Homeಕರ್ನಾಟಕಬಡ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವಾದ 'ಕಾಂಗ್ರೆಸ್‌' ಸರಕಾರದ 'ಗ್ಯಾರಂಟಿ ಯೋಜನೆ' ಬಗ್ಗೆ ತೇಜಸ್ವಿ ಸೂರ್ಯ...

ಬಡ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವಾದ ‘ಕಾಂಗ್ರೆಸ್‌’ ಸರಕಾರದ ‘ಗ್ಯಾರಂಟಿ ಯೋಜನೆ’ ಬಗ್ಗೆ ತೇಜಸ್ವಿ ಸೂರ್ಯ ತುಚ್ಛ ಮಾತು!

- Advertisement -
- Advertisement -

ಕರ್ನಾಟಕದ ಕಾಂಗ್ರೆಸ್‌ ಸರಕಾರ ಜಾರಿಗೆ ತಂದಿದ್ದ ಪಂಚ ಗ್ಯಾರಂಟಿಗಳ ಬಗ್ಗೆ ತುಚ್ಛವಾಗಿ ಮಾತನಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ರಾಜ್ಯದ ಕೋಟ್ಯಾಂತರ ಜನರಿಗೆ ಆಶ್ರಯವಾದ ಗ್ಯಾರಂಟಿ ಯೋಜನೆಗಳನ್ನು ‘ಮತಿ ಹೀನ ಉಚಿತ ಕೊಡುಗೆ’ ಎಂದು ಹೇಳಿಕೊಂಡು ಜನಸಾಮಾನ್ಯರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಎಎನ್ಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ್ದ ಸಂಸದ ತೇಜಸ್ವಿ ಸೂರ್ಯ, ಕರ್ನಾಟಕ ಸರಕಾರ ಅಭಿವೃದ್ಧಿ ಹಾಗೂ ಮೂಲಭೂತ ಯೋಜನೆಗಳ ಹಣವನ್ನು ಮತಿ ಹೀನ ಉಚಿತ ಕೊಡುಗೆಗೆ ಬಳಸುತ್ತಿದೆ, ಗ್ಯಾರಂಟಿ ಯೋಜನೆಗಳಿಂದ ರಾಜ್ಯವು ದಿವಾಳಿಯಾಗುತ್ತಿದೆ ಎಂದು ಹೇಳಿದ್ದಾರೆ.

ಕಳೆದ ವಿಧಾನ ಸಭಾ ಚುನಾವಣೆಯ ಅವಧಿಯಲ್ಲಿ ನೀಡಿದ್ದ ಭರವಸೆಯಂತೆ ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದಾಗ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ  ತರಲಾಗಿತ್ತು. ಇದರಂತೆ ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ಮನೆಯೊಡತಿಗೆ ತಿಂಗಳಿಗೆ 2000ರೂ. ಮತ್ತು ಗೃಹಜ್ಯೋತಿ ಯೋಜನೆಯಡಿ 200 ಯುನಿಟ್‌ ಉಚಿತ ವಿದ್ಯುತ್‌, ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ಪ್ರತಿ ತಿಂಗಳು 10ಕೆಜಿ ಅಕ್ಕಿ, ಯುವನಿಧಿ ಯೋಜನೆಯಡಿ ನಿರುದ್ಯೋಗಿ ಯುವಕರಿಗೆ ಧನಸಹಾಯ ಮತ್ತು ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ವ್ಯವಸ್ಥೆಯನ್ನು ಕಲ್ಪಿಸಿತ್ತು. ಗ್ಯಾರಂಟಿ ಯೋಜನೆಗಳಿಗೆ ರಾಜ್ಯದಲ್ಲಿ ಉತ್ತಮವಾದ ಸ್ಪಂದನೆ ವ್ಯಕ್ತವಾಗಿತ್ತು. ಬಡ ಜನರಿಗೆ ಗೃಹಲಕ್ಷ್ಮಿ ಯೋಜನೆಯಿಂದ ಸಿಕ್ಕಿದ ಹಣದಿಂದ ಆಹಾರ ಸಾಮಾಗ್ರಿಗಳ ಖರೀದಿ, ಔಷಧಿಗಳಿಗೆ, ಮಕ್ಕಳ ವಿಧ್ಯಾಭ್ಯಾಸಕ್ಕೆ ಸಹಕಾರಿ ಯಾಗಿತ್ತು. ಎಲ್ಲೆಡೆ ಪ್ರಯಾಣಕ್ಕೆ ಪುರುಷರನ್ನೇ ಆಶ್ರಯಿಸಬೇಕಿದ್ದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ವ್ಯವಸ್ಥೆಯಿಂದ ಆಶಾಭಾವನೆ ಮೂಡಿತ್ತು. ಗೃಹಜ್ಯೋತಿ ಯೋಜನೆಯಿಂದ ಬಡ ಜನರಿಗೆ ವಿದ್ಯುತ್‌ ಬಿಲ್‌ ಕಟ್ಟುವುದರಿಂದ ವಿನಾಯಿತಿ ನೀಡಿತ್ತು, ಯುವನಿಧಿ ಯೋಜನೆಯು ನಿರುದ್ಯೋಗಿ ಯುವಕರಿಗೆ ಆಶ್ರಯವನ್ನು ನೀಡಿತ್ತು.

ಗ್ಯಾರಂಟಿ ಯೋಜನೆಗಳು ರಾಜ್ಯದ ಜನರಿಗೆ ಹೆಚ್ಚು ಫಲಪ್ರದವಾಗಿದೆ ಎಂಬುವುದು ಇತ್ತೀಚೆಗೆ ರಾಜ್ಯದಾದ್ಯಂತ ನಡೆದ ಗ್ಯಾರಂಟಿ ಫಲಾನುಭವಿಗಳ ಸಮಾವೇಶಗಳು ಬಹಿರಂಗಪಡಿಸಿದ್ದವು, ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ಸಮಾವೇಶಗಳಲ್ಲಿ ಭಾಗವಹಿಸಿದ್ದ ಮಹಿಳೆಯರು ತಮಗೆ ಗ್ಯಾರಂಟಿ ಯೋಜನೆ ಹೇಗೆ ಸಹಕಾರಿಯಾಯಿತು ಎಂಬುವುದನ್ನು ಬಿಚ್ಟಿಟ್ಟಿದ್ದರು.

ಫಾತಿಮಾ ರೋಡ್ರಿಗ್ರಸ್ ಎಂಬವರು ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡುತ್ತಾ, ನಾನು ಗೃಹಲಕ್ಷ್ಮೀ ಯೋಜನೆಯಿಂದ ಲಾಭ ಪಡೆದಿದ್ದೇನೆ. ಸಿಂಗಲ್ ಪೇರೆಂಟ್ ಆಗಿದ್ದು, ನನಗೆ ಲಂಗ್ಸ್ ಪ್ರಾಬ್ಲಮ್ ಇರುವುದರಿಂದ ಸರಿಯಾಗಿ ಕೆಲಸ ಮಾಡಲು ಸಹ ಸಾಧ್ಯವಾಗುತ್ತಿರಲಿಲ್ಲ. ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಬಂದ ಮೇಲೆ ನನ್ನ ಮಗನ ಶಾಲಾ ಶುಲ್ಕ ಕಟ್ಟಿದ್ದೇನೆ, ನನ್ನ ಮೆಡಿಸನ್​ಗೆ ಅವಶ್ಯಕವಾದ ಹಣವನ್ನು ಪಡೆದಿದ್ದೇನೆ. ನನ್ನ ಕಷ್ಟವನ್ನು ನೋಡಿ ಅಂಗನವಾಡಿ ಕಾರ್ಯಕರ್ತರು ನನಗೆ ಗೃಹಲಕ್ಷ್ಮೀ ಹಣ ಸಿಗುವ ಹಾಗೆ ಮಾಡಿದ್ದಾರೆ. ಸರ್ಕಾರ ಮಾಡಿದ ಈ ಯೋಜನೆ ನನಗೆ ಸಾಕಷ್ಟು ಉಪಯೋಗ ಮಾಡಿಕೊಟ್ಟಿದೆ ಎಂದಿದ್ದಾರೆ.

ಭದ್ರಾವತಿ ಶಾಲಿನಿಯವರು ಮಾತನಾಡ್ತಾ , ನಾನು ಭದ್ರಾವತಿಗೆ ಶಿವಮೊಗ್ಗಕ್ಕೆ ಹೌಸ್ ಕೀಪಿಂಗ್ ಕೆಲಸಕ್ಕೆ ಬರುತ್ತಿದ್ದೆ. ಪ್ರತಿ ತಿಂಗಳು ಒಂದುವರೆ ಸಾವಿರ ಖರ್ಚಾಗುತ್ತಿತ್ತು. ಇದೀಗ ಶಕ್ತಿ ಯೋಜನೆ ಬಂದಿದ್ದರಿಂದ ನನಗೆ ಈ ಹಣವನ್ನು ಮನೆಯ ಖರ್ಚಿಗೆ ಉಪಯೋಗಿಸಲು ಸಾಧ್ಯವಾಗಿದೆ ಎಂದಿದ್ದಾರೆ.

ಗ್ಯಾರಂಟಿ ಯೋಜನೆಯ ಬಗ್ಗೆ ಮಾತನಾಡಿದ ಪುತ್ತೂರಿನ ಅಸ್ಮಾ, ನನ್ನ ಪತಿ ನನ್ನನ್ನು ಬಿಟ್ಟು ಮೂರು ವರ್ಷಗಳು ಕಳೆದಿದೆ, ನನಗೆ ಇಬ್ಬರು ಸಣ್ಣ ಮಕ್ಕಳಿದ್ದಾರೆ, ಅವರನ್ನು ಸಾಕುವುದು ನನಗೆ ದೊಡ್ಡ ಸವಾಲಾಗಿತ್ತು, ಇದೀಗ ಸಿದ್ದರಾಮಯ್ಯ ಅವರ ಗ್ಯಾರಂಟಿ ಯೋಜನೆ ಬಂದ ಬಳಿಕ ನನಗೆ ಮಕ್ಕಳಿಗೆ ಅನ್ನ ಹಾಕಲು ಸಹಕಾರಿಯಾಗಿದೆ ಎಂದು ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮರಕುಂಬಿ ಗ್ರಾಮದ ವೃದ್ಧೆಯ ಮಗ ಅನಾರೋಗ್ಯದಿಂದ ನಿಧನರಾಗಿದ್ದರು. ಮಗನ ಮೃತದೇಹದ ಮುಂದೆ ಕಣ್ಣೀರು ಹಾಕಿದ ವೃದ್ಧೆ, “ಯವ್ವಾ, ನೀ ಬದುಕಾಕ ಗೃಹಲಕ್ಷ್ಮೀ ಯೋಜನೆಯ 2 ಸಾವಿರ ರೂಪಾಯಿ ಬರ್ತಾವ ಬಿಡು” ಎಂದು ಮಗ  ಸಾಯುವ ಮೊದಲು ಹೇಳಿದ್ದ ಎನ್ನುವ ವಿಚಾರವನ್ನು ಆ ತಾಯಿ ತನ್ನ ಪುತ್ರನ ಸಾವಿನ ನೋವಿನ ನಡುವೆ ನೆನಪು ಮಾಡಿಕೊಂಡು ಕಣ್ಣೀರು ಹಾಕುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋ ಸರಕಾರದ ಗ್ಯಾರಂಟಿ ಯೋಜನೆಯ ಪ್ರಯೋಜನವನ್ನು ಕಣ್ಣುತೆರೆಯುವಂತೆ ಮಾಡಿತ್ತು.

ಗ್ಯಾರಂಟಿ ಯೋಜನೆಯಲ್ಲಿ ಘೋಷಿಸಿದ್ದಂತೆ ರಾಜ್ಯದ ಜನರಿಗೆ 10ಕೆಜಿ ಉಚಿತ ಅಕ್ಕಿ ನೀಡಲು, ರಾಜ್ಯದ  ಕಾಂಗ್ರೆಸ್‌ ಸರಕಾರ ಹೆಚ್ಚುವರಿ ಅಕ್ಕಿ ವಿತರಣೆ ಬಗ್ಗೆ ಎಫ್‌ಸಿಐ ಡೆಪ್ಯುಟಿ ಮ್ಯಾನೇಜರ್ ಜೊತೆ ಚರ್ಚೆ ಮಾಡಿದ್ದರು. ಅವರು ಹೆಚ್ಚುವರಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಆದರೆ ಕೇಂದ್ರದ ಬಿಜೆಪಿ ಸರಕಾರ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ರಾಜಕೀಯ ಮಾಡಿತ್ತು. ಇದರಿಂದ ರಾಜ್ಯದ ಜನರಿಗೆ 10 ಕೆಜಿ ಅಕ್ಕಿ ಕೊಡಲು ಸಮಸ್ಯೆಯಾಗಿತ್ತು. ಇದಕ್ಕೆ ರಾಜ್ಯ ಸರಕಾರ 5 ಕೆ.ಜಿ ಅಕ್ಕಿ ಜೊತೆಗೆ 5 ಕೆಜಿ ಅಕ್ಕಿಯ ಹಣ ಜನರ ಖಾತೆಗೆ ಜಮೆ ಮಾಡುವ ನಿರ್ಧಾರವನ್ನು ತೆಗೆದುಕೊಂಡಿತ್ತು.

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಬಿಜೆಪಿಯ ನಿದ್ದೆಗೆಡಿಸಿರುವ ಜೊತೆಗೆ ಬಿಜೆಪಿಗೆ ಭಾರೀ ಹೊಡೆತವನ್ನು ನೀಡುರುವುದು ನಿಜ. ಅದಕ್ಕಾಗಿಯೇ ‘ರಾಜ್ಯದ ಖಜಾನೆ ಖಾಲಿಯಾಗುತ್ತಿದೆ, ರಾಜ್ಯ ದಿವಾಳಿಯಾಗುತ್ತಿದೆ’ ಎಂದು ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ಅಪಪ್ರಚಾರವನ್ನು ನಡೆಸಿಕೊಂಡು ಬಂದಿರುವುದನ್ನು ಗಮನಿಸಬಹುದಾಗಿದೆ. ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್‌ ಭಾರೀ ಪ್ರಮಾಣದ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ, ಬಿಜೆಪಿಯ ಸಿಎಎ, ಒಂದು ರಾಷ್ಟ್ರ, ಒಂದು ಚುನಾವಣೆಯಂತಹ ವಿಭಜನೀಯ ಕಾನೂನುಗಳು, ನೀತಿಗಳ ಭರವಸೆಗಳ ನಡುವೆ ಕಾಂಗ್ರೆಸ್‌ನ ಜನಸ್ನೇಹಿ ಯೋಜನೆಗಳು ಬಿಜೆಪಿಗೆ ದೊಡ್ಡ ಮಟ್ಟದಲ್ಲಿ ತಲೆನೋವು ಸೃಷ್ಟಿಸಿದೆ.

ಇದನ್ನು ಓದಿ: ಚುನಾವಣಾ ಬಾಂಡ್‌ ಯೋಜನೆಗೆ ಜನಸಾಮಾನ್ಯರ ತೆರಿಗೆಯ ’14 ಕೋಟಿ ರೂ.’ ವ್ಯಯಿಸಿದ್ದ ಮೋದಿ ಸರಕಾರ!

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....