Homeಕರ್ನಾಟಕಬಡ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವಾದ 'ಕಾಂಗ್ರೆಸ್‌' ಸರಕಾರದ 'ಗ್ಯಾರಂಟಿ ಯೋಜನೆ' ಬಗ್ಗೆ ತೇಜಸ್ವಿ ಸೂರ್ಯ...

ಬಡ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವಾದ ‘ಕಾಂಗ್ರೆಸ್‌’ ಸರಕಾರದ ‘ಗ್ಯಾರಂಟಿ ಯೋಜನೆ’ ಬಗ್ಗೆ ತೇಜಸ್ವಿ ಸೂರ್ಯ ತುಚ್ಛ ಮಾತು!

- Advertisement -
- Advertisement -

ಕರ್ನಾಟಕದ ಕಾಂಗ್ರೆಸ್‌ ಸರಕಾರ ಜಾರಿಗೆ ತಂದಿದ್ದ ಪಂಚ ಗ್ಯಾರಂಟಿಗಳ ಬಗ್ಗೆ ತುಚ್ಛವಾಗಿ ಮಾತನಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ರಾಜ್ಯದ ಕೋಟ್ಯಾಂತರ ಜನರಿಗೆ ಆಶ್ರಯವಾದ ಗ್ಯಾರಂಟಿ ಯೋಜನೆಗಳನ್ನು ‘ಮತಿ ಹೀನ ಉಚಿತ ಕೊಡುಗೆ’ ಎಂದು ಹೇಳಿಕೊಂಡು ಜನಸಾಮಾನ್ಯರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಎಎನ್ಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ್ದ ಸಂಸದ ತೇಜಸ್ವಿ ಸೂರ್ಯ, ಕರ್ನಾಟಕ ಸರಕಾರ ಅಭಿವೃದ್ಧಿ ಹಾಗೂ ಮೂಲಭೂತ ಯೋಜನೆಗಳ ಹಣವನ್ನು ಮತಿ ಹೀನ ಉಚಿತ ಕೊಡುಗೆಗೆ ಬಳಸುತ್ತಿದೆ, ಗ್ಯಾರಂಟಿ ಯೋಜನೆಗಳಿಂದ ರಾಜ್ಯವು ದಿವಾಳಿಯಾಗುತ್ತಿದೆ ಎಂದು ಹೇಳಿದ್ದಾರೆ.

ಕಳೆದ ವಿಧಾನ ಸಭಾ ಚುನಾವಣೆಯ ಅವಧಿಯಲ್ಲಿ ನೀಡಿದ್ದ ಭರವಸೆಯಂತೆ ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದಾಗ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ  ತರಲಾಗಿತ್ತು. ಇದರಂತೆ ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ಮನೆಯೊಡತಿಗೆ ತಿಂಗಳಿಗೆ 2000ರೂ. ಮತ್ತು ಗೃಹಜ್ಯೋತಿ ಯೋಜನೆಯಡಿ 200 ಯುನಿಟ್‌ ಉಚಿತ ವಿದ್ಯುತ್‌, ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ಪ್ರತಿ ತಿಂಗಳು 10ಕೆಜಿ ಅಕ್ಕಿ, ಯುವನಿಧಿ ಯೋಜನೆಯಡಿ ನಿರುದ್ಯೋಗಿ ಯುವಕರಿಗೆ ಧನಸಹಾಯ ಮತ್ತು ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ವ್ಯವಸ್ಥೆಯನ್ನು ಕಲ್ಪಿಸಿತ್ತು. ಗ್ಯಾರಂಟಿ ಯೋಜನೆಗಳಿಗೆ ರಾಜ್ಯದಲ್ಲಿ ಉತ್ತಮವಾದ ಸ್ಪಂದನೆ ವ್ಯಕ್ತವಾಗಿತ್ತು. ಬಡ ಜನರಿಗೆ ಗೃಹಲಕ್ಷ್ಮಿ ಯೋಜನೆಯಿಂದ ಸಿಕ್ಕಿದ ಹಣದಿಂದ ಆಹಾರ ಸಾಮಾಗ್ರಿಗಳ ಖರೀದಿ, ಔಷಧಿಗಳಿಗೆ, ಮಕ್ಕಳ ವಿಧ್ಯಾಭ್ಯಾಸಕ್ಕೆ ಸಹಕಾರಿ ಯಾಗಿತ್ತು. ಎಲ್ಲೆಡೆ ಪ್ರಯಾಣಕ್ಕೆ ಪುರುಷರನ್ನೇ ಆಶ್ರಯಿಸಬೇಕಿದ್ದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ವ್ಯವಸ್ಥೆಯಿಂದ ಆಶಾಭಾವನೆ ಮೂಡಿತ್ತು. ಗೃಹಜ್ಯೋತಿ ಯೋಜನೆಯಿಂದ ಬಡ ಜನರಿಗೆ ವಿದ್ಯುತ್‌ ಬಿಲ್‌ ಕಟ್ಟುವುದರಿಂದ ವಿನಾಯಿತಿ ನೀಡಿತ್ತು, ಯುವನಿಧಿ ಯೋಜನೆಯು ನಿರುದ್ಯೋಗಿ ಯುವಕರಿಗೆ ಆಶ್ರಯವನ್ನು ನೀಡಿತ್ತು.

ಗ್ಯಾರಂಟಿ ಯೋಜನೆಗಳು ರಾಜ್ಯದ ಜನರಿಗೆ ಹೆಚ್ಚು ಫಲಪ್ರದವಾಗಿದೆ ಎಂಬುವುದು ಇತ್ತೀಚೆಗೆ ರಾಜ್ಯದಾದ್ಯಂತ ನಡೆದ ಗ್ಯಾರಂಟಿ ಫಲಾನುಭವಿಗಳ ಸಮಾವೇಶಗಳು ಬಹಿರಂಗಪಡಿಸಿದ್ದವು, ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ಸಮಾವೇಶಗಳಲ್ಲಿ ಭಾಗವಹಿಸಿದ್ದ ಮಹಿಳೆಯರು ತಮಗೆ ಗ್ಯಾರಂಟಿ ಯೋಜನೆ ಹೇಗೆ ಸಹಕಾರಿಯಾಯಿತು ಎಂಬುವುದನ್ನು ಬಿಚ್ಟಿಟ್ಟಿದ್ದರು.

ಫಾತಿಮಾ ರೋಡ್ರಿಗ್ರಸ್ ಎಂಬವರು ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡುತ್ತಾ, ನಾನು ಗೃಹಲಕ್ಷ್ಮೀ ಯೋಜನೆಯಿಂದ ಲಾಭ ಪಡೆದಿದ್ದೇನೆ. ಸಿಂಗಲ್ ಪೇರೆಂಟ್ ಆಗಿದ್ದು, ನನಗೆ ಲಂಗ್ಸ್ ಪ್ರಾಬ್ಲಮ್ ಇರುವುದರಿಂದ ಸರಿಯಾಗಿ ಕೆಲಸ ಮಾಡಲು ಸಹ ಸಾಧ್ಯವಾಗುತ್ತಿರಲಿಲ್ಲ. ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಬಂದ ಮೇಲೆ ನನ್ನ ಮಗನ ಶಾಲಾ ಶುಲ್ಕ ಕಟ್ಟಿದ್ದೇನೆ, ನನ್ನ ಮೆಡಿಸನ್​ಗೆ ಅವಶ್ಯಕವಾದ ಹಣವನ್ನು ಪಡೆದಿದ್ದೇನೆ. ನನ್ನ ಕಷ್ಟವನ್ನು ನೋಡಿ ಅಂಗನವಾಡಿ ಕಾರ್ಯಕರ್ತರು ನನಗೆ ಗೃಹಲಕ್ಷ್ಮೀ ಹಣ ಸಿಗುವ ಹಾಗೆ ಮಾಡಿದ್ದಾರೆ. ಸರ್ಕಾರ ಮಾಡಿದ ಈ ಯೋಜನೆ ನನಗೆ ಸಾಕಷ್ಟು ಉಪಯೋಗ ಮಾಡಿಕೊಟ್ಟಿದೆ ಎಂದಿದ್ದಾರೆ.

ಭದ್ರಾವತಿ ಶಾಲಿನಿಯವರು ಮಾತನಾಡ್ತಾ , ನಾನು ಭದ್ರಾವತಿಗೆ ಶಿವಮೊಗ್ಗಕ್ಕೆ ಹೌಸ್ ಕೀಪಿಂಗ್ ಕೆಲಸಕ್ಕೆ ಬರುತ್ತಿದ್ದೆ. ಪ್ರತಿ ತಿಂಗಳು ಒಂದುವರೆ ಸಾವಿರ ಖರ್ಚಾಗುತ್ತಿತ್ತು. ಇದೀಗ ಶಕ್ತಿ ಯೋಜನೆ ಬಂದಿದ್ದರಿಂದ ನನಗೆ ಈ ಹಣವನ್ನು ಮನೆಯ ಖರ್ಚಿಗೆ ಉಪಯೋಗಿಸಲು ಸಾಧ್ಯವಾಗಿದೆ ಎಂದಿದ್ದಾರೆ.

ಗ್ಯಾರಂಟಿ ಯೋಜನೆಯ ಬಗ್ಗೆ ಮಾತನಾಡಿದ ಪುತ್ತೂರಿನ ಅಸ್ಮಾ, ನನ್ನ ಪತಿ ನನ್ನನ್ನು ಬಿಟ್ಟು ಮೂರು ವರ್ಷಗಳು ಕಳೆದಿದೆ, ನನಗೆ ಇಬ್ಬರು ಸಣ್ಣ ಮಕ್ಕಳಿದ್ದಾರೆ, ಅವರನ್ನು ಸಾಕುವುದು ನನಗೆ ದೊಡ್ಡ ಸವಾಲಾಗಿತ್ತು, ಇದೀಗ ಸಿದ್ದರಾಮಯ್ಯ ಅವರ ಗ್ಯಾರಂಟಿ ಯೋಜನೆ ಬಂದ ಬಳಿಕ ನನಗೆ ಮಕ್ಕಳಿಗೆ ಅನ್ನ ಹಾಕಲು ಸಹಕಾರಿಯಾಗಿದೆ ಎಂದು ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮರಕುಂಬಿ ಗ್ರಾಮದ ವೃದ್ಧೆಯ ಮಗ ಅನಾರೋಗ್ಯದಿಂದ ನಿಧನರಾಗಿದ್ದರು. ಮಗನ ಮೃತದೇಹದ ಮುಂದೆ ಕಣ್ಣೀರು ಹಾಕಿದ ವೃದ್ಧೆ, “ಯವ್ವಾ, ನೀ ಬದುಕಾಕ ಗೃಹಲಕ್ಷ್ಮೀ ಯೋಜನೆಯ 2 ಸಾವಿರ ರೂಪಾಯಿ ಬರ್ತಾವ ಬಿಡು” ಎಂದು ಮಗ  ಸಾಯುವ ಮೊದಲು ಹೇಳಿದ್ದ ಎನ್ನುವ ವಿಚಾರವನ್ನು ಆ ತಾಯಿ ತನ್ನ ಪುತ್ರನ ಸಾವಿನ ನೋವಿನ ನಡುವೆ ನೆನಪು ಮಾಡಿಕೊಂಡು ಕಣ್ಣೀರು ಹಾಕುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋ ಸರಕಾರದ ಗ್ಯಾರಂಟಿ ಯೋಜನೆಯ ಪ್ರಯೋಜನವನ್ನು ಕಣ್ಣುತೆರೆಯುವಂತೆ ಮಾಡಿತ್ತು.

ಗ್ಯಾರಂಟಿ ಯೋಜನೆಯಲ್ಲಿ ಘೋಷಿಸಿದ್ದಂತೆ ರಾಜ್ಯದ ಜನರಿಗೆ 10ಕೆಜಿ ಉಚಿತ ಅಕ್ಕಿ ನೀಡಲು, ರಾಜ್ಯದ  ಕಾಂಗ್ರೆಸ್‌ ಸರಕಾರ ಹೆಚ್ಚುವರಿ ಅಕ್ಕಿ ವಿತರಣೆ ಬಗ್ಗೆ ಎಫ್‌ಸಿಐ ಡೆಪ್ಯುಟಿ ಮ್ಯಾನೇಜರ್ ಜೊತೆ ಚರ್ಚೆ ಮಾಡಿದ್ದರು. ಅವರು ಹೆಚ್ಚುವರಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಆದರೆ ಕೇಂದ್ರದ ಬಿಜೆಪಿ ಸರಕಾರ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ರಾಜಕೀಯ ಮಾಡಿತ್ತು. ಇದರಿಂದ ರಾಜ್ಯದ ಜನರಿಗೆ 10 ಕೆಜಿ ಅಕ್ಕಿ ಕೊಡಲು ಸಮಸ್ಯೆಯಾಗಿತ್ತು. ಇದಕ್ಕೆ ರಾಜ್ಯ ಸರಕಾರ 5 ಕೆ.ಜಿ ಅಕ್ಕಿ ಜೊತೆಗೆ 5 ಕೆಜಿ ಅಕ್ಕಿಯ ಹಣ ಜನರ ಖಾತೆಗೆ ಜಮೆ ಮಾಡುವ ನಿರ್ಧಾರವನ್ನು ತೆಗೆದುಕೊಂಡಿತ್ತು.

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಬಿಜೆಪಿಯ ನಿದ್ದೆಗೆಡಿಸಿರುವ ಜೊತೆಗೆ ಬಿಜೆಪಿಗೆ ಭಾರೀ ಹೊಡೆತವನ್ನು ನೀಡುರುವುದು ನಿಜ. ಅದಕ್ಕಾಗಿಯೇ ‘ರಾಜ್ಯದ ಖಜಾನೆ ಖಾಲಿಯಾಗುತ್ತಿದೆ, ರಾಜ್ಯ ದಿವಾಳಿಯಾಗುತ್ತಿದೆ’ ಎಂದು ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ಅಪಪ್ರಚಾರವನ್ನು ನಡೆಸಿಕೊಂಡು ಬಂದಿರುವುದನ್ನು ಗಮನಿಸಬಹುದಾಗಿದೆ. ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್‌ ಭಾರೀ ಪ್ರಮಾಣದ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ, ಬಿಜೆಪಿಯ ಸಿಎಎ, ಒಂದು ರಾಷ್ಟ್ರ, ಒಂದು ಚುನಾವಣೆಯಂತಹ ವಿಭಜನೀಯ ಕಾನೂನುಗಳು, ನೀತಿಗಳ ಭರವಸೆಗಳ ನಡುವೆ ಕಾಂಗ್ರೆಸ್‌ನ ಜನಸ್ನೇಹಿ ಯೋಜನೆಗಳು ಬಿಜೆಪಿಗೆ ದೊಡ್ಡ ಮಟ್ಟದಲ್ಲಿ ತಲೆನೋವು ಸೃಷ್ಟಿಸಿದೆ.

ಇದನ್ನು ಓದಿ: ಚುನಾವಣಾ ಬಾಂಡ್‌ ಯೋಜನೆಗೆ ಜನಸಾಮಾನ್ಯರ ತೆರಿಗೆಯ ’14 ಕೋಟಿ ರೂ.’ ವ್ಯಯಿಸಿದ್ದ ಮೋದಿ ಸರಕಾರ!

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...