Homeಮುಖಪುಟನಾಳೆ ರಸ್ತೆಗಿಳಿದರೆ ಕೇಸ್ : ಮಿ. ಭಾಸ್ಕರ್ ರಾವ್, ನಿಮ್ಮ ಭಟ್ಟಂಗಿತನಕ್ಕೊಂದು ಮಿತಿ ಬೇಡವೇ?

ನಾಳೆ ರಸ್ತೆಗಿಳಿದರೆ ಕೇಸ್ : ಮಿ. ಭಾಸ್ಕರ್ ರಾವ್, ನಿಮ್ಮ ಭಟ್ಟಂಗಿತನಕ್ಕೊಂದು ಮಿತಿ ಬೇಡವೇ?

ಒಟ್ಟಾರೆ ಪ್ರಧಾನಿಯ ಮಾತೇ ವೇದವಾಕ್ಯ ಎಂದು ಭ್ರಮೆಯಿಂದ ವ್ಯಕ್ತಿ ನಿಷ್ಠೆ ತೋರಿಸಲು ಮುಂದಾಗುವ ಕಮಲಪ್ರಿಯ ಅಧಿಕಾರಿಗಳಿಗೆ ಇಂದಿನ ಭಾಸ್ಕರ್ ರಾವ್ ಪ್ರಸಂಗ ಒಂದು ಪಾಠವಾಗಲಿ.

- Advertisement -
- Advertisement -

ಮಾರಣಾಂತಿಕ ಕೊರೋನಾ ವೈರಸ್ ಇಂದು ಇಡೀ ವಿಶ್ವಕ್ಕೆ ಬೆದರಿಕೆ ಒಡ್ಡಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಈ ಸೋಂಕಿಗೆ ಈವರೆಗೆ ನಾನಾ ದೇಶಗಳಲ್ಲಿ 10,000 ಸಾವಿರಕ್ಕೂ ಅಧಿಕ ಜನ ಸಾವನ್ನಪ್ಪಿದ್ದರೆ, ಸುಮಾರು 2 ಲಕ್ಷ ಜನರಿಗೆ ಸೋಂಕು ತಗುಲಿದೆ. ಭಾರತದಲ್ಲೂ ಸ್ಟೇಜ್-2 ರಲ್ಲಿರುವ ಈ ಸೋಂಕು ಈವರೆಗೆ 5 ಜನರನ್ನು ಬಲಿ ಪಡೆದಿದೆ. ಅಲ್ಲದೆ, ಇದು ಸ್ಟೇಜ್-3 ಪ್ರವೇಶಿಸಿದರೆ ಚೀನಾ-ಇಟಲಿಯಂತೆ ಇಲ್ಲೂ ಸಹ ಸಾಲು ಸಾಲು ಹೆಣಗಳು ಉರುಳುವುದು ಖಚಿತ ಎನ್ನಲಾಗುತ್ತಿದೆ. ಪರಿಣಾಮ ಇಡೀ ದೇಶ ಇಂದು ಭಯದಲ್ಲಿರುವುದು ಸುಳ್ಳಲ್ಲ.

ಇಂತಹ ಸಂದರ್ಭದಲ್ಲಿ ಇಡೀ ದೇಶದ ಜನರಿಗೆ ಧೈರ್ಯ ತುಂಬಬೇಕಾದದ್ದು ಹಾಗೂ ತನ್ನ ಸರ್ಕಾರ ಭವಿಷ್ಯದಲ್ಲಿ ಎದುರಾಗಬಹುದಾದ ಮಾರಕ ದಾಳಿಗೆ ಹೇಗೆ ಸಜ್ಜಾಗಿದೆ? ಜನರಿಗೆ ಎಂತಹ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತದೆ? ಎಂದು ಯೋಜನೆ ರೂಪಿಸಿ ಅದನ್ನು ಜನರಿಗೆ ತಿಳಿಸಬೇಕಾದದ್ದು ದೇಶವನ್ನಾಳುವ ಪ್ರಧಾನಿಯ ಜವಾಬ್ದಾರಿಯೂ ಹೌದು.

ಭಾರತದ ಹಳ್ಳಿಗಾಡು ಪ್ರದೇಶದಲ್ಲಿ ಈಗಲೂ ಸುಮಾರು 80 ಕಿಮೀ ಅಂತರದಲ್ಲಿ ಸರ್ಕಾರಿ ಆಸ್ಪತ್ರೆಗಳಿಲ್ಲ. ಇದ್ದರೂ ಅಗತ್ಯವಿದ್ದಷ್ಟು ಬೆಡ್ ವ್ಯವಸ್ಥೆ ಇಲ್ಲ ಎನ್ನುತ್ತಿವೆ ಅಂಕಿಅಂಶಗಳು. ಇನ್ನು ನಗರ ಪ್ರದೇಶದಲ್ಲಿ ಖಾಸಗಿ ಆಸ್ಪತ್ರೆಗಳ ಚಿಕಿತ್ಸೆಯ ರೇಟಿಗೆ ಹೆದರಿ ಎಷ್ಟೋ ಜನ ಖಾಯಿಲೆ ಬಂದರೂ ಆಸ್ಪತ್ರೆಗೆ ಹೋಗಲೇ ಹೆದರುವಂತಹ ಸ್ಥಿತಿ ಇದೆ.

ಇಂತಹ ಸಂದರ್ಭದಲ್ಲಿ ಕೊರೋನಾ ವೈರಸ್ ಪೀಡಿತರಿಗೆ ಸರ್ಕಾರ ಎಂತಹ ಚಿಕಿತ್ಸೆ ನೀಡಲಿದೆ? ಅದರ ಗುಣಮಟ್ಟ ಏನು? ನಗರ ಮತ್ತು ಗ್ರಾಮೀಣ ಭಾಗದಲ್ಲಿ ಈ ವೈರಸ್ ಎದುರಿಸಲು ಕೈಗೊಂಡಿರುವ ಕ್ರಮ ಏನು? ಎಂಬ ಕುರಿತು ಪ್ರಧಾನಿ ಜನರಿಗೆ ತಿಳಿಸುವುದು ಅಗತ್ಯವಾಗಿತ್ತು ಮತ್ತು ಅನಿವಾರ್ಯವೂ ಆಗಿತ್ತು.

ಇಂತಹ ಜನಸ್ನೇಹಿ ಯೋಜನೆಗಳನ್ನು ರೂಪಿಸಬೇಕಾದ ಪ್ರಧಾನಿ ನರೇಂದ್ರ ಮೋದಿ ಗುರುವಾರ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಮಾರ್ಚ್ 22 ರ ಭಾನುವಾರ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ 14 ಗಂಟೆಗಳ ಕಾಲ ʼಜನತಾ ಕರ್ಫ್ಯೂʼ ಹೇರುವಂತೆ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ಅದೇ ದಿನ ಸಂಜೆ 5 ಗಂಟೆಗೆ ಕರೋನಾ ವಿರುದ್ಧ ಹಗಲಿರುಳು ದುಡಿಯುತ್ತಿರುವ ವರ್ಗಗಳಿಗೆ ಧನ್ಯವಾದ ಕೋರುವ ನಿಟ್ಟಿನಲ್ಲಿ ಮನೆ ಬಾಗಿಲು, ಕಿಟಕಿ ಅಥವಾ ಬಾಲ್ಕನಿಯಲ್ಲಿ ನಿಂತು ಚಪ್ಪಾಳೆ ತಟ್ಟಿ ಎಂದು ಕಿವಿಮಾತು ಹೇಳಿದ್ದಾರೆ. ಅದಾಗಿ ಹತ್ತು ನಿಮಿಷದಲ್ಲೇ ಬಿಜೆಪಿ ಸಾಮಾಜಿಕ ಜಾಲತಾಣ ವಿಭಾಗ ಅದನ್ನು ಗ್ರಾಫಿಕ್ಸ್ ಪೇಜ್ ಮೂಲಕ ವ್ಯಾಪಕವಾಗಿ ಸುದ್ದಿ ಪಸರಿಸುವಂತೆ ಮಾಡಿದೆ.

ಸರಿಸುಮಾರು ಅದೇ ಹೊತ್ತಿಗೆ ನೆರೆಯ ಕೇರಳ ರಾಜ್ಯದಲ್ಲಿ ಅಲ್ಲಿನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸುದ್ದಿಗೋಷ್ಟಿ ಕರೆದು ಕರೋನಾ ವಿರುದ್ಧದ ಹೋರಾಟಕ್ಕೆ 20 ಸಾವಿರ ಕೋಟಿ ರೂಪಾಯಿಯ ವಿಶೇಷ ಪ್ಯಾಕೇಜ್ ಘೊಷಣೆ ಮಾಡುತ್ತಾರೆ. ಅಲ್ಲದೇ ತೆರಿಗೆ ವಿನಾಯಿತಿ, ವಿದ್ಯುತ್, ನೀರಿನ ಬಿಲ್ ಪಾವತಿಗೆ ಹೆಚ್ಚುವರಿ ಸಮಯ ನೀಡುವ ಭರವಸೆ ನೀಡುತ್ತಾರೆ. ಆರೋಗ್ಯ ಕ್ಷೇತ್ರಕ್ಕಾಗಿ 500 ಕೋಟಿ ರೂಪಾಯಿ ಮೀಸಲಿಡುವ ಜೊತೆಗೆ ಮುಂಚಿತವಾಗಿಯೇ ವಿಧವಾ ವೇತನ, ವೃದ್ಧಾಪ್ಯ ವೇತನ ಬಿಡುಗಡೆ, ಬಡ ಕುಟುಂಬಗಳಿಗೆ ಸಾಲ ಯೋಜನೆ, ವೈರಸ್ ಹಾವಳಿ ಕಡಿಮೆಯಾಗುವವರೆಗೆ 10 ಕೆಜಿ ಅಕ್ಕಿ ವಿತರಣೆ ಈ ರೀತಿಯ ಹತ್ತು ಹಲವು ಕಾರ್ಯಕ್ರಮಗಳನ್ನು ಘೋಷಿಸುತ್ತಾರೆ.

ಕೇರಳ ಸರ್ಕಾರದ ಜನಸ್ನೇಹಿ ಕಾರ್ಯ ವಿಧಾನವನ್ನು ನರೇಂದ್ರ ಮೋದಿ ಸರ್ಕಾರದ ಕಾರ್ಯ ವಿಧಾನಕ್ಕೆ ಹೋಲಿಕೆ ಮಾಡಲಾಗದಷ್ಟು ವ್ಯತ್ಯಾಸ ಎರಡರ ನಡುವೆ ಇದೆ.

ಆದರೆ, ಇದರ ಹೊರತಾಗಿಯೂ ಜನ ಒಂದು ದಿನ ರಸ್ತೆಗೆ ಇಳಿಯದೆ ಪ್ರಧಾನಿ ಮಾತು ಕೇಳಿ ಮನೆಯಲ್ಲೇ ಇದ್ದರೇ ಈ ವೈರಸ್ ತಹಬಂದಿಗೆ ಬರುತ್ತಾ? ಎಂದು ಪ್ರಶ್ನೆ ಮಾಡಿದರೆ, ಹಾಗೆ ಆಗಲು ಸಾಧ್ಯವೇ ಇಲ್ಲಾ ಎನ್ನುತ್ತಾರೆ ನುರಿತ ವೈದ್ಯರು. ಹಾಗಾದರೆ ಈ ಕೊರೋನಾ ವೈರಸ್ ಹೇಗೆ ಹರಡುತ್ತೆ? ಮತ್ತೆ ಈ ಸೋಂಕು ಎಷ್ಟು ದಿನದಲ್ಲಿ ನಿಮ್ಮ ದೇಹದಲ್ಲಿ ಕಾಣಿಸಿಕೊಳ್ಳುತ್ತೆ ಎಂಬುದಕ್ಕೆ ಇಲ್ಲಿದೆ ಉತ್ತರ.

ಕೊರೋನಾ ಸೋಂಕು ಹರಡುವುದು ಹೇಗೆ ಗೊತ್ತಾ?

ಎಲ್ಲರಿಗೂ ತಿಳಿದಿರುವಂತೆ ಕೊರೋನಾ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಹರಡುವ ಅಂಟು ರೋಗ. ಸೋಂಕು ಪೀಡಿತ ವ್ಯಕ್ತಿ ಸೀನಿದರೆ, ಕೆಮ್ಮಿದರೆ ಅಥವಾ ನಮ್ಮನ್ನು ಸ್ಪರ್ಶಿಸಿದರೆ ಆ ಸೋಂಕು ನಮಗೂ ತಗುಲುವ ಸಾಧ್ಯತೆ ಹೆಚ್ಚು. ಒಂದು ವೇಳೆ ನಿಮಗೆ ಆ ಸೋಂಕು ತಗುಲಿದರೂ ಸಹ ಅದು ಕಾಣಿಸಿಕೊಳ್ಳಲು 5 ದಿನಗಳೇ ಬೇಕಾಗಬಹುದು.

5 ದಿನದ ನಂತರ ನಿಮಗೆ ಕೆಮ್ಮು, ಷೀನು, ಸಿಂಬಳ ಸೇರಿದಂತೆ ರೋಗದ ಗುಣ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಇದಾದ ನಂತರ 14 ದಿನಗಳಲ್ಲಿ ಈ ಸೋಂಕು ಗಂಟಲು ಮತ್ತು ಶ್ವಾಸಕೋಶಕ್ಕೆ ವ್ಯಾಪಿಸಿ ಉಸಿರಾಟದ ತೊಂದರೆ ಉಂಟಾಗಿ ಸಾವು ಸಂಭವಿಸುತ್ತದೆ. ಇದೇ ಕಾರಣಕ್ಕೆ ಸೋಂಕಿಗೆ ಒಳಗಾದ ವ್ಯಕ್ತಿಯನ್ನು 14 ದಿನ ಐಸೋಲೇಷನ್ ಅಂದರೆ ತೀವ್ರ ನಿಗಾ ಘಟಕದಲ್ಲಿ ಇಟ್ಟಿರುವುದು. ಹೀಗಾಗಿ ಈ ಸೋಂಕು ಅಕಸ್ಮಾತ್ ನಿಮ್ಮಲ್ಲಿದ್ದರೆ ಅದು 19 ರಿಂದ 20 ದಿನ ಜೀವಂತವಾಗಿರುತ್ತದೆ. ಹಾಗೆ ನೋಡಿದರೆ ಇಡೀ ದೇಶಕ್ಕೆ 20 ದಿನ ಕರ್ಫ್ಯೂ ಹೇರಬೇಕು. ಹೀಗಾಗಿ ಕೇವಲ ಒಂದು ದಿನ ಕರ್ಫ್ಯೂ ಹೇರಿ ಏನುಪಯೋಗ? ಎಂಬುದು ನುರಿತ ವೈದ್ಯರ ಪ್ರಶ್ನೆ.

ಅದಿರಲಿ ಪ್ರಧಾನಿ ನರೇಂದ್ರ ಮೋದಿ ಅವರ ಇಂತಹ ರಾತ್ರಿ ೮ರ ಘೋಷಣೆಗೆ ಬೇರೆ ರೀತಿಯ ಇತಿಹಾಸವಿದೆ. ಆದರೂ, ಪ್ರಧಾನಿ ದಯವಿಟ್ಟು ಜನ ರಸ್ತೆಗೆ ಇಳಿಯಬೇಡಿ ಎಂದು ಮನವಿ ಮಾಡಿದ್ದಾರೆಯೇ ವಿನಃ ಆದೇಶ ಹೊರಡಿಸಿಲ್ಲ. ಹಾಗೆ ಆದೇಶ ಹೊರಡಿಸುವ ಹಕ್ಕು ಅವರಿಗೂ ಇಲ್ಲ ಎಂಬುದು ಬೇರೆ ವಿಚಾರ. ಆದರೆ, ಅವರ ಮನವಿಯೇ ಶಾಸನ ಎಂಬಂತಹ ಭ್ರಮೆಯಲ್ಲಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಇಡೀ ದೇಶದಲ್ಲಿ ಯಾವ ಪೊಲೀಸ್ ಅಧಿಕಾರಿಯೂ ಮಾಡಲು ಮುಂದಾಗದ ಕೆಲಸಕ್ಕೆ ಮುಂದಾಗಿ ಇದೀಗ ಪೇಚಿಗೆ ಮತ್ತು ನಗೆಪಾಟಲಿಗೆ ಸಿಲುಕಿದ್ದಾರೆ.

ರಸ್ತೆಗಿಳಿದರೆ ಕೇಸ್ ಹಾಕ್ತಾರಂತೆ ಭಾಸ್ಕರ್ ರಾವ್!

ಮಾರ್ಚ್ 22 ಭಾನುವಾರ ದೇಶದಾದ್ಯಂತ ಜನತಾ ಕರ್ಫ್ಯೂ ಆಚರಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ ಬೆನ್ನಿಗೆ ಇಂದು ಪತ್ರಿಕಾಗೋಷ್ಠಿ ನಡೆಸಿ ಬೆಂಗಳೂರು ನಾಗರೀಕರಿಗೆ ಎಚ್ಚರಿಕೆ ನೀಡಿರುವ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, “ಭಾನುವಾರ ದೇಶದಾದ್ಯಂತ ಜನತಾ ಕರ್ಫ್ಯೂ ಇರುವ ಹಿನ್ನೆಲೆ ಸಾರ್ವಜನಿಕರು ಮನೆಯಲ್ಲೇ ಇದ್ದು ಸಹಕರಿಸಬೇಕು. ಪ್ರವಾಸ, ವಾಕಿಂಗ್, ಕಾರ್ಯಕ್ರಮ ಅಂತ ಓಡಾಡುವಂತಿಲ್ಲ. ಅಕಸ್ಮಾತ್ ರಸ್ತೆ ಮೇಲೆ ತಿರುಗಾಡಿದ್ರೆ act 31(L) ಅಡಿಯಲ್ಲಿ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತೆ. ಪ್ರಕರಣ ದಾಖಲಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಭಾಸ್ಕರ್ ರಾವ್ ಮಾಧ್ಯಮಗಳ ಎದುರು ಹೀಗೊಂದು ಹೇಳಿಕೆ ನೀಡುತ್ತಿದ್ದಂತೆ ಎಚ್ಚೆತ್ತಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರಿಗೆ ಸರಿಯಾಗಿಯೇ ಕ್ಲಾಸ್ ತಗೊಂಡಿದ್ದಾರೆ, “ಭಾನುವಾರ ರಸ್ತೆ ಮೇಲೆ ಓಡಾಡಿದ್ರೆ ಕೇಸ್ ಹಾಕ್ತೀರ? ನಿಮಗೆ ಯಾರು ಇಂತಹ ಅಧಿಕಾರ ಕೊಟ್ಟದ್ದು? ಕೇಸ್ ಹಾಕೋದಕ್ಕೆ ಕಾನೂನಿನಲ್ಲಿ ಅವಕಾಶ ಇದೆಯಾ?

ಏಕೆ ಆ ರೀತಿ ಹೆದರಿಸುವ ಹೇಳಿಕೆ ಕೊಡ್ತೀರಾ..? ಜನರು ಸ್ವಯಂಪ್ರೇರಿತರಾಗಿ ಮನೆಯಲ್ಲಿ ಇರೋದೆ ಜನತಾ ಕರ್ಫ್ಯೂ. ಹೀಗೆ ಹೇಳಿಕೆ ಕೊಟ್ಟು ಜನರಲ್ಲಿ ಗೊಂದಲ ಮೂಡಿಸಬೇಡಿ ಎಂದು ಎಂದು ತಾಕೀತು ಮಾಡಿದ್ದಾರೆ. ಈ ಕುರಿತು ವಿವರಣೆ ಕೇಳಿ ನೊಟೀಸ್ ಸಹ ನೀಡಿದ್ದಾರೆ. ಅಲ್ಲದೆ, ಸಭೆಯಲ್ಲಿ ಭಾಸ್ಕರ್ ರಾವ್ ಅವರನ್ನು ಸರಿಯಾಗಿಯೇ ಜಾಡಿಸಿದ್ದಾರೆ ಎನ್ನಲಾಗುತ್ತಿದೆ.

ಒಟ್ಟಾರೆ ಪ್ರಧಾನಿಯ ಮಾತೇ ವೇದವಾಕ್ಯ ಎಂದು ಭ್ರಮೆಯಿಂದ ವ್ಯಕ್ತಿ ನಿಷ್ಠೆ ತೋರಿಸಲು ಮುಂದಾಗುವ ಕಮಲಪ್ರಿಯ ಅಧಿಕಾರಿಗಳಿಗೆ ಇಂದಿನ ಭಾಸ್ಕರ್ ರಾವ್ ಪ್ರಸಂಗ ಒಂದು ಪಾಠವಾಗಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...