Homeಕರ್ನಾಟಕಬಡ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವಾದ 'ಕಾಂಗ್ರೆಸ್‌' ಸರಕಾರದ 'ಗ್ಯಾರಂಟಿ ಯೋಜನೆ' ಬಗ್ಗೆ ತೇಜಸ್ವಿ ಸೂರ್ಯ...

ಬಡ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವಾದ ‘ಕಾಂಗ್ರೆಸ್‌’ ಸರಕಾರದ ‘ಗ್ಯಾರಂಟಿ ಯೋಜನೆ’ ಬಗ್ಗೆ ತೇಜಸ್ವಿ ಸೂರ್ಯ ತುಚ್ಛ ಮಾತು!

- Advertisement -
- Advertisement -

ಕರ್ನಾಟಕದ ಕಾಂಗ್ರೆಸ್‌ ಸರಕಾರ ಜಾರಿಗೆ ತಂದಿದ್ದ ಪಂಚ ಗ್ಯಾರಂಟಿಗಳ ಬಗ್ಗೆ ತುಚ್ಛವಾಗಿ ಮಾತನಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ರಾಜ್ಯದ ಕೋಟ್ಯಾಂತರ ಜನರಿಗೆ ಆಶ್ರಯವಾದ ಗ್ಯಾರಂಟಿ ಯೋಜನೆಗಳನ್ನು ‘ಮತಿ ಹೀನ ಉಚಿತ ಕೊಡುಗೆ’ ಎಂದು ಹೇಳಿಕೊಂಡು ಜನಸಾಮಾನ್ಯರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಎಎನ್ಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ್ದ ಸಂಸದ ತೇಜಸ್ವಿ ಸೂರ್ಯ, ಕರ್ನಾಟಕ ಸರಕಾರ ಅಭಿವೃದ್ಧಿ ಹಾಗೂ ಮೂಲಭೂತ ಯೋಜನೆಗಳ ಹಣವನ್ನು ಮತಿ ಹೀನ ಉಚಿತ ಕೊಡುಗೆಗೆ ಬಳಸುತ್ತಿದೆ, ಗ್ಯಾರಂಟಿ ಯೋಜನೆಗಳಿಂದ ರಾಜ್ಯವು ದಿವಾಳಿಯಾಗುತ್ತಿದೆ ಎಂದು ಹೇಳಿದ್ದಾರೆ.

ಕಳೆದ ವಿಧಾನ ಸಭಾ ಚುನಾವಣೆಯ ಅವಧಿಯಲ್ಲಿ ನೀಡಿದ್ದ ಭರವಸೆಯಂತೆ ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದಾಗ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ  ತರಲಾಗಿತ್ತು. ಇದರಂತೆ ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ಮನೆಯೊಡತಿಗೆ ತಿಂಗಳಿಗೆ 2000ರೂ. ಮತ್ತು ಗೃಹಜ್ಯೋತಿ ಯೋಜನೆಯಡಿ 200 ಯುನಿಟ್‌ ಉಚಿತ ವಿದ್ಯುತ್‌, ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ಪ್ರತಿ ತಿಂಗಳು 10ಕೆಜಿ ಅಕ್ಕಿ, ಯುವನಿಧಿ ಯೋಜನೆಯಡಿ ನಿರುದ್ಯೋಗಿ ಯುವಕರಿಗೆ ಧನಸಹಾಯ ಮತ್ತು ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ವ್ಯವಸ್ಥೆಯನ್ನು ಕಲ್ಪಿಸಿತ್ತು. ಗ್ಯಾರಂಟಿ ಯೋಜನೆಗಳಿಗೆ ರಾಜ್ಯದಲ್ಲಿ ಉತ್ತಮವಾದ ಸ್ಪಂದನೆ ವ್ಯಕ್ತವಾಗಿತ್ತು. ಬಡ ಜನರಿಗೆ ಗೃಹಲಕ್ಷ್ಮಿ ಯೋಜನೆಯಿಂದ ಸಿಕ್ಕಿದ ಹಣದಿಂದ ಆಹಾರ ಸಾಮಾಗ್ರಿಗಳ ಖರೀದಿ, ಔಷಧಿಗಳಿಗೆ, ಮಕ್ಕಳ ವಿಧ್ಯಾಭ್ಯಾಸಕ್ಕೆ ಸಹಕಾರಿ ಯಾಗಿತ್ತು. ಎಲ್ಲೆಡೆ ಪ್ರಯಾಣಕ್ಕೆ ಪುರುಷರನ್ನೇ ಆಶ್ರಯಿಸಬೇಕಿದ್ದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ವ್ಯವಸ್ಥೆಯಿಂದ ಆಶಾಭಾವನೆ ಮೂಡಿತ್ತು. ಗೃಹಜ್ಯೋತಿ ಯೋಜನೆಯಿಂದ ಬಡ ಜನರಿಗೆ ವಿದ್ಯುತ್‌ ಬಿಲ್‌ ಕಟ್ಟುವುದರಿಂದ ವಿನಾಯಿತಿ ನೀಡಿತ್ತು, ಯುವನಿಧಿ ಯೋಜನೆಯು ನಿರುದ್ಯೋಗಿ ಯುವಕರಿಗೆ ಆಶ್ರಯವನ್ನು ನೀಡಿತ್ತು.

ಗ್ಯಾರಂಟಿ ಯೋಜನೆಗಳು ರಾಜ್ಯದ ಜನರಿಗೆ ಹೆಚ್ಚು ಫಲಪ್ರದವಾಗಿದೆ ಎಂಬುವುದು ಇತ್ತೀಚೆಗೆ ರಾಜ್ಯದಾದ್ಯಂತ ನಡೆದ ಗ್ಯಾರಂಟಿ ಫಲಾನುಭವಿಗಳ ಸಮಾವೇಶಗಳು ಬಹಿರಂಗಪಡಿಸಿದ್ದವು, ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ಸಮಾವೇಶಗಳಲ್ಲಿ ಭಾಗವಹಿಸಿದ್ದ ಮಹಿಳೆಯರು ತಮಗೆ ಗ್ಯಾರಂಟಿ ಯೋಜನೆ ಹೇಗೆ ಸಹಕಾರಿಯಾಯಿತು ಎಂಬುವುದನ್ನು ಬಿಚ್ಟಿಟ್ಟಿದ್ದರು.

ಫಾತಿಮಾ ರೋಡ್ರಿಗ್ರಸ್ ಎಂಬವರು ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡುತ್ತಾ, ನಾನು ಗೃಹಲಕ್ಷ್ಮೀ ಯೋಜನೆಯಿಂದ ಲಾಭ ಪಡೆದಿದ್ದೇನೆ. ಸಿಂಗಲ್ ಪೇರೆಂಟ್ ಆಗಿದ್ದು, ನನಗೆ ಲಂಗ್ಸ್ ಪ್ರಾಬ್ಲಮ್ ಇರುವುದರಿಂದ ಸರಿಯಾಗಿ ಕೆಲಸ ಮಾಡಲು ಸಹ ಸಾಧ್ಯವಾಗುತ್ತಿರಲಿಲ್ಲ. ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಬಂದ ಮೇಲೆ ನನ್ನ ಮಗನ ಶಾಲಾ ಶುಲ್ಕ ಕಟ್ಟಿದ್ದೇನೆ, ನನ್ನ ಮೆಡಿಸನ್​ಗೆ ಅವಶ್ಯಕವಾದ ಹಣವನ್ನು ಪಡೆದಿದ್ದೇನೆ. ನನ್ನ ಕಷ್ಟವನ್ನು ನೋಡಿ ಅಂಗನವಾಡಿ ಕಾರ್ಯಕರ್ತರು ನನಗೆ ಗೃಹಲಕ್ಷ್ಮೀ ಹಣ ಸಿಗುವ ಹಾಗೆ ಮಾಡಿದ್ದಾರೆ. ಸರ್ಕಾರ ಮಾಡಿದ ಈ ಯೋಜನೆ ನನಗೆ ಸಾಕಷ್ಟು ಉಪಯೋಗ ಮಾಡಿಕೊಟ್ಟಿದೆ ಎಂದಿದ್ದಾರೆ.

ಭದ್ರಾವತಿ ಶಾಲಿನಿಯವರು ಮಾತನಾಡ್ತಾ , ನಾನು ಭದ್ರಾವತಿಗೆ ಶಿವಮೊಗ್ಗಕ್ಕೆ ಹೌಸ್ ಕೀಪಿಂಗ್ ಕೆಲಸಕ್ಕೆ ಬರುತ್ತಿದ್ದೆ. ಪ್ರತಿ ತಿಂಗಳು ಒಂದುವರೆ ಸಾವಿರ ಖರ್ಚಾಗುತ್ತಿತ್ತು. ಇದೀಗ ಶಕ್ತಿ ಯೋಜನೆ ಬಂದಿದ್ದರಿಂದ ನನಗೆ ಈ ಹಣವನ್ನು ಮನೆಯ ಖರ್ಚಿಗೆ ಉಪಯೋಗಿಸಲು ಸಾಧ್ಯವಾಗಿದೆ ಎಂದಿದ್ದಾರೆ.

ಗ್ಯಾರಂಟಿ ಯೋಜನೆಯ ಬಗ್ಗೆ ಮಾತನಾಡಿದ ಪುತ್ತೂರಿನ ಅಸ್ಮಾ, ನನ್ನ ಪತಿ ನನ್ನನ್ನು ಬಿಟ್ಟು ಮೂರು ವರ್ಷಗಳು ಕಳೆದಿದೆ, ನನಗೆ ಇಬ್ಬರು ಸಣ್ಣ ಮಕ್ಕಳಿದ್ದಾರೆ, ಅವರನ್ನು ಸಾಕುವುದು ನನಗೆ ದೊಡ್ಡ ಸವಾಲಾಗಿತ್ತು, ಇದೀಗ ಸಿದ್ದರಾಮಯ್ಯ ಅವರ ಗ್ಯಾರಂಟಿ ಯೋಜನೆ ಬಂದ ಬಳಿಕ ನನಗೆ ಮಕ್ಕಳಿಗೆ ಅನ್ನ ಹಾಕಲು ಸಹಕಾರಿಯಾಗಿದೆ ಎಂದು ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮರಕುಂಬಿ ಗ್ರಾಮದ ವೃದ್ಧೆಯ ಮಗ ಅನಾರೋಗ್ಯದಿಂದ ನಿಧನರಾಗಿದ್ದರು. ಮಗನ ಮೃತದೇಹದ ಮುಂದೆ ಕಣ್ಣೀರು ಹಾಕಿದ ವೃದ್ಧೆ, “ಯವ್ವಾ, ನೀ ಬದುಕಾಕ ಗೃಹಲಕ್ಷ್ಮೀ ಯೋಜನೆಯ 2 ಸಾವಿರ ರೂಪಾಯಿ ಬರ್ತಾವ ಬಿಡು” ಎಂದು ಮಗ  ಸಾಯುವ ಮೊದಲು ಹೇಳಿದ್ದ ಎನ್ನುವ ವಿಚಾರವನ್ನು ಆ ತಾಯಿ ತನ್ನ ಪುತ್ರನ ಸಾವಿನ ನೋವಿನ ನಡುವೆ ನೆನಪು ಮಾಡಿಕೊಂಡು ಕಣ್ಣೀರು ಹಾಕುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋ ಸರಕಾರದ ಗ್ಯಾರಂಟಿ ಯೋಜನೆಯ ಪ್ರಯೋಜನವನ್ನು ಕಣ್ಣುತೆರೆಯುವಂತೆ ಮಾಡಿತ್ತು.

ಗ್ಯಾರಂಟಿ ಯೋಜನೆಯಲ್ಲಿ ಘೋಷಿಸಿದ್ದಂತೆ ರಾಜ್ಯದ ಜನರಿಗೆ 10ಕೆಜಿ ಉಚಿತ ಅಕ್ಕಿ ನೀಡಲು, ರಾಜ್ಯದ  ಕಾಂಗ್ರೆಸ್‌ ಸರಕಾರ ಹೆಚ್ಚುವರಿ ಅಕ್ಕಿ ವಿತರಣೆ ಬಗ್ಗೆ ಎಫ್‌ಸಿಐ ಡೆಪ್ಯುಟಿ ಮ್ಯಾನೇಜರ್ ಜೊತೆ ಚರ್ಚೆ ಮಾಡಿದ್ದರು. ಅವರು ಹೆಚ್ಚುವರಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಆದರೆ ಕೇಂದ್ರದ ಬಿಜೆಪಿ ಸರಕಾರ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ರಾಜಕೀಯ ಮಾಡಿತ್ತು. ಇದರಿಂದ ರಾಜ್ಯದ ಜನರಿಗೆ 10 ಕೆಜಿ ಅಕ್ಕಿ ಕೊಡಲು ಸಮಸ್ಯೆಯಾಗಿತ್ತು. ಇದಕ್ಕೆ ರಾಜ್ಯ ಸರಕಾರ 5 ಕೆ.ಜಿ ಅಕ್ಕಿ ಜೊತೆಗೆ 5 ಕೆಜಿ ಅಕ್ಕಿಯ ಹಣ ಜನರ ಖಾತೆಗೆ ಜಮೆ ಮಾಡುವ ನಿರ್ಧಾರವನ್ನು ತೆಗೆದುಕೊಂಡಿತ್ತು.

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಬಿಜೆಪಿಯ ನಿದ್ದೆಗೆಡಿಸಿರುವ ಜೊತೆಗೆ ಬಿಜೆಪಿಗೆ ಭಾರೀ ಹೊಡೆತವನ್ನು ನೀಡುರುವುದು ನಿಜ. ಅದಕ್ಕಾಗಿಯೇ ‘ರಾಜ್ಯದ ಖಜಾನೆ ಖಾಲಿಯಾಗುತ್ತಿದೆ, ರಾಜ್ಯ ದಿವಾಳಿಯಾಗುತ್ತಿದೆ’ ಎಂದು ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ಅಪಪ್ರಚಾರವನ್ನು ನಡೆಸಿಕೊಂಡು ಬಂದಿರುವುದನ್ನು ಗಮನಿಸಬಹುದಾಗಿದೆ. ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್‌ ಭಾರೀ ಪ್ರಮಾಣದ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ, ಬಿಜೆಪಿಯ ಸಿಎಎ, ಒಂದು ರಾಷ್ಟ್ರ, ಒಂದು ಚುನಾವಣೆಯಂತಹ ವಿಭಜನೀಯ ಕಾನೂನುಗಳು, ನೀತಿಗಳ ಭರವಸೆಗಳ ನಡುವೆ ಕಾಂಗ್ರೆಸ್‌ನ ಜನಸ್ನೇಹಿ ಯೋಜನೆಗಳು ಬಿಜೆಪಿಗೆ ದೊಡ್ಡ ಮಟ್ಟದಲ್ಲಿ ತಲೆನೋವು ಸೃಷ್ಟಿಸಿದೆ.

ಇದನ್ನು ಓದಿ: ಚುನಾವಣಾ ಬಾಂಡ್‌ ಯೋಜನೆಗೆ ಜನಸಾಮಾನ್ಯರ ತೆರಿಗೆಯ ’14 ಕೋಟಿ ರೂ.’ ವ್ಯಯಿಸಿದ್ದ ಮೋದಿ ಸರಕಾರ!

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...