Homeಕರ್ನಾಟಕಬೆಂಗಳೂರಿನಲ್ಲಿ ಶವ ಸುಡಲೂ ಸೌದೆಯ ಕೊರತೆ: ಬೆಡ್ ಎತ್ತಿಕೊಂಡು ಸಂಸದ ಸೂರ್ಯ ನಾಪತ್ತೆ!

ಬೆಂಗಳೂರಿನಲ್ಲಿ ಶವ ಸುಡಲೂ ಸೌದೆಯ ಕೊರತೆ: ಬೆಡ್ ಎತ್ತಿಕೊಂಡು ಸಂಸದ ಸೂರ್ಯ ನಾಪತ್ತೆ!

ಕೋವಿಡ್ ಸಾವುಗಳ ಸಂಖ್ಯೆ ಹೆಚ್ಚಿದಂತೆ ಬೆಂಗಳೂರಿನ ಸ್ಮಶಾನಗಳಲ್ಲಿ ಪಾಳೆ ಹೆಚ್ಚುತ್ತಿದೆ. ಆದರೆ ಇನ್ನೊಂದು ಕಡೆ ಶವ ಸುಡಲು ಸೌದೆ (ಕಟ್ಟಿಗೆ) ಕೊರತೆ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿದೆ.

- Advertisement -
- Advertisement -

ಬೆಂಗಳೂರಿನ ಜನಪ್ರತಿನಿಧಿಗಳು, ಮುಖ್ಯವಾಗಿ ಆಡಳಿತ ಪಕ್ಷಕ್ಕೆ ಸಂಬಂಧಿಸಿದವರು ಪಲಾಯನ ಮಾಡಿದ್ದಾರೆ. ಬೆಡ್ ಬ್ಲಾಕಿಂಗ್ ಬಗ್ಗೆ ‘ಹವಾ’ ಎಬ್ಬಿಸಿದ ಸಂಸದ ತೇಜಸ್ವಿ ಸೂರ್ಯ ಕೂಡಾ ಈಗ ನಾಪತ್ತೆಯಾಗಿದ್ದಾರೆ. ಅವರೀಗ ಯಾವ ಮಾಧ್ಯಮದ ಫೋನ್ ಕರೆಯನ್ನು ಸ್ವೀಕರಿಸದ ಮಟ್ಟಿಗೆ ಜನದ್ರೋಹಿಯಾಗಿದ್ದಾರೆ.

ಹತ್ತು ದಿನಗಳ ಹಿಂದಷ್ಟೆ, ಆಕ್ಸಿಜನ್ ಮತ್ತು ಬೆಡ್‌ಗಳ ಕೊರತೆಯಿದ್ದಾಗ ಕಂದಾಯ ಸಚಿವ, ಬೆಂಗಳೂರಿನ ಶಾಸಕ ಆರ್. ಅಶೋಕ್ ಹೊಸ ಸ್ಮಶಾನ ನಿರ್ಮಿಸುತ್ತೇವೆ ಎಂದರು. ಅದು ಇನ್ನೂವರೆಗೂ ಆಗಿಲ್ಲ. ರಿಯಲ್ ಎಸ್ಟೇಟ್ ಮಾಡುವ ಜನರಿಗೆ ‘ಅಮೂಲ್ಯ’ ಭೂಮಿಯನ್ನು ಸ್ಮಶಾನಕ್ಕೆ ಪಡೆಯಲು ಮನಸ್ಸು ಒಪ್ಪುತ್ತದೆಯೇ ಎಂಬ ಪ್ರಶ್ನೆ ಬೆಂಗಳೂರಿಗರನ್ನು ಈಗ ಕಾಡುತ್ತಿದೆ.

ಇದನ್ನೂ ಓದಿ: ಕೇಂದ್ರವೇ ಏಕೆ ಎಲ್ಲಾ ಲಸಿಕೆ ಖರೀದಿಸಬಾರದು? ಲಸಿಕೆ ದರದಲ್ಲಿ ತಾರತಮ್ಯವೇಕೆ: ಸುಪ್ರೀಂ ಪ್ರಶ್ನೆ

ಸೂರ್ಯ ಮತ್ತೆ ಪ್ರತ್ಯಕ್ಷರಾಗಿ, ಸೌದೆ ಕದ್ದ ಮುಸ್ಲಿಮರು ಎಂದೂ ಹೇಳುವ ಸಾಧ್ಯತೆಗಳಿವೆ! ಜೀವವಿರೋಧಿ ಸಿದ್ದಾಂತದವರನ್ನು ಮತ್ತು ರಿಯಲ್ ಎಸ್ಟೇಟ್ ದಂಧೆಯವರನ್ನು (ಬಹುಪಾಲು ಅವರೇ ಇದ್ದಾರೆ) ಜನಪ್ರತಿನಿಧಿಗಳನ್ನಾಗಿ ಆರಿಸಿದ ಬೆಂಗಳೂರಿನ ಜನತೆಗೆ ಈಗ ಆಸ್ಪತ್ರೆಯಲ್ಲಿ ಬೆಡ್ ಸಿಗುತ್ತಿಲ್ಲ, ಸಿಕ್ಕರೆ ಆಕ್ಸಿಜನ್, ಚಿಕಿತ್ಸೆ ಸಿಗುತ್ತಿಲ್ಲ. ಆಕಸ್ಮಿಕ ಅಸು ನೀಗಿದರೆ ಸ್ಮಶಾನಗಳಲ್ಲಿ ಕಾಯಬೇಕು. ಅಲ್ಲೂ ಈಗ ಹೊಸ ಸಮಸ್ಯೆ ತಲೆದೋರಿದೆ. ಅಲ್ಲೀಗ ಶವ ಸುಡಲು ಸೌದೆಯ ಅಭಾವ ಉಂಟಾಗಿದೆ.

ಶವಗಾರದಲ್ಲಿ ಶವ ಸುಡಲು ಸೌದೆ ಕೊರತೆ ಈಗ ಎದುರಾಗಿದ್ದು, ಇದು ಬರುವ ದಿನಗಳಲ್ಲಿ ಇನ್ನಷ್ಟು ಸಮಸ್ಯೆ ಉಂಟಾಗಲಿದೆ. ಶವ ಹೂಳುವ ಪದ್ಧತಿ ಅಚರಿಸುವವರೂ ಕೂಡ ಈಗ ಅನಿವಾರ್ಯವಾಗಿ ಸುಡುವ ಪದ್ಧತಿ ಒಪ್ಪಿಕೊಂಡಿದ್ದಾರೆ. ಒಂದು ಕಡೆ ಸ್ಮಶಾನದಲ್ಲಿ ಕ್ಯೂ, ಇನ್ನೊಂದು ಕಡೆ ಸೌದೆ ಕೊರತೆ.

ಇಂತಹ ಹೊತ್ತಿನಲ್ಲೇ ‘ಸ್ಮಶಾನಕ್ಕೆ ಹೋಗುವ ದಾರಿ’ ಎಂಬ ಫ್ಲೆಕ್ಸ್ ಬೋರ್ಡ್ ಹಾಕಿ, ಅಲ್ಲಿ ನೀರು, ಚಹಾ ವಿತರಣೆ ಮಾಡುತ್ತೇವೆ ಎಂದು ಹೆಮ್ಮೆ ಪಡುವ ಬಿಜೆಪಿ ಶಾಸಕರ ಕ್ರೌರ್ಯವೂ ಜನರನ್ನು ಆಕ್ರೋಶಿತರನ್ನಾಗಿ ಮಾಡಿದೆ. ಜನರಿಗೆ ನೆರವು ನೀಡದ ಈ ಜನಪ್ರತಿನಿಧಿಗಳು ಅಕ್ಷರಶಃ ‘ಸ್ಮಶಾನಕ್ಕೆ ತಲುಪುವ ದಾರಿ’ಯನ್ನು ಸೃಷ್ಟಿ ಮಾಡಿದ್ದಾರೆ.
ಪ್ರತಿ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಸುಮಾರು 1,500 ಕೆ.ಜಿ ಕಟ್ಟಿಗೆ ಬೇಕು ಎನ್ನಲಾಗಿದೆ. ನಿತ್ಯ ಸೌದೆ ಸಂಗ್ರಹ ಬಿಬಿಎಂಪಿಗೆ ಭಾರಿ ತಲೆನೋವು ಉಂಟು ಮಾಡಿದೆ. ಶವ ಸುಡಲು ಸೌದೆಗೂ ಶುರುವಾಗುತ್ತಾ ಹಾಹಾಕಾರ ಎಂಬ ಪ್ರಶ್ನೆ ಎದ್ದಿದೆ. ಪ್ರತಿ ಸ್ಮಶಾನದಲ್ಲಿ ನಿತ್ಯ 40 ಕ್ಕಿಂತ ಹೆಚ್ಚು ಶವ ಸುಡಲಾಗುತ್ತಿದೆ.

ಇದನ್ನೂ ಓದಿ: Explainer: ಸದ್ಯಕ್ಕೆ ಲಭ್ಯವಿರುವ ಲಸಿಕೆಗಳೆಷ್ಟು? ತಡವಾಗಲು ಕಾರಣವೇನು?

ಪರಿಸ್ಥಿತಿ ನಿಭಾಯಿಸಲು ಹೆಚ್ಚು ಮರಗಳನ್ನು ಕಡಿಯುವತ್ತ ಪಾಲಿಕೆಯ ಅರಣ್ಯ ವಿಭಾಗ ಮುಂದಾಗಬಹುದು ಎನ್ನಲಾಗಿದೆ.

ಬಿಬಿಎಂಪಿಯ 198 ವಾರ್ಡ್‌ಗಳಲ್ಲಿ ತಲಾ ಒಂದು ಅಥವಾ ಎರಡು ಸ್ಮಶಾನಗಳಿದ್ದು, ಅವು ಈಗ ಕೋವಿಡ್ ಶವಗಳ ದಟ್ಟಣೆಗೆ ತತ್ತರಿಸಿವೆ. ಈಗ ಸೌದೆಯ ಕೊರತೆಯೂ ಸೇರಿಕೊಂಡು ಅಂತ್ಯಸಂಸ್ಕಾರವೇ ಒಂದು ದೊಡ್ಡ ಸಮಸ್ಯೆಯಾಗಿದೆ. ಸುಡುವ ಈ ಹೊತ್ತಿನಲ್ಲಿ ಬೆಡ್ ವಿಚಾರದಲ್ಲಿ ಕೋಮುವಾದೀಕರಣ ಮಾಡಿ ಪರಾರಿಯಾದ ಸಂಸದರು ಯಾರ ಫೋನಿಗೂ ಸಿಗುತ್ತಿಲ್ಲ. ಕೊಲ್ಲುವ ಸಿದ್ದಾಂತದ ಜನರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?

ದೊಡ್ಡ ನಗರಗಳ ಸಮಸ್ಯೆ!

ಕಳೆದ ತಿಂಗಳಿನಿಂದ ಭಾರತವು ಇತರ ದೇಶಗಳಿಗಿಂತ ಹೆಚ್ಚು ಕೋವಿಡ್ ಪ್ರಕರಣಗಳನ್ನು ಕಂಡಿದೆ.
ಜನರು ಹಾಸಿಗೆಗಳಿಗಾಗಿ ಕಾಯುತ್ತ ಸಾವನ್ನಪ್ಪಿದ್ದಾರೆ, ಇನ್ನೊಂದು ಕಡೆ, ಆಮ್ಲಜನಕದ ಸರಬರಾಜು ಕಡಿಮೆಯಾಗಿ ಸಾವುಗಳು ಸಂಭವಿಸುತ್ತಿವೆ.

ಈಗ ಸ್ಮಶಾನಗಳಲ್ಲಿ ಸಹ ಸ್ಥಳಾವಕಾಶವಿಲ್ಲ, ಸ್ಮಶಾನದ ಕಾರ್ಮಿಕರು ಶವಗಳನ್ನು ಸುಡುತ್ತಲೇ ಬೆಂದು ಹೋಗಿದ್ದಾರೆ.

ಇದನ್ನೂ ಓದಿ: ಬೆಂಬಲಿಗರನ್ನು ಸೆಳೆಯಲು ‘ಪಾಕಿಸ್ತಾನಿ’ ಯುವತಿಯ ಫೋಟೊ ಬಳಸುತ್ತಿರುವ BJP ಐಟಿ ಸೆಲ್!

ಹಿಂದೂ ಧರ್ಮದಲ್ಲಿ, ಶವಸಂಸ್ಕಾರವು ಸಾಂಪ್ರದಾಯಿಕವಾಗಿ ಅಂತ್ಯಕ್ರಿಯೆಯ ವಿಧಿಗಳಲ್ಲಿ ಪ್ರಮುಖ ಭಾಗವಾಗಿದೆ. ಏಕೆಂದರೆ ಆತ್ಮವನ್ನು ಅದರಿಂದ ಬೇರ್ಪಡಿಸುವಂತೆ ಒತ್ತಾಯಿಸಲು ದೇಹವನ್ನು ನಾಶಪಡಿಸಬೇಕು ಎಂದು ಹಿಂದೂಗಳು ನಂಬುತ್ತಾರೆ.

ಭಾರತದ ರಾಜಧಾನಿ ದೆಹಲಿಯಲ್ಲಿ, ತಾತ್ಕಾಲಿಕ ಅಂತ್ಯಕ್ರಿಯೆಯ ನೆರವೇರಿಸಲು ಸೌದೆ ಬಳಸಿ ಸುಡುವಂತೆ ಸ್ಮಶಾನ ಕಾರ್ಮಿಕರು ಮತ್ತು ಪೌರ ಕಾರ್ಮಿಕರನ್ನು ಒತ್ತಾಯಿಸಲಾಗಿದೆ, ಉದ್ಯಾನವನಗಳು ಮತ್ತು ಇತರ ಖಾಲಿ ಸ್ಥಳಗಳನ್ನು ಶವಸಂಸ್ಕಾರಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ.

ಉರುವಲುಗಳಾಗಿ ಬಳಸಲು ಅಧಿಕಾರಿಗಳು ದೆಹಲಿ ನಗರದ ಉದ್ಯಾನವನಗಳಲ್ಲಿನ ಮರಗಳನ್ನು ಕಡಿದಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ. ಈಗ ಬೆಂಗಳೂರಿನ ಉದ್ಯಾನವನಗಳ ಮರಗಳನ್ನು ಕತ್ತರಿಸದೇ ಅನ್ಯಮಾರ್ಗವಿಲ್ಲೆವೇನೋ?

ಇದನ್ನೂ ಓದಿ: ‘ಬೆನ್ನೆಲುಬಿಲ್ಲದ ಮೋದಿ’ ‘ಡೈಪರ್‌ ಸೂರ್ಯ ಎಕ್ಸ್‌ಪೋಸ್ಡ್’- ಟ್ವಿಟರ್‌ನಲ್ಲಿ BJP ವಿರೋಧಿ ಹವಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...