Homeಕರ್ನಾಟಕಬಡ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವಾದ 'ಕಾಂಗ್ರೆಸ್‌' ಸರಕಾರದ 'ಗ್ಯಾರಂಟಿ ಯೋಜನೆ' ಬಗ್ಗೆ ತೇಜಸ್ವಿ ಸೂರ್ಯ...

ಬಡ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವಾದ ‘ಕಾಂಗ್ರೆಸ್‌’ ಸರಕಾರದ ‘ಗ್ಯಾರಂಟಿ ಯೋಜನೆ’ ಬಗ್ಗೆ ತೇಜಸ್ವಿ ಸೂರ್ಯ ತುಚ್ಛ ಮಾತು!

- Advertisement -
- Advertisement -

ಕರ್ನಾಟಕದ ಕಾಂಗ್ರೆಸ್‌ ಸರಕಾರ ಜಾರಿಗೆ ತಂದಿದ್ದ ಪಂಚ ಗ್ಯಾರಂಟಿಗಳ ಬಗ್ಗೆ ತುಚ್ಛವಾಗಿ ಮಾತನಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ರಾಜ್ಯದ ಕೋಟ್ಯಾಂತರ ಜನರಿಗೆ ಆಶ್ರಯವಾದ ಗ್ಯಾರಂಟಿ ಯೋಜನೆಗಳನ್ನು ‘ಮತಿ ಹೀನ ಉಚಿತ ಕೊಡುಗೆ’ ಎಂದು ಹೇಳಿಕೊಂಡು ಜನಸಾಮಾನ್ಯರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಎಎನ್ಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ್ದ ಸಂಸದ ತೇಜಸ್ವಿ ಸೂರ್ಯ, ಕರ್ನಾಟಕ ಸರಕಾರ ಅಭಿವೃದ್ಧಿ ಹಾಗೂ ಮೂಲಭೂತ ಯೋಜನೆಗಳ ಹಣವನ್ನು ಮತಿ ಹೀನ ಉಚಿತ ಕೊಡುಗೆಗೆ ಬಳಸುತ್ತಿದೆ, ಗ್ಯಾರಂಟಿ ಯೋಜನೆಗಳಿಂದ ರಾಜ್ಯವು ದಿವಾಳಿಯಾಗುತ್ತಿದೆ ಎಂದು ಹೇಳಿದ್ದಾರೆ.

ಕಳೆದ ವಿಧಾನ ಸಭಾ ಚುನಾವಣೆಯ ಅವಧಿಯಲ್ಲಿ ನೀಡಿದ್ದ ಭರವಸೆಯಂತೆ ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದಾಗ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ  ತರಲಾಗಿತ್ತು. ಇದರಂತೆ ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ಮನೆಯೊಡತಿಗೆ ತಿಂಗಳಿಗೆ 2000ರೂ. ಮತ್ತು ಗೃಹಜ್ಯೋತಿ ಯೋಜನೆಯಡಿ 200 ಯುನಿಟ್‌ ಉಚಿತ ವಿದ್ಯುತ್‌, ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ಪ್ರತಿ ತಿಂಗಳು 10ಕೆಜಿ ಅಕ್ಕಿ, ಯುವನಿಧಿ ಯೋಜನೆಯಡಿ ನಿರುದ್ಯೋಗಿ ಯುವಕರಿಗೆ ಧನಸಹಾಯ ಮತ್ತು ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ವ್ಯವಸ್ಥೆಯನ್ನು ಕಲ್ಪಿಸಿತ್ತು. ಗ್ಯಾರಂಟಿ ಯೋಜನೆಗಳಿಗೆ ರಾಜ್ಯದಲ್ಲಿ ಉತ್ತಮವಾದ ಸ್ಪಂದನೆ ವ್ಯಕ್ತವಾಗಿತ್ತು. ಬಡ ಜನರಿಗೆ ಗೃಹಲಕ್ಷ್ಮಿ ಯೋಜನೆಯಿಂದ ಸಿಕ್ಕಿದ ಹಣದಿಂದ ಆಹಾರ ಸಾಮಾಗ್ರಿಗಳ ಖರೀದಿ, ಔಷಧಿಗಳಿಗೆ, ಮಕ್ಕಳ ವಿಧ್ಯಾಭ್ಯಾಸಕ್ಕೆ ಸಹಕಾರಿ ಯಾಗಿತ್ತು. ಎಲ್ಲೆಡೆ ಪ್ರಯಾಣಕ್ಕೆ ಪುರುಷರನ್ನೇ ಆಶ್ರಯಿಸಬೇಕಿದ್ದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ವ್ಯವಸ್ಥೆಯಿಂದ ಆಶಾಭಾವನೆ ಮೂಡಿತ್ತು. ಗೃಹಜ್ಯೋತಿ ಯೋಜನೆಯಿಂದ ಬಡ ಜನರಿಗೆ ವಿದ್ಯುತ್‌ ಬಿಲ್‌ ಕಟ್ಟುವುದರಿಂದ ವಿನಾಯಿತಿ ನೀಡಿತ್ತು, ಯುವನಿಧಿ ಯೋಜನೆಯು ನಿರುದ್ಯೋಗಿ ಯುವಕರಿಗೆ ಆಶ್ರಯವನ್ನು ನೀಡಿತ್ತು.

ಗ್ಯಾರಂಟಿ ಯೋಜನೆಗಳು ರಾಜ್ಯದ ಜನರಿಗೆ ಹೆಚ್ಚು ಫಲಪ್ರದವಾಗಿದೆ ಎಂಬುವುದು ಇತ್ತೀಚೆಗೆ ರಾಜ್ಯದಾದ್ಯಂತ ನಡೆದ ಗ್ಯಾರಂಟಿ ಫಲಾನುಭವಿಗಳ ಸಮಾವೇಶಗಳು ಬಹಿರಂಗಪಡಿಸಿದ್ದವು, ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ಸಮಾವೇಶಗಳಲ್ಲಿ ಭಾಗವಹಿಸಿದ್ದ ಮಹಿಳೆಯರು ತಮಗೆ ಗ್ಯಾರಂಟಿ ಯೋಜನೆ ಹೇಗೆ ಸಹಕಾರಿಯಾಯಿತು ಎಂಬುವುದನ್ನು ಬಿಚ್ಟಿಟ್ಟಿದ್ದರು.

ಫಾತಿಮಾ ರೋಡ್ರಿಗ್ರಸ್ ಎಂಬವರು ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡುತ್ತಾ, ನಾನು ಗೃಹಲಕ್ಷ್ಮೀ ಯೋಜನೆಯಿಂದ ಲಾಭ ಪಡೆದಿದ್ದೇನೆ. ಸಿಂಗಲ್ ಪೇರೆಂಟ್ ಆಗಿದ್ದು, ನನಗೆ ಲಂಗ್ಸ್ ಪ್ರಾಬ್ಲಮ್ ಇರುವುದರಿಂದ ಸರಿಯಾಗಿ ಕೆಲಸ ಮಾಡಲು ಸಹ ಸಾಧ್ಯವಾಗುತ್ತಿರಲಿಲ್ಲ. ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಬಂದ ಮೇಲೆ ನನ್ನ ಮಗನ ಶಾಲಾ ಶುಲ್ಕ ಕಟ್ಟಿದ್ದೇನೆ, ನನ್ನ ಮೆಡಿಸನ್​ಗೆ ಅವಶ್ಯಕವಾದ ಹಣವನ್ನು ಪಡೆದಿದ್ದೇನೆ. ನನ್ನ ಕಷ್ಟವನ್ನು ನೋಡಿ ಅಂಗನವಾಡಿ ಕಾರ್ಯಕರ್ತರು ನನಗೆ ಗೃಹಲಕ್ಷ್ಮೀ ಹಣ ಸಿಗುವ ಹಾಗೆ ಮಾಡಿದ್ದಾರೆ. ಸರ್ಕಾರ ಮಾಡಿದ ಈ ಯೋಜನೆ ನನಗೆ ಸಾಕಷ್ಟು ಉಪಯೋಗ ಮಾಡಿಕೊಟ್ಟಿದೆ ಎಂದಿದ್ದಾರೆ.

ಭದ್ರಾವತಿ ಶಾಲಿನಿಯವರು ಮಾತನಾಡ್ತಾ , ನಾನು ಭದ್ರಾವತಿಗೆ ಶಿವಮೊಗ್ಗಕ್ಕೆ ಹೌಸ್ ಕೀಪಿಂಗ್ ಕೆಲಸಕ್ಕೆ ಬರುತ್ತಿದ್ದೆ. ಪ್ರತಿ ತಿಂಗಳು ಒಂದುವರೆ ಸಾವಿರ ಖರ್ಚಾಗುತ್ತಿತ್ತು. ಇದೀಗ ಶಕ್ತಿ ಯೋಜನೆ ಬಂದಿದ್ದರಿಂದ ನನಗೆ ಈ ಹಣವನ್ನು ಮನೆಯ ಖರ್ಚಿಗೆ ಉಪಯೋಗಿಸಲು ಸಾಧ್ಯವಾಗಿದೆ ಎಂದಿದ್ದಾರೆ.

ಗ್ಯಾರಂಟಿ ಯೋಜನೆಯ ಬಗ್ಗೆ ಮಾತನಾಡಿದ ಪುತ್ತೂರಿನ ಅಸ್ಮಾ, ನನ್ನ ಪತಿ ನನ್ನನ್ನು ಬಿಟ್ಟು ಮೂರು ವರ್ಷಗಳು ಕಳೆದಿದೆ, ನನಗೆ ಇಬ್ಬರು ಸಣ್ಣ ಮಕ್ಕಳಿದ್ದಾರೆ, ಅವರನ್ನು ಸಾಕುವುದು ನನಗೆ ದೊಡ್ಡ ಸವಾಲಾಗಿತ್ತು, ಇದೀಗ ಸಿದ್ದರಾಮಯ್ಯ ಅವರ ಗ್ಯಾರಂಟಿ ಯೋಜನೆ ಬಂದ ಬಳಿಕ ನನಗೆ ಮಕ್ಕಳಿಗೆ ಅನ್ನ ಹಾಕಲು ಸಹಕಾರಿಯಾಗಿದೆ ಎಂದು ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮರಕುಂಬಿ ಗ್ರಾಮದ ವೃದ್ಧೆಯ ಮಗ ಅನಾರೋಗ್ಯದಿಂದ ನಿಧನರಾಗಿದ್ದರು. ಮಗನ ಮೃತದೇಹದ ಮುಂದೆ ಕಣ್ಣೀರು ಹಾಕಿದ ವೃದ್ಧೆ, “ಯವ್ವಾ, ನೀ ಬದುಕಾಕ ಗೃಹಲಕ್ಷ್ಮೀ ಯೋಜನೆಯ 2 ಸಾವಿರ ರೂಪಾಯಿ ಬರ್ತಾವ ಬಿಡು” ಎಂದು ಮಗ  ಸಾಯುವ ಮೊದಲು ಹೇಳಿದ್ದ ಎನ್ನುವ ವಿಚಾರವನ್ನು ಆ ತಾಯಿ ತನ್ನ ಪುತ್ರನ ಸಾವಿನ ನೋವಿನ ನಡುವೆ ನೆನಪು ಮಾಡಿಕೊಂಡು ಕಣ್ಣೀರು ಹಾಕುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋ ಸರಕಾರದ ಗ್ಯಾರಂಟಿ ಯೋಜನೆಯ ಪ್ರಯೋಜನವನ್ನು ಕಣ್ಣುತೆರೆಯುವಂತೆ ಮಾಡಿತ್ತು.

ಗ್ಯಾರಂಟಿ ಯೋಜನೆಯಲ್ಲಿ ಘೋಷಿಸಿದ್ದಂತೆ ರಾಜ್ಯದ ಜನರಿಗೆ 10ಕೆಜಿ ಉಚಿತ ಅಕ್ಕಿ ನೀಡಲು, ರಾಜ್ಯದ  ಕಾಂಗ್ರೆಸ್‌ ಸರಕಾರ ಹೆಚ್ಚುವರಿ ಅಕ್ಕಿ ವಿತರಣೆ ಬಗ್ಗೆ ಎಫ್‌ಸಿಐ ಡೆಪ್ಯುಟಿ ಮ್ಯಾನೇಜರ್ ಜೊತೆ ಚರ್ಚೆ ಮಾಡಿದ್ದರು. ಅವರು ಹೆಚ್ಚುವರಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಆದರೆ ಕೇಂದ್ರದ ಬಿಜೆಪಿ ಸರಕಾರ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ರಾಜಕೀಯ ಮಾಡಿತ್ತು. ಇದರಿಂದ ರಾಜ್ಯದ ಜನರಿಗೆ 10 ಕೆಜಿ ಅಕ್ಕಿ ಕೊಡಲು ಸಮಸ್ಯೆಯಾಗಿತ್ತು. ಇದಕ್ಕೆ ರಾಜ್ಯ ಸರಕಾರ 5 ಕೆ.ಜಿ ಅಕ್ಕಿ ಜೊತೆಗೆ 5 ಕೆಜಿ ಅಕ್ಕಿಯ ಹಣ ಜನರ ಖಾತೆಗೆ ಜಮೆ ಮಾಡುವ ನಿರ್ಧಾರವನ್ನು ತೆಗೆದುಕೊಂಡಿತ್ತು.

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಬಿಜೆಪಿಯ ನಿದ್ದೆಗೆಡಿಸಿರುವ ಜೊತೆಗೆ ಬಿಜೆಪಿಗೆ ಭಾರೀ ಹೊಡೆತವನ್ನು ನೀಡುರುವುದು ನಿಜ. ಅದಕ್ಕಾಗಿಯೇ ‘ರಾಜ್ಯದ ಖಜಾನೆ ಖಾಲಿಯಾಗುತ್ತಿದೆ, ರಾಜ್ಯ ದಿವಾಳಿಯಾಗುತ್ತಿದೆ’ ಎಂದು ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ಅಪಪ್ರಚಾರವನ್ನು ನಡೆಸಿಕೊಂಡು ಬಂದಿರುವುದನ್ನು ಗಮನಿಸಬಹುದಾಗಿದೆ. ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್‌ ಭಾರೀ ಪ್ರಮಾಣದ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ, ಬಿಜೆಪಿಯ ಸಿಎಎ, ಒಂದು ರಾಷ್ಟ್ರ, ಒಂದು ಚುನಾವಣೆಯಂತಹ ವಿಭಜನೀಯ ಕಾನೂನುಗಳು, ನೀತಿಗಳ ಭರವಸೆಗಳ ನಡುವೆ ಕಾಂಗ್ರೆಸ್‌ನ ಜನಸ್ನೇಹಿ ಯೋಜನೆಗಳು ಬಿಜೆಪಿಗೆ ದೊಡ್ಡ ಮಟ್ಟದಲ್ಲಿ ತಲೆನೋವು ಸೃಷ್ಟಿಸಿದೆ.

ಇದನ್ನು ಓದಿ: ಚುನಾವಣಾ ಬಾಂಡ್‌ ಯೋಜನೆಗೆ ಜನಸಾಮಾನ್ಯರ ತೆರಿಗೆಯ ’14 ಕೋಟಿ ರೂ.’ ವ್ಯಯಿಸಿದ್ದ ಮೋದಿ ಸರಕಾರ!

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...