Homeಮುಖಪುಟಒಬಿಸಿ ಕೆನೆಪದರ ಸಮಸ್ಯೆಯಿಂದ ಯುಪಿಎಸ್‌ಸಿ ಅಭ್ಯರ್ಥಿಗಳಿಗೆ ಅನ್ಯಾಯ : ಸಂಸದ ಮಾಣಿಕ್ಕಂ ಟ್ಯಾಗೋರ್

ಒಬಿಸಿ ಕೆನೆಪದರ ಸಮಸ್ಯೆಯಿಂದ ಯುಪಿಎಸ್‌ಸಿ ಅಭ್ಯರ್ಥಿಗಳಿಗೆ ಅನ್ಯಾಯ : ಸಂಸದ ಮಾಣಿಕ್ಕಂ ಟ್ಯಾಗೋರ್

- Advertisement -
- Advertisement -

ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಸಮಿತಿಯ (ಒಬಿಸಿ) ಸಭೆಯಲ್ಲಿ ಕಾಂಗ್ರೆಸ್ ನಾಯಕ ಮಾಣಿಕ್ಕಂ ಟ್ಯಾಗೋರ್ ಸೇರಿದಂತೆ ಕೆಲವು ವಿರೋಧ ಪಕ್ಷದ ಸದಸ್ಯರು, ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದರೂ ನಾಗರಿಕ ಸೇವೆಗಳಿಗೆ ಸೇರುವಾಗ ಕೆನೆಪದರ ಮಿತಿ ಪರಿಶೀಲಿಸುವಲ್ಲಿ ಒಬಿಸಿ ಅಭ್ಯರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಧ್ವನಿ ಎತ್ತಿದ್ದಾರೆ.

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಅಧಿಕಾರಿಗಳು ‘ಒಬಿಸಿಗಳ ಕಲ್ಯಾಣಕ್ಕಾಗಿ ವಿವಿಧ ಕ್ರಮಗಳು ಮತ್ತು ಯೋಜನೆಗಳ ಅನುಷ್ಠಾನ’ ವಿಷಯದ ಕುರಿತು ವಿವರಿಸುತ್ತಿದ್ದಾಗ ಸಂಸದರು ಈ ಕುರಿತು ಪ್ರಸ್ತಾಪಿಸಿದ್ದಾರೆ ಎಂದು ವರದಿಯಾಗಿದೆ.

ಸಂಸದರಾದ ಮಾಣಿಕ್ಕಂ ಟ್ಯಾಗೋರ್, ಡಿಎಂಕೆಯ ಟಿಆರ್ ಬಾಲು ಮತ್ತು ಸಮಾಜವಾದಿ ಪಕ್ಷದ ರಾಮಶಂಕರ್ ರಾಜ್‌ಭರ್ ಅವರು, 2023 ರ ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಸೇವೆಗೆ ಸೇರುವಾಗ ಕೆನೆ ಪದರವನ್ನು ತಡೆಯಾಗಿ ಬಳಕೆಯಾಗುತ್ತಿರುವ ಬಗ್ಗೆ ಪ್ರಶ್ನಿಸಿದ್ದಾರೆ.

ಈ ವರ್ಷದ ಸೆಪ್ಟೆಂಬರ್‌ನಲ್ಲಿ, ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾದ ಒಬಿಸಿ ವರ್ಗದ ಅನೇಕ ಅರ್ಹ ಅಭ್ಯರ್ಥಿಗಳ ಮೇಲೆ ಪರಿಣಾಮ ಬೀರುವ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲು ಮಾಣಿಕ್ಕಂ ಟ್ಯಾಗೋರ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು.

ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಒಬಿಸಿ ನಾನ್-ಕ್ರೀಮಿ ಲೇಯರ್ (ಎನ್‌ಸಿಎಲ್) ಸ್ಥಿತಿಯ ಪರಿಶೀಲನೆಗೆ ಸಂಬಂಧಿಸಿದ ಪ್ರಕ್ರಿಯೆಯಲ್ಲಿ ಗಮನಾರ್ಹ ಅಡೆತಡೆಗಳನ್ನು ಎದುರಿಸುತ್ತಿದ್ದಾರೆ. ಇದು ಅವರ ಗೊತ್ತುಪಡಿಸಿದ ಸೇವೆಗಳಿಗೆ ಸೇರುವುದನ್ನು ತಡೆಯುತ್ತಿದೆ ಎಂದು ಟ್ಯಾಗೋರ್ ಪತ್ರದಲ್ಲಿ ತಿಳಿಸಿದ್ದರು.

ತಮ್ಮ ಪತ್ರದಲ್ಲಿ, ಅಭ್ಯರ್ಥಿಗಳ ಪೋಷಕರ ವರ್ಗ III/IV ಎಂಬುವುದನ್ನು ದೃಢೀಕರಿಸಲು ರಾಜ್ಯ ಸರ್ಕಾರಗಳು ನೀಡಿದ ಸಮಾನತೆಯ ಪ್ರಮಾಣಪತ್ರಗಳನ್ನು ತಿರಸ್ಕರಿಸುವುದರ ಸುತ್ತ ಉದ್ಬವಿಸಿರುವ ಒಟ್ಟು ಸಮಸ್ಯೆಯ ಕುರಿತು ಟ್ಯಾಗೋರ್ ಗಮನ ಸೆಳೆದಿದ್ದರು.

ಕಳೆದ ಕೆಲ ತಿಂಗಳ ಹಿಂದೆ 2022ರ ಬ್ಯಾಚ್‌ನ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ಒಬಿಸಿ ಎನ್‌ಸಿಎಲ್‌ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಒಬಿಸಿ ಕೋಟಾ ನಿಯಂತ್ರಣ ನಿಯಮದ ಸಮಸ್ಯೆ ಉಂಟಾಗಿತ್ತು.

“ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಹೊರಡಿಸಿದ 1993ರ ಕಚೇರಿ ಜ್ಞಾಪಕ ಪತ್ರವು ಒಬಿಸಿ-ಎನ್‌ಸಿಎಲ್ ವರ್ಗೀಕರಣಕ್ಕೆ ಮಾರ್ಗಸೂಚಿಗಳನ್ನು ನೀಡಿದೆ. ಅದರಲ್ಲಿ ರಾಜ್ಯ ನೀಡಿದ ಪ್ರಮಾಣಪತ್ರಗಳನ್ನು ತಿರಸ್ಕರಿಸುವುದನ್ನು ಕಡ್ಡಾಯಗೊಳಿಸುವ ಯಾವುದೇ ಸ್ಪಷ್ಟ ಷರತ್ತುಗಳು ಇಲ್ಲ. ಆದರೂ, ಪ್ರಾಯೋಗಿಕವಾಗಿ ಈ ಪ್ರಮಾಣಪತ್ರಗಳನ್ನು ಅಧಿಕಾರಿಗಳು ತಿರಸ್ಕರಿಸುತ್ತಿದ್ದಾರೆ. ಇದರಿಂದ ಅನೇಕ ಒಬಿಸಿ ಅಭ್ಯರ್ಥಿಗಳು ಅನ್ಯಾಯವಾಗಿ ಅನರ್ಹರಾಗುತ್ತಿದ್ದಾರೆ” ಎಂದು ಮಾಣಿಕ್ಕಂ ಟ್ಯಾಗೋರ್ ತನ್ನ ಪತ್ರದಲ್ಲಿ ವಿವರಿಸಿದ್ದಾರೆ.

ಸಂಬಳ ಮತ್ತು ಕೃಷಿ ಆದಾಯವನ್ನು ಕೆನೆಪದರ ಮಿತಿಗೆ ಪರಿಗಣಿಸಿರುವುದು ಅಸಮಂಜಸ. ಇದು ಸಾರ್ವಜನಿಕ ವಲಯದ ಉದ್ಯಮಗಳು, ಸಾರ್ವಜನಿಕ ವಲಯದ ಬ್ಯಾಂಕುಗಳು ಮತ್ತು ಇತರ ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಪೋಷಕರು ಉದ್ಯೋಗದಲ್ಲಿರುವ ಅಭ್ಯರ್ಥಿಗಳ ಮೇಲೆ ಅಸಾಮಾನವಾಗಿ ಪರಿಣಾಮ ಬೀರುತ್ತಿದೆ ಎಂದು ಟ್ಯಾಗೋರ್ ಹೇಳಿದ್ದಾರೆ.

ಪೋಷಕರು ಸಾರ್ವಜನಿಕ ವಲಯದಲ್ಲಿ ಮಾಡುವ ಅಭ್ಯರ್ಥಿಗಳಿಗೆ ಒಬಿಸಿ-ಎನ್‌ಸಿಎಲ್ ಸ್ಥಾನಮಾನಕ್ಕೆ ಆದಾಯ ಮಾನದಂಡಗಳ ಏಕರೂಪದ ವ್ಯಾಖ್ಯಾನವನ್ನು ಜಾರಿಗೊಳಿಸಲು, ಪಾಲಕರು III/IV ವರ್ಗದವರು ಎಂದು ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ ನೀಡುವ ಸಮಾನತೆಯ ಪ್ರಮಾಣಪತ್ರಗಳ ಸ್ವೀಕಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಅಂತರ್ಗತ ನೀತಿಯನ್ನು ರೂಪಿಸಬೇಕು. ಸಾರ್ವಜನಿಕ ವಲಯದ ಸಂಸ್ಥೆಗಳನ್ನು ಸಮಾನವಾಗಿ ಪರಿಗಣಿಸಬೇಕು. ಸೇವಾ ಹಂಚಿಕೆ ಮತ್ತು ಒಬಿಸಿ ಪರಿಶೀಲನಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಸುಧಾರಿಸಬೇಕು ಎಂದು ಟ್ಯಾಗೋರ್ ಒತ್ತಾಯಿಸಿದ್ದಾರೆ.

ಬುಧವಾರದ ಈ ಕುರಿತು ಎಕ್ಸ್ ಪೋಸ್ಟ್‌ ಹಾಕಿದ್ದ ಟ್ಯೋಗೋರ್ “ಮೋದಿಯವರು 2017 ರಿಂದ ಒಬಿಸಿ ಕೆನೆಪದರ ಆದಾಯದ ಮಿತಿಯನ್ನು ಏಕೆ ಹೆಚ್ಚಿಸಿಲ್ಲ? ಹಣದುಬ್ಬರ ಮತ್ತು ಬದಲಾಗುತ್ತಿರುವ ಆರ್ಥಿಕ ವಾಸ್ತವಗಳನ್ನು ಸರಿದೂಗಿಸಿಕೊಳ್ಳಲು ಬದಲಾವಣೆಗಳನ್ನು ತರದೆ ಏಳು ವರ್ಷಗಳು ಕಳೆಯಿತು. ಒಬಿಸಿಗಳಿಗೆ ದ್ರೋಹ ಮಾಡುತ್ತಿರುವವರು ಯಾರು? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ | ಪ್ರಯಾಗರಾಜ್‌: ಬ್ಯಾರಿಕೇಡ್‌ ಮುರಿದ ಪ್ರತಿಭಟನಾನಿರತ ಯುಪಿಪಿಎಸ್‌ಸಿ ಆಕಾಂಕ್ಷಿಗಳು; ‘ಅಪರಾಧಿಗಳು ನುಸುಳಿದ್ದಾರೆ’ ಎಂದು ಆರೋಪಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...