Homeಮುಖಪುಟಮೃತ್ಯುಂಜಯ ಸ್ವಾಮಿಗೆ ಬಿಜೆಪಿಯಿಂದ ಸುಪಾರಿ - ಅಹಿಂದ ನಾಯಕ ಕೆ.ಎಸ್. ಶಿವರಾಮು

ಮೃತ್ಯುಂಜಯ ಸ್ವಾಮಿಗೆ ಬಿಜೆಪಿಯಿಂದ ಸುಪಾರಿ – ಅಹಿಂದ ನಾಯಕ ಕೆ.ಎಸ್. ಶಿವರಾಮು

- Advertisement -
- Advertisement -

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮಿ ಅವರಿಗೆ ಬಿಜೆಪಿಯವರು ಸುಪಾರಿ ನೀಡಿದ್ದಾರೆ” ಎಂದು ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್. ಶಿವರಾಮು ದೂರಿದ್ದಾರೆ. ಮೃತ್ಯುಂಜಯ ಸ್ವಾಮಿಗೆ

ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಮೈಸೂರಿನಲ್ಲಿ ಸಭೆ ನಡೆಸಿ ಸಿಎಂ ಸಿದ್ದರಾಮಯ್ಯ ಅವರನ್ನು ಸಮರ್ಥಿಸಿಕೊಂಡಿದ್ದು, ಸಿಎಂ ಸಿದ್ದರಾಮಯ್ಯ ಅವರನ್ನು ಲಿಂಗಾಯತ ವಿರೋಧಿ ಎಂದು ಕರೆದಿರುವ ಕೂಡಲಸಂಗಮ ಬಸವಜಯ ಮೃತ್ಯುಂಜಯ ಸ್ವಾಮಿ ಹೇಳಿಕೆ ಖಂಡಿಸಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.

ಮೈಸೂರಿನ ಜಲದರ್ಶಿನಿ ಅತಿಥಿಗೃಹದಲ್ಲಿ ಶನಿವಾರ ಆಯೋಜಿಸಿದ್ದ ದುಂಡು ಮೇಜಿನ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಕೆಲವು ವರ್ಷಗಳ ಹಿಂದೆಯಷ್ಟೆ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ್ದ ಸ್ವಾಮೀಜಿ ಈಗ ದ್ವೇಷ ಕಾರುತ್ತಿದ್ದಾರೆ. ಒಂದು ಸಮುದಾಯವನ್ನು ಸಿದ್ದರಾಮಯ್ಯ ವಿರುದ್ಧ ಎತ್ತಿಕಟ್ಟುವ ಷಡ್ಯಂತ್ರ ಸ್ವಾಮೀಜಿ ಅವರದ್ದಾಗಿದೆ. ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ಅನುಸರಿಸುತ್ತಿದ್ದಾರೆ. ಹಿಂದುಳಿದ ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಕೆಲಸದ ಮೂಲಕ ಅಪನಂಬಿಕೆ ಸೃಷ್ಟಿಸುತ್ತಿದ್ದಾರೆ. ಸೌಹಾರ್ದ ಹಾಳಾಗಲೆಂದು ಕುಮ್ಮಕ್ಕು ಕೊಡುತ್ತಿದ್ದಾರೆ. ರಾಜಕೀಯ ಪುಢಾರಿ ರೀತಿ ಅವರು ಮಾತನಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಬಿಜೆಪಿಯವರು, ಸಿದ್ದರಾಮಯ್ಯ ಅವರ ತಪ್ಪಿಲ್ಲದಿದ್ದರೂ ಮುಡಾ, ಮಹರ್ಷಿ ವಾಲ್ಮೀಕಿ ನಿಗಮದ ಹಗರಣವನ್ನು ಮುಂದಿಟ್ಟುಕೊಂಡು ಅಧಿಕಾರದಿಂದ ಕೆಳಗಿಳಿಸಲು ಪ್ರಯತ್ನಿಸಿದರು. ಆದರೆ, ಇದರಿಂದ ಪ್ರಯೋಜನ ಆಗದಿದ್ದಕ್ಕೆ ಸ್ವಾಮೀಜಿಯನ್ನು ಎತ್ತಿ ಕಟ್ಟಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ. ಮೃತ್ಯುಂಜಯ ಸ್ವಾಮಿಗೆ

“ಸ್ವಾಮೀಜಿ ಅವರಂತೆ ಮಾತನಾಡಲು ನಮಗೂ ಬರುತ್ತದೆ. ಆದರೆ, ಅದಕ್ಕೆ ಅವಕಾಶ ಕೊಡುವ ಕೆಲಸವನ್ನು ಅವರು ಮಾಡಬಾರದು. ಲಿಂಗಾಯತ ಪಂಚಮಸಾಲಿ ಸಮಾಜ ಎಲ್ಲ ರೀತಿಯಲ್ಲೂ ಮುಂದುವರಿದಿದೆ. ಅವರನ್ನು ಹಿಂದುಳಿದ ವರ್ಗ-2ಎಗೆ ಸೇರಿಸಲು ನಮ್ಮ ಪ್ರಬಲ ವಿರೋಧವಿದೆ. ಒಂದು ಜಾತಿಯ ಪರವಾಗಿ ಗುರುತಿಸಿಕೊಂಡರೆ ಅಂಥವರು ಸನ್ಯಾಸಿಯಾಗಲು ಯೋಗ್ಯರಲ್ಲ; ಹಗಲುವೇಷ ಹಾಕಿದವರು ಎನ್ನಬೇಕಾಗುತ್ತದೆ” ಎಂದು ಕೆ ಎಸ್ ಶಿವರಾಮು ಟೀಕಿಸಿದ್ದಾರೆ.

“ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂಬ ಜಾತಿವಾದಿಗಳ ಹುನ್ನಾರದ ಭಾಗವಾಗಿ ಷಡ್ಯಂತ್ರ ಮಾಡುತ್ತಿದ್ದಾರೆ. ಸಂಚು ರೂಪಿಸುತ್ತಿದ್ದಾರೆ. ಜಾತಿ ಮುಂದಿಟ್ಟುಕೊಂಡು ಅಶಾಂತಿ ಸೃಷ್ಟಿಸುತ್ತಿದ್ದಾರೆ” ಎಂದು ಅಹಿಂದ ಮುಖಂಡ ಶಿವಣ್ಣ ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿಗೆ ಸಂವಿಧಾನದ ವಿಧಿಗಳ ಪಾಠ ಮಾಡಬೇಕು – ಸಂಸದ ಅಸಾದುದ್ದೀನ್ ಓವೈಸಿ

ಪ್ರಧಾನಿಗೆ ಸಂವಿಧಾನದ ವಿಧಿಗಳ ಪಾಠ ಮಾಡಬೇಕು – ಸಂಸದ ಅಸಾದುದ್ದೀನ್ ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...