Homeಮುಖಪುಟಪಶ್ಚಿಮ ಬಂಗಾಳದ ಬಾಕಿ ಹಣ ಒಂದು 1.1 ಲಕ್ಷ ಕೋಟಿ ಯಾವಾಗ ಕೊಡುತ್ತೀರಿ? ಟಿಎಂಸಿ ಪ್ರಶ್ನೆ

ಪಶ್ಚಿಮ ಬಂಗಾಳದ ಬಾಕಿ ಹಣ ಒಂದು 1.1 ಲಕ್ಷ ಕೋಟಿ ಯಾವಾಗ ಕೊಡುತ್ತೀರಿ? ಟಿಎಂಸಿ ಪ್ರಶ್ನೆ

ಆಂಫಾನ್ ಚಂಡಮಾರುತ‌ದಿಂದ ಉಂಟಾದ ಒಟ್ಟು ಹಾನಿ 1,02,000 ಕೋಟಿ ಎಂದು ಅಂದಾಜಿಸಲಾಗಿದೆ. ಕೇಂದ್ರವು 1 ಸಾವಿರ ಕೋಟಿ ಮಾತ್ರ ನೀಡಿದೆ. ಉಳಿದ ಒಂದು ಲಕ್ಷದ ಒಂದು ಸಾವಿರ ಕೋಟಿಯ ಕತೆಯೇನು? ” ಎಂದು ಡೆರೆಕ್ ಒ'ಬ್ರೇನ್ ಪ್ರಶ್ನಿಸಿದ್ದಾರೆ.

- Advertisement -
- Advertisement -

ಎಂಪಿ ಲೋಕಲ್ ಏರಿಯಾ ಡೆವಲಪ್‌ಮೆಂಟ್ ಸ್ಕೀಮ್ (ಎಂಪಿಎಲ್ಎಡಿಎಸ್) ಅನ್ನು ಎರಡು ವರ್ಷಗಳ ಕಾಲ ಸ್ಥಗಿತಗೊಳಿಸಿ, ಆ ಮೂಲಕ ಉಳಿಸಿರುವ ಹಣವನ್ನು ನೇರವಾಗಿ ವಲಸೆ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸುವಂತೆ ಕೇಂದ್ರ ಸರ್ಕಾರಕ್ಕೆ ತೃಣಮೂಲ ಕಾಂಗ್ರೆಸ್ ಒತ್ತಾಯಿಸಿದೆ. ಜೊತೆಗೆ ಪಶ್ಚಿಮ ಬಂಗಾಳಕ್ಕೆ ಬಾಕಿ ಇರುವ ಹಣವನ್ನು ಕೊಡುವಂತೆ ಕೂಡಾ ಮನವಿ ಮಾಡಿದೆ.

ಪಕ್ಷದ ರಾಷ್ಟ್ರೀಯ ವಕ್ತಾರ ಮತ್ತು ರಾಜ್ಯಸಭಾ ಸಂಸದ ಡೆರೆಕ್ ಒ’ಬ್ರಿಯೆನ್ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಪಶ್ಚಿಮ ಬಂಗಾಳಕ್ಕೆ ₹ 53 ಸಾವಿರ ಕೋಟಿ ಕೇಂದ್ರದ ಹಿಂದಿನ ಬಾಕಿ ಇದೆ. “ಕೇಂದ್ರವು ಎಂಪಿಎಲ್ಎಡಿಎಸ್ ಹಣವನ್ನು ಎರಡು ವರ್ಷಗಳ ಕಾಲ ನಿಲ್ಲಿಸಿತು, ಇದರಲ್ಲಿ ಸುಮಾರು, 8,000 ಕೋಟಿ ಉಳಿತಾಯವಾಗಿದೆ. ಅಸಂಘಟಿತ ವಲಯದ 80 ಲಕ್ಷ ಕಾರ್ಮಿಕರ ಬ್ಯಾಂಕ್ ಖಾತೆಗಳಲ್ಲಿ ತಲಾ ₹ 10,000 ಹಾಕಿ”ಎಂದು ಅವರು ಹೇಳಿದ್ದಾರೆ.

ಆಂಫಾನ್ ಚಂಡಮಾರುತ‌ದಿಂದ ಉಂಟಾದ ಒಟ್ಟು ಹಾನಿ 1,02,000 ಕೋಟಿ ಎಂದು ಅಂದಾಜಿಸಲಾಗಿದೆ. ಕೇಂದ್ರವು 1 ಸಾವಿರ ಕೋಟಿ ಮಾತ್ರ ನೀಡಿದೆ. ಉಳಿದ ಒಂದು ಲಕ್ಷದ ಒಂದು ಸಾವಿರ ಕೋಟಿಯ ಕತೆಯೇನು? ” ಎಂದು ಡೆರೆಕ್ ಒ’ಬ್ರೇನ್ ಪ್ರಶ್ನಿಸಿದ್ದಾರೆ.

“ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ರಾಜ್ಯವು 1,200 ಕೋಟಿ ಖರ್ಚು ಮಾಡಿದೆ. ಕೇಂದ್ರವು ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ 144 ಕೋಟಿ ಮತ್ತು 250 ಕೋಟಿ ಎಸ್‌ಡಿಆರ್‌ಎಫ್ ಅಡಿಯಲ್ಲಿ ನೀಡಿದೆ. ಉಳಿದ ₹ 806 ಕೋಟಿ ಬಗ್ಗೆ ಏನು? ” ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಕೇಂದ್ರವು ಘೋಷಿಸಿದ ಆರ್ಥಿಕ ಉತ್ತೇಜಕ ಪ್ಯಾಕೇಜ್ “ಖಾಲಿ” ಹಾಗೂ ಸುಧಾರಣೆಗಳು “ಟೊಳ್ಳು” ಎಂದು ಆರೋಪಿಸಿದ ಅವರು, ಹಣಕಾಸಿನ ಜವಾಬ್ದಾರಿ ಮತ್ತು ಬಜೆಟ್ ನಿರ್ವಹಣೆ (ಎಫ್‌ಆರ್‌ಬಿಎಂ) ಮಿತಿಯನ್ನು ಶೇಕಡಾ 3 ರಿಂದ 5 ಕ್ಕೆ ಏರಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದು ತಪ್ಪಾಗಿದೆ ಎಂದು ಹೇಳಿದ್ದಾರೆ.

ಕೇಂದ್ರ ಘೋಷಿಸಿದ ಪ್ಯಾಕೇಜ್‌ನಲ್ಲಿ ಅಸಂಘಟಿತ ವಲಯಕ್ಕೆ ಯಾವುದೇ ನೆರವು ನೀಡಿಲ್ಲ ಎಂದು ಒ’ಬ್ರೇನ್ ಆರೋಪಿಸಿದ್ದಾರೆ.


ಓದಿ: ‌ಮೋದಿಯ ಪಶ್ಚಿಮ ಬಂಗಾಳ ಪ್ರವಾಸದ ವೇಳೆ ’ಚೌಕಿದಾರ್‌ ಚೋರ್’‌ ಘೋಷಣೆ ಕೂಗಲಾಗಿದೆಯೇ?; ಫ್ಯಾಕ್ಟ್ ಚೆಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...