Homeಮುಖಪುಟಮೃತ್ಯುಂಜಯ ಸ್ವಾಮಿಗೆ ಬಿಜೆಪಿಯಿಂದ ಸುಪಾರಿ - ಅಹಿಂದ ನಾಯಕ ಕೆ.ಎಸ್. ಶಿವರಾಮು

ಮೃತ್ಯುಂಜಯ ಸ್ವಾಮಿಗೆ ಬಿಜೆಪಿಯಿಂದ ಸುಪಾರಿ – ಅಹಿಂದ ನಾಯಕ ಕೆ.ಎಸ್. ಶಿವರಾಮು

- Advertisement -
- Advertisement -

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮಿ ಅವರಿಗೆ ಬಿಜೆಪಿಯವರು ಸುಪಾರಿ ನೀಡಿದ್ದಾರೆ” ಎಂದು ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್. ಶಿವರಾಮು ದೂರಿದ್ದಾರೆ. ಮೃತ್ಯುಂಜಯ ಸ್ವಾಮಿಗೆ

ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಮೈಸೂರಿನಲ್ಲಿ ಸಭೆ ನಡೆಸಿ ಸಿಎಂ ಸಿದ್ದರಾಮಯ್ಯ ಅವರನ್ನು ಸಮರ್ಥಿಸಿಕೊಂಡಿದ್ದು, ಸಿಎಂ ಸಿದ್ದರಾಮಯ್ಯ ಅವರನ್ನು ಲಿಂಗಾಯತ ವಿರೋಧಿ ಎಂದು ಕರೆದಿರುವ ಕೂಡಲಸಂಗಮ ಬಸವಜಯ ಮೃತ್ಯುಂಜಯ ಸ್ವಾಮಿ ಹೇಳಿಕೆ ಖಂಡಿಸಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.

ಮೈಸೂರಿನ ಜಲದರ್ಶಿನಿ ಅತಿಥಿಗೃಹದಲ್ಲಿ ಶನಿವಾರ ಆಯೋಜಿಸಿದ್ದ ದುಂಡು ಮೇಜಿನ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಕೆಲವು ವರ್ಷಗಳ ಹಿಂದೆಯಷ್ಟೆ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ್ದ ಸ್ವಾಮೀಜಿ ಈಗ ದ್ವೇಷ ಕಾರುತ್ತಿದ್ದಾರೆ. ಒಂದು ಸಮುದಾಯವನ್ನು ಸಿದ್ದರಾಮಯ್ಯ ವಿರುದ್ಧ ಎತ್ತಿಕಟ್ಟುವ ಷಡ್ಯಂತ್ರ ಸ್ವಾಮೀಜಿ ಅವರದ್ದಾಗಿದೆ. ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ಅನುಸರಿಸುತ್ತಿದ್ದಾರೆ. ಹಿಂದುಳಿದ ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಕೆಲಸದ ಮೂಲಕ ಅಪನಂಬಿಕೆ ಸೃಷ್ಟಿಸುತ್ತಿದ್ದಾರೆ. ಸೌಹಾರ್ದ ಹಾಳಾಗಲೆಂದು ಕುಮ್ಮಕ್ಕು ಕೊಡುತ್ತಿದ್ದಾರೆ. ರಾಜಕೀಯ ಪುಢಾರಿ ರೀತಿ ಅವರು ಮಾತನಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಬಿಜೆಪಿಯವರು, ಸಿದ್ದರಾಮಯ್ಯ ಅವರ ತಪ್ಪಿಲ್ಲದಿದ್ದರೂ ಮುಡಾ, ಮಹರ್ಷಿ ವಾಲ್ಮೀಕಿ ನಿಗಮದ ಹಗರಣವನ್ನು ಮುಂದಿಟ್ಟುಕೊಂಡು ಅಧಿಕಾರದಿಂದ ಕೆಳಗಿಳಿಸಲು ಪ್ರಯತ್ನಿಸಿದರು. ಆದರೆ, ಇದರಿಂದ ಪ್ರಯೋಜನ ಆಗದಿದ್ದಕ್ಕೆ ಸ್ವಾಮೀಜಿಯನ್ನು ಎತ್ತಿ ಕಟ್ಟಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ. ಮೃತ್ಯುಂಜಯ ಸ್ವಾಮಿಗೆ

“ಸ್ವಾಮೀಜಿ ಅವರಂತೆ ಮಾತನಾಡಲು ನಮಗೂ ಬರುತ್ತದೆ. ಆದರೆ, ಅದಕ್ಕೆ ಅವಕಾಶ ಕೊಡುವ ಕೆಲಸವನ್ನು ಅವರು ಮಾಡಬಾರದು. ಲಿಂಗಾಯತ ಪಂಚಮಸಾಲಿ ಸಮಾಜ ಎಲ್ಲ ರೀತಿಯಲ್ಲೂ ಮುಂದುವರಿದಿದೆ. ಅವರನ್ನು ಹಿಂದುಳಿದ ವರ್ಗ-2ಎಗೆ ಸೇರಿಸಲು ನಮ್ಮ ಪ್ರಬಲ ವಿರೋಧವಿದೆ. ಒಂದು ಜಾತಿಯ ಪರವಾಗಿ ಗುರುತಿಸಿಕೊಂಡರೆ ಅಂಥವರು ಸನ್ಯಾಸಿಯಾಗಲು ಯೋಗ್ಯರಲ್ಲ; ಹಗಲುವೇಷ ಹಾಕಿದವರು ಎನ್ನಬೇಕಾಗುತ್ತದೆ” ಎಂದು ಕೆ ಎಸ್ ಶಿವರಾಮು ಟೀಕಿಸಿದ್ದಾರೆ.

“ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂಬ ಜಾತಿವಾದಿಗಳ ಹುನ್ನಾರದ ಭಾಗವಾಗಿ ಷಡ್ಯಂತ್ರ ಮಾಡುತ್ತಿದ್ದಾರೆ. ಸಂಚು ರೂಪಿಸುತ್ತಿದ್ದಾರೆ. ಜಾತಿ ಮುಂದಿಟ್ಟುಕೊಂಡು ಅಶಾಂತಿ ಸೃಷ್ಟಿಸುತ್ತಿದ್ದಾರೆ” ಎಂದು ಅಹಿಂದ ಮುಖಂಡ ಶಿವಣ್ಣ ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿಗೆ ಸಂವಿಧಾನದ ವಿಧಿಗಳ ಪಾಠ ಮಾಡಬೇಕು – ಸಂಸದ ಅಸಾದುದ್ದೀನ್ ಓವೈಸಿ

ಪ್ರಧಾನಿಗೆ ಸಂವಿಧಾನದ ವಿಧಿಗಳ ಪಾಠ ಮಾಡಬೇಕು – ಸಂಸದ ಅಸಾದುದ್ದೀನ್ ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...