Homeಮುಖಪುಟಕಪಿಲ್‌ ಮಿಶ್ರಾ ನಮ್ಮ ಹಳೆಯ ವಿದ್ಯಾರ್ಥಿಯೆಂದು ಕರೆಯಲು ನಾಚಿಕೆಯಾಗುತ್ತದೆ:DSSW

ಕಪಿಲ್‌ ಮಿಶ್ರಾ ನಮ್ಮ ಹಳೆಯ ವಿದ್ಯಾರ್ಥಿಯೆಂದು ಕರೆಯಲು ನಾಚಿಕೆಯಾಗುತ್ತದೆ:DSSW

- Advertisement -
- Advertisement -

ದೆಹಲಿ ಸ್ಕೂಲ್ ಆಫ್ ಸೋಷಿಯಲ್ ವರ್ಕ್‌ನ ವಿದ್ಯಾರ್ಥಿಗಳು ಕಪಿಲ್ ಮಿಶ್ರಾ ಅವರನ್ನು ಅದರ ಹಳೆಯ ವಿದ್ಯಾರ್ಥಿಯೆಂದು ಕರೆಯಲು ಅನರ್ಹನಾಗಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದು ಆತನ ಬಂಧನಕ್ಕೆ ಒತ್ತಾಯಿಸಿದ್ದಾರೆ.

ದೆಹಲಿ ಹಿಂಸಾಚಾರಕ್ಕೆ ಕಪಿಲ್‌ ಮಿಶ್ರಾರವರ ಪ್ರಚೋದನಾಕಾರಿ ಮಾತುಗಳೇ ಕಾರಣವೆಂದು ದೆಹಲಿ ಹೈಕೋರ್ಟ್‌ ಹೇಳಿದ ಬೆನ್ನಲ್ಲೇ ಈ ಕುರಿತು ಬಹಿರಂಗ ಪತ್ರವನ್ನು ವಿದ್ಯಾರ್ಥಿಗಳು ಬರೆದಿದ್ದು ಅದು ವೈರಲ್‌ ಆಗಿದೆ. ಅದರ ಸಾರಂಶ ಕೆಳಗಿನಂತಿದೆ.

ಕಪಿಲ್ ಮಿಶ್ರಾ, ನೀವು ದೆಹಲಿ ಸ್ಕೂಲ್ ಆಫ್ ಸೋಷಿಯಲ್ ವರ್ಕ್‌ನ ಹಳೆಯ ವಿದ್ಯಾರ್ಥಿ ಎಂದು ಕರೆಸಿಕೊಳ್ಳು ಅರ್ಹನಲ್ಲ. 

ದೆಹಲಿ ವಿಶ್ವವಿದ್ಯಾಲಯದ ದೆಹಲಿ ಸ್ಕೂಲ್ ಆಫ್ ಸೋಷಿಯಲ್ ವರ್ಕ್, 1947 ರ ವಿಭಜನಾ ಗಲಭೆಯ ಸಮಯದಲ್ಲಿ ಮತ್ತು ನಂತರ 1984 ರ ಸಿಖ್ ಗಲಭೆಗಳಲ್ಲಿ ಸಂಭವಿಸಿದ ಕೆಟ್ಟ ಪರಿಸ್ಥಿತಿಯನ್ನು ಪರಿಹರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. 1946 ರಿಂದ ಇಲ್ಲಿಯವರೆಗೆ ದೆಹಲಿ ವಿಶ್ವವಿದ್ಯಾಲಯದ ಸಾಮಾಜಿಕ ಕಾರ್ಯ ವಿಭಾಗವು ತಮ್ಮ ಕೆಲಸಗಳ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರಲು ಪ್ರಯತ್ನಿಸುತ್ತಿರುವ ನಿರ್ದೇಶಕರು, ನಾಯಕರು, ಬರಹಗಾರರು, ಅಧಿಕಾರಿಗಳು, ಶಿಕ್ಷಣ ತಜ್ಞರು ಸೇರಿದಂತೆ ಅನೇಕ ಸಾಮಾಜಿಕ ಕಾರ್ಯಕರ್ತರನ್ನು ನೀಡಿದೆ.

ಒಂದು ರೀತಿಯಲ್ಲಿ, ನಮ್ಮಲ್ಲಿ ಅದ್ಭುತವಾದ ಇತಿಹಾಸವಿದೆ ಮತ್ತು ಮತ್ತೊಂದೆಡೆ ನಮ್ಮ ಹಳೆಯ ವಿದ್ಯಾರ್ಥಿ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅವರಂತಹ ಕಳಂಕವಿದೆ. ಅವರು ಇತ್ತೀಚಿನ ದೆಹಲಿ ಗಲಭೆಗಳನ್ನು ಆಯೋಜಿಸಿದ್ದಾರೆ ಮತ್ತು ನಗರದ ಕೋಮು ಸೌಹಾರ್ದತೆಗೆ ಭಂಗ ತರುವಂತೆ ಜನಸಮೂಹವನ್ನು ಪ್ರಚೋದಿಸಿದ್ದಾರೆ. ಕಳೆದ 3-4 ದಿನಗಳಲ್ಲಿ ಸಮುದಾಯದ ನಂಬಿಕೆಗೆ ಕಳಂಕ ಉಂಟಾಗಿದೆ ಮತ್ತು ಅನೇಕ ಜನರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ, ಸಾವಿರಾರು ಜನರು ತಮ್ಮ ಮನೆ ಮತ್ತು ಜೀವನೋಪಾಯವನ್ನು ಕಳೆದುಕೊಂಡಿದ್ದಾರೆ.

ಹಾಗಾಗಿ ಕಪಿಲ್ ಮಿಶ್ರಾ ಅವರ ಬಗ್ಗೆ ಮತ್ತು ಅವರು ಅವರು ನಮ್ಮ ಕಾಲೇಜಿನಲ್ಲಿ ಸೋಷಿಯಲ್ ವರ್ಕ್ ಅಧ್ಯಯನ ಮಾಡಿದ್ದರ ಬಗ್ಗೆ ನಾವು ನಾಚಿಕೆಪಡುತ್ತೇವೆ. ಅವರ ಪ್ರಚೋದನಕಾರಿ ಕೃತ್ಯಗಳು ಮತ್ತು ಕೋಮುವಾದಿ ಹೇಳಿಕೆಗಳಿಂದಾಗಿ ನಮ್ಮ ಇಲಾಖೆ ಮತ್ತು ಸಾಮಾಜಿಕ ಕಾರ್ಯ ವೃತ್ತಿಯ ಚಿತ್ರಣವು ಕಳಂಕಿತವಾಗಿದೆ. ನಾವು DSSW ಸಮುದಯವು ಕಪಿಲ್ ಮಿಶ್ರಾ ಹರಡಿದ ದ್ವೇಷ, ಹಿಂಸೆ ಮತ್ತು ಕೋಮುವಾದಕ್ಕೆ ವಿರುದ್ಧವಾಗಿದ್ದೇವೆ. ಅವರು ನಮ್ಮ ವೃತ್ತಿಯನ್ನು ಕೆಟ್ಟದಾಗಿ ಬಿಂಬಿಸಿದ್ದಾರೆ.

ಆತನನ್ನು ಬಂಧಿಸಿ ಅಂತಹ ಎಲ್ಲ ಜನರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾವು ದೆಹಲಿ ಪೊಲೀಸರನ್ನು ಒತ್ತಾಯಿಸುತ್ತೇವೆ. ನಾವು ಕೋಮುವಾದದ ವಿರುದ್ಧ ಒಗ್ಗಟ್ಟಾಗಿ ನಿಲ್ಲುತ್ತೇವೆ! ಎಂದು ಅನೀಶ್ ಕುಮಾರ್ ಮತ್ತು ಅಜಯ್ ವಿಜಯ್ ರಾಹುಲ್ವಾಡ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...