Homeಮುಖಪುಟಕಪಿಲ್‌ ಮಿಶ್ರಾ ನಮ್ಮ ಹಳೆಯ ವಿದ್ಯಾರ್ಥಿಯೆಂದು ಕರೆಯಲು ನಾಚಿಕೆಯಾಗುತ್ತದೆ:DSSW

ಕಪಿಲ್‌ ಮಿಶ್ರಾ ನಮ್ಮ ಹಳೆಯ ವಿದ್ಯಾರ್ಥಿಯೆಂದು ಕರೆಯಲು ನಾಚಿಕೆಯಾಗುತ್ತದೆ:DSSW

- Advertisement -
- Advertisement -

ದೆಹಲಿ ಸ್ಕೂಲ್ ಆಫ್ ಸೋಷಿಯಲ್ ವರ್ಕ್‌ನ ವಿದ್ಯಾರ್ಥಿಗಳು ಕಪಿಲ್ ಮಿಶ್ರಾ ಅವರನ್ನು ಅದರ ಹಳೆಯ ವಿದ್ಯಾರ್ಥಿಯೆಂದು ಕರೆಯಲು ಅನರ್ಹನಾಗಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದು ಆತನ ಬಂಧನಕ್ಕೆ ಒತ್ತಾಯಿಸಿದ್ದಾರೆ.

ದೆಹಲಿ ಹಿಂಸಾಚಾರಕ್ಕೆ ಕಪಿಲ್‌ ಮಿಶ್ರಾರವರ ಪ್ರಚೋದನಾಕಾರಿ ಮಾತುಗಳೇ ಕಾರಣವೆಂದು ದೆಹಲಿ ಹೈಕೋರ್ಟ್‌ ಹೇಳಿದ ಬೆನ್ನಲ್ಲೇ ಈ ಕುರಿತು ಬಹಿರಂಗ ಪತ್ರವನ್ನು ವಿದ್ಯಾರ್ಥಿಗಳು ಬರೆದಿದ್ದು ಅದು ವೈರಲ್‌ ಆಗಿದೆ. ಅದರ ಸಾರಂಶ ಕೆಳಗಿನಂತಿದೆ.

ಕಪಿಲ್ ಮಿಶ್ರಾ, ನೀವು ದೆಹಲಿ ಸ್ಕೂಲ್ ಆಫ್ ಸೋಷಿಯಲ್ ವರ್ಕ್‌ನ ಹಳೆಯ ವಿದ್ಯಾರ್ಥಿ ಎಂದು ಕರೆಸಿಕೊಳ್ಳು ಅರ್ಹನಲ್ಲ. 

ದೆಹಲಿ ವಿಶ್ವವಿದ್ಯಾಲಯದ ದೆಹಲಿ ಸ್ಕೂಲ್ ಆಫ್ ಸೋಷಿಯಲ್ ವರ್ಕ್, 1947 ರ ವಿಭಜನಾ ಗಲಭೆಯ ಸಮಯದಲ್ಲಿ ಮತ್ತು ನಂತರ 1984 ರ ಸಿಖ್ ಗಲಭೆಗಳಲ್ಲಿ ಸಂಭವಿಸಿದ ಕೆಟ್ಟ ಪರಿಸ್ಥಿತಿಯನ್ನು ಪರಿಹರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. 1946 ರಿಂದ ಇಲ್ಲಿಯವರೆಗೆ ದೆಹಲಿ ವಿಶ್ವವಿದ್ಯಾಲಯದ ಸಾಮಾಜಿಕ ಕಾರ್ಯ ವಿಭಾಗವು ತಮ್ಮ ಕೆಲಸಗಳ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರಲು ಪ್ರಯತ್ನಿಸುತ್ತಿರುವ ನಿರ್ದೇಶಕರು, ನಾಯಕರು, ಬರಹಗಾರರು, ಅಧಿಕಾರಿಗಳು, ಶಿಕ್ಷಣ ತಜ್ಞರು ಸೇರಿದಂತೆ ಅನೇಕ ಸಾಮಾಜಿಕ ಕಾರ್ಯಕರ್ತರನ್ನು ನೀಡಿದೆ.

ಒಂದು ರೀತಿಯಲ್ಲಿ, ನಮ್ಮಲ್ಲಿ ಅದ್ಭುತವಾದ ಇತಿಹಾಸವಿದೆ ಮತ್ತು ಮತ್ತೊಂದೆಡೆ ನಮ್ಮ ಹಳೆಯ ವಿದ್ಯಾರ್ಥಿ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅವರಂತಹ ಕಳಂಕವಿದೆ. ಅವರು ಇತ್ತೀಚಿನ ದೆಹಲಿ ಗಲಭೆಗಳನ್ನು ಆಯೋಜಿಸಿದ್ದಾರೆ ಮತ್ತು ನಗರದ ಕೋಮು ಸೌಹಾರ್ದತೆಗೆ ಭಂಗ ತರುವಂತೆ ಜನಸಮೂಹವನ್ನು ಪ್ರಚೋದಿಸಿದ್ದಾರೆ. ಕಳೆದ 3-4 ದಿನಗಳಲ್ಲಿ ಸಮುದಾಯದ ನಂಬಿಕೆಗೆ ಕಳಂಕ ಉಂಟಾಗಿದೆ ಮತ್ತು ಅನೇಕ ಜನರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ, ಸಾವಿರಾರು ಜನರು ತಮ್ಮ ಮನೆ ಮತ್ತು ಜೀವನೋಪಾಯವನ್ನು ಕಳೆದುಕೊಂಡಿದ್ದಾರೆ.

ಹಾಗಾಗಿ ಕಪಿಲ್ ಮಿಶ್ರಾ ಅವರ ಬಗ್ಗೆ ಮತ್ತು ಅವರು ಅವರು ನಮ್ಮ ಕಾಲೇಜಿನಲ್ಲಿ ಸೋಷಿಯಲ್ ವರ್ಕ್ ಅಧ್ಯಯನ ಮಾಡಿದ್ದರ ಬಗ್ಗೆ ನಾವು ನಾಚಿಕೆಪಡುತ್ತೇವೆ. ಅವರ ಪ್ರಚೋದನಕಾರಿ ಕೃತ್ಯಗಳು ಮತ್ತು ಕೋಮುವಾದಿ ಹೇಳಿಕೆಗಳಿಂದಾಗಿ ನಮ್ಮ ಇಲಾಖೆ ಮತ್ತು ಸಾಮಾಜಿಕ ಕಾರ್ಯ ವೃತ್ತಿಯ ಚಿತ್ರಣವು ಕಳಂಕಿತವಾಗಿದೆ. ನಾವು DSSW ಸಮುದಯವು ಕಪಿಲ್ ಮಿಶ್ರಾ ಹರಡಿದ ದ್ವೇಷ, ಹಿಂಸೆ ಮತ್ತು ಕೋಮುವಾದಕ್ಕೆ ವಿರುದ್ಧವಾಗಿದ್ದೇವೆ. ಅವರು ನಮ್ಮ ವೃತ್ತಿಯನ್ನು ಕೆಟ್ಟದಾಗಿ ಬಿಂಬಿಸಿದ್ದಾರೆ.

ಆತನನ್ನು ಬಂಧಿಸಿ ಅಂತಹ ಎಲ್ಲ ಜನರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾವು ದೆಹಲಿ ಪೊಲೀಸರನ್ನು ಒತ್ತಾಯಿಸುತ್ತೇವೆ. ನಾವು ಕೋಮುವಾದದ ವಿರುದ್ಧ ಒಗ್ಗಟ್ಟಾಗಿ ನಿಲ್ಲುತ್ತೇವೆ! ಎಂದು ಅನೀಶ್ ಕುಮಾರ್ ಮತ್ತು ಅಜಯ್ ವಿಜಯ್ ರಾಹುಲ್ವಾಡ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...