Homeಮುಖಪುಟಒಬಿಸಿ ಕೆನೆಪದರ ಸಮಸ್ಯೆಯಿಂದ ಯುಪಿಎಸ್‌ಸಿ ಅಭ್ಯರ್ಥಿಗಳಿಗೆ ಅನ್ಯಾಯ : ಸಂಸದ ಮಾಣಿಕ್ಕಂ ಟ್ಯಾಗೋರ್

ಒಬಿಸಿ ಕೆನೆಪದರ ಸಮಸ್ಯೆಯಿಂದ ಯುಪಿಎಸ್‌ಸಿ ಅಭ್ಯರ್ಥಿಗಳಿಗೆ ಅನ್ಯಾಯ : ಸಂಸದ ಮಾಣಿಕ್ಕಂ ಟ್ಯಾಗೋರ್

- Advertisement -
- Advertisement -

ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಸಮಿತಿಯ (ಒಬಿಸಿ) ಸಭೆಯಲ್ಲಿ ಕಾಂಗ್ರೆಸ್ ನಾಯಕ ಮಾಣಿಕ್ಕಂ ಟ್ಯಾಗೋರ್ ಸೇರಿದಂತೆ ಕೆಲವು ವಿರೋಧ ಪಕ್ಷದ ಸದಸ್ಯರು, ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದರೂ ನಾಗರಿಕ ಸೇವೆಗಳಿಗೆ ಸೇರುವಾಗ ಕೆನೆಪದರ ಮಿತಿ ಪರಿಶೀಲಿಸುವಲ್ಲಿ ಒಬಿಸಿ ಅಭ್ಯರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಧ್ವನಿ ಎತ್ತಿದ್ದಾರೆ.

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಅಧಿಕಾರಿಗಳು ‘ಒಬಿಸಿಗಳ ಕಲ್ಯಾಣಕ್ಕಾಗಿ ವಿವಿಧ ಕ್ರಮಗಳು ಮತ್ತು ಯೋಜನೆಗಳ ಅನುಷ್ಠಾನ’ ವಿಷಯದ ಕುರಿತು ವಿವರಿಸುತ್ತಿದ್ದಾಗ ಸಂಸದರು ಈ ಕುರಿತು ಪ್ರಸ್ತಾಪಿಸಿದ್ದಾರೆ ಎಂದು ವರದಿಯಾಗಿದೆ.

ಸಂಸದರಾದ ಮಾಣಿಕ್ಕಂ ಟ್ಯಾಗೋರ್, ಡಿಎಂಕೆಯ ಟಿಆರ್ ಬಾಲು ಮತ್ತು ಸಮಾಜವಾದಿ ಪಕ್ಷದ ರಾಮಶಂಕರ್ ರಾಜ್‌ಭರ್ ಅವರು, 2023 ರ ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಸೇವೆಗೆ ಸೇರುವಾಗ ಕೆನೆ ಪದರವನ್ನು ತಡೆಯಾಗಿ ಬಳಕೆಯಾಗುತ್ತಿರುವ ಬಗ್ಗೆ ಪ್ರಶ್ನಿಸಿದ್ದಾರೆ.

ಈ ವರ್ಷದ ಸೆಪ್ಟೆಂಬರ್‌ನಲ್ಲಿ, ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾದ ಒಬಿಸಿ ವರ್ಗದ ಅನೇಕ ಅರ್ಹ ಅಭ್ಯರ್ಥಿಗಳ ಮೇಲೆ ಪರಿಣಾಮ ಬೀರುವ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲು ಮಾಣಿಕ್ಕಂ ಟ್ಯಾಗೋರ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು.

ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಒಬಿಸಿ ನಾನ್-ಕ್ರೀಮಿ ಲೇಯರ್ (ಎನ್‌ಸಿಎಲ್) ಸ್ಥಿತಿಯ ಪರಿಶೀಲನೆಗೆ ಸಂಬಂಧಿಸಿದ ಪ್ರಕ್ರಿಯೆಯಲ್ಲಿ ಗಮನಾರ್ಹ ಅಡೆತಡೆಗಳನ್ನು ಎದುರಿಸುತ್ತಿದ್ದಾರೆ. ಇದು ಅವರ ಗೊತ್ತುಪಡಿಸಿದ ಸೇವೆಗಳಿಗೆ ಸೇರುವುದನ್ನು ತಡೆಯುತ್ತಿದೆ ಎಂದು ಟ್ಯಾಗೋರ್ ಪತ್ರದಲ್ಲಿ ತಿಳಿಸಿದ್ದರು.

ತಮ್ಮ ಪತ್ರದಲ್ಲಿ, ಅಭ್ಯರ್ಥಿಗಳ ಪೋಷಕರ ವರ್ಗ III/IV ಎಂಬುವುದನ್ನು ದೃಢೀಕರಿಸಲು ರಾಜ್ಯ ಸರ್ಕಾರಗಳು ನೀಡಿದ ಸಮಾನತೆಯ ಪ್ರಮಾಣಪತ್ರಗಳನ್ನು ತಿರಸ್ಕರಿಸುವುದರ ಸುತ್ತ ಉದ್ಬವಿಸಿರುವ ಒಟ್ಟು ಸಮಸ್ಯೆಯ ಕುರಿತು ಟ್ಯಾಗೋರ್ ಗಮನ ಸೆಳೆದಿದ್ದರು.

ಕಳೆದ ಕೆಲ ತಿಂಗಳ ಹಿಂದೆ 2022ರ ಬ್ಯಾಚ್‌ನ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ಒಬಿಸಿ ಎನ್‌ಸಿಎಲ್‌ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಒಬಿಸಿ ಕೋಟಾ ನಿಯಂತ್ರಣ ನಿಯಮದ ಸಮಸ್ಯೆ ಉಂಟಾಗಿತ್ತು.

“ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಹೊರಡಿಸಿದ 1993ರ ಕಚೇರಿ ಜ್ಞಾಪಕ ಪತ್ರವು ಒಬಿಸಿ-ಎನ್‌ಸಿಎಲ್ ವರ್ಗೀಕರಣಕ್ಕೆ ಮಾರ್ಗಸೂಚಿಗಳನ್ನು ನೀಡಿದೆ. ಅದರಲ್ಲಿ ರಾಜ್ಯ ನೀಡಿದ ಪ್ರಮಾಣಪತ್ರಗಳನ್ನು ತಿರಸ್ಕರಿಸುವುದನ್ನು ಕಡ್ಡಾಯಗೊಳಿಸುವ ಯಾವುದೇ ಸ್ಪಷ್ಟ ಷರತ್ತುಗಳು ಇಲ್ಲ. ಆದರೂ, ಪ್ರಾಯೋಗಿಕವಾಗಿ ಈ ಪ್ರಮಾಣಪತ್ರಗಳನ್ನು ಅಧಿಕಾರಿಗಳು ತಿರಸ್ಕರಿಸುತ್ತಿದ್ದಾರೆ. ಇದರಿಂದ ಅನೇಕ ಒಬಿಸಿ ಅಭ್ಯರ್ಥಿಗಳು ಅನ್ಯಾಯವಾಗಿ ಅನರ್ಹರಾಗುತ್ತಿದ್ದಾರೆ” ಎಂದು ಮಾಣಿಕ್ಕಂ ಟ್ಯಾಗೋರ್ ತನ್ನ ಪತ್ರದಲ್ಲಿ ವಿವರಿಸಿದ್ದಾರೆ.

ಸಂಬಳ ಮತ್ತು ಕೃಷಿ ಆದಾಯವನ್ನು ಕೆನೆಪದರ ಮಿತಿಗೆ ಪರಿಗಣಿಸಿರುವುದು ಅಸಮಂಜಸ. ಇದು ಸಾರ್ವಜನಿಕ ವಲಯದ ಉದ್ಯಮಗಳು, ಸಾರ್ವಜನಿಕ ವಲಯದ ಬ್ಯಾಂಕುಗಳು ಮತ್ತು ಇತರ ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಪೋಷಕರು ಉದ್ಯೋಗದಲ್ಲಿರುವ ಅಭ್ಯರ್ಥಿಗಳ ಮೇಲೆ ಅಸಾಮಾನವಾಗಿ ಪರಿಣಾಮ ಬೀರುತ್ತಿದೆ ಎಂದು ಟ್ಯಾಗೋರ್ ಹೇಳಿದ್ದಾರೆ.

ಪೋಷಕರು ಸಾರ್ವಜನಿಕ ವಲಯದಲ್ಲಿ ಮಾಡುವ ಅಭ್ಯರ್ಥಿಗಳಿಗೆ ಒಬಿಸಿ-ಎನ್‌ಸಿಎಲ್ ಸ್ಥಾನಮಾನಕ್ಕೆ ಆದಾಯ ಮಾನದಂಡಗಳ ಏಕರೂಪದ ವ್ಯಾಖ್ಯಾನವನ್ನು ಜಾರಿಗೊಳಿಸಲು, ಪಾಲಕರು III/IV ವರ್ಗದವರು ಎಂದು ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ ನೀಡುವ ಸಮಾನತೆಯ ಪ್ರಮಾಣಪತ್ರಗಳ ಸ್ವೀಕಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಅಂತರ್ಗತ ನೀತಿಯನ್ನು ರೂಪಿಸಬೇಕು. ಸಾರ್ವಜನಿಕ ವಲಯದ ಸಂಸ್ಥೆಗಳನ್ನು ಸಮಾನವಾಗಿ ಪರಿಗಣಿಸಬೇಕು. ಸೇವಾ ಹಂಚಿಕೆ ಮತ್ತು ಒಬಿಸಿ ಪರಿಶೀಲನಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಸುಧಾರಿಸಬೇಕು ಎಂದು ಟ್ಯಾಗೋರ್ ಒತ್ತಾಯಿಸಿದ್ದಾರೆ.

ಬುಧವಾರದ ಈ ಕುರಿತು ಎಕ್ಸ್ ಪೋಸ್ಟ್‌ ಹಾಕಿದ್ದ ಟ್ಯೋಗೋರ್ “ಮೋದಿಯವರು 2017 ರಿಂದ ಒಬಿಸಿ ಕೆನೆಪದರ ಆದಾಯದ ಮಿತಿಯನ್ನು ಏಕೆ ಹೆಚ್ಚಿಸಿಲ್ಲ? ಹಣದುಬ್ಬರ ಮತ್ತು ಬದಲಾಗುತ್ತಿರುವ ಆರ್ಥಿಕ ವಾಸ್ತವಗಳನ್ನು ಸರಿದೂಗಿಸಿಕೊಳ್ಳಲು ಬದಲಾವಣೆಗಳನ್ನು ತರದೆ ಏಳು ವರ್ಷಗಳು ಕಳೆಯಿತು. ಒಬಿಸಿಗಳಿಗೆ ದ್ರೋಹ ಮಾಡುತ್ತಿರುವವರು ಯಾರು? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ | ಪ್ರಯಾಗರಾಜ್‌: ಬ್ಯಾರಿಕೇಡ್‌ ಮುರಿದ ಪ್ರತಿಭಟನಾನಿರತ ಯುಪಿಪಿಎಸ್‌ಸಿ ಆಕಾಂಕ್ಷಿಗಳು; ‘ಅಪರಾಧಿಗಳು ನುಸುಳಿದ್ದಾರೆ’ ಎಂದು ಆರೋಪಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...