Homeಮುಖಪುಟಭಾರತದ ಹಸಿರು ಕ್ರಾಂತಿಯ ಪಿತಾಮಹ MS ಸ್ವಾಮಿನಾಥನ್ ಇನ್ನಿಲ್ಲ

ಭಾರತದ ಹಸಿರು ಕ್ರಾಂತಿಯ ಪಿತಾಮಹ MS ಸ್ವಾಮಿನಾಥನ್ ಇನ್ನಿಲ್ಲ

- Advertisement -
- Advertisement -

ಕೃಷಿ ವಿಜ್ಞಾನಿ ಮತ್ತು ಭಾರತದ ಹಸಿರು ಕ್ರಾಂತಿಯ ಪಿತಾಮಹ MS ಸ್ವಾಮಿನಾಥನ್ (98) ಅವರು ಇಂದು (ಗುರುವಾರ ) ಬೆಳಿಗ್ಗೆ ಚೆನ್ನೈನಲ್ಲಿ ನಿಧನರಾದರು. ಡಾ ಸ್ವಾಮಿನಾಥನ್ ಅವರು ಅಧಿಕ ಇಳುವರಿಯ ಭತ್ತದ ತಳಿ ಅಭಿವೃದ್ಧಿಯಿಂದ ದೇಶದ ಆಹಾರ ಭದ್ರತೆಯಲ್ಲಿ ಪ್ರಮುಖ ಪಾತ್ರ ವಹಿಸಸಿದ್ದಾರೆ. ಅದು ಅವರಿಗೆ ಜಾಗತಿಕ ಮನ್ನಣೆಯನ್ನು ತಂದುಕೊಟ್ಟಿತು.

ಮೊಂಕೊಂಬು ಸಾಂಬಶಿವನ್ (ಎಂ.ಎಸ್) ಸ್ವಾಮಿನಾಥನ್‌ ಅವರು 1925ರ ಆ 7ರಂದು ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ಜನಿಸಿದರು. ಹವಾಮಾನ ತಜ್ಞ ಕೃಷಿ ವಿಜ್ಞಾನಿ, ಸಸ್ಯ ತಳಿವಿಜ್ಞಾನಿಯೂ ಆಗಿದ್ದ ಅವರು ಭಾರತದ ಕೃಷಿ ಉತ್ಪನ್ನಗಳ ಅಭಿವೃದ್ಧಿ ಮೂಲಕ ದೇಶದ ಆರ್ಥಿಕತೆ ಉತ್ತಮಗೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಸಸ್ಯ ತಳಿಶಾಸ್ತ್ರಜ್ಞರಾಗಿ ಡಾ ಸ್ವಾಮಿನಾಥನ್ ಅವರ ಪ್ರಯಾಣವು ಹಸಿರು ಕ್ರಾಂತಿಗೆ ದಾರಿ ಮಾಡಿಕೊಟ್ಟಿತು, ಇದು ಭಾರತೀಯ ಕೃಷಿಯಲ್ಲಿ ಪರಿವರ್ತನೆಯ ಯುಗವಾಗಿದೆ. ಸುಸ್ಥಿರ ಕೃಷಿ ಪದ್ಧತಿಗಾಗಿ ಅವರ ಸಮರ್ಥನೆಯು ಅವರನ್ನು ಸುಸ್ಥಿರ ಆಹಾರ ಭದ್ರತೆಯ ಕ್ಷೇತ್ರದಲ್ಲಿ ವಿಶ್ವ ನಾಯಕನನ್ನಾಗಿ ಮಾಡಿತು.

ವಿಶ್ವ ಸಂಸ್ಥೆಯ ಪರಿಸರ ಕಾರ್ಯಕ್ರಮವು ಸ್ವಾಮಿನಾಥನ್ ಅವರನ್ನು ‘ಆರ್ಥಿಕ ಪರಿಸರ ವಿಜ್ಞಾನದ ಪಿತಾಮಹ’ ಎಂದು ಬಣ್ಣಿಸಿದೆ. 1960 ಹಾಗೂ 70ರ ದಶಕದಲ್ಲಿ ರಾಸಾಯನಿಕ ಹಾಗೂ ಜೈವಿಕ ತಂತ್ರಜ್ಞಾನದ ಮೂಲಕ ಅಕ್ಕಿ ಮತ್ತು ಗೋದಿಯ ಉತ್ಪಾದನೆ ಹೆಚ್ಚಿಸಲು ರೂಪಿಸಲಾದ ಹಸಿರು ಕ್ರಾಂತಿ ಯೋಜನೆಯಲ್ಲಿ ಕೇಂದ್ರ ಕೃಷಿ ಸಚಿವರಾಗಿದ್ದ ಸಿ ಸುಬ್ರಮಣಿಯಂ, ಜಗಜೀವನ ರಾಮ್ ಅವರೊಂದಿಗೆ ಸ್ವಾಮಿನಾಥನ್ ಕೆಲಸ ಮಾಡಿದ್ದರು.

1972 ಮತ್ತು 1979ರ ನಡುವೆ, ಡಾ ಸ್ವಾಮಿನಾಥನ್ ಅವರು ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ಮಹಾನಿರ್ದೇಶಕರಾಗಿ ಮತ್ತು ಭಾರತ ಸರ್ಕಾರದ ಕಾರ್ಯದರ್ಶಿಯಾಗಿ, ಕೃಷಿ ಸಂಶೋಧನೆ ಮತ್ತು ಶಿಕ್ಷಣ ಇಲಾಖೆಗೆ ಸೇವೆ ಸಲ್ಲಿಸಿದರು.

ಅಧಿಕ ಇಳುವರಿಯ ಭತ್ತ ಹಾಗೂ ಗೋಧಿ ತಳಿಯ ಅಭಿವೃದ್ಧಿಗಾಗಿ 1987ರಲ್ಲಿ ಅವರಿಗೆ ಜಾಗತಿಕ ಆಹಾರ ಬಹುಮಾನ ಲಭಿಸಿತ್ತು. ಅದರಿಂದ ಬಂದ ಹಣದಲ್ಲಿ ಅವರು ಚೆನ್ನೈನಲ್ಲಿ ಎಂ.ಎಸ್‌.ಸ್ವಾಮಿನಾಥನ್‌ ಸಂಶೋಧನಾ  ಪ್ರತಿಷ್ಠಾನವನ್ನು ಆರಂಭಿಸಿದರು. 1971ರಲ್ಲಿ ರೇಮನ್ ಮ್ಯಾಗ್ಸೆಸೆ ಹಾಗೂ 1986ರಲ್ಲಿ ಆಲ್ಬರ್ಟ್ ಐನ್‌ಸ್ಟೀನ್ ವಿಶ್ವ ವಿಜ್ಞಾನ ಪ್ರಶಸ್ತಿಗಳೂ ಅವರಿಗೆ ಸಂದಿವೆ.

ಇವುಗಳೊಂದಿಗೆ ಪದ್ಮಶ್ರೀ, ಪದ್ಮ ಭೂಷಣ ಹಾಗೂ ಪದ್ಮ ವಿಭೂಷಣ ಪ್ರಶಸ್ತಿಗಳು ಸ್ವಾಮಿನಾಥನ್ ಅವರಿಗೆ ಸಂದಿವೆ. ಎಚ್.ಕೆ ಫಿರೋದಿಯಾ ಪ್ರಶಸ್ತಿ, ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಪ್ರಶಸ್ತಿ ಹಾಗೂ ಇಂದಿರಾ ಗಾಂಧಿ ಪ್ರಶಸ್ತಿಗಳೂ ಸ್ವಾಮಿನಾಥನ್ ಅವರಿಗೆ ಲಭಿಸಿವೆ.

ದೇಶದ ಕೃಷಿ ಕ್ಷೇತ್ರದಲ್ಲಿ ಅಲ್ಲದೆ, ಜಾಗತಿಕ ಮಟ್ಟದಲ್ಲಿ ಸ್ವಾಮಿನಾಥನ್ ಅವರ ಕಾರ್ಯ ಹೆಚ್ಚು ಜನಪ್ರಿಯ. ಜಾಗತಿಕ ಮಟ್ಟದ ಹಲವು ಕೃಷಿ ಹಾಗೂ ಪರಿಸರ ಜಾಗೃತಿ ಕುರಿತ ಕಾರ್ಯ ಕ್ರಮಗಳಲ್ಲಿ ಅವರು ಸಕ್ರೀಯರಾಗಿದ್ದರು. ಟೈಮ್ ನಿಯತಕಾಲಿಕೆ ಪ್ರಕಟಿಸಿದ 20ನೇ ಶತಮಾನದ 20 ಅತ್ಯಂತ ಪ್ರಭಾವಿಗಳ ಪಟ್ಟಿಯಲ್ಲಿ ಸ್ವಾಮಿನಾಥನ್ ಅವರ ಹೆಸರು ಸೇರಿತ್ತು.

ಸ್ವಾಮಿನಾಥನ್ ಅವರು ಮೂವರು ಪುತ್ರಿಯರಾದ ಸೌಮ್ಯಾ ಸ್ವಾಮಿನಾಥನ್, ಮಧುರಾ ಸ್ವಾಮಿನಾಥನ್ ಮತ್ತು ನಿತ್ಯಾ ಸ್ವಾಮಿನಾಥನ್‌ ಅವರನ್ನು ಅಗಲಿದ್ದಾರೆ. ಸ್ವಾಮಿನಾಥನ್ ಅವರ ಪತ್ನಿ ಮೀನಾ 2022ರಲ್ಲಿ ನಿಧನರಾಗಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯಲ್ಲಿ ಅಮಾನವೀಯ ಘಟನೆ: ಅಂತರ್ಜಾತಿ ವಿವಾಹವಾದ ವಿಕಲಚೇತನ ಜೋಡಿಗೆ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...