Homeಮುಖಪುಟ‘ಮಿಸ್ಟರ್‌ 56 ಚೀನಾಗೆ ಹೆದರುತ್ತಿದ್ದಾರೆ’ - ಪ್ರಧಾನಿ ಮೋದಿ ವಿರುದ್ದ ರಾಹುಲ್ ಗಾಂಧಿ

‘ಮಿಸ್ಟರ್‌ 56 ಚೀನಾಗೆ ಹೆದರುತ್ತಿದ್ದಾರೆ’ – ಪ್ರಧಾನಿ ಮೋದಿ ವಿರುದ್ದ ರಾಹುಲ್ ಗಾಂಧಿ

- Advertisement -
- Advertisement -

ಒಕ್ಕೂಟ ಸರ್ಕಾರವು ಚೀನಾದ ವಿರುದ್ದ ಯಾವುದೇ ತಂತ್ರವನ್ನು ಹೊಂದಿಲ್ಲದಿರುವುದರಿಂದ, ಭಾರತದ ರಾಷ್ಟ್ರೀಯ ಭದ್ರತೆಯು ‘ಕ್ಷಮಿಸಲಾಗದಷ್ಟು ರಾಜಿಯಾಗಿದೆ’ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಶುಕ್ರವಾರ ಆರೋಪಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

‘56 ಇಂಚಿನ ಎದೆ’ ಎಂಬ ಉಲ್ಲೇಖದೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡ ಅವರು, ‘ಮಿಸ್ಟರ್‌ 56 ಹೆದರುತ್ತಿದ್ದಾರೆ’ ಎಂದು ಟ್ವೀಟ್ ಮಾಡಿದ್ದಾರೆ. ಸರ್ಕಾರ ಸುಳ್ಳುಗಳನ್ನೇ ಹೇಳುತ್ತಿರುವಾಗ ಗಡಿಯಲ್ಲಿ ತಮ್ಮ ಪ್ರಾಣವನ್ನೇ ಪಣಕ್ಕಿಡುವ ಸೈನಿಕರ ಪರವಾಗಿ ತಾನು ನಿಲ್ಲುತ್ತೇನೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಫ್ಘಾನಿಸ್ತಾನದ ಬಗ್ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರ ಮಟ್ಟದ ಸಭೆ: ಪಾಕಿಸ್ತಾನದ ಹಾದಿಯಲ್ಲಿ ಚೀನಾ!

ವಿದೇಶಾಂಗ ಸಚಿವಾಲಯ ಮತ್ತು ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರು ಚೀನಾ ಗಡಿ ಸಮಸ್ಯೆಯ ಬಗ್ಗೆ ವಿಭಿನ್ನ ಅಭಿಪ್ರಾಯವನ್ನು ಹೊಂದಿದ್ದಾರೆ ಎಂದು ರಾಹುಲ್ ಗಾಂಧಿ ಮಾಧ್ಯಮ ವರದಿಯನ್ನು ಉಲ್ಲೇಖಿಸಿದ್ದಾರೆ.

ಗುರುವಾರದಂದು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಅವರು ಚೀನೀಯರು ಭಾರತೀಯ ಪ್ರದೇಶಕ್ಕೆ ಬಂದು ಹೊಸ ಗ್ರಾಮವನ್ನು ನಿರ್ಮಿಸಿದ್ದಾರೆ ಎಂಬ ಹೇಳಿಕೆಗಳು ನಿಜವಲ್ಲ ಮತ್ತು ಹಳ್ಳಿಗಳು ವಾಸ್ತವ ನಿಯಂತ್ರಣ ರೇಖೆಯ (ಎಲ್‌ಎಸಿ) ಚೀನೀ ಬದಿಯಲ್ಲಿವೆ ಎಂದು ಹೇಳಿದ್ದಾರೆ. ಜೊತೆಗೆ, ಚೀನಾ LAC ಅನ್ನು ಉಲ್ಲಂಘಿಸಿಲ್ಲ ಎಂದು ಅವರು ಪ್ರತಿಪಾದಿಸಿದ್ದರು.

ಆದರೆ ಭಾರತದೊಳಗೆ ಚೀನಾ ಗ್ರಾಮ ನಿರ್ಮಿಸಿದೆ ಎಂಬ ಅಮೆರಿಕದ ವರದಿಗೆ ಪ್ರತಿಕ್ರಿಯಿಸಿರುವ ವಿದೇಶಾಂಗ ಸಚಿವಾಲಯ, ಭಾರತವು ತನ್ನ ಭೂಪ್ರದೇಶವನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವುದನ್ನು ಅಥವಾ ಚೀನಾದ ಯಾವುದೇ ನ್ಯಾಯಸಮ್ಮತವಲ್ಲದ ಹಕ್ಕುಗಳನ್ನು ಭಾರತ ಒಪ್ಪಿಕೊಂಡಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: ಚೀನಾವು ಅರುಣಾಚಲ ಪ್ರದೇಶದಲ್ಲಿ ಗ್ರಾಮ ನಿರ್ಮಿಸಿರುವುದನ್ನು ಉಲ್ಲೇಖಿಸಿದ US ರಕ್ಷಣಾ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಪಪ್ಪು ವರ್ಷದ ಹಿಂದೆ ರಹಸ್ಯ ವಾಗಿ ಚೀನಾ ಗೆ ಹೋಗಿದ್ದನಲ್ಟ ಆಗ ಏನು ಕಡೆದು ಕಟ್ಟೆ ಹಾಕಿ ಬಂದನೋ,ಇವರ ತಾತ ನೆಹರು ಹಿಂದೆ ಮಾಡಿದ ಅಲಕ ಕೆಲಸಕ್ಕೆ ಈಗಲೂ ಭಾರತೀಯರು ಅದರ ಬೆಲೆ ತತ್ತಬೇಕಾಗಿ ಬಂದಿದೆ . ಇನ್ನ ಈ ಪಪ್ಪು ತಾಯಿ ಸೋನಿಯಾ ,ಮನಮೋಹನ್ ಸಿಂಗ್ ರ ಕಾಲದಲ್ಲಿ ಆದ ಕೆಲವು ಎಡವಟ್ಟು ಕೆಲಸ ಗಳ ಬಗ್ಗೆ ಹೇಳಿದರೆ
    ಮರ್ಯಾದೆಗೆ ಅಂಜಿ ಪಪ್ಪು ಇಟಲಿ ಪ್ರಯಾಣ ಮಾಡಿದರೂ ಆಶ್ಚರ್ಯ ಇಲ್ಲಾ .

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....