Homeಮುಖಪುಟಹಿಂದೂ-ಮುಸ್ಲಿಂ ಕ್ರಿಶ್ಚಿಯನ್ ಯಾರೇ ಆಗಿರಲಿ, ಯಾವ ತಂದೆ ತಾಯಿಗೂ ನಮಗೆ ಬಂದ ಕಷ್ಟ ಬಾರದಿರಲಿ -...

ಹಿಂದೂ-ಮುಸ್ಲಿಂ ಕ್ರಿಶ್ಚಿಯನ್ ಯಾರೇ ಆಗಿರಲಿ, ಯಾವ ತಂದೆ ತಾಯಿಗೂ ನಮಗೆ ಬಂದ ಕಷ್ಟ ಬಾರದಿರಲಿ – ಫಾಝಿಲ್ ತಂದೆಯ ಮಾತುಗಳು

- Advertisement -
- Advertisement -

ಅವನು ಡ್ರೈವರ್ ಅಲ್ಲ, ನಾನು ಮಾತ್ರ ಡ್ರೈವರ್. ಮತ್ತೆ ನಿನ್ನೆ ಅವರ ಹುಟ್ಟಿದ ಹಬ್ಬ ಇರಲಿಲ್ಲ. ಅವನ ಹುಟ್ಟಿದ್ದು ನವೆಂಬರ್ 03ರಂದು. ನೀವು ಚಾನೆಲ್‌ನವರು ನಿಮಗೆ ಬೇಕಾದ ಒಂದೊಂದೇ ನ್ಯೂಸ್ ತೆಗೆದುಕೊಳ್ಳುತ್ತೀರಿ. ನಿಮ್ಮ ತಪ್ಪು ನಿಮಗೆ ಗೊತ್ತಾಗುತ್ತಿಲ್ಲ. ನಿಮಗೆ ಟಿ.ಆರ್‌.ಪಿ ಅಷ್ಟೇ ಮುಖ್ಯ ಎಂದು ಸುರತ್ಕಲ್‌ನಲ್ಲಿ ಕೊಲೆಯಾದ ಫಾಝಿಲ್ ತಂದೆ ನೋವು ತೋಡಿಕೊಂಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ವಾಚ್ ತರಲು ಹೋದಾಗ, ಬಟ್ಟೆ ತರಲು ಹೋದಾಗ ಕೊಲೆಯಾಯಿತು ಅನ್ನುತ್ತೀರಿ. ಅದು ಸುಳ್ಳು. ಜೊತೆಗೆ ಅವನು ಯಾವ ಸಂಘ ಸಂಸ್ಥೆಗಳಿಗೂ ಸೇರಿರಲಿಲ್ಲ, ನಮಗೆ ಜಾತಿ ಬೇಧ ಇಲ್ಲ. ನಮಗೆ ಗಂಡು ಹೆಣ್ಣು ಎಂಬ ಎರಡೇ ಜಾತಿ ಇರುವುದು” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಂಪಿ, ಎಂಎಲ್‌ಎ ಬಿಡಿ, ಇದುವರೆಗೂ ಜಿಲ್ಲಾಧಿಕಾರಿ ಸಹ ನಮ್ಮನ್ನು ಭೇಟಿಯಾಗಿಲ್ಲ. ಸಿಎಂ ಅಂತೂ ಕೇಳಲೇಬೇಡಿ, ಅವರು ಹಿಂದೂ ಮುಸ್ಲಿಂರನ್ನು ಬೇರೆ ಬೇರೆ ಮಾಡಿದ್ದಾರೆ. ನಮಗೆ ಪರಿಹಾರ ಬೇಡ, ನ್ಯಾಯ ಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಹೆಲ್ಮೆಟ್ ಹಾಕದಿದ್ದರೆ ಕೇಸ್ ಹಾಕುತ್ತೀರಿ, ಆದರೆ ಸುರತ್ಕಲ್ ಎಂಬ ದೊಡ್ಡ ಸಿಟಿಯಲ್ಲಿ ಸಿಸಿಟಿವಿ ಕ್ಯಾಮರಗಳನ್ನು ಪರಿಶೀಲಿಸಲು ಆಗುವುದಿಲ್ಲವೇ? ಹಿಂದೂಗಳ ಕೊಲೆಯಾದರೆ ಮಾತ್ರ ಅವುಗಳನ್ನು ಪರಿಶೀಲಿಸಲಾಗುತ್ತದೆ, ಆದರೆ ನಮಗೆ ಏಕಿಲ್ಲ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ಯುಪಿ ಮಾಡೆಲ್ ತರ್ತೀವಿ ಅನ್ನುವ ಬೊಮ್ಮಾಯಿಯವರೆ, ಯುಪಿ ಮಾಡೆಲ್ ಎಂದರೇನು ಗೊತ್ತೆ?

ಒಬ್ಬ ಎಂಎಲ್‌ಗೆ 5 ವರ್ಷ ಅಧಿಕಾರ. ಆದರೆ ನಾಲ್ಕು ವರ್ಷ ಏನೂ ಮಾಡುವುದಿಲ್ಲ, ಕೊನೆಗೆ ಪಾಪದವನನ್ನು ಸಾಯಿಸಿ ಅದರ ಮೇಲೆ ವೋಟ್ ಪಡೆದು ಗೆಲ್ಲುತ್ತಾರೆ. ಒಳ್ಳೆಯ ಕೆಲಸ ಮಾಡಿ ಗೆಲ್ಲುವುದು ಅವರಿಗೆ ಗೊತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಂಎಲ್‌ಎ, ಮಿನಿಷ್ಟರ್ ಮಕ್ಕಳು ಸಾಯುವುದಿಲ್ಲ, ಅಮಾಯಕರ ಮಕ್ಕಳು ಮಾತ್ರ ಸಾಯುತ್ತಾರೆ. ಯಾವ ತಂದೆ ತಾಯಿಗೂ, ಅವರು ಹಿಂದೂ-ಮುಸ್ಲಿಂ ಕ್ರಿಶ್ಚಿಯನ್ ಯಾರೇ ಆಗಲಿ ಈ ತರದ ಕಷ್ಟ ಬರಬಾರದು. ನಮಗೆ ನ್ಯಾಯ ಬೇಕು ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮೊದಲ ಪ್ಯಾರಾದಲ್ಲಿ ‘ಕೊಲೆಯಾದ ಫಾಝಿಲ್ ನೋವು ತೋಡಿಕೊಂಡಿದ್ದಾರೆ’ ಎಂದಿದೆ! ಸರಿಪಡಿಸಿ.

LEAVE A REPLY

Please enter your comment!
Please enter your name here

- Advertisment -

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...