Homeಕರ್ನಾಟಕಬೆಂಗಳೂರಿನಲ್ಲಿ ಶವ ಸುಡಲೂ ಸೌದೆಯ ಕೊರತೆ: ಬೆಡ್ ಎತ್ತಿಕೊಂಡು ಸಂಸದ ಸೂರ್ಯ ನಾಪತ್ತೆ!

ಬೆಂಗಳೂರಿನಲ್ಲಿ ಶವ ಸುಡಲೂ ಸೌದೆಯ ಕೊರತೆ: ಬೆಡ್ ಎತ್ತಿಕೊಂಡು ಸಂಸದ ಸೂರ್ಯ ನಾಪತ್ತೆ!

ಕೋವಿಡ್ ಸಾವುಗಳ ಸಂಖ್ಯೆ ಹೆಚ್ಚಿದಂತೆ ಬೆಂಗಳೂರಿನ ಸ್ಮಶಾನಗಳಲ್ಲಿ ಪಾಳೆ ಹೆಚ್ಚುತ್ತಿದೆ. ಆದರೆ ಇನ್ನೊಂದು ಕಡೆ ಶವ ಸುಡಲು ಸೌದೆ (ಕಟ್ಟಿಗೆ) ಕೊರತೆ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿದೆ.

- Advertisement -
- Advertisement -

ಬೆಂಗಳೂರಿನ ಜನಪ್ರತಿನಿಧಿಗಳು, ಮುಖ್ಯವಾಗಿ ಆಡಳಿತ ಪಕ್ಷಕ್ಕೆ ಸಂಬಂಧಿಸಿದವರು ಪಲಾಯನ ಮಾಡಿದ್ದಾರೆ. ಬೆಡ್ ಬ್ಲಾಕಿಂಗ್ ಬಗ್ಗೆ ‘ಹವಾ’ ಎಬ್ಬಿಸಿದ ಸಂಸದ ತೇಜಸ್ವಿ ಸೂರ್ಯ ಕೂಡಾ ಈಗ ನಾಪತ್ತೆಯಾಗಿದ್ದಾರೆ. ಅವರೀಗ ಯಾವ ಮಾಧ್ಯಮದ ಫೋನ್ ಕರೆಯನ್ನು ಸ್ವೀಕರಿಸದ ಮಟ್ಟಿಗೆ ಜನದ್ರೋಹಿಯಾಗಿದ್ದಾರೆ.

ಹತ್ತು ದಿನಗಳ ಹಿಂದಷ್ಟೆ, ಆಕ್ಸಿಜನ್ ಮತ್ತು ಬೆಡ್‌ಗಳ ಕೊರತೆಯಿದ್ದಾಗ ಕಂದಾಯ ಸಚಿವ, ಬೆಂಗಳೂರಿನ ಶಾಸಕ ಆರ್. ಅಶೋಕ್ ಹೊಸ ಸ್ಮಶಾನ ನಿರ್ಮಿಸುತ್ತೇವೆ ಎಂದರು. ಅದು ಇನ್ನೂವರೆಗೂ ಆಗಿಲ್ಲ. ರಿಯಲ್ ಎಸ್ಟೇಟ್ ಮಾಡುವ ಜನರಿಗೆ ‘ಅಮೂಲ್ಯ’ ಭೂಮಿಯನ್ನು ಸ್ಮಶಾನಕ್ಕೆ ಪಡೆಯಲು ಮನಸ್ಸು ಒಪ್ಪುತ್ತದೆಯೇ ಎಂಬ ಪ್ರಶ್ನೆ ಬೆಂಗಳೂರಿಗರನ್ನು ಈಗ ಕಾಡುತ್ತಿದೆ.

ಇದನ್ನೂ ಓದಿ: ಕೇಂದ್ರವೇ ಏಕೆ ಎಲ್ಲಾ ಲಸಿಕೆ ಖರೀದಿಸಬಾರದು? ಲಸಿಕೆ ದರದಲ್ಲಿ ತಾರತಮ್ಯವೇಕೆ: ಸುಪ್ರೀಂ ಪ್ರಶ್ನೆ

ಸೂರ್ಯ ಮತ್ತೆ ಪ್ರತ್ಯಕ್ಷರಾಗಿ, ಸೌದೆ ಕದ್ದ ಮುಸ್ಲಿಮರು ಎಂದೂ ಹೇಳುವ ಸಾಧ್ಯತೆಗಳಿವೆ! ಜೀವವಿರೋಧಿ ಸಿದ್ದಾಂತದವರನ್ನು ಮತ್ತು ರಿಯಲ್ ಎಸ್ಟೇಟ್ ದಂಧೆಯವರನ್ನು (ಬಹುಪಾಲು ಅವರೇ ಇದ್ದಾರೆ) ಜನಪ್ರತಿನಿಧಿಗಳನ್ನಾಗಿ ಆರಿಸಿದ ಬೆಂಗಳೂರಿನ ಜನತೆಗೆ ಈಗ ಆಸ್ಪತ್ರೆಯಲ್ಲಿ ಬೆಡ್ ಸಿಗುತ್ತಿಲ್ಲ, ಸಿಕ್ಕರೆ ಆಕ್ಸಿಜನ್, ಚಿಕಿತ್ಸೆ ಸಿಗುತ್ತಿಲ್ಲ. ಆಕಸ್ಮಿಕ ಅಸು ನೀಗಿದರೆ ಸ್ಮಶಾನಗಳಲ್ಲಿ ಕಾಯಬೇಕು. ಅಲ್ಲೂ ಈಗ ಹೊಸ ಸಮಸ್ಯೆ ತಲೆದೋರಿದೆ. ಅಲ್ಲೀಗ ಶವ ಸುಡಲು ಸೌದೆಯ ಅಭಾವ ಉಂಟಾಗಿದೆ.

ಶವಗಾರದಲ್ಲಿ ಶವ ಸುಡಲು ಸೌದೆ ಕೊರತೆ ಈಗ ಎದುರಾಗಿದ್ದು, ಇದು ಬರುವ ದಿನಗಳಲ್ಲಿ ಇನ್ನಷ್ಟು ಸಮಸ್ಯೆ ಉಂಟಾಗಲಿದೆ. ಶವ ಹೂಳುವ ಪದ್ಧತಿ ಅಚರಿಸುವವರೂ ಕೂಡ ಈಗ ಅನಿವಾರ್ಯವಾಗಿ ಸುಡುವ ಪದ್ಧತಿ ಒಪ್ಪಿಕೊಂಡಿದ್ದಾರೆ. ಒಂದು ಕಡೆ ಸ್ಮಶಾನದಲ್ಲಿ ಕ್ಯೂ, ಇನ್ನೊಂದು ಕಡೆ ಸೌದೆ ಕೊರತೆ.

ಇಂತಹ ಹೊತ್ತಿನಲ್ಲೇ ‘ಸ್ಮಶಾನಕ್ಕೆ ಹೋಗುವ ದಾರಿ’ ಎಂಬ ಫ್ಲೆಕ್ಸ್ ಬೋರ್ಡ್ ಹಾಕಿ, ಅಲ್ಲಿ ನೀರು, ಚಹಾ ವಿತರಣೆ ಮಾಡುತ್ತೇವೆ ಎಂದು ಹೆಮ್ಮೆ ಪಡುವ ಬಿಜೆಪಿ ಶಾಸಕರ ಕ್ರೌರ್ಯವೂ ಜನರನ್ನು ಆಕ್ರೋಶಿತರನ್ನಾಗಿ ಮಾಡಿದೆ. ಜನರಿಗೆ ನೆರವು ನೀಡದ ಈ ಜನಪ್ರತಿನಿಧಿಗಳು ಅಕ್ಷರಶಃ ‘ಸ್ಮಶಾನಕ್ಕೆ ತಲುಪುವ ದಾರಿ’ಯನ್ನು ಸೃಷ್ಟಿ ಮಾಡಿದ್ದಾರೆ.
ಪ್ರತಿ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಸುಮಾರು 1,500 ಕೆ.ಜಿ ಕಟ್ಟಿಗೆ ಬೇಕು ಎನ್ನಲಾಗಿದೆ. ನಿತ್ಯ ಸೌದೆ ಸಂಗ್ರಹ ಬಿಬಿಎಂಪಿಗೆ ಭಾರಿ ತಲೆನೋವು ಉಂಟು ಮಾಡಿದೆ. ಶವ ಸುಡಲು ಸೌದೆಗೂ ಶುರುವಾಗುತ್ತಾ ಹಾಹಾಕಾರ ಎಂಬ ಪ್ರಶ್ನೆ ಎದ್ದಿದೆ. ಪ್ರತಿ ಸ್ಮಶಾನದಲ್ಲಿ ನಿತ್ಯ 40 ಕ್ಕಿಂತ ಹೆಚ್ಚು ಶವ ಸುಡಲಾಗುತ್ತಿದೆ.

ಇದನ್ನೂ ಓದಿ: Explainer: ಸದ್ಯಕ್ಕೆ ಲಭ್ಯವಿರುವ ಲಸಿಕೆಗಳೆಷ್ಟು? ತಡವಾಗಲು ಕಾರಣವೇನು?

ಪರಿಸ್ಥಿತಿ ನಿಭಾಯಿಸಲು ಹೆಚ್ಚು ಮರಗಳನ್ನು ಕಡಿಯುವತ್ತ ಪಾಲಿಕೆಯ ಅರಣ್ಯ ವಿಭಾಗ ಮುಂದಾಗಬಹುದು ಎನ್ನಲಾಗಿದೆ.

ಬಿಬಿಎಂಪಿಯ 198 ವಾರ್ಡ್‌ಗಳಲ್ಲಿ ತಲಾ ಒಂದು ಅಥವಾ ಎರಡು ಸ್ಮಶಾನಗಳಿದ್ದು, ಅವು ಈಗ ಕೋವಿಡ್ ಶವಗಳ ದಟ್ಟಣೆಗೆ ತತ್ತರಿಸಿವೆ. ಈಗ ಸೌದೆಯ ಕೊರತೆಯೂ ಸೇರಿಕೊಂಡು ಅಂತ್ಯಸಂಸ್ಕಾರವೇ ಒಂದು ದೊಡ್ಡ ಸಮಸ್ಯೆಯಾಗಿದೆ. ಸುಡುವ ಈ ಹೊತ್ತಿನಲ್ಲಿ ಬೆಡ್ ವಿಚಾರದಲ್ಲಿ ಕೋಮುವಾದೀಕರಣ ಮಾಡಿ ಪರಾರಿಯಾದ ಸಂಸದರು ಯಾರ ಫೋನಿಗೂ ಸಿಗುತ್ತಿಲ್ಲ. ಕೊಲ್ಲುವ ಸಿದ್ದಾಂತದ ಜನರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?

ದೊಡ್ಡ ನಗರಗಳ ಸಮಸ್ಯೆ!

ಕಳೆದ ತಿಂಗಳಿನಿಂದ ಭಾರತವು ಇತರ ದೇಶಗಳಿಗಿಂತ ಹೆಚ್ಚು ಕೋವಿಡ್ ಪ್ರಕರಣಗಳನ್ನು ಕಂಡಿದೆ.
ಜನರು ಹಾಸಿಗೆಗಳಿಗಾಗಿ ಕಾಯುತ್ತ ಸಾವನ್ನಪ್ಪಿದ್ದಾರೆ, ಇನ್ನೊಂದು ಕಡೆ, ಆಮ್ಲಜನಕದ ಸರಬರಾಜು ಕಡಿಮೆಯಾಗಿ ಸಾವುಗಳು ಸಂಭವಿಸುತ್ತಿವೆ.

ಈಗ ಸ್ಮಶಾನಗಳಲ್ಲಿ ಸಹ ಸ್ಥಳಾವಕಾಶವಿಲ್ಲ, ಸ್ಮಶಾನದ ಕಾರ್ಮಿಕರು ಶವಗಳನ್ನು ಸುಡುತ್ತಲೇ ಬೆಂದು ಹೋಗಿದ್ದಾರೆ.

ಇದನ್ನೂ ಓದಿ: ಬೆಂಬಲಿಗರನ್ನು ಸೆಳೆಯಲು ‘ಪಾಕಿಸ್ತಾನಿ’ ಯುವತಿಯ ಫೋಟೊ ಬಳಸುತ್ತಿರುವ BJP ಐಟಿ ಸೆಲ್!

ಹಿಂದೂ ಧರ್ಮದಲ್ಲಿ, ಶವಸಂಸ್ಕಾರವು ಸಾಂಪ್ರದಾಯಿಕವಾಗಿ ಅಂತ್ಯಕ್ರಿಯೆಯ ವಿಧಿಗಳಲ್ಲಿ ಪ್ರಮುಖ ಭಾಗವಾಗಿದೆ. ಏಕೆಂದರೆ ಆತ್ಮವನ್ನು ಅದರಿಂದ ಬೇರ್ಪಡಿಸುವಂತೆ ಒತ್ತಾಯಿಸಲು ದೇಹವನ್ನು ನಾಶಪಡಿಸಬೇಕು ಎಂದು ಹಿಂದೂಗಳು ನಂಬುತ್ತಾರೆ.

ಭಾರತದ ರಾಜಧಾನಿ ದೆಹಲಿಯಲ್ಲಿ, ತಾತ್ಕಾಲಿಕ ಅಂತ್ಯಕ್ರಿಯೆಯ ನೆರವೇರಿಸಲು ಸೌದೆ ಬಳಸಿ ಸುಡುವಂತೆ ಸ್ಮಶಾನ ಕಾರ್ಮಿಕರು ಮತ್ತು ಪೌರ ಕಾರ್ಮಿಕರನ್ನು ಒತ್ತಾಯಿಸಲಾಗಿದೆ, ಉದ್ಯಾನವನಗಳು ಮತ್ತು ಇತರ ಖಾಲಿ ಸ್ಥಳಗಳನ್ನು ಶವಸಂಸ್ಕಾರಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ.

ಉರುವಲುಗಳಾಗಿ ಬಳಸಲು ಅಧಿಕಾರಿಗಳು ದೆಹಲಿ ನಗರದ ಉದ್ಯಾನವನಗಳಲ್ಲಿನ ಮರಗಳನ್ನು ಕಡಿದಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ. ಈಗ ಬೆಂಗಳೂರಿನ ಉದ್ಯಾನವನಗಳ ಮರಗಳನ್ನು ಕತ್ತರಿಸದೇ ಅನ್ಯಮಾರ್ಗವಿಲ್ಲೆವೇನೋ?

ಇದನ್ನೂ ಓದಿ: ‘ಬೆನ್ನೆಲುಬಿಲ್ಲದ ಮೋದಿ’ ‘ಡೈಪರ್‌ ಸೂರ್ಯ ಎಕ್ಸ್‌ಪೋಸ್ಡ್’- ಟ್ವಿಟರ್‌ನಲ್ಲಿ BJP ವಿರೋಧಿ ಹವಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪ್ರಾಪ್ತ ಮಗುವಿನ ವಿಡಿಯೋಗೆ ವಿಕೃತವಾಗಿ ಕಮೆಂಟಿಸಿದ ನಟಿ ರೂಪಾಲಿ ಗಂಗೂಲಿ: ‘ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು’ ಎಂದ ನಟಿ ವಿರುದ್ಧ ಜನಾಕ್ರೋಶ

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಹಾಗೂ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸದಸ್ಯೆ ರೂಪಾಲಿ ಗಂಗೂಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ...

‘ಅಂಬೇಡ್ಕರ್ ಅವರನ್ನು ಆಚರಿಸುವ ಬಿಜೆಪಿ, ‘ಹಿಂದೂ ರಾಷ್ಟ್ರ’ದ ಕುರಿತ ಅವರ ಎಚ್ಚರಿಕೆಯನ್ನೂ ಓದಲಿ’: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ದೇಶದಲ್ಲಿ ‘ಹಿಂದೂ ರಾಷ್ಟ್ರ’ ನಿರ್ಮಾಣದ ಬೇಡಿಕೆಯನ್ನು ತೀವ್ರವಾಗಿ ಟೀಕಿಸಿರುವ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ನಾಯಕರು ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ್ದ ಎಚ್ಚರಿಕೆಗಳನ್ನು ಓದಬೇಕೆಂದು ಒತ್ತಾಯಿಸಿದ್ದಾರೆ. ಬಿಜೆಪಿ ನಾಯಕರು ಭಾರತ...

‘ಪರಿಶೀಲನೆ ಮಾನವ ಘನತೆಯನ್ನು ಬಲಿಪಡೆಯಬಾರದು’: ನಾಗಪುರ ಜೈಲಿನ ಅಮಾನವೀಯ ವಿವಸ್ತ್ರ ಪರಿಶೀಲನೆ ವಿರುದ್ಧ ಜೈಲಿನಲ್ಲಿರುವ ಕೇರಳ ಕಾರ್ಯಕರ್ತ ಆರೋಪ

ಬಂಧನದಲ್ಲಿರುವ ವ್ಯಕ್ತಿಗಳು ಅಥವಾ ಕೈದಿಗಳು ಜೈಲಿನ ಬಾಗಿಲು ಪ್ರವೇಶಿಸಿದ ತಕ್ಷಣ ತಮ್ಮ ಸಾಂವಿಧಾನಿಕ ಹಕ್ಕುಗಳನ್ನು ಹಾಗೂ ಮಾನವ ಘನತೆಯನ್ನು ಕಳೆದುಕೊಳ್ಳುವುದಿಲ್ಲ. ಆದರೆ, ಮಹಾರಾಷ್ಟ್ರದ ನಾಗಪುರ ಕೇಂದ್ರ ಕಾರಾಗೃಹದ 'ಅಂಡಾ ಸೆಲ್'ನಲ್ಲಿ ಕಾನೂನುಬಾಹಿರ ಚಟುವಟಿಕೆಗಳ...

‘ಅದು ಪೊಲೀಸರೇ ನಡೆಸಿದ ಪೂರ್ವ ಯೋಜಿತ ಕೃತ್ಯ’: ಸಂಭಾಲ್ ಹಿಂಸಾಚಾರ ನ್ಯಾಯಾಂಗ ಆಯೋಗದ ವರದಿ ತಿರಸ್ಕರಿಸಿದ ಸಂಸದ ಜಿಯಾ-ಉರ್-ರೆಹಮಾನ್

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ 2024ರ ನವೆಂಬರ್‌ನಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದ ನ್ಯಾಯಾಂಗ ಆಯೋಗದ ವರದಿಯನ್ನು ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸದ ಜಿಯಾ-ಉರ್-ರೆಹಮಾನ್ ಬಾರ್ಕ್ ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಘಟನೆಯಲ್ಲಿ ನಾಲ್ವರು...

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...