಭೀಕರ ದಾಳಿ ನಡೆಸಿದ್ದು, ವಿಶ್ವವಿದ್ಯಾಲಯದ ಆಸ್ತಿಪಾಸ್ತಿ ಧ್ವಂಸಗೊಳಿಸಿ ಹಲವು ವಿದ್ಯಾರ್ಥಿಗಳನ್ನು ತೀವ್ರವಾಗಿ...