Homeಮುಖಪುಟನಾಳೆ ರಸ್ತೆಗಿಳಿದರೆ ಕೇಸ್ : ಮಿ. ಭಾಸ್ಕರ್ ರಾವ್, ನಿಮ್ಮ ಭಟ್ಟಂಗಿತನಕ್ಕೊಂದು ಮಿತಿ ಬೇಡವೇ?

ನಾಳೆ ರಸ್ತೆಗಿಳಿದರೆ ಕೇಸ್ : ಮಿ. ಭಾಸ್ಕರ್ ರಾವ್, ನಿಮ್ಮ ಭಟ್ಟಂಗಿತನಕ್ಕೊಂದು ಮಿತಿ ಬೇಡವೇ?

ಒಟ್ಟಾರೆ ಪ್ರಧಾನಿಯ ಮಾತೇ ವೇದವಾಕ್ಯ ಎಂದು ಭ್ರಮೆಯಿಂದ ವ್ಯಕ್ತಿ ನಿಷ್ಠೆ ತೋರಿಸಲು ಮುಂದಾಗುವ ಕಮಲಪ್ರಿಯ ಅಧಿಕಾರಿಗಳಿಗೆ ಇಂದಿನ ಭಾಸ್ಕರ್ ರಾವ್ ಪ್ರಸಂಗ ಒಂದು ಪಾಠವಾಗಲಿ.

- Advertisement -
- Advertisement -

ಮಾರಣಾಂತಿಕ ಕೊರೋನಾ ವೈರಸ್ ಇಂದು ಇಡೀ ವಿಶ್ವಕ್ಕೆ ಬೆದರಿಕೆ ಒಡ್ಡಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಈ ಸೋಂಕಿಗೆ ಈವರೆಗೆ ನಾನಾ ದೇಶಗಳಲ್ಲಿ 10,000 ಸಾವಿರಕ್ಕೂ ಅಧಿಕ ಜನ ಸಾವನ್ನಪ್ಪಿದ್ದರೆ, ಸುಮಾರು 2 ಲಕ್ಷ ಜನರಿಗೆ ಸೋಂಕು ತಗುಲಿದೆ. ಭಾರತದಲ್ಲೂ ಸ್ಟೇಜ್-2 ರಲ್ಲಿರುವ ಈ ಸೋಂಕು ಈವರೆಗೆ 5 ಜನರನ್ನು ಬಲಿ ಪಡೆದಿದೆ. ಅಲ್ಲದೆ, ಇದು ಸ್ಟೇಜ್-3 ಪ್ರವೇಶಿಸಿದರೆ ಚೀನಾ-ಇಟಲಿಯಂತೆ ಇಲ್ಲೂ ಸಹ ಸಾಲು ಸಾಲು ಹೆಣಗಳು ಉರುಳುವುದು ಖಚಿತ ಎನ್ನಲಾಗುತ್ತಿದೆ. ಪರಿಣಾಮ ಇಡೀ ದೇಶ ಇಂದು ಭಯದಲ್ಲಿರುವುದು ಸುಳ್ಳಲ್ಲ.

ಇಂತಹ ಸಂದರ್ಭದಲ್ಲಿ ಇಡೀ ದೇಶದ ಜನರಿಗೆ ಧೈರ್ಯ ತುಂಬಬೇಕಾದದ್ದು ಹಾಗೂ ತನ್ನ ಸರ್ಕಾರ ಭವಿಷ್ಯದಲ್ಲಿ ಎದುರಾಗಬಹುದಾದ ಮಾರಕ ದಾಳಿಗೆ ಹೇಗೆ ಸಜ್ಜಾಗಿದೆ? ಜನರಿಗೆ ಎಂತಹ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತದೆ? ಎಂದು ಯೋಜನೆ ರೂಪಿಸಿ ಅದನ್ನು ಜನರಿಗೆ ತಿಳಿಸಬೇಕಾದದ್ದು ದೇಶವನ್ನಾಳುವ ಪ್ರಧಾನಿಯ ಜವಾಬ್ದಾರಿಯೂ ಹೌದು.

ಭಾರತದ ಹಳ್ಳಿಗಾಡು ಪ್ರದೇಶದಲ್ಲಿ ಈಗಲೂ ಸುಮಾರು 80 ಕಿಮೀ ಅಂತರದಲ್ಲಿ ಸರ್ಕಾರಿ ಆಸ್ಪತ್ರೆಗಳಿಲ್ಲ. ಇದ್ದರೂ ಅಗತ್ಯವಿದ್ದಷ್ಟು ಬೆಡ್ ವ್ಯವಸ್ಥೆ ಇಲ್ಲ ಎನ್ನುತ್ತಿವೆ ಅಂಕಿಅಂಶಗಳು. ಇನ್ನು ನಗರ ಪ್ರದೇಶದಲ್ಲಿ ಖಾಸಗಿ ಆಸ್ಪತ್ರೆಗಳ ಚಿಕಿತ್ಸೆಯ ರೇಟಿಗೆ ಹೆದರಿ ಎಷ್ಟೋ ಜನ ಖಾಯಿಲೆ ಬಂದರೂ ಆಸ್ಪತ್ರೆಗೆ ಹೋಗಲೇ ಹೆದರುವಂತಹ ಸ್ಥಿತಿ ಇದೆ.

ಇಂತಹ ಸಂದರ್ಭದಲ್ಲಿ ಕೊರೋನಾ ವೈರಸ್ ಪೀಡಿತರಿಗೆ ಸರ್ಕಾರ ಎಂತಹ ಚಿಕಿತ್ಸೆ ನೀಡಲಿದೆ? ಅದರ ಗುಣಮಟ್ಟ ಏನು? ನಗರ ಮತ್ತು ಗ್ರಾಮೀಣ ಭಾಗದಲ್ಲಿ ಈ ವೈರಸ್ ಎದುರಿಸಲು ಕೈಗೊಂಡಿರುವ ಕ್ರಮ ಏನು? ಎಂಬ ಕುರಿತು ಪ್ರಧಾನಿ ಜನರಿಗೆ ತಿಳಿಸುವುದು ಅಗತ್ಯವಾಗಿತ್ತು ಮತ್ತು ಅನಿವಾರ್ಯವೂ ಆಗಿತ್ತು.

ಇಂತಹ ಜನಸ್ನೇಹಿ ಯೋಜನೆಗಳನ್ನು ರೂಪಿಸಬೇಕಾದ ಪ್ರಧಾನಿ ನರೇಂದ್ರ ಮೋದಿ ಗುರುವಾರ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಮಾರ್ಚ್ 22 ರ ಭಾನುವಾರ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ 14 ಗಂಟೆಗಳ ಕಾಲ ʼಜನತಾ ಕರ್ಫ್ಯೂʼ ಹೇರುವಂತೆ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ಅದೇ ದಿನ ಸಂಜೆ 5 ಗಂಟೆಗೆ ಕರೋನಾ ವಿರುದ್ಧ ಹಗಲಿರುಳು ದುಡಿಯುತ್ತಿರುವ ವರ್ಗಗಳಿಗೆ ಧನ್ಯವಾದ ಕೋರುವ ನಿಟ್ಟಿನಲ್ಲಿ ಮನೆ ಬಾಗಿಲು, ಕಿಟಕಿ ಅಥವಾ ಬಾಲ್ಕನಿಯಲ್ಲಿ ನಿಂತು ಚಪ್ಪಾಳೆ ತಟ್ಟಿ ಎಂದು ಕಿವಿಮಾತು ಹೇಳಿದ್ದಾರೆ. ಅದಾಗಿ ಹತ್ತು ನಿಮಿಷದಲ್ಲೇ ಬಿಜೆಪಿ ಸಾಮಾಜಿಕ ಜಾಲತಾಣ ವಿಭಾಗ ಅದನ್ನು ಗ್ರಾಫಿಕ್ಸ್ ಪೇಜ್ ಮೂಲಕ ವ್ಯಾಪಕವಾಗಿ ಸುದ್ದಿ ಪಸರಿಸುವಂತೆ ಮಾಡಿದೆ.

ಸರಿಸುಮಾರು ಅದೇ ಹೊತ್ತಿಗೆ ನೆರೆಯ ಕೇರಳ ರಾಜ್ಯದಲ್ಲಿ ಅಲ್ಲಿನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸುದ್ದಿಗೋಷ್ಟಿ ಕರೆದು ಕರೋನಾ ವಿರುದ್ಧದ ಹೋರಾಟಕ್ಕೆ 20 ಸಾವಿರ ಕೋಟಿ ರೂಪಾಯಿಯ ವಿಶೇಷ ಪ್ಯಾಕೇಜ್ ಘೊಷಣೆ ಮಾಡುತ್ತಾರೆ. ಅಲ್ಲದೇ ತೆರಿಗೆ ವಿನಾಯಿತಿ, ವಿದ್ಯುತ್, ನೀರಿನ ಬಿಲ್ ಪಾವತಿಗೆ ಹೆಚ್ಚುವರಿ ಸಮಯ ನೀಡುವ ಭರವಸೆ ನೀಡುತ್ತಾರೆ. ಆರೋಗ್ಯ ಕ್ಷೇತ್ರಕ್ಕಾಗಿ 500 ಕೋಟಿ ರೂಪಾಯಿ ಮೀಸಲಿಡುವ ಜೊತೆಗೆ ಮುಂಚಿತವಾಗಿಯೇ ವಿಧವಾ ವೇತನ, ವೃದ್ಧಾಪ್ಯ ವೇತನ ಬಿಡುಗಡೆ, ಬಡ ಕುಟುಂಬಗಳಿಗೆ ಸಾಲ ಯೋಜನೆ, ವೈರಸ್ ಹಾವಳಿ ಕಡಿಮೆಯಾಗುವವರೆಗೆ 10 ಕೆಜಿ ಅಕ್ಕಿ ವಿತರಣೆ ಈ ರೀತಿಯ ಹತ್ತು ಹಲವು ಕಾರ್ಯಕ್ರಮಗಳನ್ನು ಘೋಷಿಸುತ್ತಾರೆ.

ಕೇರಳ ಸರ್ಕಾರದ ಜನಸ್ನೇಹಿ ಕಾರ್ಯ ವಿಧಾನವನ್ನು ನರೇಂದ್ರ ಮೋದಿ ಸರ್ಕಾರದ ಕಾರ್ಯ ವಿಧಾನಕ್ಕೆ ಹೋಲಿಕೆ ಮಾಡಲಾಗದಷ್ಟು ವ್ಯತ್ಯಾಸ ಎರಡರ ನಡುವೆ ಇದೆ.

ಆದರೆ, ಇದರ ಹೊರತಾಗಿಯೂ ಜನ ಒಂದು ದಿನ ರಸ್ತೆಗೆ ಇಳಿಯದೆ ಪ್ರಧಾನಿ ಮಾತು ಕೇಳಿ ಮನೆಯಲ್ಲೇ ಇದ್ದರೇ ಈ ವೈರಸ್ ತಹಬಂದಿಗೆ ಬರುತ್ತಾ? ಎಂದು ಪ್ರಶ್ನೆ ಮಾಡಿದರೆ, ಹಾಗೆ ಆಗಲು ಸಾಧ್ಯವೇ ಇಲ್ಲಾ ಎನ್ನುತ್ತಾರೆ ನುರಿತ ವೈದ್ಯರು. ಹಾಗಾದರೆ ಈ ಕೊರೋನಾ ವೈರಸ್ ಹೇಗೆ ಹರಡುತ್ತೆ? ಮತ್ತೆ ಈ ಸೋಂಕು ಎಷ್ಟು ದಿನದಲ್ಲಿ ನಿಮ್ಮ ದೇಹದಲ್ಲಿ ಕಾಣಿಸಿಕೊಳ್ಳುತ್ತೆ ಎಂಬುದಕ್ಕೆ ಇಲ್ಲಿದೆ ಉತ್ತರ.

ಕೊರೋನಾ ಸೋಂಕು ಹರಡುವುದು ಹೇಗೆ ಗೊತ್ತಾ?

ಎಲ್ಲರಿಗೂ ತಿಳಿದಿರುವಂತೆ ಕೊರೋನಾ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಹರಡುವ ಅಂಟು ರೋಗ. ಸೋಂಕು ಪೀಡಿತ ವ್ಯಕ್ತಿ ಸೀನಿದರೆ, ಕೆಮ್ಮಿದರೆ ಅಥವಾ ನಮ್ಮನ್ನು ಸ್ಪರ್ಶಿಸಿದರೆ ಆ ಸೋಂಕು ನಮಗೂ ತಗುಲುವ ಸಾಧ್ಯತೆ ಹೆಚ್ಚು. ಒಂದು ವೇಳೆ ನಿಮಗೆ ಆ ಸೋಂಕು ತಗುಲಿದರೂ ಸಹ ಅದು ಕಾಣಿಸಿಕೊಳ್ಳಲು 5 ದಿನಗಳೇ ಬೇಕಾಗಬಹುದು.

5 ದಿನದ ನಂತರ ನಿಮಗೆ ಕೆಮ್ಮು, ಷೀನು, ಸಿಂಬಳ ಸೇರಿದಂತೆ ರೋಗದ ಗುಣ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಇದಾದ ನಂತರ 14 ದಿನಗಳಲ್ಲಿ ಈ ಸೋಂಕು ಗಂಟಲು ಮತ್ತು ಶ್ವಾಸಕೋಶಕ್ಕೆ ವ್ಯಾಪಿಸಿ ಉಸಿರಾಟದ ತೊಂದರೆ ಉಂಟಾಗಿ ಸಾವು ಸಂಭವಿಸುತ್ತದೆ. ಇದೇ ಕಾರಣಕ್ಕೆ ಸೋಂಕಿಗೆ ಒಳಗಾದ ವ್ಯಕ್ತಿಯನ್ನು 14 ದಿನ ಐಸೋಲೇಷನ್ ಅಂದರೆ ತೀವ್ರ ನಿಗಾ ಘಟಕದಲ್ಲಿ ಇಟ್ಟಿರುವುದು. ಹೀಗಾಗಿ ಈ ಸೋಂಕು ಅಕಸ್ಮಾತ್ ನಿಮ್ಮಲ್ಲಿದ್ದರೆ ಅದು 19 ರಿಂದ 20 ದಿನ ಜೀವಂತವಾಗಿರುತ್ತದೆ. ಹಾಗೆ ನೋಡಿದರೆ ಇಡೀ ದೇಶಕ್ಕೆ 20 ದಿನ ಕರ್ಫ್ಯೂ ಹೇರಬೇಕು. ಹೀಗಾಗಿ ಕೇವಲ ಒಂದು ದಿನ ಕರ್ಫ್ಯೂ ಹೇರಿ ಏನುಪಯೋಗ? ಎಂಬುದು ನುರಿತ ವೈದ್ಯರ ಪ್ರಶ್ನೆ.

ಅದಿರಲಿ ಪ್ರಧಾನಿ ನರೇಂದ್ರ ಮೋದಿ ಅವರ ಇಂತಹ ರಾತ್ರಿ ೮ರ ಘೋಷಣೆಗೆ ಬೇರೆ ರೀತಿಯ ಇತಿಹಾಸವಿದೆ. ಆದರೂ, ಪ್ರಧಾನಿ ದಯವಿಟ್ಟು ಜನ ರಸ್ತೆಗೆ ಇಳಿಯಬೇಡಿ ಎಂದು ಮನವಿ ಮಾಡಿದ್ದಾರೆಯೇ ವಿನಃ ಆದೇಶ ಹೊರಡಿಸಿಲ್ಲ. ಹಾಗೆ ಆದೇಶ ಹೊರಡಿಸುವ ಹಕ್ಕು ಅವರಿಗೂ ಇಲ್ಲ ಎಂಬುದು ಬೇರೆ ವಿಚಾರ. ಆದರೆ, ಅವರ ಮನವಿಯೇ ಶಾಸನ ಎಂಬಂತಹ ಭ್ರಮೆಯಲ್ಲಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಇಡೀ ದೇಶದಲ್ಲಿ ಯಾವ ಪೊಲೀಸ್ ಅಧಿಕಾರಿಯೂ ಮಾಡಲು ಮುಂದಾಗದ ಕೆಲಸಕ್ಕೆ ಮುಂದಾಗಿ ಇದೀಗ ಪೇಚಿಗೆ ಮತ್ತು ನಗೆಪಾಟಲಿಗೆ ಸಿಲುಕಿದ್ದಾರೆ.

ರಸ್ತೆಗಿಳಿದರೆ ಕೇಸ್ ಹಾಕ್ತಾರಂತೆ ಭಾಸ್ಕರ್ ರಾವ್!

ಮಾರ್ಚ್ 22 ಭಾನುವಾರ ದೇಶದಾದ್ಯಂತ ಜನತಾ ಕರ್ಫ್ಯೂ ಆಚರಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ ಬೆನ್ನಿಗೆ ಇಂದು ಪತ್ರಿಕಾಗೋಷ್ಠಿ ನಡೆಸಿ ಬೆಂಗಳೂರು ನಾಗರೀಕರಿಗೆ ಎಚ್ಚರಿಕೆ ನೀಡಿರುವ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, “ಭಾನುವಾರ ದೇಶದಾದ್ಯಂತ ಜನತಾ ಕರ್ಫ್ಯೂ ಇರುವ ಹಿನ್ನೆಲೆ ಸಾರ್ವಜನಿಕರು ಮನೆಯಲ್ಲೇ ಇದ್ದು ಸಹಕರಿಸಬೇಕು. ಪ್ರವಾಸ, ವಾಕಿಂಗ್, ಕಾರ್ಯಕ್ರಮ ಅಂತ ಓಡಾಡುವಂತಿಲ್ಲ. ಅಕಸ್ಮಾತ್ ರಸ್ತೆ ಮೇಲೆ ತಿರುಗಾಡಿದ್ರೆ act 31(L) ಅಡಿಯಲ್ಲಿ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತೆ. ಪ್ರಕರಣ ದಾಖಲಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಭಾಸ್ಕರ್ ರಾವ್ ಮಾಧ್ಯಮಗಳ ಎದುರು ಹೀಗೊಂದು ಹೇಳಿಕೆ ನೀಡುತ್ತಿದ್ದಂತೆ ಎಚ್ಚೆತ್ತಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರಿಗೆ ಸರಿಯಾಗಿಯೇ ಕ್ಲಾಸ್ ತಗೊಂಡಿದ್ದಾರೆ, “ಭಾನುವಾರ ರಸ್ತೆ ಮೇಲೆ ಓಡಾಡಿದ್ರೆ ಕೇಸ್ ಹಾಕ್ತೀರ? ನಿಮಗೆ ಯಾರು ಇಂತಹ ಅಧಿಕಾರ ಕೊಟ್ಟದ್ದು? ಕೇಸ್ ಹಾಕೋದಕ್ಕೆ ಕಾನೂನಿನಲ್ಲಿ ಅವಕಾಶ ಇದೆಯಾ?

ಏಕೆ ಆ ರೀತಿ ಹೆದರಿಸುವ ಹೇಳಿಕೆ ಕೊಡ್ತೀರಾ..? ಜನರು ಸ್ವಯಂಪ್ರೇರಿತರಾಗಿ ಮನೆಯಲ್ಲಿ ಇರೋದೆ ಜನತಾ ಕರ್ಫ್ಯೂ. ಹೀಗೆ ಹೇಳಿಕೆ ಕೊಟ್ಟು ಜನರಲ್ಲಿ ಗೊಂದಲ ಮೂಡಿಸಬೇಡಿ ಎಂದು ಎಂದು ತಾಕೀತು ಮಾಡಿದ್ದಾರೆ. ಈ ಕುರಿತು ವಿವರಣೆ ಕೇಳಿ ನೊಟೀಸ್ ಸಹ ನೀಡಿದ್ದಾರೆ. ಅಲ್ಲದೆ, ಸಭೆಯಲ್ಲಿ ಭಾಸ್ಕರ್ ರಾವ್ ಅವರನ್ನು ಸರಿಯಾಗಿಯೇ ಜಾಡಿಸಿದ್ದಾರೆ ಎನ್ನಲಾಗುತ್ತಿದೆ.

ಒಟ್ಟಾರೆ ಪ್ರಧಾನಿಯ ಮಾತೇ ವೇದವಾಕ್ಯ ಎಂದು ಭ್ರಮೆಯಿಂದ ವ್ಯಕ್ತಿ ನಿಷ್ಠೆ ತೋರಿಸಲು ಮುಂದಾಗುವ ಕಮಲಪ್ರಿಯ ಅಧಿಕಾರಿಗಳಿಗೆ ಇಂದಿನ ಭಾಸ್ಕರ್ ರಾವ್ ಪ್ರಸಂಗ ಒಂದು ಪಾಠವಾಗಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...