Homeಮುಖಪುಟಭಾರತದ ಹಸಿರು ಕ್ರಾಂತಿಯ ಪಿತಾಮಹ MS ಸ್ವಾಮಿನಾಥನ್ ಇನ್ನಿಲ್ಲ

ಭಾರತದ ಹಸಿರು ಕ್ರಾಂತಿಯ ಪಿತಾಮಹ MS ಸ್ವಾಮಿನಾಥನ್ ಇನ್ನಿಲ್ಲ

- Advertisement -
- Advertisement -

ಕೃಷಿ ವಿಜ್ಞಾನಿ ಮತ್ತು ಭಾರತದ ಹಸಿರು ಕ್ರಾಂತಿಯ ಪಿತಾಮಹ MS ಸ್ವಾಮಿನಾಥನ್ (98) ಅವರು ಇಂದು (ಗುರುವಾರ ) ಬೆಳಿಗ್ಗೆ ಚೆನ್ನೈನಲ್ಲಿ ನಿಧನರಾದರು. ಡಾ ಸ್ವಾಮಿನಾಥನ್ ಅವರು ಅಧಿಕ ಇಳುವರಿಯ ಭತ್ತದ ತಳಿ ಅಭಿವೃದ್ಧಿಯಿಂದ ದೇಶದ ಆಹಾರ ಭದ್ರತೆಯಲ್ಲಿ ಪ್ರಮುಖ ಪಾತ್ರ ವಹಿಸಸಿದ್ದಾರೆ. ಅದು ಅವರಿಗೆ ಜಾಗತಿಕ ಮನ್ನಣೆಯನ್ನು ತಂದುಕೊಟ್ಟಿತು.

ಮೊಂಕೊಂಬು ಸಾಂಬಶಿವನ್ (ಎಂ.ಎಸ್) ಸ್ವಾಮಿನಾಥನ್‌ ಅವರು 1925ರ ಆ 7ರಂದು ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ಜನಿಸಿದರು. ಹವಾಮಾನ ತಜ್ಞ ಕೃಷಿ ವಿಜ್ಞಾನಿ, ಸಸ್ಯ ತಳಿವಿಜ್ಞಾನಿಯೂ ಆಗಿದ್ದ ಅವರು ಭಾರತದ ಕೃಷಿ ಉತ್ಪನ್ನಗಳ ಅಭಿವೃದ್ಧಿ ಮೂಲಕ ದೇಶದ ಆರ್ಥಿಕತೆ ಉತ್ತಮಗೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಸಸ್ಯ ತಳಿಶಾಸ್ತ್ರಜ್ಞರಾಗಿ ಡಾ ಸ್ವಾಮಿನಾಥನ್ ಅವರ ಪ್ರಯಾಣವು ಹಸಿರು ಕ್ರಾಂತಿಗೆ ದಾರಿ ಮಾಡಿಕೊಟ್ಟಿತು, ಇದು ಭಾರತೀಯ ಕೃಷಿಯಲ್ಲಿ ಪರಿವರ್ತನೆಯ ಯುಗವಾಗಿದೆ. ಸುಸ್ಥಿರ ಕೃಷಿ ಪದ್ಧತಿಗಾಗಿ ಅವರ ಸಮರ್ಥನೆಯು ಅವರನ್ನು ಸುಸ್ಥಿರ ಆಹಾರ ಭದ್ರತೆಯ ಕ್ಷೇತ್ರದಲ್ಲಿ ವಿಶ್ವ ನಾಯಕನನ್ನಾಗಿ ಮಾಡಿತು.

ವಿಶ್ವ ಸಂಸ್ಥೆಯ ಪರಿಸರ ಕಾರ್ಯಕ್ರಮವು ಸ್ವಾಮಿನಾಥನ್ ಅವರನ್ನು ‘ಆರ್ಥಿಕ ಪರಿಸರ ವಿಜ್ಞಾನದ ಪಿತಾಮಹ’ ಎಂದು ಬಣ್ಣಿಸಿದೆ. 1960 ಹಾಗೂ 70ರ ದಶಕದಲ್ಲಿ ರಾಸಾಯನಿಕ ಹಾಗೂ ಜೈವಿಕ ತಂತ್ರಜ್ಞಾನದ ಮೂಲಕ ಅಕ್ಕಿ ಮತ್ತು ಗೋದಿಯ ಉತ್ಪಾದನೆ ಹೆಚ್ಚಿಸಲು ರೂಪಿಸಲಾದ ಹಸಿರು ಕ್ರಾಂತಿ ಯೋಜನೆಯಲ್ಲಿ ಕೇಂದ್ರ ಕೃಷಿ ಸಚಿವರಾಗಿದ್ದ ಸಿ ಸುಬ್ರಮಣಿಯಂ, ಜಗಜೀವನ ರಾಮ್ ಅವರೊಂದಿಗೆ ಸ್ವಾಮಿನಾಥನ್ ಕೆಲಸ ಮಾಡಿದ್ದರು.

1972 ಮತ್ತು 1979ರ ನಡುವೆ, ಡಾ ಸ್ವಾಮಿನಾಥನ್ ಅವರು ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ಮಹಾನಿರ್ದೇಶಕರಾಗಿ ಮತ್ತು ಭಾರತ ಸರ್ಕಾರದ ಕಾರ್ಯದರ್ಶಿಯಾಗಿ, ಕೃಷಿ ಸಂಶೋಧನೆ ಮತ್ತು ಶಿಕ್ಷಣ ಇಲಾಖೆಗೆ ಸೇವೆ ಸಲ್ಲಿಸಿದರು.

ಅಧಿಕ ಇಳುವರಿಯ ಭತ್ತ ಹಾಗೂ ಗೋಧಿ ತಳಿಯ ಅಭಿವೃದ್ಧಿಗಾಗಿ 1987ರಲ್ಲಿ ಅವರಿಗೆ ಜಾಗತಿಕ ಆಹಾರ ಬಹುಮಾನ ಲಭಿಸಿತ್ತು. ಅದರಿಂದ ಬಂದ ಹಣದಲ್ಲಿ ಅವರು ಚೆನ್ನೈನಲ್ಲಿ ಎಂ.ಎಸ್‌.ಸ್ವಾಮಿನಾಥನ್‌ ಸಂಶೋಧನಾ  ಪ್ರತಿಷ್ಠಾನವನ್ನು ಆರಂಭಿಸಿದರು. 1971ರಲ್ಲಿ ರೇಮನ್ ಮ್ಯಾಗ್ಸೆಸೆ ಹಾಗೂ 1986ರಲ್ಲಿ ಆಲ್ಬರ್ಟ್ ಐನ್‌ಸ್ಟೀನ್ ವಿಶ್ವ ವಿಜ್ಞಾನ ಪ್ರಶಸ್ತಿಗಳೂ ಅವರಿಗೆ ಸಂದಿವೆ.

ಇವುಗಳೊಂದಿಗೆ ಪದ್ಮಶ್ರೀ, ಪದ್ಮ ಭೂಷಣ ಹಾಗೂ ಪದ್ಮ ವಿಭೂಷಣ ಪ್ರಶಸ್ತಿಗಳು ಸ್ವಾಮಿನಾಥನ್ ಅವರಿಗೆ ಸಂದಿವೆ. ಎಚ್.ಕೆ ಫಿರೋದಿಯಾ ಪ್ರಶಸ್ತಿ, ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಪ್ರಶಸ್ತಿ ಹಾಗೂ ಇಂದಿರಾ ಗಾಂಧಿ ಪ್ರಶಸ್ತಿಗಳೂ ಸ್ವಾಮಿನಾಥನ್ ಅವರಿಗೆ ಲಭಿಸಿವೆ.

ದೇಶದ ಕೃಷಿ ಕ್ಷೇತ್ರದಲ್ಲಿ ಅಲ್ಲದೆ, ಜಾಗತಿಕ ಮಟ್ಟದಲ್ಲಿ ಸ್ವಾಮಿನಾಥನ್ ಅವರ ಕಾರ್ಯ ಹೆಚ್ಚು ಜನಪ್ರಿಯ. ಜಾಗತಿಕ ಮಟ್ಟದ ಹಲವು ಕೃಷಿ ಹಾಗೂ ಪರಿಸರ ಜಾಗೃತಿ ಕುರಿತ ಕಾರ್ಯ ಕ್ರಮಗಳಲ್ಲಿ ಅವರು ಸಕ್ರೀಯರಾಗಿದ್ದರು. ಟೈಮ್ ನಿಯತಕಾಲಿಕೆ ಪ್ರಕಟಿಸಿದ 20ನೇ ಶತಮಾನದ 20 ಅತ್ಯಂತ ಪ್ರಭಾವಿಗಳ ಪಟ್ಟಿಯಲ್ಲಿ ಸ್ವಾಮಿನಾಥನ್ ಅವರ ಹೆಸರು ಸೇರಿತ್ತು.

ಸ್ವಾಮಿನಾಥನ್ ಅವರು ಮೂವರು ಪುತ್ರಿಯರಾದ ಸೌಮ್ಯಾ ಸ್ವಾಮಿನಾಥನ್, ಮಧುರಾ ಸ್ವಾಮಿನಾಥನ್ ಮತ್ತು ನಿತ್ಯಾ ಸ್ವಾಮಿನಾಥನ್‌ ಅವರನ್ನು ಅಗಲಿದ್ದಾರೆ. ಸ್ವಾಮಿನಾಥನ್ ಅವರ ಪತ್ನಿ ಮೀನಾ 2022ರಲ್ಲಿ ನಿಧನರಾಗಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯಲ್ಲಿ ಅಮಾನವೀಯ ಘಟನೆ: ಅಂತರ್ಜಾತಿ ವಿವಾಹವಾದ ವಿಕಲಚೇತನ ಜೋಡಿಗೆ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...