Homeಮುಖಪುಟನಾಳೆ ರಸ್ತೆಗಿಳಿದರೆ ಕೇಸ್ : ಮಿ. ಭಾಸ್ಕರ್ ರಾವ್, ನಿಮ್ಮ ಭಟ್ಟಂಗಿತನಕ್ಕೊಂದು ಮಿತಿ ಬೇಡವೇ?

ನಾಳೆ ರಸ್ತೆಗಿಳಿದರೆ ಕೇಸ್ : ಮಿ. ಭಾಸ್ಕರ್ ರಾವ್, ನಿಮ್ಮ ಭಟ್ಟಂಗಿತನಕ್ಕೊಂದು ಮಿತಿ ಬೇಡವೇ?

ಒಟ್ಟಾರೆ ಪ್ರಧಾನಿಯ ಮಾತೇ ವೇದವಾಕ್ಯ ಎಂದು ಭ್ರಮೆಯಿಂದ ವ್ಯಕ್ತಿ ನಿಷ್ಠೆ ತೋರಿಸಲು ಮುಂದಾಗುವ ಕಮಲಪ್ರಿಯ ಅಧಿಕಾರಿಗಳಿಗೆ ಇಂದಿನ ಭಾಸ್ಕರ್ ರಾವ್ ಪ್ರಸಂಗ ಒಂದು ಪಾಠವಾಗಲಿ.

- Advertisement -
- Advertisement -

ಮಾರಣಾಂತಿಕ ಕೊರೋನಾ ವೈರಸ್ ಇಂದು ಇಡೀ ವಿಶ್ವಕ್ಕೆ ಬೆದರಿಕೆ ಒಡ್ಡಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಈ ಸೋಂಕಿಗೆ ಈವರೆಗೆ ನಾನಾ ದೇಶಗಳಲ್ಲಿ 10,000 ಸಾವಿರಕ್ಕೂ ಅಧಿಕ ಜನ ಸಾವನ್ನಪ್ಪಿದ್ದರೆ, ಸುಮಾರು 2 ಲಕ್ಷ ಜನರಿಗೆ ಸೋಂಕು ತಗುಲಿದೆ. ಭಾರತದಲ್ಲೂ ಸ್ಟೇಜ್-2 ರಲ್ಲಿರುವ ಈ ಸೋಂಕು ಈವರೆಗೆ 5 ಜನರನ್ನು ಬಲಿ ಪಡೆದಿದೆ. ಅಲ್ಲದೆ, ಇದು ಸ್ಟೇಜ್-3 ಪ್ರವೇಶಿಸಿದರೆ ಚೀನಾ-ಇಟಲಿಯಂತೆ ಇಲ್ಲೂ ಸಹ ಸಾಲು ಸಾಲು ಹೆಣಗಳು ಉರುಳುವುದು ಖಚಿತ ಎನ್ನಲಾಗುತ್ತಿದೆ. ಪರಿಣಾಮ ಇಡೀ ದೇಶ ಇಂದು ಭಯದಲ್ಲಿರುವುದು ಸುಳ್ಳಲ್ಲ.

ಇಂತಹ ಸಂದರ್ಭದಲ್ಲಿ ಇಡೀ ದೇಶದ ಜನರಿಗೆ ಧೈರ್ಯ ತುಂಬಬೇಕಾದದ್ದು ಹಾಗೂ ತನ್ನ ಸರ್ಕಾರ ಭವಿಷ್ಯದಲ್ಲಿ ಎದುರಾಗಬಹುದಾದ ಮಾರಕ ದಾಳಿಗೆ ಹೇಗೆ ಸಜ್ಜಾಗಿದೆ? ಜನರಿಗೆ ಎಂತಹ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತದೆ? ಎಂದು ಯೋಜನೆ ರೂಪಿಸಿ ಅದನ್ನು ಜನರಿಗೆ ತಿಳಿಸಬೇಕಾದದ್ದು ದೇಶವನ್ನಾಳುವ ಪ್ರಧಾನಿಯ ಜವಾಬ್ದಾರಿಯೂ ಹೌದು.

ಭಾರತದ ಹಳ್ಳಿಗಾಡು ಪ್ರದೇಶದಲ್ಲಿ ಈಗಲೂ ಸುಮಾರು 80 ಕಿಮೀ ಅಂತರದಲ್ಲಿ ಸರ್ಕಾರಿ ಆಸ್ಪತ್ರೆಗಳಿಲ್ಲ. ಇದ್ದರೂ ಅಗತ್ಯವಿದ್ದಷ್ಟು ಬೆಡ್ ವ್ಯವಸ್ಥೆ ಇಲ್ಲ ಎನ್ನುತ್ತಿವೆ ಅಂಕಿಅಂಶಗಳು. ಇನ್ನು ನಗರ ಪ್ರದೇಶದಲ್ಲಿ ಖಾಸಗಿ ಆಸ್ಪತ್ರೆಗಳ ಚಿಕಿತ್ಸೆಯ ರೇಟಿಗೆ ಹೆದರಿ ಎಷ್ಟೋ ಜನ ಖಾಯಿಲೆ ಬಂದರೂ ಆಸ್ಪತ್ರೆಗೆ ಹೋಗಲೇ ಹೆದರುವಂತಹ ಸ್ಥಿತಿ ಇದೆ.

ಇಂತಹ ಸಂದರ್ಭದಲ್ಲಿ ಕೊರೋನಾ ವೈರಸ್ ಪೀಡಿತರಿಗೆ ಸರ್ಕಾರ ಎಂತಹ ಚಿಕಿತ್ಸೆ ನೀಡಲಿದೆ? ಅದರ ಗುಣಮಟ್ಟ ಏನು? ನಗರ ಮತ್ತು ಗ್ರಾಮೀಣ ಭಾಗದಲ್ಲಿ ಈ ವೈರಸ್ ಎದುರಿಸಲು ಕೈಗೊಂಡಿರುವ ಕ್ರಮ ಏನು? ಎಂಬ ಕುರಿತು ಪ್ರಧಾನಿ ಜನರಿಗೆ ತಿಳಿಸುವುದು ಅಗತ್ಯವಾಗಿತ್ತು ಮತ್ತು ಅನಿವಾರ್ಯವೂ ಆಗಿತ್ತು.

ಇಂತಹ ಜನಸ್ನೇಹಿ ಯೋಜನೆಗಳನ್ನು ರೂಪಿಸಬೇಕಾದ ಪ್ರಧಾನಿ ನರೇಂದ್ರ ಮೋದಿ ಗುರುವಾರ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಮಾರ್ಚ್ 22 ರ ಭಾನುವಾರ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ 14 ಗಂಟೆಗಳ ಕಾಲ ʼಜನತಾ ಕರ್ಫ್ಯೂʼ ಹೇರುವಂತೆ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ಅದೇ ದಿನ ಸಂಜೆ 5 ಗಂಟೆಗೆ ಕರೋನಾ ವಿರುದ್ಧ ಹಗಲಿರುಳು ದುಡಿಯುತ್ತಿರುವ ವರ್ಗಗಳಿಗೆ ಧನ್ಯವಾದ ಕೋರುವ ನಿಟ್ಟಿನಲ್ಲಿ ಮನೆ ಬಾಗಿಲು, ಕಿಟಕಿ ಅಥವಾ ಬಾಲ್ಕನಿಯಲ್ಲಿ ನಿಂತು ಚಪ್ಪಾಳೆ ತಟ್ಟಿ ಎಂದು ಕಿವಿಮಾತು ಹೇಳಿದ್ದಾರೆ. ಅದಾಗಿ ಹತ್ತು ನಿಮಿಷದಲ್ಲೇ ಬಿಜೆಪಿ ಸಾಮಾಜಿಕ ಜಾಲತಾಣ ವಿಭಾಗ ಅದನ್ನು ಗ್ರಾಫಿಕ್ಸ್ ಪೇಜ್ ಮೂಲಕ ವ್ಯಾಪಕವಾಗಿ ಸುದ್ದಿ ಪಸರಿಸುವಂತೆ ಮಾಡಿದೆ.

ಸರಿಸುಮಾರು ಅದೇ ಹೊತ್ತಿಗೆ ನೆರೆಯ ಕೇರಳ ರಾಜ್ಯದಲ್ಲಿ ಅಲ್ಲಿನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸುದ್ದಿಗೋಷ್ಟಿ ಕರೆದು ಕರೋನಾ ವಿರುದ್ಧದ ಹೋರಾಟಕ್ಕೆ 20 ಸಾವಿರ ಕೋಟಿ ರೂಪಾಯಿಯ ವಿಶೇಷ ಪ್ಯಾಕೇಜ್ ಘೊಷಣೆ ಮಾಡುತ್ತಾರೆ. ಅಲ್ಲದೇ ತೆರಿಗೆ ವಿನಾಯಿತಿ, ವಿದ್ಯುತ್, ನೀರಿನ ಬಿಲ್ ಪಾವತಿಗೆ ಹೆಚ್ಚುವರಿ ಸಮಯ ನೀಡುವ ಭರವಸೆ ನೀಡುತ್ತಾರೆ. ಆರೋಗ್ಯ ಕ್ಷೇತ್ರಕ್ಕಾಗಿ 500 ಕೋಟಿ ರೂಪಾಯಿ ಮೀಸಲಿಡುವ ಜೊತೆಗೆ ಮುಂಚಿತವಾಗಿಯೇ ವಿಧವಾ ವೇತನ, ವೃದ್ಧಾಪ್ಯ ವೇತನ ಬಿಡುಗಡೆ, ಬಡ ಕುಟುಂಬಗಳಿಗೆ ಸಾಲ ಯೋಜನೆ, ವೈರಸ್ ಹಾವಳಿ ಕಡಿಮೆಯಾಗುವವರೆಗೆ 10 ಕೆಜಿ ಅಕ್ಕಿ ವಿತರಣೆ ಈ ರೀತಿಯ ಹತ್ತು ಹಲವು ಕಾರ್ಯಕ್ರಮಗಳನ್ನು ಘೋಷಿಸುತ್ತಾರೆ.

ಕೇರಳ ಸರ್ಕಾರದ ಜನಸ್ನೇಹಿ ಕಾರ್ಯ ವಿಧಾನವನ್ನು ನರೇಂದ್ರ ಮೋದಿ ಸರ್ಕಾರದ ಕಾರ್ಯ ವಿಧಾನಕ್ಕೆ ಹೋಲಿಕೆ ಮಾಡಲಾಗದಷ್ಟು ವ್ಯತ್ಯಾಸ ಎರಡರ ನಡುವೆ ಇದೆ.

ಆದರೆ, ಇದರ ಹೊರತಾಗಿಯೂ ಜನ ಒಂದು ದಿನ ರಸ್ತೆಗೆ ಇಳಿಯದೆ ಪ್ರಧಾನಿ ಮಾತು ಕೇಳಿ ಮನೆಯಲ್ಲೇ ಇದ್ದರೇ ಈ ವೈರಸ್ ತಹಬಂದಿಗೆ ಬರುತ್ತಾ? ಎಂದು ಪ್ರಶ್ನೆ ಮಾಡಿದರೆ, ಹಾಗೆ ಆಗಲು ಸಾಧ್ಯವೇ ಇಲ್ಲಾ ಎನ್ನುತ್ತಾರೆ ನುರಿತ ವೈದ್ಯರು. ಹಾಗಾದರೆ ಈ ಕೊರೋನಾ ವೈರಸ್ ಹೇಗೆ ಹರಡುತ್ತೆ? ಮತ್ತೆ ಈ ಸೋಂಕು ಎಷ್ಟು ದಿನದಲ್ಲಿ ನಿಮ್ಮ ದೇಹದಲ್ಲಿ ಕಾಣಿಸಿಕೊಳ್ಳುತ್ತೆ ಎಂಬುದಕ್ಕೆ ಇಲ್ಲಿದೆ ಉತ್ತರ.

ಕೊರೋನಾ ಸೋಂಕು ಹರಡುವುದು ಹೇಗೆ ಗೊತ್ತಾ?

ಎಲ್ಲರಿಗೂ ತಿಳಿದಿರುವಂತೆ ಕೊರೋನಾ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಹರಡುವ ಅಂಟು ರೋಗ. ಸೋಂಕು ಪೀಡಿತ ವ್ಯಕ್ತಿ ಸೀನಿದರೆ, ಕೆಮ್ಮಿದರೆ ಅಥವಾ ನಮ್ಮನ್ನು ಸ್ಪರ್ಶಿಸಿದರೆ ಆ ಸೋಂಕು ನಮಗೂ ತಗುಲುವ ಸಾಧ್ಯತೆ ಹೆಚ್ಚು. ಒಂದು ವೇಳೆ ನಿಮಗೆ ಆ ಸೋಂಕು ತಗುಲಿದರೂ ಸಹ ಅದು ಕಾಣಿಸಿಕೊಳ್ಳಲು 5 ದಿನಗಳೇ ಬೇಕಾಗಬಹುದು.

5 ದಿನದ ನಂತರ ನಿಮಗೆ ಕೆಮ್ಮು, ಷೀನು, ಸಿಂಬಳ ಸೇರಿದಂತೆ ರೋಗದ ಗುಣ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಇದಾದ ನಂತರ 14 ದಿನಗಳಲ್ಲಿ ಈ ಸೋಂಕು ಗಂಟಲು ಮತ್ತು ಶ್ವಾಸಕೋಶಕ್ಕೆ ವ್ಯಾಪಿಸಿ ಉಸಿರಾಟದ ತೊಂದರೆ ಉಂಟಾಗಿ ಸಾವು ಸಂಭವಿಸುತ್ತದೆ. ಇದೇ ಕಾರಣಕ್ಕೆ ಸೋಂಕಿಗೆ ಒಳಗಾದ ವ್ಯಕ್ತಿಯನ್ನು 14 ದಿನ ಐಸೋಲೇಷನ್ ಅಂದರೆ ತೀವ್ರ ನಿಗಾ ಘಟಕದಲ್ಲಿ ಇಟ್ಟಿರುವುದು. ಹೀಗಾಗಿ ಈ ಸೋಂಕು ಅಕಸ್ಮಾತ್ ನಿಮ್ಮಲ್ಲಿದ್ದರೆ ಅದು 19 ರಿಂದ 20 ದಿನ ಜೀವಂತವಾಗಿರುತ್ತದೆ. ಹಾಗೆ ನೋಡಿದರೆ ಇಡೀ ದೇಶಕ್ಕೆ 20 ದಿನ ಕರ್ಫ್ಯೂ ಹೇರಬೇಕು. ಹೀಗಾಗಿ ಕೇವಲ ಒಂದು ದಿನ ಕರ್ಫ್ಯೂ ಹೇರಿ ಏನುಪಯೋಗ? ಎಂಬುದು ನುರಿತ ವೈದ್ಯರ ಪ್ರಶ್ನೆ.

ಅದಿರಲಿ ಪ್ರಧಾನಿ ನರೇಂದ್ರ ಮೋದಿ ಅವರ ಇಂತಹ ರಾತ್ರಿ ೮ರ ಘೋಷಣೆಗೆ ಬೇರೆ ರೀತಿಯ ಇತಿಹಾಸವಿದೆ. ಆದರೂ, ಪ್ರಧಾನಿ ದಯವಿಟ್ಟು ಜನ ರಸ್ತೆಗೆ ಇಳಿಯಬೇಡಿ ಎಂದು ಮನವಿ ಮಾಡಿದ್ದಾರೆಯೇ ವಿನಃ ಆದೇಶ ಹೊರಡಿಸಿಲ್ಲ. ಹಾಗೆ ಆದೇಶ ಹೊರಡಿಸುವ ಹಕ್ಕು ಅವರಿಗೂ ಇಲ್ಲ ಎಂಬುದು ಬೇರೆ ವಿಚಾರ. ಆದರೆ, ಅವರ ಮನವಿಯೇ ಶಾಸನ ಎಂಬಂತಹ ಭ್ರಮೆಯಲ್ಲಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಇಡೀ ದೇಶದಲ್ಲಿ ಯಾವ ಪೊಲೀಸ್ ಅಧಿಕಾರಿಯೂ ಮಾಡಲು ಮುಂದಾಗದ ಕೆಲಸಕ್ಕೆ ಮುಂದಾಗಿ ಇದೀಗ ಪೇಚಿಗೆ ಮತ್ತು ನಗೆಪಾಟಲಿಗೆ ಸಿಲುಕಿದ್ದಾರೆ.

ರಸ್ತೆಗಿಳಿದರೆ ಕೇಸ್ ಹಾಕ್ತಾರಂತೆ ಭಾಸ್ಕರ್ ರಾವ್!

ಮಾರ್ಚ್ 22 ಭಾನುವಾರ ದೇಶದಾದ್ಯಂತ ಜನತಾ ಕರ್ಫ್ಯೂ ಆಚರಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ ಬೆನ್ನಿಗೆ ಇಂದು ಪತ್ರಿಕಾಗೋಷ್ಠಿ ನಡೆಸಿ ಬೆಂಗಳೂರು ನಾಗರೀಕರಿಗೆ ಎಚ್ಚರಿಕೆ ನೀಡಿರುವ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, “ಭಾನುವಾರ ದೇಶದಾದ್ಯಂತ ಜನತಾ ಕರ್ಫ್ಯೂ ಇರುವ ಹಿನ್ನೆಲೆ ಸಾರ್ವಜನಿಕರು ಮನೆಯಲ್ಲೇ ಇದ್ದು ಸಹಕರಿಸಬೇಕು. ಪ್ರವಾಸ, ವಾಕಿಂಗ್, ಕಾರ್ಯಕ್ರಮ ಅಂತ ಓಡಾಡುವಂತಿಲ್ಲ. ಅಕಸ್ಮಾತ್ ರಸ್ತೆ ಮೇಲೆ ತಿರುಗಾಡಿದ್ರೆ act 31(L) ಅಡಿಯಲ್ಲಿ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತೆ. ಪ್ರಕರಣ ದಾಖಲಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಭಾಸ್ಕರ್ ರಾವ್ ಮಾಧ್ಯಮಗಳ ಎದುರು ಹೀಗೊಂದು ಹೇಳಿಕೆ ನೀಡುತ್ತಿದ್ದಂತೆ ಎಚ್ಚೆತ್ತಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರಿಗೆ ಸರಿಯಾಗಿಯೇ ಕ್ಲಾಸ್ ತಗೊಂಡಿದ್ದಾರೆ, “ಭಾನುವಾರ ರಸ್ತೆ ಮೇಲೆ ಓಡಾಡಿದ್ರೆ ಕೇಸ್ ಹಾಕ್ತೀರ? ನಿಮಗೆ ಯಾರು ಇಂತಹ ಅಧಿಕಾರ ಕೊಟ್ಟದ್ದು? ಕೇಸ್ ಹಾಕೋದಕ್ಕೆ ಕಾನೂನಿನಲ್ಲಿ ಅವಕಾಶ ಇದೆಯಾ?

ಏಕೆ ಆ ರೀತಿ ಹೆದರಿಸುವ ಹೇಳಿಕೆ ಕೊಡ್ತೀರಾ..? ಜನರು ಸ್ವಯಂಪ್ರೇರಿತರಾಗಿ ಮನೆಯಲ್ಲಿ ಇರೋದೆ ಜನತಾ ಕರ್ಫ್ಯೂ. ಹೀಗೆ ಹೇಳಿಕೆ ಕೊಟ್ಟು ಜನರಲ್ಲಿ ಗೊಂದಲ ಮೂಡಿಸಬೇಡಿ ಎಂದು ಎಂದು ತಾಕೀತು ಮಾಡಿದ್ದಾರೆ. ಈ ಕುರಿತು ವಿವರಣೆ ಕೇಳಿ ನೊಟೀಸ್ ಸಹ ನೀಡಿದ್ದಾರೆ. ಅಲ್ಲದೆ, ಸಭೆಯಲ್ಲಿ ಭಾಸ್ಕರ್ ರಾವ್ ಅವರನ್ನು ಸರಿಯಾಗಿಯೇ ಜಾಡಿಸಿದ್ದಾರೆ ಎನ್ನಲಾಗುತ್ತಿದೆ.

ಒಟ್ಟಾರೆ ಪ್ರಧಾನಿಯ ಮಾತೇ ವೇದವಾಕ್ಯ ಎಂದು ಭ್ರಮೆಯಿಂದ ವ್ಯಕ್ತಿ ನಿಷ್ಠೆ ತೋರಿಸಲು ಮುಂದಾಗುವ ಕಮಲಪ್ರಿಯ ಅಧಿಕಾರಿಗಳಿಗೆ ಇಂದಿನ ಭಾಸ್ಕರ್ ರಾವ್ ಪ್ರಸಂಗ ಒಂದು ಪಾಠವಾಗಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...