Homeಮುಖಪುಟಧ್ವನಿವರ್ಧಕ ಬಳಕೆ, ಮಾಂಸ ಮಾರಾಟ ನಿಯಂತ್ರಣ ಕುರಿತು ಆದೇಶ ಹೊರಡಿಸಿದ ಮಧ್ಯಪ್ರದೇಶದ ನೂತನ ಸಿಎಂ

ಧ್ವನಿವರ್ಧಕ ಬಳಕೆ, ಮಾಂಸ ಮಾರಾಟ ನಿಯಂತ್ರಣ ಕುರಿತು ಆದೇಶ ಹೊರಡಿಸಿದ ಮಧ್ಯಪ್ರದೇಶದ ನೂತನ ಸಿಎಂ

- Advertisement -
- Advertisement -

ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೋಹನ್ ಯಾದವ್ ಅವರು ರಾಜ್ಯದ ಸಾರ್ವಜನಿಕ, ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆ ಮತ್ತು ರಾಜ್ಯಾದ್ಯಂತ ಮಾಂಸ,ಮೀನು ಮಾರಾಟ ನಿಯಂತ್ರಣ ಕುರಿತು ಆದೇಶ ಹೊರಡಿಸಿದ್ದಾರೆ.

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಮೊದಲ ಸಚಿವ ಸಂಪುಟ ಸಭೆ ನಡೆಸಿದ ಯಾದವ್, ಧಾರ್ಮಿಕ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ, ಡಿಜೆಗಳನ್ನು ನಿಗದಿತ ನಿಯಮಗಳ ಪ್ರಕಾರ ಮಾತ್ರ ಬಳಸಬಹುದೆಂದು ನಿರ್ದೇಶನ ನೀಡಿದ್ದಾರೆ.

ಕೋಮುವಾದಿ ಭಾಷಣ ಮತ್ತು ಹಿಂದುತ್ವಕ್ಕೆ ಹೆಸರುವಾಸಿಯಾದ ಯಾದವ್, ರಾಜ್ಯದಲ್ಲಿ ಪರವಾನಗಿಯಿಲ್ಲದೆ ಮಾಂಸ, ಮೀನು ಇತ್ಯಾದಿಗಳನ್ನು ಅಕ್ರಮವಾಗಿ ಖರೀದಿಸುವುದು ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಶಬ್ದ ಮಾಲಿನ್ಯ ಮತ್ತು ಧ್ವನಿವರ್ಧಕಗಳ ಅಕ್ರಮ ಬಳಕೆಯನ್ನು ಪರಿಶೀಲಿಸಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಫ್ಲೈಯಿಂಗ್ ಸ್ಕ್ವಾಡ್‌ಗಳನ್ನು ರಚಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಈ ತಂಡಗಳು ಧಾರ್ಮಿಕ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ಪರಿಶೀಲಿಸಲಿದೆ. ಸರ್ಕಾರ ರೂಪಿಸಿದ ನಿಯಮಗಳನ್ನು ಉಲ್ಲಂಘಿಸಿದರೆ ಗರಿಷ್ಠ ಮೂರು ದಿನಗಳಲ್ಲಿ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ನೀಡಲಿದೆ.

ಮುಂಬರುವ ಅಯೋಧ್ಯೆಯ ರಾಮ ಮಂದಿರದ ಉದ್ಘಾಟನಾ ಸಮಾರಂಭವನ್ನು ನಮ್ಮ ಅದೃಷ್ಟ ಎಂದಿರುವ ಮೋಹನ್ ಯಾದವ್, ರಾಮ ಮಂದಿರಕ್ಕೆ ತೆರಳುವ ಎಲ್ಲಾ ರಾಮ ಭಕ್ತರನ್ನು ಪ್ರತಿ ಜಿಲ್ಲೆಗಳಲ್ಲೂ ಸರ್ಕಾರದ ವತಿಯಿಂದ ಸ್ವಾಗತಿಸಲಾಗುವುದು ಎಂದು ಹೇಳಿದ್ದಾರೆ.

ಮಾಂಸದಂಗಡಿಗಳು ಮತ್ತು ಮೊಟ್ಟೆ ಮಾರಾಟ ಮಾಡುವ ಅಂಗಡಿಗಳು ಸರ್ಕಾರದ ಮಾರ್ಗಸೂಚಿಗಳಿಗೆ ಬದ್ಧವಾಗಿರುವುವಂತೆ ನೋಡಿಕೊಳ್ಳಲು ಅವರಿಗೆ ಜಾಗೃತಿ ಮೂಡಿಸುವ ಸಲುವಾಗಿ “ಆಹಾರ ಸುರಕ್ಷತಾ ನಿಯಮ” ರೂಪಿಸಲು ಸಚಿವ ಸಂಪುಟ ನಿರ್ಧರಿಸಿದೆ.

ಡಿಸೆಂಬರ್ 13ರಂದು ಭೋಪಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕರ ಸಮ್ಮುಖದಲ್ಲಿ ಮೋಹನ್ ಯಾದವ್ ಅವರಿಗೆ ಮುಖ್ಯಮಂತ್ರಿಯಾಗಿ ರಾಜ್ಯಪಾಲ ಮಂಗುಭಾಯ್ ಸಿ. ಪಟೇಲ್ ಪ್ರಮಾಣ ವಚನ ಬೋಧಿಸಿದ್ದಾರೆ.

ಯಾದವ್ ರಾಜ್ಯ ಸರ್ಕಾರದ ಆಡಳಿತವನ್ನು ವಹಿಸಿಕೊಳ್ಳುವುದರೊಂದಿಗೆ, ಶಿವರಾಜ್ ಸಿಂಗ್ ಚೌಹಾಣ್ ಅವರ 18 ವರ್ಷಗಳ ಆಡಳಿತ ಕೊನೆಗೊಂಡಿದೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕಟ್ಟಾಳುವಾಗಿರುವ ಮೋಹನ್ ಯಾದವ್, ಮುಸ್ಲಿಮರ ವಿರುದ್ಧ ಕೋಮುವಾದಿ ಭಾಷಣ ಮಾಡುವ ಮೂಲಕವೇ ಮುನ್ನಲೆಗೆ ಬಂದವರು. ಇದರಿಂದಲೇ ರಾಜಕೀಯ ಮತ್ತು ಆರ್ಥಿಕವಾಗಿ ಬಲಿಷ್ಠರಾದವರು. ಅವರ ಹಿಂದುತ್ವವಾದ ಚುನಾವಣೆ ಗೆಲುವು ಮತ್ತು ಸಿಎಂ ಸ್ಥಾನಕ್ಕೇರುವಲ್ಲಿ ಮುಖ್ಯ ಪಾತ್ರ ವಹಿಸಿತ್ತು.

ಇದನ್ನೂ ಓದಿ: ಜಾತಿಗಣತಿ: ಬಂಡವಾಳಶಾಹಿ ಜಾತಿಗಳು ವರ್ಸಸ್ ಕಾಯಕಜೀವಿ ಜಾತಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...