Homeಮುಖಪುಟಒಬಿಸಿ ಕೆನೆಪದರ ಸಮಸ್ಯೆಯಿಂದ ಯುಪಿಎಸ್‌ಸಿ ಅಭ್ಯರ್ಥಿಗಳಿಗೆ ಅನ್ಯಾಯ : ಸಂಸದ ಮಾಣಿಕ್ಕಂ ಟ್ಯಾಗೋರ್

ಒಬಿಸಿ ಕೆನೆಪದರ ಸಮಸ್ಯೆಯಿಂದ ಯುಪಿಎಸ್‌ಸಿ ಅಭ್ಯರ್ಥಿಗಳಿಗೆ ಅನ್ಯಾಯ : ಸಂಸದ ಮಾಣಿಕ್ಕಂ ಟ್ಯಾಗೋರ್

- Advertisement -
- Advertisement -

ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಸಮಿತಿಯ (ಒಬಿಸಿ) ಸಭೆಯಲ್ಲಿ ಕಾಂಗ್ರೆಸ್ ನಾಯಕ ಮಾಣಿಕ್ಕಂ ಟ್ಯಾಗೋರ್ ಸೇರಿದಂತೆ ಕೆಲವು ವಿರೋಧ ಪಕ್ಷದ ಸದಸ್ಯರು, ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದರೂ ನಾಗರಿಕ ಸೇವೆಗಳಿಗೆ ಸೇರುವಾಗ ಕೆನೆಪದರ ಮಿತಿ ಪರಿಶೀಲಿಸುವಲ್ಲಿ ಒಬಿಸಿ ಅಭ್ಯರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಧ್ವನಿ ಎತ್ತಿದ್ದಾರೆ.

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಅಧಿಕಾರಿಗಳು ‘ಒಬಿಸಿಗಳ ಕಲ್ಯಾಣಕ್ಕಾಗಿ ವಿವಿಧ ಕ್ರಮಗಳು ಮತ್ತು ಯೋಜನೆಗಳ ಅನುಷ್ಠಾನ’ ವಿಷಯದ ಕುರಿತು ವಿವರಿಸುತ್ತಿದ್ದಾಗ ಸಂಸದರು ಈ ಕುರಿತು ಪ್ರಸ್ತಾಪಿಸಿದ್ದಾರೆ ಎಂದು ವರದಿಯಾಗಿದೆ.

ಸಂಸದರಾದ ಮಾಣಿಕ್ಕಂ ಟ್ಯಾಗೋರ್, ಡಿಎಂಕೆಯ ಟಿಆರ್ ಬಾಲು ಮತ್ತು ಸಮಾಜವಾದಿ ಪಕ್ಷದ ರಾಮಶಂಕರ್ ರಾಜ್‌ಭರ್ ಅವರು, 2023 ರ ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಸೇವೆಗೆ ಸೇರುವಾಗ ಕೆನೆ ಪದರವನ್ನು ತಡೆಯಾಗಿ ಬಳಕೆಯಾಗುತ್ತಿರುವ ಬಗ್ಗೆ ಪ್ರಶ್ನಿಸಿದ್ದಾರೆ.

ಈ ವರ್ಷದ ಸೆಪ್ಟೆಂಬರ್‌ನಲ್ಲಿ, ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾದ ಒಬಿಸಿ ವರ್ಗದ ಅನೇಕ ಅರ್ಹ ಅಭ್ಯರ್ಥಿಗಳ ಮೇಲೆ ಪರಿಣಾಮ ಬೀರುವ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲು ಮಾಣಿಕ್ಕಂ ಟ್ಯಾಗೋರ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು.

ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಒಬಿಸಿ ನಾನ್-ಕ್ರೀಮಿ ಲೇಯರ್ (ಎನ್‌ಸಿಎಲ್) ಸ್ಥಿತಿಯ ಪರಿಶೀಲನೆಗೆ ಸಂಬಂಧಿಸಿದ ಪ್ರಕ್ರಿಯೆಯಲ್ಲಿ ಗಮನಾರ್ಹ ಅಡೆತಡೆಗಳನ್ನು ಎದುರಿಸುತ್ತಿದ್ದಾರೆ. ಇದು ಅವರ ಗೊತ್ತುಪಡಿಸಿದ ಸೇವೆಗಳಿಗೆ ಸೇರುವುದನ್ನು ತಡೆಯುತ್ತಿದೆ ಎಂದು ಟ್ಯಾಗೋರ್ ಪತ್ರದಲ್ಲಿ ತಿಳಿಸಿದ್ದರು.

ತಮ್ಮ ಪತ್ರದಲ್ಲಿ, ಅಭ್ಯರ್ಥಿಗಳ ಪೋಷಕರ ವರ್ಗ III/IV ಎಂಬುವುದನ್ನು ದೃಢೀಕರಿಸಲು ರಾಜ್ಯ ಸರ್ಕಾರಗಳು ನೀಡಿದ ಸಮಾನತೆಯ ಪ್ರಮಾಣಪತ್ರಗಳನ್ನು ತಿರಸ್ಕರಿಸುವುದರ ಸುತ್ತ ಉದ್ಬವಿಸಿರುವ ಒಟ್ಟು ಸಮಸ್ಯೆಯ ಕುರಿತು ಟ್ಯಾಗೋರ್ ಗಮನ ಸೆಳೆದಿದ್ದರು.

ಕಳೆದ ಕೆಲ ತಿಂಗಳ ಹಿಂದೆ 2022ರ ಬ್ಯಾಚ್‌ನ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ಒಬಿಸಿ ಎನ್‌ಸಿಎಲ್‌ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಒಬಿಸಿ ಕೋಟಾ ನಿಯಂತ್ರಣ ನಿಯಮದ ಸಮಸ್ಯೆ ಉಂಟಾಗಿತ್ತು.

“ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಹೊರಡಿಸಿದ 1993ರ ಕಚೇರಿ ಜ್ಞಾಪಕ ಪತ್ರವು ಒಬಿಸಿ-ಎನ್‌ಸಿಎಲ್ ವರ್ಗೀಕರಣಕ್ಕೆ ಮಾರ್ಗಸೂಚಿಗಳನ್ನು ನೀಡಿದೆ. ಅದರಲ್ಲಿ ರಾಜ್ಯ ನೀಡಿದ ಪ್ರಮಾಣಪತ್ರಗಳನ್ನು ತಿರಸ್ಕರಿಸುವುದನ್ನು ಕಡ್ಡಾಯಗೊಳಿಸುವ ಯಾವುದೇ ಸ್ಪಷ್ಟ ಷರತ್ತುಗಳು ಇಲ್ಲ. ಆದರೂ, ಪ್ರಾಯೋಗಿಕವಾಗಿ ಈ ಪ್ರಮಾಣಪತ್ರಗಳನ್ನು ಅಧಿಕಾರಿಗಳು ತಿರಸ್ಕರಿಸುತ್ತಿದ್ದಾರೆ. ಇದರಿಂದ ಅನೇಕ ಒಬಿಸಿ ಅಭ್ಯರ್ಥಿಗಳು ಅನ್ಯಾಯವಾಗಿ ಅನರ್ಹರಾಗುತ್ತಿದ್ದಾರೆ” ಎಂದು ಮಾಣಿಕ್ಕಂ ಟ್ಯಾಗೋರ್ ತನ್ನ ಪತ್ರದಲ್ಲಿ ವಿವರಿಸಿದ್ದಾರೆ.

ಸಂಬಳ ಮತ್ತು ಕೃಷಿ ಆದಾಯವನ್ನು ಕೆನೆಪದರ ಮಿತಿಗೆ ಪರಿಗಣಿಸಿರುವುದು ಅಸಮಂಜಸ. ಇದು ಸಾರ್ವಜನಿಕ ವಲಯದ ಉದ್ಯಮಗಳು, ಸಾರ್ವಜನಿಕ ವಲಯದ ಬ್ಯಾಂಕುಗಳು ಮತ್ತು ಇತರ ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಪೋಷಕರು ಉದ್ಯೋಗದಲ್ಲಿರುವ ಅಭ್ಯರ್ಥಿಗಳ ಮೇಲೆ ಅಸಾಮಾನವಾಗಿ ಪರಿಣಾಮ ಬೀರುತ್ತಿದೆ ಎಂದು ಟ್ಯಾಗೋರ್ ಹೇಳಿದ್ದಾರೆ.

ಪೋಷಕರು ಸಾರ್ವಜನಿಕ ವಲಯದಲ್ಲಿ ಮಾಡುವ ಅಭ್ಯರ್ಥಿಗಳಿಗೆ ಒಬಿಸಿ-ಎನ್‌ಸಿಎಲ್ ಸ್ಥಾನಮಾನಕ್ಕೆ ಆದಾಯ ಮಾನದಂಡಗಳ ಏಕರೂಪದ ವ್ಯಾಖ್ಯಾನವನ್ನು ಜಾರಿಗೊಳಿಸಲು, ಪಾಲಕರು III/IV ವರ್ಗದವರು ಎಂದು ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ ನೀಡುವ ಸಮಾನತೆಯ ಪ್ರಮಾಣಪತ್ರಗಳ ಸ್ವೀಕಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಅಂತರ್ಗತ ನೀತಿಯನ್ನು ರೂಪಿಸಬೇಕು. ಸಾರ್ವಜನಿಕ ವಲಯದ ಸಂಸ್ಥೆಗಳನ್ನು ಸಮಾನವಾಗಿ ಪರಿಗಣಿಸಬೇಕು. ಸೇವಾ ಹಂಚಿಕೆ ಮತ್ತು ಒಬಿಸಿ ಪರಿಶೀಲನಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಸುಧಾರಿಸಬೇಕು ಎಂದು ಟ್ಯಾಗೋರ್ ಒತ್ತಾಯಿಸಿದ್ದಾರೆ.

ಬುಧವಾರದ ಈ ಕುರಿತು ಎಕ್ಸ್ ಪೋಸ್ಟ್‌ ಹಾಕಿದ್ದ ಟ್ಯೋಗೋರ್ “ಮೋದಿಯವರು 2017 ರಿಂದ ಒಬಿಸಿ ಕೆನೆಪದರ ಆದಾಯದ ಮಿತಿಯನ್ನು ಏಕೆ ಹೆಚ್ಚಿಸಿಲ್ಲ? ಹಣದುಬ್ಬರ ಮತ್ತು ಬದಲಾಗುತ್ತಿರುವ ಆರ್ಥಿಕ ವಾಸ್ತವಗಳನ್ನು ಸರಿದೂಗಿಸಿಕೊಳ್ಳಲು ಬದಲಾವಣೆಗಳನ್ನು ತರದೆ ಏಳು ವರ್ಷಗಳು ಕಳೆಯಿತು. ಒಬಿಸಿಗಳಿಗೆ ದ್ರೋಹ ಮಾಡುತ್ತಿರುವವರು ಯಾರು? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ | ಪ್ರಯಾಗರಾಜ್‌: ಬ್ಯಾರಿಕೇಡ್‌ ಮುರಿದ ಪ್ರತಿಭಟನಾನಿರತ ಯುಪಿಪಿಎಸ್‌ಸಿ ಆಕಾಂಕ್ಷಿಗಳು; ‘ಅಪರಾಧಿಗಳು ನುಸುಳಿದ್ದಾರೆ’ ಎಂದು ಆರೋಪಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...