Homeಚಳವಳಿಪ್ರಧಾನಿಗಳೇ ಎಂಎಸ್‌ಪಿ ಎಲ್ಲಿದೆ ತೋರಿಸಿ?: ಇಂದಿನಿಂದ ರಾಜ್ಯದಲ್ಲಿ ಆಂದೋಲನ

ಪ್ರಧಾನಿಗಳೇ ಎಂಎಸ್‌ಪಿ ಎಲ್ಲಿದೆ ತೋರಿಸಿ?: ಇಂದಿನಿಂದ ರಾಜ್ಯದಲ್ಲಿ ಆಂದೋಲನ

ಸ್ವಾಮಿನಾಥನ್ ವರದಿ ಪ್ರಕಾರ ರೈತರಿಗೆ ಒಂದೂವರೆ ಪಟ್ಟು ಬೆಲೆ ಸಿಗಬೇಕು. ಆದರೆ, ಒಂದೂವರೆ ಪಟ್ಟು ಇರಲಿ, ಎಂಎಸ್‌ಪಿ ಸಹ ಸಿಗುತ್ತಿಲ್ಲ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.

- Advertisement -
- Advertisement -

ವಿವಾದಿತ ಕೃಷಿ ಕಾನೂನಗಳನ್ನು ರದ್ದುಗೊಳಿಸಬೇಕೆಂದು ಒಕ್ಕೂಟ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿರುವ ರೈತರು ಕನಿಷ್ಠ ಬೆಂಬಲ ಬೆಲೆಯ ಬಗ್ಗೆ ದೇಶದ ರೈತರ ಗಮನ ಸೆಳೆದಿದ್ದಾರೆ. ಪ್ರಧಾನಿಗಳು ಸಂಸತ್ತಿನಲ್ಲಿ ಮಾತನಾಡುತ್ತ ಎಂಎಸ್‌ಪಿ ಹಿಂದೆಯೂ ಇತ್ತು, ಈಗಲೂ ಇದೆ ಮತ್ತು ಮುಂದೆಯೂ ಇರಲಿದೆ ಎಂದು ಘೋಷಿಸಿದ್ದರು. ಆದರೆ ರೈತ ಹೋರಾಟಗಾರರು ಆ ಹೇಳಿಕೆ ಸುಳ್ಳು ಎಂದು ಆಕ್ರೋಶಪಡಿಸಿ, ಪ್ರಧಾನಿಗಳೇ ಎಂಎಸ್‌ಪಿ ಎಲ್ಲಿದೆ ತೋರಿಸಿ ಎಂದು ಪ್ರಶ್ನಿಸಿದ್ದಾರೆ. ಈ ಕುರಿತು ರಾಜ್ಯದಲ್ಲಿಯೂ ಈಗ ಬೆಂಬಲ ಬೆಲೆ ಕೊಡಿಸಿ ಆಂದೋಲನ ಆರಂಭವಾಗಿದ್ದು, ಸ್ವರಾಜ್ ಇಂಡಿಯಾದ ಅಧ್ಯಕ್ಷ ಯೋಗೇಂದ್ರ ಯಾದವ್ ಚಾಲನೆ ನೀಡಿದ್ದಾರೆ.

ರಾಜ್ಯದಲ್ಲಿ ಬೆಳೆಯಲಾಗುವ ಬೆಳೆಗಳಲ್ಲಿ ಯಾವ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಇದೆ. ಯಾವುದಕ್ಕೆ ಎಷ್ಟು ಎಂಎಸ್‌ಪಿ ಸಿಗುತ್ತಿದೆ ಎಂಬ ಮಾಹಿತಿಯೇ ಅನೇಕ ರೈತರಿಗೆ ಇಲ್ಲ. ಕೃಷಿ ಕಾನೂನುಗಳ ವಿರುದ್ಧದ ಹೋರಾಟದ ಜೊತೆಗೆ ಎಂಎಸ್‌ಪಿ ಬಗ್ಗೆ ತೀವ್ರ ಚರ್ಚೆಯನ್ನು ಹುಟ್ಟು ಹಾಕಿರುವುದು ಈ ರೈತ ಹೋರಾಟವೇ. ಇದರಿಂದ ರಾಜ್ಯದಲ್ಲಿ ಎಂಎಸ್‌ಪಿ ಬಗ್ಗೆ ಚರ್ಚೆ ನಡೆಯುತ್ತಿದೆ.

ರಾಜ್ಯದಲ್ಲಿ ಮೂರು ದಿನಗಳ ಕಾಲ ಮಾರ್ಚ್ 5 ರಿಂದ 7ರ ವರೆಗೆ ’ಬೆಂಬಲ ಬೆಲೆ ಕೊಡಿಸಿ’ ಆಂದೋಲನ ನಡೆಯಲಿದೆ. ಗುಲ್ಬರ್ಗಾದಲ್ಲಿ ಮಾರ್ಚ್ 5, ಬಳ್ಳಾರಿ ಮಾರ್ಚ್ 6, ಶಿವಮೊಗ್ಗ, ಸಾಗರದಲ್ಲಿ ಮಾರ್ಚ್7 ಆಂದೋಲನ ನಡೆಯುತ್ತಿದ್ದು, ಅಂದೇ ಬೆಂಗಳೂರಿನಲ್ಲಿ ಈ ಆಂದೋಲನದ ಪತ್ರಿಕಾಗೋಷ್ಠಿ ನಡೆಯಲಿದೆ.

ಇದನ್ನೂ ಓದಿ: ಪಂಚರಾಜ್ಯ ಚುನಾವಣೆ: ಬಿಜೆಪಿ ವಿರುದ್ಧ ಅಭಿಯಾನಕ್ಕೆ ಮುಂದಾದ ದೆಹಲಿ ರೈತ ಮುಖಂಡರು

ಮಾರ್ಚ್ 2 ರಂದು ಸಂಯುಕ್ತ ಕಿಸಾನ್ ಮೋರ್ಚಾ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ರೈತ ಮುಖಂಡರು ಮಾಹಿತಿ ನೀಡಿದ್ದರು. ಕರ್ನಾಟಕದ ರೈತರು ಎಂಎಸ್‌ಪಿಗಿಂತ ಕನಿಷ್ಠ ಒಂದು ಸಾವಿರ ಕಡಿಮೆ ಬೆಲೆ ಪಡೆಯುತ್ತಿದ್ದಾರೆ. ಹೀಗಾಗಿ ಮಾರ್ಚ್ 5 ರಿಂದ ಕರ್ನಾಟಕದಲ್ಲಿ ‘ಎಂಎಸ್‌ಪಿ ದಿಲಾವ್’ ಆಂದೋಲನವನ್ನು ಪ್ರಾರಂಭಿಸಲಾಗುವುದು.  ಬೆಳೆಗಳಿಗೆ ಎಂಎಸ್‌ಪಿ ಖಾತ್ರಿಪಡಿಸಿಕೊಡುವಂತೆ ಪ್ರಧಾನಮಂತ್ರಿ ಅವರನ್ನು ಒತ್ತಾಯಿಸುತ್ತೇವೆ ಎಂದು ಪತ್ರಿಕಾಗೋಷ್ಠಿಯಲ್ಲಿ ಯೋಗೇಂದ್ರ ಯಾದವ್ ತಿಳಿಸಿದ್ದರು.

ಇಡೀ ದೇಶದ ರೈತ ಚಳವಳಿಗಳು ರೈತರ ಬೆಳೆಗೆ ವೈಜ್ಞಾನಿಕವಾಗಿ ಬೆಲೆ ನಿಗದಿ ಮಾಡಿ, ನಮ್ಮ ದುಡಿಮೆಗೆ ನ್ಯಾಯಯುತ ಫಲ ಸಿಗುವಂತೆ ಮಾಡಿ, ರೈತರ ಬೆಳೆಗೆ ನ್ಯಾಯಯುತ ಬೆಲೆ ಬೇಕು ಎಂದು ಆಗ್ರಹಿಸುತ್ತಾ ಬಂದಿದ್ದಾರೆ. ದೆಹಲಿ ಮತ್ತು ದೇಶದಾದ್ಯಂತ ಇಂದು ನಡೆಯುತ್ತಿರುವ ಹೋರಾಟದ ಪ್ರಮುಖ ಹಕ್ಕೊತ್ತಾಯಗಳಲ್ಲಿ ಅದೂ ಒಂದಾಗಿದೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.

ಇದನ್ನೂ ಓದಿ: ಹತ್ರಾಸ್, ಬಿಜ್ನೋರ್‌ ಗಳಲ್ಲಿ ಬೃಹತ್ ಮಹಾಪಂಚಾಯತ್: ಸರ್ಕಾರದ ವಿರುದ್ಧ ರೈತರ ಗುಡುಗು

ರೈತರ ಎಲ್ಲಾ ಬೆಳೆಗಳಿಗೂ ಕನಿಷ್ಟ ಬೆಂಬಲ ಬೆಲೆ ನಿಗದಿ ಮಾಡಿ ಅದನ್ನು ಕಾಯ್ದೆ ಮಾಡಬೇಕು. ಬೆಂಬಲ ಬೆಲೆಗಿಂತ ಕಡಿಮೆ ದರದಲ್ಲಿ ವ್ಯಾಪಾರ ಮಾಡುವುದು ಅಪರಾಧ ಎಂದು ಘೋಷಿಸಿ, ಕನಿಷ್ಟ ಆ ದರವನ್ನು ಎಲ್ಲಾ ವ್ಯಾಪಾರಿಗಳೂ ಕೊಡಲೇಬೇಕು ಎಂಬ ಕಾನೂನು ಮಾಡಬೇಕು. ಖಾಸಗಿ ವ್ಯಾಪಾರಿಗಳು ಕೊಡದಿದ್ದರೆ ಸರ್ಕಾರ ಮುಂದೆ ನಿಂತು ರೈತರ ಬೆಳೆ ಖರೀದಿಸಿ, ಮಾರುಕಟೆ ಗೆ ವಿತರಿಸಬೇಕು. ವಾಸ್ತವದಲ್ಲಿ ಸ್ವಾಮಿನಾಥನ್ ವರದಿ ಆಧರಿಸಿ ರೈತರ ಎಲ್ಲಾ ಬೆಳೆಗಳಿಗೂ ಬೆಲೆ ನಿಗದಿ ಮಾಡಿ ಎಂದು ಕೇಳುತ್ತಿದ್ದೇವೆ ಎಂದು ರೈತ ಸಂಘಟನೆ ಹೇಳಿದೆ.

ಸ್ವಾಮಿನಾಥನ್ ವರದಿಯನ್ನು ಜಾರಿಗೆ ತರುತ್ತೇವೆ ಎಂದು ಎಲ್ಲಾ ರಾಜಕೀಯ ಪಕ್ಷಗಳೂ ಚುನಾವಣೆ ಸಂದರ್ಭದಲ್ಲಿ ಹೇಳಿದರೂ ಅಧಿಕಾರಕ್ಕೆ ಬಂದ ಕೂಡಲೇ ಹೇಳೇ ಇಲ್ಲವೇನೋ ಎಂಬಂತೆ ಮುಖ ತಿರುಗಿಸುತ್ತಿದ್ದಾರೆ. ಸ್ವಾಮಿನಾಥನ್ ವರದಿ ಪ್ರಕಾರ ರೈತರಿಗೆ ಒಂದೂವರೆ ಪಟ್ಟು ಬೆಲೆ ಸಿಗಬೇಕು. ಆದರೆ, ಒಂದೂವರೆ ಪಟ್ಟು ಇರಲಿ, ಇವರು ಒಪ್ಪಿರುವ ಕನಿಷ್ಟ ಬೆಂಬಲ ಬೆಲೆಯನ್ನೂ ರೈತರಿಗೆ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಹೋರಾಟ ನಡೆಸುತ್ತಿರುವ ರೈತರು ಸೃಷ್ಟಿಸಿರುವ ಒತ್ತಡದ ಪರಿಣಾಮವಾಗಿ ಪ್ರಧಾನಿಗಳು ಕೊನೆಗೂ ಎಂಎಸ್‌ಪಿ ಬಗ್ಗೆ ಮಾತನಾಡಿದ್ದಾರೆ. ಆದರೆ, ಎಂಎಸ್‌ಪಿ ಥಾ, ಹೈ, ರಹೇಗಾ ಎಂದಿದ್ದಾರೆ. ಅಂದರೆ ಕನಿಷ್ಟ ಬೆಂಬಲ ಬೆಲೆ ಇತ್ತು, ಇದೆ, ಇರುತ್ತೆ ಎಂದು ಅರ್ಥ. ಪ್ರಧಾನಿಯವರ ಈ ಮಾತಿಗೆ ಪ್ರತಿಕ್ರಿಯೆಯಾಗಿ, 400 ಕ್ಕೂ ಹೆಚ್ಚು ರೈತ ಸಂಘಟನೆಗಳನ್ನು ಒಳಗೊಂಡಿರುವ ಸಂಯುಕ್ತ ಕಿಸಾನ ಮೋರ್ಚಾ ಎಂಎಸ್‌ಪಿ ಕೊಡಿಸಿ ಆಂದೋಲನ ಪ್ರಾರಂಭಿಸಿದೆ. ಈ ಆಂದೋಲನ ಕರ್ನಾಟಕದಿಂದ ಆರಂಭವಾಗಲಿದೆ ಎಂದು ಎಸ್‌ಕೆಎಂ ತಿಳಿಸಿದೆ.


ಇದನ್ನೂ ಓದಿ: ರೈತ ಹೋರಾಟ: ಕಡು ಬೇಸಿಗೆ ಎದುರಿಸಲು ಸಿದ್ದರಾಗುತ್ತಿದ್ದಾರೆ ಅನ್ನದಾತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...