Homeಮುಖಪುಟಭಾರತದ ಹಸಿರು ಕ್ರಾಂತಿಯ ಪಿತಾಮಹ MS ಸ್ವಾಮಿನಾಥನ್ ಇನ್ನಿಲ್ಲ

ಭಾರತದ ಹಸಿರು ಕ್ರಾಂತಿಯ ಪಿತಾಮಹ MS ಸ್ವಾಮಿನಾಥನ್ ಇನ್ನಿಲ್ಲ

- Advertisement -
- Advertisement -

ಕೃಷಿ ವಿಜ್ಞಾನಿ ಮತ್ತು ಭಾರತದ ಹಸಿರು ಕ್ರಾಂತಿಯ ಪಿತಾಮಹ MS ಸ್ವಾಮಿನಾಥನ್ (98) ಅವರು ಇಂದು (ಗುರುವಾರ ) ಬೆಳಿಗ್ಗೆ ಚೆನ್ನೈನಲ್ಲಿ ನಿಧನರಾದರು. ಡಾ ಸ್ವಾಮಿನಾಥನ್ ಅವರು ಅಧಿಕ ಇಳುವರಿಯ ಭತ್ತದ ತಳಿ ಅಭಿವೃದ್ಧಿಯಿಂದ ದೇಶದ ಆಹಾರ ಭದ್ರತೆಯಲ್ಲಿ ಪ್ರಮುಖ ಪಾತ್ರ ವಹಿಸಸಿದ್ದಾರೆ. ಅದು ಅವರಿಗೆ ಜಾಗತಿಕ ಮನ್ನಣೆಯನ್ನು ತಂದುಕೊಟ್ಟಿತು.

ಮೊಂಕೊಂಬು ಸಾಂಬಶಿವನ್ (ಎಂ.ಎಸ್) ಸ್ವಾಮಿನಾಥನ್‌ ಅವರು 1925ರ ಆ 7ರಂದು ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ಜನಿಸಿದರು. ಹವಾಮಾನ ತಜ್ಞ ಕೃಷಿ ವಿಜ್ಞಾನಿ, ಸಸ್ಯ ತಳಿವಿಜ್ಞಾನಿಯೂ ಆಗಿದ್ದ ಅವರು ಭಾರತದ ಕೃಷಿ ಉತ್ಪನ್ನಗಳ ಅಭಿವೃದ್ಧಿ ಮೂಲಕ ದೇಶದ ಆರ್ಥಿಕತೆ ಉತ್ತಮಗೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಸಸ್ಯ ತಳಿಶಾಸ್ತ್ರಜ್ಞರಾಗಿ ಡಾ ಸ್ವಾಮಿನಾಥನ್ ಅವರ ಪ್ರಯಾಣವು ಹಸಿರು ಕ್ರಾಂತಿಗೆ ದಾರಿ ಮಾಡಿಕೊಟ್ಟಿತು, ಇದು ಭಾರತೀಯ ಕೃಷಿಯಲ್ಲಿ ಪರಿವರ್ತನೆಯ ಯುಗವಾಗಿದೆ. ಸುಸ್ಥಿರ ಕೃಷಿ ಪದ್ಧತಿಗಾಗಿ ಅವರ ಸಮರ್ಥನೆಯು ಅವರನ್ನು ಸುಸ್ಥಿರ ಆಹಾರ ಭದ್ರತೆಯ ಕ್ಷೇತ್ರದಲ್ಲಿ ವಿಶ್ವ ನಾಯಕನನ್ನಾಗಿ ಮಾಡಿತು.

ವಿಶ್ವ ಸಂಸ್ಥೆಯ ಪರಿಸರ ಕಾರ್ಯಕ್ರಮವು ಸ್ವಾಮಿನಾಥನ್ ಅವರನ್ನು ‘ಆರ್ಥಿಕ ಪರಿಸರ ವಿಜ್ಞಾನದ ಪಿತಾಮಹ’ ಎಂದು ಬಣ್ಣಿಸಿದೆ. 1960 ಹಾಗೂ 70ರ ದಶಕದಲ್ಲಿ ರಾಸಾಯನಿಕ ಹಾಗೂ ಜೈವಿಕ ತಂತ್ರಜ್ಞಾನದ ಮೂಲಕ ಅಕ್ಕಿ ಮತ್ತು ಗೋದಿಯ ಉತ್ಪಾದನೆ ಹೆಚ್ಚಿಸಲು ರೂಪಿಸಲಾದ ಹಸಿರು ಕ್ರಾಂತಿ ಯೋಜನೆಯಲ್ಲಿ ಕೇಂದ್ರ ಕೃಷಿ ಸಚಿವರಾಗಿದ್ದ ಸಿ ಸುಬ್ರಮಣಿಯಂ, ಜಗಜೀವನ ರಾಮ್ ಅವರೊಂದಿಗೆ ಸ್ವಾಮಿನಾಥನ್ ಕೆಲಸ ಮಾಡಿದ್ದರು.

1972 ಮತ್ತು 1979ರ ನಡುವೆ, ಡಾ ಸ್ವಾಮಿನಾಥನ್ ಅವರು ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ಮಹಾನಿರ್ದೇಶಕರಾಗಿ ಮತ್ತು ಭಾರತ ಸರ್ಕಾರದ ಕಾರ್ಯದರ್ಶಿಯಾಗಿ, ಕೃಷಿ ಸಂಶೋಧನೆ ಮತ್ತು ಶಿಕ್ಷಣ ಇಲಾಖೆಗೆ ಸೇವೆ ಸಲ್ಲಿಸಿದರು.

ಅಧಿಕ ಇಳುವರಿಯ ಭತ್ತ ಹಾಗೂ ಗೋಧಿ ತಳಿಯ ಅಭಿವೃದ್ಧಿಗಾಗಿ 1987ರಲ್ಲಿ ಅವರಿಗೆ ಜಾಗತಿಕ ಆಹಾರ ಬಹುಮಾನ ಲಭಿಸಿತ್ತು. ಅದರಿಂದ ಬಂದ ಹಣದಲ್ಲಿ ಅವರು ಚೆನ್ನೈನಲ್ಲಿ ಎಂ.ಎಸ್‌.ಸ್ವಾಮಿನಾಥನ್‌ ಸಂಶೋಧನಾ  ಪ್ರತಿಷ್ಠಾನವನ್ನು ಆರಂಭಿಸಿದರು. 1971ರಲ್ಲಿ ರೇಮನ್ ಮ್ಯಾಗ್ಸೆಸೆ ಹಾಗೂ 1986ರಲ್ಲಿ ಆಲ್ಬರ್ಟ್ ಐನ್‌ಸ್ಟೀನ್ ವಿಶ್ವ ವಿಜ್ಞಾನ ಪ್ರಶಸ್ತಿಗಳೂ ಅವರಿಗೆ ಸಂದಿವೆ.

ಇವುಗಳೊಂದಿಗೆ ಪದ್ಮಶ್ರೀ, ಪದ್ಮ ಭೂಷಣ ಹಾಗೂ ಪದ್ಮ ವಿಭೂಷಣ ಪ್ರಶಸ್ತಿಗಳು ಸ್ವಾಮಿನಾಥನ್ ಅವರಿಗೆ ಸಂದಿವೆ. ಎಚ್.ಕೆ ಫಿರೋದಿಯಾ ಪ್ರಶಸ್ತಿ, ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಪ್ರಶಸ್ತಿ ಹಾಗೂ ಇಂದಿರಾ ಗಾಂಧಿ ಪ್ರಶಸ್ತಿಗಳೂ ಸ್ವಾಮಿನಾಥನ್ ಅವರಿಗೆ ಲಭಿಸಿವೆ.

ದೇಶದ ಕೃಷಿ ಕ್ಷೇತ್ರದಲ್ಲಿ ಅಲ್ಲದೆ, ಜಾಗತಿಕ ಮಟ್ಟದಲ್ಲಿ ಸ್ವಾಮಿನಾಥನ್ ಅವರ ಕಾರ್ಯ ಹೆಚ್ಚು ಜನಪ್ರಿಯ. ಜಾಗತಿಕ ಮಟ್ಟದ ಹಲವು ಕೃಷಿ ಹಾಗೂ ಪರಿಸರ ಜಾಗೃತಿ ಕುರಿತ ಕಾರ್ಯ ಕ್ರಮಗಳಲ್ಲಿ ಅವರು ಸಕ್ರೀಯರಾಗಿದ್ದರು. ಟೈಮ್ ನಿಯತಕಾಲಿಕೆ ಪ್ರಕಟಿಸಿದ 20ನೇ ಶತಮಾನದ 20 ಅತ್ಯಂತ ಪ್ರಭಾವಿಗಳ ಪಟ್ಟಿಯಲ್ಲಿ ಸ್ವಾಮಿನಾಥನ್ ಅವರ ಹೆಸರು ಸೇರಿತ್ತು.

ಸ್ವಾಮಿನಾಥನ್ ಅವರು ಮೂವರು ಪುತ್ರಿಯರಾದ ಸೌಮ್ಯಾ ಸ್ವಾಮಿನಾಥನ್, ಮಧುರಾ ಸ್ವಾಮಿನಾಥನ್ ಮತ್ತು ನಿತ್ಯಾ ಸ್ವಾಮಿನಾಥನ್‌ ಅವರನ್ನು ಅಗಲಿದ್ದಾರೆ. ಸ್ವಾಮಿನಾಥನ್ ಅವರ ಪತ್ನಿ ಮೀನಾ 2022ರಲ್ಲಿ ನಿಧನರಾಗಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯಲ್ಲಿ ಅಮಾನವೀಯ ಘಟನೆ: ಅಂತರ್ಜಾತಿ ವಿವಾಹವಾದ ವಿಕಲಚೇತನ ಜೋಡಿಗೆ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...