Homeಕರ್ನಾಟಕಬಡ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವಾದ 'ಕಾಂಗ್ರೆಸ್‌' ಸರಕಾರದ 'ಗ್ಯಾರಂಟಿ ಯೋಜನೆ' ಬಗ್ಗೆ ತೇಜಸ್ವಿ ಸೂರ್ಯ...

ಬಡ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವಾದ ‘ಕಾಂಗ್ರೆಸ್‌’ ಸರಕಾರದ ‘ಗ್ಯಾರಂಟಿ ಯೋಜನೆ’ ಬಗ್ಗೆ ತೇಜಸ್ವಿ ಸೂರ್ಯ ತುಚ್ಛ ಮಾತು!

- Advertisement -
- Advertisement -

ಕರ್ನಾಟಕದ ಕಾಂಗ್ರೆಸ್‌ ಸರಕಾರ ಜಾರಿಗೆ ತಂದಿದ್ದ ಪಂಚ ಗ್ಯಾರಂಟಿಗಳ ಬಗ್ಗೆ ತುಚ್ಛವಾಗಿ ಮಾತನಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ರಾಜ್ಯದ ಕೋಟ್ಯಾಂತರ ಜನರಿಗೆ ಆಶ್ರಯವಾದ ಗ್ಯಾರಂಟಿ ಯೋಜನೆಗಳನ್ನು ‘ಮತಿ ಹೀನ ಉಚಿತ ಕೊಡುಗೆ’ ಎಂದು ಹೇಳಿಕೊಂಡು ಜನಸಾಮಾನ್ಯರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಎಎನ್ಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ್ದ ಸಂಸದ ತೇಜಸ್ವಿ ಸೂರ್ಯ, ಕರ್ನಾಟಕ ಸರಕಾರ ಅಭಿವೃದ್ಧಿ ಹಾಗೂ ಮೂಲಭೂತ ಯೋಜನೆಗಳ ಹಣವನ್ನು ಮತಿ ಹೀನ ಉಚಿತ ಕೊಡುಗೆಗೆ ಬಳಸುತ್ತಿದೆ, ಗ್ಯಾರಂಟಿ ಯೋಜನೆಗಳಿಂದ ರಾಜ್ಯವು ದಿವಾಳಿಯಾಗುತ್ತಿದೆ ಎಂದು ಹೇಳಿದ್ದಾರೆ.

ಕಳೆದ ವಿಧಾನ ಸಭಾ ಚುನಾವಣೆಯ ಅವಧಿಯಲ್ಲಿ ನೀಡಿದ್ದ ಭರವಸೆಯಂತೆ ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದಾಗ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ  ತರಲಾಗಿತ್ತು. ಇದರಂತೆ ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ಮನೆಯೊಡತಿಗೆ ತಿಂಗಳಿಗೆ 2000ರೂ. ಮತ್ತು ಗೃಹಜ್ಯೋತಿ ಯೋಜನೆಯಡಿ 200 ಯುನಿಟ್‌ ಉಚಿತ ವಿದ್ಯುತ್‌, ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ಪ್ರತಿ ತಿಂಗಳು 10ಕೆಜಿ ಅಕ್ಕಿ, ಯುವನಿಧಿ ಯೋಜನೆಯಡಿ ನಿರುದ್ಯೋಗಿ ಯುವಕರಿಗೆ ಧನಸಹಾಯ ಮತ್ತು ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ವ್ಯವಸ್ಥೆಯನ್ನು ಕಲ್ಪಿಸಿತ್ತು. ಗ್ಯಾರಂಟಿ ಯೋಜನೆಗಳಿಗೆ ರಾಜ್ಯದಲ್ಲಿ ಉತ್ತಮವಾದ ಸ್ಪಂದನೆ ವ್ಯಕ್ತವಾಗಿತ್ತು. ಬಡ ಜನರಿಗೆ ಗೃಹಲಕ್ಷ್ಮಿ ಯೋಜನೆಯಿಂದ ಸಿಕ್ಕಿದ ಹಣದಿಂದ ಆಹಾರ ಸಾಮಾಗ್ರಿಗಳ ಖರೀದಿ, ಔಷಧಿಗಳಿಗೆ, ಮಕ್ಕಳ ವಿಧ್ಯಾಭ್ಯಾಸಕ್ಕೆ ಸಹಕಾರಿ ಯಾಗಿತ್ತು. ಎಲ್ಲೆಡೆ ಪ್ರಯಾಣಕ್ಕೆ ಪುರುಷರನ್ನೇ ಆಶ್ರಯಿಸಬೇಕಿದ್ದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ವ್ಯವಸ್ಥೆಯಿಂದ ಆಶಾಭಾವನೆ ಮೂಡಿತ್ತು. ಗೃಹಜ್ಯೋತಿ ಯೋಜನೆಯಿಂದ ಬಡ ಜನರಿಗೆ ವಿದ್ಯುತ್‌ ಬಿಲ್‌ ಕಟ್ಟುವುದರಿಂದ ವಿನಾಯಿತಿ ನೀಡಿತ್ತು, ಯುವನಿಧಿ ಯೋಜನೆಯು ನಿರುದ್ಯೋಗಿ ಯುವಕರಿಗೆ ಆಶ್ರಯವನ್ನು ನೀಡಿತ್ತು.

ಗ್ಯಾರಂಟಿ ಯೋಜನೆಗಳು ರಾಜ್ಯದ ಜನರಿಗೆ ಹೆಚ್ಚು ಫಲಪ್ರದವಾಗಿದೆ ಎಂಬುವುದು ಇತ್ತೀಚೆಗೆ ರಾಜ್ಯದಾದ್ಯಂತ ನಡೆದ ಗ್ಯಾರಂಟಿ ಫಲಾನುಭವಿಗಳ ಸಮಾವೇಶಗಳು ಬಹಿರಂಗಪಡಿಸಿದ್ದವು, ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ಸಮಾವೇಶಗಳಲ್ಲಿ ಭಾಗವಹಿಸಿದ್ದ ಮಹಿಳೆಯರು ತಮಗೆ ಗ್ಯಾರಂಟಿ ಯೋಜನೆ ಹೇಗೆ ಸಹಕಾರಿಯಾಯಿತು ಎಂಬುವುದನ್ನು ಬಿಚ್ಟಿಟ್ಟಿದ್ದರು.

ಫಾತಿಮಾ ರೋಡ್ರಿಗ್ರಸ್ ಎಂಬವರು ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡುತ್ತಾ, ನಾನು ಗೃಹಲಕ್ಷ್ಮೀ ಯೋಜನೆಯಿಂದ ಲಾಭ ಪಡೆದಿದ್ದೇನೆ. ಸಿಂಗಲ್ ಪೇರೆಂಟ್ ಆಗಿದ್ದು, ನನಗೆ ಲಂಗ್ಸ್ ಪ್ರಾಬ್ಲಮ್ ಇರುವುದರಿಂದ ಸರಿಯಾಗಿ ಕೆಲಸ ಮಾಡಲು ಸಹ ಸಾಧ್ಯವಾಗುತ್ತಿರಲಿಲ್ಲ. ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಬಂದ ಮೇಲೆ ನನ್ನ ಮಗನ ಶಾಲಾ ಶುಲ್ಕ ಕಟ್ಟಿದ್ದೇನೆ, ನನ್ನ ಮೆಡಿಸನ್​ಗೆ ಅವಶ್ಯಕವಾದ ಹಣವನ್ನು ಪಡೆದಿದ್ದೇನೆ. ನನ್ನ ಕಷ್ಟವನ್ನು ನೋಡಿ ಅಂಗನವಾಡಿ ಕಾರ್ಯಕರ್ತರು ನನಗೆ ಗೃಹಲಕ್ಷ್ಮೀ ಹಣ ಸಿಗುವ ಹಾಗೆ ಮಾಡಿದ್ದಾರೆ. ಸರ್ಕಾರ ಮಾಡಿದ ಈ ಯೋಜನೆ ನನಗೆ ಸಾಕಷ್ಟು ಉಪಯೋಗ ಮಾಡಿಕೊಟ್ಟಿದೆ ಎಂದಿದ್ದಾರೆ.

ಭದ್ರಾವತಿ ಶಾಲಿನಿಯವರು ಮಾತನಾಡ್ತಾ , ನಾನು ಭದ್ರಾವತಿಗೆ ಶಿವಮೊಗ್ಗಕ್ಕೆ ಹೌಸ್ ಕೀಪಿಂಗ್ ಕೆಲಸಕ್ಕೆ ಬರುತ್ತಿದ್ದೆ. ಪ್ರತಿ ತಿಂಗಳು ಒಂದುವರೆ ಸಾವಿರ ಖರ್ಚಾಗುತ್ತಿತ್ತು. ಇದೀಗ ಶಕ್ತಿ ಯೋಜನೆ ಬಂದಿದ್ದರಿಂದ ನನಗೆ ಈ ಹಣವನ್ನು ಮನೆಯ ಖರ್ಚಿಗೆ ಉಪಯೋಗಿಸಲು ಸಾಧ್ಯವಾಗಿದೆ ಎಂದಿದ್ದಾರೆ.

ಗ್ಯಾರಂಟಿ ಯೋಜನೆಯ ಬಗ್ಗೆ ಮಾತನಾಡಿದ ಪುತ್ತೂರಿನ ಅಸ್ಮಾ, ನನ್ನ ಪತಿ ನನ್ನನ್ನು ಬಿಟ್ಟು ಮೂರು ವರ್ಷಗಳು ಕಳೆದಿದೆ, ನನಗೆ ಇಬ್ಬರು ಸಣ್ಣ ಮಕ್ಕಳಿದ್ದಾರೆ, ಅವರನ್ನು ಸಾಕುವುದು ನನಗೆ ದೊಡ್ಡ ಸವಾಲಾಗಿತ್ತು, ಇದೀಗ ಸಿದ್ದರಾಮಯ್ಯ ಅವರ ಗ್ಯಾರಂಟಿ ಯೋಜನೆ ಬಂದ ಬಳಿಕ ನನಗೆ ಮಕ್ಕಳಿಗೆ ಅನ್ನ ಹಾಕಲು ಸಹಕಾರಿಯಾಗಿದೆ ಎಂದು ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮರಕುಂಬಿ ಗ್ರಾಮದ ವೃದ್ಧೆಯ ಮಗ ಅನಾರೋಗ್ಯದಿಂದ ನಿಧನರಾಗಿದ್ದರು. ಮಗನ ಮೃತದೇಹದ ಮುಂದೆ ಕಣ್ಣೀರು ಹಾಕಿದ ವೃದ್ಧೆ, “ಯವ್ವಾ, ನೀ ಬದುಕಾಕ ಗೃಹಲಕ್ಷ್ಮೀ ಯೋಜನೆಯ 2 ಸಾವಿರ ರೂಪಾಯಿ ಬರ್ತಾವ ಬಿಡು” ಎಂದು ಮಗ  ಸಾಯುವ ಮೊದಲು ಹೇಳಿದ್ದ ಎನ್ನುವ ವಿಚಾರವನ್ನು ಆ ತಾಯಿ ತನ್ನ ಪುತ್ರನ ಸಾವಿನ ನೋವಿನ ನಡುವೆ ನೆನಪು ಮಾಡಿಕೊಂಡು ಕಣ್ಣೀರು ಹಾಕುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋ ಸರಕಾರದ ಗ್ಯಾರಂಟಿ ಯೋಜನೆಯ ಪ್ರಯೋಜನವನ್ನು ಕಣ್ಣುತೆರೆಯುವಂತೆ ಮಾಡಿತ್ತು.

ಗ್ಯಾರಂಟಿ ಯೋಜನೆಯಲ್ಲಿ ಘೋಷಿಸಿದ್ದಂತೆ ರಾಜ್ಯದ ಜನರಿಗೆ 10ಕೆಜಿ ಉಚಿತ ಅಕ್ಕಿ ನೀಡಲು, ರಾಜ್ಯದ  ಕಾಂಗ್ರೆಸ್‌ ಸರಕಾರ ಹೆಚ್ಚುವರಿ ಅಕ್ಕಿ ವಿತರಣೆ ಬಗ್ಗೆ ಎಫ್‌ಸಿಐ ಡೆಪ್ಯುಟಿ ಮ್ಯಾನೇಜರ್ ಜೊತೆ ಚರ್ಚೆ ಮಾಡಿದ್ದರು. ಅವರು ಹೆಚ್ಚುವರಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಆದರೆ ಕೇಂದ್ರದ ಬಿಜೆಪಿ ಸರಕಾರ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ರಾಜಕೀಯ ಮಾಡಿತ್ತು. ಇದರಿಂದ ರಾಜ್ಯದ ಜನರಿಗೆ 10 ಕೆಜಿ ಅಕ್ಕಿ ಕೊಡಲು ಸಮಸ್ಯೆಯಾಗಿತ್ತು. ಇದಕ್ಕೆ ರಾಜ್ಯ ಸರಕಾರ 5 ಕೆ.ಜಿ ಅಕ್ಕಿ ಜೊತೆಗೆ 5 ಕೆಜಿ ಅಕ್ಕಿಯ ಹಣ ಜನರ ಖಾತೆಗೆ ಜಮೆ ಮಾಡುವ ನಿರ್ಧಾರವನ್ನು ತೆಗೆದುಕೊಂಡಿತ್ತು.

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಬಿಜೆಪಿಯ ನಿದ್ದೆಗೆಡಿಸಿರುವ ಜೊತೆಗೆ ಬಿಜೆಪಿಗೆ ಭಾರೀ ಹೊಡೆತವನ್ನು ನೀಡುರುವುದು ನಿಜ. ಅದಕ್ಕಾಗಿಯೇ ‘ರಾಜ್ಯದ ಖಜಾನೆ ಖಾಲಿಯಾಗುತ್ತಿದೆ, ರಾಜ್ಯ ದಿವಾಳಿಯಾಗುತ್ತಿದೆ’ ಎಂದು ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ಅಪಪ್ರಚಾರವನ್ನು ನಡೆಸಿಕೊಂಡು ಬಂದಿರುವುದನ್ನು ಗಮನಿಸಬಹುದಾಗಿದೆ. ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್‌ ಭಾರೀ ಪ್ರಮಾಣದ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ, ಬಿಜೆಪಿಯ ಸಿಎಎ, ಒಂದು ರಾಷ್ಟ್ರ, ಒಂದು ಚುನಾವಣೆಯಂತಹ ವಿಭಜನೀಯ ಕಾನೂನುಗಳು, ನೀತಿಗಳ ಭರವಸೆಗಳ ನಡುವೆ ಕಾಂಗ್ರೆಸ್‌ನ ಜನಸ್ನೇಹಿ ಯೋಜನೆಗಳು ಬಿಜೆಪಿಗೆ ದೊಡ್ಡ ಮಟ್ಟದಲ್ಲಿ ತಲೆನೋವು ಸೃಷ್ಟಿಸಿದೆ.

ಇದನ್ನು ಓದಿ: ಚುನಾವಣಾ ಬಾಂಡ್‌ ಯೋಜನೆಗೆ ಜನಸಾಮಾನ್ಯರ ತೆರಿಗೆಯ ’14 ಕೋಟಿ ರೂ.’ ವ್ಯಯಿಸಿದ್ದ ಮೋದಿ ಸರಕಾರ!

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...