Homeಮುಖಪುಟಕಪಿಲ್‌ ಮಿಶ್ರಾ ನಮ್ಮ ಹಳೆಯ ವಿದ್ಯಾರ್ಥಿಯೆಂದು ಕರೆಯಲು ನಾಚಿಕೆಯಾಗುತ್ತದೆ:DSSW

ಕಪಿಲ್‌ ಮಿಶ್ರಾ ನಮ್ಮ ಹಳೆಯ ವಿದ್ಯಾರ್ಥಿಯೆಂದು ಕರೆಯಲು ನಾಚಿಕೆಯಾಗುತ್ತದೆ:DSSW

- Advertisement -
- Advertisement -

ದೆಹಲಿ ಸ್ಕೂಲ್ ಆಫ್ ಸೋಷಿಯಲ್ ವರ್ಕ್‌ನ ವಿದ್ಯಾರ್ಥಿಗಳು ಕಪಿಲ್ ಮಿಶ್ರಾ ಅವರನ್ನು ಅದರ ಹಳೆಯ ವಿದ್ಯಾರ್ಥಿಯೆಂದು ಕರೆಯಲು ಅನರ್ಹನಾಗಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದು ಆತನ ಬಂಧನಕ್ಕೆ ಒತ್ತಾಯಿಸಿದ್ದಾರೆ.

ದೆಹಲಿ ಹಿಂಸಾಚಾರಕ್ಕೆ ಕಪಿಲ್‌ ಮಿಶ್ರಾರವರ ಪ್ರಚೋದನಾಕಾರಿ ಮಾತುಗಳೇ ಕಾರಣವೆಂದು ದೆಹಲಿ ಹೈಕೋರ್ಟ್‌ ಹೇಳಿದ ಬೆನ್ನಲ್ಲೇ ಈ ಕುರಿತು ಬಹಿರಂಗ ಪತ್ರವನ್ನು ವಿದ್ಯಾರ್ಥಿಗಳು ಬರೆದಿದ್ದು ಅದು ವೈರಲ್‌ ಆಗಿದೆ. ಅದರ ಸಾರಂಶ ಕೆಳಗಿನಂತಿದೆ.

ಕಪಿಲ್ ಮಿಶ್ರಾ, ನೀವು ದೆಹಲಿ ಸ್ಕೂಲ್ ಆಫ್ ಸೋಷಿಯಲ್ ವರ್ಕ್‌ನ ಹಳೆಯ ವಿದ್ಯಾರ್ಥಿ ಎಂದು ಕರೆಸಿಕೊಳ್ಳು ಅರ್ಹನಲ್ಲ. 

ದೆಹಲಿ ವಿಶ್ವವಿದ್ಯಾಲಯದ ದೆಹಲಿ ಸ್ಕೂಲ್ ಆಫ್ ಸೋಷಿಯಲ್ ವರ್ಕ್, 1947 ರ ವಿಭಜನಾ ಗಲಭೆಯ ಸಮಯದಲ್ಲಿ ಮತ್ತು ನಂತರ 1984 ರ ಸಿಖ್ ಗಲಭೆಗಳಲ್ಲಿ ಸಂಭವಿಸಿದ ಕೆಟ್ಟ ಪರಿಸ್ಥಿತಿಯನ್ನು ಪರಿಹರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. 1946 ರಿಂದ ಇಲ್ಲಿಯವರೆಗೆ ದೆಹಲಿ ವಿಶ್ವವಿದ್ಯಾಲಯದ ಸಾಮಾಜಿಕ ಕಾರ್ಯ ವಿಭಾಗವು ತಮ್ಮ ಕೆಲಸಗಳ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರಲು ಪ್ರಯತ್ನಿಸುತ್ತಿರುವ ನಿರ್ದೇಶಕರು, ನಾಯಕರು, ಬರಹಗಾರರು, ಅಧಿಕಾರಿಗಳು, ಶಿಕ್ಷಣ ತಜ್ಞರು ಸೇರಿದಂತೆ ಅನೇಕ ಸಾಮಾಜಿಕ ಕಾರ್ಯಕರ್ತರನ್ನು ನೀಡಿದೆ.

ಒಂದು ರೀತಿಯಲ್ಲಿ, ನಮ್ಮಲ್ಲಿ ಅದ್ಭುತವಾದ ಇತಿಹಾಸವಿದೆ ಮತ್ತು ಮತ್ತೊಂದೆಡೆ ನಮ್ಮ ಹಳೆಯ ವಿದ್ಯಾರ್ಥಿ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅವರಂತಹ ಕಳಂಕವಿದೆ. ಅವರು ಇತ್ತೀಚಿನ ದೆಹಲಿ ಗಲಭೆಗಳನ್ನು ಆಯೋಜಿಸಿದ್ದಾರೆ ಮತ್ತು ನಗರದ ಕೋಮು ಸೌಹಾರ್ದತೆಗೆ ಭಂಗ ತರುವಂತೆ ಜನಸಮೂಹವನ್ನು ಪ್ರಚೋದಿಸಿದ್ದಾರೆ. ಕಳೆದ 3-4 ದಿನಗಳಲ್ಲಿ ಸಮುದಾಯದ ನಂಬಿಕೆಗೆ ಕಳಂಕ ಉಂಟಾಗಿದೆ ಮತ್ತು ಅನೇಕ ಜನರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ, ಸಾವಿರಾರು ಜನರು ತಮ್ಮ ಮನೆ ಮತ್ತು ಜೀವನೋಪಾಯವನ್ನು ಕಳೆದುಕೊಂಡಿದ್ದಾರೆ.

ಹಾಗಾಗಿ ಕಪಿಲ್ ಮಿಶ್ರಾ ಅವರ ಬಗ್ಗೆ ಮತ್ತು ಅವರು ಅವರು ನಮ್ಮ ಕಾಲೇಜಿನಲ್ಲಿ ಸೋಷಿಯಲ್ ವರ್ಕ್ ಅಧ್ಯಯನ ಮಾಡಿದ್ದರ ಬಗ್ಗೆ ನಾವು ನಾಚಿಕೆಪಡುತ್ತೇವೆ. ಅವರ ಪ್ರಚೋದನಕಾರಿ ಕೃತ್ಯಗಳು ಮತ್ತು ಕೋಮುವಾದಿ ಹೇಳಿಕೆಗಳಿಂದಾಗಿ ನಮ್ಮ ಇಲಾಖೆ ಮತ್ತು ಸಾಮಾಜಿಕ ಕಾರ್ಯ ವೃತ್ತಿಯ ಚಿತ್ರಣವು ಕಳಂಕಿತವಾಗಿದೆ. ನಾವು DSSW ಸಮುದಯವು ಕಪಿಲ್ ಮಿಶ್ರಾ ಹರಡಿದ ದ್ವೇಷ, ಹಿಂಸೆ ಮತ್ತು ಕೋಮುವಾದಕ್ಕೆ ವಿರುದ್ಧವಾಗಿದ್ದೇವೆ. ಅವರು ನಮ್ಮ ವೃತ್ತಿಯನ್ನು ಕೆಟ್ಟದಾಗಿ ಬಿಂಬಿಸಿದ್ದಾರೆ.

ಆತನನ್ನು ಬಂಧಿಸಿ ಅಂತಹ ಎಲ್ಲ ಜನರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾವು ದೆಹಲಿ ಪೊಲೀಸರನ್ನು ಒತ್ತಾಯಿಸುತ್ತೇವೆ. ನಾವು ಕೋಮುವಾದದ ವಿರುದ್ಧ ಒಗ್ಗಟ್ಟಾಗಿ ನಿಲ್ಲುತ್ತೇವೆ! ಎಂದು ಅನೀಶ್ ಕುಮಾರ್ ಮತ್ತು ಅಜಯ್ ವಿಜಯ್ ರಾಹುಲ್ವಾಡ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...