Homeಕರ್ನಾಟಕಬಡ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವಾದ 'ಕಾಂಗ್ರೆಸ್‌' ಸರಕಾರದ 'ಗ್ಯಾರಂಟಿ ಯೋಜನೆ' ಬಗ್ಗೆ ತೇಜಸ್ವಿ ಸೂರ್ಯ...

ಬಡ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವಾದ ‘ಕಾಂಗ್ರೆಸ್‌’ ಸರಕಾರದ ‘ಗ್ಯಾರಂಟಿ ಯೋಜನೆ’ ಬಗ್ಗೆ ತೇಜಸ್ವಿ ಸೂರ್ಯ ತುಚ್ಛ ಮಾತು!

- Advertisement -
- Advertisement -

ಕರ್ನಾಟಕದ ಕಾಂಗ್ರೆಸ್‌ ಸರಕಾರ ಜಾರಿಗೆ ತಂದಿದ್ದ ಪಂಚ ಗ್ಯಾರಂಟಿಗಳ ಬಗ್ಗೆ ತುಚ್ಛವಾಗಿ ಮಾತನಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ರಾಜ್ಯದ ಕೋಟ್ಯಾಂತರ ಜನರಿಗೆ ಆಶ್ರಯವಾದ ಗ್ಯಾರಂಟಿ ಯೋಜನೆಗಳನ್ನು ‘ಮತಿ ಹೀನ ಉಚಿತ ಕೊಡುಗೆ’ ಎಂದು ಹೇಳಿಕೊಂಡು ಜನಸಾಮಾನ್ಯರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಎಎನ್ಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ್ದ ಸಂಸದ ತೇಜಸ್ವಿ ಸೂರ್ಯ, ಕರ್ನಾಟಕ ಸರಕಾರ ಅಭಿವೃದ್ಧಿ ಹಾಗೂ ಮೂಲಭೂತ ಯೋಜನೆಗಳ ಹಣವನ್ನು ಮತಿ ಹೀನ ಉಚಿತ ಕೊಡುಗೆಗೆ ಬಳಸುತ್ತಿದೆ, ಗ್ಯಾರಂಟಿ ಯೋಜನೆಗಳಿಂದ ರಾಜ್ಯವು ದಿವಾಳಿಯಾಗುತ್ತಿದೆ ಎಂದು ಹೇಳಿದ್ದಾರೆ.

ಕಳೆದ ವಿಧಾನ ಸಭಾ ಚುನಾವಣೆಯ ಅವಧಿಯಲ್ಲಿ ನೀಡಿದ್ದ ಭರವಸೆಯಂತೆ ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದಾಗ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ  ತರಲಾಗಿತ್ತು. ಇದರಂತೆ ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ಮನೆಯೊಡತಿಗೆ ತಿಂಗಳಿಗೆ 2000ರೂ. ಮತ್ತು ಗೃಹಜ್ಯೋತಿ ಯೋಜನೆಯಡಿ 200 ಯುನಿಟ್‌ ಉಚಿತ ವಿದ್ಯುತ್‌, ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ಪ್ರತಿ ತಿಂಗಳು 10ಕೆಜಿ ಅಕ್ಕಿ, ಯುವನಿಧಿ ಯೋಜನೆಯಡಿ ನಿರುದ್ಯೋಗಿ ಯುವಕರಿಗೆ ಧನಸಹಾಯ ಮತ್ತು ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ವ್ಯವಸ್ಥೆಯನ್ನು ಕಲ್ಪಿಸಿತ್ತು. ಗ್ಯಾರಂಟಿ ಯೋಜನೆಗಳಿಗೆ ರಾಜ್ಯದಲ್ಲಿ ಉತ್ತಮವಾದ ಸ್ಪಂದನೆ ವ್ಯಕ್ತವಾಗಿತ್ತು. ಬಡ ಜನರಿಗೆ ಗೃಹಲಕ್ಷ್ಮಿ ಯೋಜನೆಯಿಂದ ಸಿಕ್ಕಿದ ಹಣದಿಂದ ಆಹಾರ ಸಾಮಾಗ್ರಿಗಳ ಖರೀದಿ, ಔಷಧಿಗಳಿಗೆ, ಮಕ್ಕಳ ವಿಧ್ಯಾಭ್ಯಾಸಕ್ಕೆ ಸಹಕಾರಿ ಯಾಗಿತ್ತು. ಎಲ್ಲೆಡೆ ಪ್ರಯಾಣಕ್ಕೆ ಪುರುಷರನ್ನೇ ಆಶ್ರಯಿಸಬೇಕಿದ್ದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ವ್ಯವಸ್ಥೆಯಿಂದ ಆಶಾಭಾವನೆ ಮೂಡಿತ್ತು. ಗೃಹಜ್ಯೋತಿ ಯೋಜನೆಯಿಂದ ಬಡ ಜನರಿಗೆ ವಿದ್ಯುತ್‌ ಬಿಲ್‌ ಕಟ್ಟುವುದರಿಂದ ವಿನಾಯಿತಿ ನೀಡಿತ್ತು, ಯುವನಿಧಿ ಯೋಜನೆಯು ನಿರುದ್ಯೋಗಿ ಯುವಕರಿಗೆ ಆಶ್ರಯವನ್ನು ನೀಡಿತ್ತು.

ಗ್ಯಾರಂಟಿ ಯೋಜನೆಗಳು ರಾಜ್ಯದ ಜನರಿಗೆ ಹೆಚ್ಚು ಫಲಪ್ರದವಾಗಿದೆ ಎಂಬುವುದು ಇತ್ತೀಚೆಗೆ ರಾಜ್ಯದಾದ್ಯಂತ ನಡೆದ ಗ್ಯಾರಂಟಿ ಫಲಾನುಭವಿಗಳ ಸಮಾವೇಶಗಳು ಬಹಿರಂಗಪಡಿಸಿದ್ದವು, ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ಸಮಾವೇಶಗಳಲ್ಲಿ ಭಾಗವಹಿಸಿದ್ದ ಮಹಿಳೆಯರು ತಮಗೆ ಗ್ಯಾರಂಟಿ ಯೋಜನೆ ಹೇಗೆ ಸಹಕಾರಿಯಾಯಿತು ಎಂಬುವುದನ್ನು ಬಿಚ್ಟಿಟ್ಟಿದ್ದರು.

ಫಾತಿಮಾ ರೋಡ್ರಿಗ್ರಸ್ ಎಂಬವರು ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡುತ್ತಾ, ನಾನು ಗೃಹಲಕ್ಷ್ಮೀ ಯೋಜನೆಯಿಂದ ಲಾಭ ಪಡೆದಿದ್ದೇನೆ. ಸಿಂಗಲ್ ಪೇರೆಂಟ್ ಆಗಿದ್ದು, ನನಗೆ ಲಂಗ್ಸ್ ಪ್ರಾಬ್ಲಮ್ ಇರುವುದರಿಂದ ಸರಿಯಾಗಿ ಕೆಲಸ ಮಾಡಲು ಸಹ ಸಾಧ್ಯವಾಗುತ್ತಿರಲಿಲ್ಲ. ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಬಂದ ಮೇಲೆ ನನ್ನ ಮಗನ ಶಾಲಾ ಶುಲ್ಕ ಕಟ್ಟಿದ್ದೇನೆ, ನನ್ನ ಮೆಡಿಸನ್​ಗೆ ಅವಶ್ಯಕವಾದ ಹಣವನ್ನು ಪಡೆದಿದ್ದೇನೆ. ನನ್ನ ಕಷ್ಟವನ್ನು ನೋಡಿ ಅಂಗನವಾಡಿ ಕಾರ್ಯಕರ್ತರು ನನಗೆ ಗೃಹಲಕ್ಷ್ಮೀ ಹಣ ಸಿಗುವ ಹಾಗೆ ಮಾಡಿದ್ದಾರೆ. ಸರ್ಕಾರ ಮಾಡಿದ ಈ ಯೋಜನೆ ನನಗೆ ಸಾಕಷ್ಟು ಉಪಯೋಗ ಮಾಡಿಕೊಟ್ಟಿದೆ ಎಂದಿದ್ದಾರೆ.

ಭದ್ರಾವತಿ ಶಾಲಿನಿಯವರು ಮಾತನಾಡ್ತಾ , ನಾನು ಭದ್ರಾವತಿಗೆ ಶಿವಮೊಗ್ಗಕ್ಕೆ ಹೌಸ್ ಕೀಪಿಂಗ್ ಕೆಲಸಕ್ಕೆ ಬರುತ್ತಿದ್ದೆ. ಪ್ರತಿ ತಿಂಗಳು ಒಂದುವರೆ ಸಾವಿರ ಖರ್ಚಾಗುತ್ತಿತ್ತು. ಇದೀಗ ಶಕ್ತಿ ಯೋಜನೆ ಬಂದಿದ್ದರಿಂದ ನನಗೆ ಈ ಹಣವನ್ನು ಮನೆಯ ಖರ್ಚಿಗೆ ಉಪಯೋಗಿಸಲು ಸಾಧ್ಯವಾಗಿದೆ ಎಂದಿದ್ದಾರೆ.

ಗ್ಯಾರಂಟಿ ಯೋಜನೆಯ ಬಗ್ಗೆ ಮಾತನಾಡಿದ ಪುತ್ತೂರಿನ ಅಸ್ಮಾ, ನನ್ನ ಪತಿ ನನ್ನನ್ನು ಬಿಟ್ಟು ಮೂರು ವರ್ಷಗಳು ಕಳೆದಿದೆ, ನನಗೆ ಇಬ್ಬರು ಸಣ್ಣ ಮಕ್ಕಳಿದ್ದಾರೆ, ಅವರನ್ನು ಸಾಕುವುದು ನನಗೆ ದೊಡ್ಡ ಸವಾಲಾಗಿತ್ತು, ಇದೀಗ ಸಿದ್ದರಾಮಯ್ಯ ಅವರ ಗ್ಯಾರಂಟಿ ಯೋಜನೆ ಬಂದ ಬಳಿಕ ನನಗೆ ಮಕ್ಕಳಿಗೆ ಅನ್ನ ಹಾಕಲು ಸಹಕಾರಿಯಾಗಿದೆ ಎಂದು ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮರಕುಂಬಿ ಗ್ರಾಮದ ವೃದ್ಧೆಯ ಮಗ ಅನಾರೋಗ್ಯದಿಂದ ನಿಧನರಾಗಿದ್ದರು. ಮಗನ ಮೃತದೇಹದ ಮುಂದೆ ಕಣ್ಣೀರು ಹಾಕಿದ ವೃದ್ಧೆ, “ಯವ್ವಾ, ನೀ ಬದುಕಾಕ ಗೃಹಲಕ್ಷ್ಮೀ ಯೋಜನೆಯ 2 ಸಾವಿರ ರೂಪಾಯಿ ಬರ್ತಾವ ಬಿಡು” ಎಂದು ಮಗ  ಸಾಯುವ ಮೊದಲು ಹೇಳಿದ್ದ ಎನ್ನುವ ವಿಚಾರವನ್ನು ಆ ತಾಯಿ ತನ್ನ ಪುತ್ರನ ಸಾವಿನ ನೋವಿನ ನಡುವೆ ನೆನಪು ಮಾಡಿಕೊಂಡು ಕಣ್ಣೀರು ಹಾಕುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋ ಸರಕಾರದ ಗ್ಯಾರಂಟಿ ಯೋಜನೆಯ ಪ್ರಯೋಜನವನ್ನು ಕಣ್ಣುತೆರೆಯುವಂತೆ ಮಾಡಿತ್ತು.

ಗ್ಯಾರಂಟಿ ಯೋಜನೆಯಲ್ಲಿ ಘೋಷಿಸಿದ್ದಂತೆ ರಾಜ್ಯದ ಜನರಿಗೆ 10ಕೆಜಿ ಉಚಿತ ಅಕ್ಕಿ ನೀಡಲು, ರಾಜ್ಯದ  ಕಾಂಗ್ರೆಸ್‌ ಸರಕಾರ ಹೆಚ್ಚುವರಿ ಅಕ್ಕಿ ವಿತರಣೆ ಬಗ್ಗೆ ಎಫ್‌ಸಿಐ ಡೆಪ್ಯುಟಿ ಮ್ಯಾನೇಜರ್ ಜೊತೆ ಚರ್ಚೆ ಮಾಡಿದ್ದರು. ಅವರು ಹೆಚ್ಚುವರಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಆದರೆ ಕೇಂದ್ರದ ಬಿಜೆಪಿ ಸರಕಾರ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ರಾಜಕೀಯ ಮಾಡಿತ್ತು. ಇದರಿಂದ ರಾಜ್ಯದ ಜನರಿಗೆ 10 ಕೆಜಿ ಅಕ್ಕಿ ಕೊಡಲು ಸಮಸ್ಯೆಯಾಗಿತ್ತು. ಇದಕ್ಕೆ ರಾಜ್ಯ ಸರಕಾರ 5 ಕೆ.ಜಿ ಅಕ್ಕಿ ಜೊತೆಗೆ 5 ಕೆಜಿ ಅಕ್ಕಿಯ ಹಣ ಜನರ ಖಾತೆಗೆ ಜಮೆ ಮಾಡುವ ನಿರ್ಧಾರವನ್ನು ತೆಗೆದುಕೊಂಡಿತ್ತು.

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಬಿಜೆಪಿಯ ನಿದ್ದೆಗೆಡಿಸಿರುವ ಜೊತೆಗೆ ಬಿಜೆಪಿಗೆ ಭಾರೀ ಹೊಡೆತವನ್ನು ನೀಡುರುವುದು ನಿಜ. ಅದಕ್ಕಾಗಿಯೇ ‘ರಾಜ್ಯದ ಖಜಾನೆ ಖಾಲಿಯಾಗುತ್ತಿದೆ, ರಾಜ್ಯ ದಿವಾಳಿಯಾಗುತ್ತಿದೆ’ ಎಂದು ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ಅಪಪ್ರಚಾರವನ್ನು ನಡೆಸಿಕೊಂಡು ಬಂದಿರುವುದನ್ನು ಗಮನಿಸಬಹುದಾಗಿದೆ. ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್‌ ಭಾರೀ ಪ್ರಮಾಣದ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ, ಬಿಜೆಪಿಯ ಸಿಎಎ, ಒಂದು ರಾಷ್ಟ್ರ, ಒಂದು ಚುನಾವಣೆಯಂತಹ ವಿಭಜನೀಯ ಕಾನೂನುಗಳು, ನೀತಿಗಳ ಭರವಸೆಗಳ ನಡುವೆ ಕಾಂಗ್ರೆಸ್‌ನ ಜನಸ್ನೇಹಿ ಯೋಜನೆಗಳು ಬಿಜೆಪಿಗೆ ದೊಡ್ಡ ಮಟ್ಟದಲ್ಲಿ ತಲೆನೋವು ಸೃಷ್ಟಿಸಿದೆ.

ಇದನ್ನು ಓದಿ: ಚುನಾವಣಾ ಬಾಂಡ್‌ ಯೋಜನೆಗೆ ಜನಸಾಮಾನ್ಯರ ತೆರಿಗೆಯ ’14 ಕೋಟಿ ರೂ.’ ವ್ಯಯಿಸಿದ್ದ ಮೋದಿ ಸರಕಾರ!

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...