Homeಚಳವಳಿಪ್ರಧಾನಿಗಳೇ ಎಂಎಸ್‌ಪಿ ಎಲ್ಲಿದೆ ತೋರಿಸಿ?: ಇಂದಿನಿಂದ ರಾಜ್ಯದಲ್ಲಿ ಆಂದೋಲನ

ಪ್ರಧಾನಿಗಳೇ ಎಂಎಸ್‌ಪಿ ಎಲ್ಲಿದೆ ತೋರಿಸಿ?: ಇಂದಿನಿಂದ ರಾಜ್ಯದಲ್ಲಿ ಆಂದೋಲನ

ಸ್ವಾಮಿನಾಥನ್ ವರದಿ ಪ್ರಕಾರ ರೈತರಿಗೆ ಒಂದೂವರೆ ಪಟ್ಟು ಬೆಲೆ ಸಿಗಬೇಕು. ಆದರೆ, ಒಂದೂವರೆ ಪಟ್ಟು ಇರಲಿ, ಎಂಎಸ್‌ಪಿ ಸಹ ಸಿಗುತ್ತಿಲ್ಲ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.

- Advertisement -
- Advertisement -

ವಿವಾದಿತ ಕೃಷಿ ಕಾನೂನಗಳನ್ನು ರದ್ದುಗೊಳಿಸಬೇಕೆಂದು ಒಕ್ಕೂಟ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿರುವ ರೈತರು ಕನಿಷ್ಠ ಬೆಂಬಲ ಬೆಲೆಯ ಬಗ್ಗೆ ದೇಶದ ರೈತರ ಗಮನ ಸೆಳೆದಿದ್ದಾರೆ. ಪ್ರಧಾನಿಗಳು ಸಂಸತ್ತಿನಲ್ಲಿ ಮಾತನಾಡುತ್ತ ಎಂಎಸ್‌ಪಿ ಹಿಂದೆಯೂ ಇತ್ತು, ಈಗಲೂ ಇದೆ ಮತ್ತು ಮುಂದೆಯೂ ಇರಲಿದೆ ಎಂದು ಘೋಷಿಸಿದ್ದರು. ಆದರೆ ರೈತ ಹೋರಾಟಗಾರರು ಆ ಹೇಳಿಕೆ ಸುಳ್ಳು ಎಂದು ಆಕ್ರೋಶಪಡಿಸಿ, ಪ್ರಧಾನಿಗಳೇ ಎಂಎಸ್‌ಪಿ ಎಲ್ಲಿದೆ ತೋರಿಸಿ ಎಂದು ಪ್ರಶ್ನಿಸಿದ್ದಾರೆ. ಈ ಕುರಿತು ರಾಜ್ಯದಲ್ಲಿಯೂ ಈಗ ಬೆಂಬಲ ಬೆಲೆ ಕೊಡಿಸಿ ಆಂದೋಲನ ಆರಂಭವಾಗಿದ್ದು, ಸ್ವರಾಜ್ ಇಂಡಿಯಾದ ಅಧ್ಯಕ್ಷ ಯೋಗೇಂದ್ರ ಯಾದವ್ ಚಾಲನೆ ನೀಡಿದ್ದಾರೆ.

ರಾಜ್ಯದಲ್ಲಿ ಬೆಳೆಯಲಾಗುವ ಬೆಳೆಗಳಲ್ಲಿ ಯಾವ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಇದೆ. ಯಾವುದಕ್ಕೆ ಎಷ್ಟು ಎಂಎಸ್‌ಪಿ ಸಿಗುತ್ತಿದೆ ಎಂಬ ಮಾಹಿತಿಯೇ ಅನೇಕ ರೈತರಿಗೆ ಇಲ್ಲ. ಕೃಷಿ ಕಾನೂನುಗಳ ವಿರುದ್ಧದ ಹೋರಾಟದ ಜೊತೆಗೆ ಎಂಎಸ್‌ಪಿ ಬಗ್ಗೆ ತೀವ್ರ ಚರ್ಚೆಯನ್ನು ಹುಟ್ಟು ಹಾಕಿರುವುದು ಈ ರೈತ ಹೋರಾಟವೇ. ಇದರಿಂದ ರಾಜ್ಯದಲ್ಲಿ ಎಂಎಸ್‌ಪಿ ಬಗ್ಗೆ ಚರ್ಚೆ ನಡೆಯುತ್ತಿದೆ.

ರಾಜ್ಯದಲ್ಲಿ ಮೂರು ದಿನಗಳ ಕಾಲ ಮಾರ್ಚ್ 5 ರಿಂದ 7ರ ವರೆಗೆ ’ಬೆಂಬಲ ಬೆಲೆ ಕೊಡಿಸಿ’ ಆಂದೋಲನ ನಡೆಯಲಿದೆ. ಗುಲ್ಬರ್ಗಾದಲ್ಲಿ ಮಾರ್ಚ್ 5, ಬಳ್ಳಾರಿ ಮಾರ್ಚ್ 6, ಶಿವಮೊಗ್ಗ, ಸಾಗರದಲ್ಲಿ ಮಾರ್ಚ್7 ಆಂದೋಲನ ನಡೆಯುತ್ತಿದ್ದು, ಅಂದೇ ಬೆಂಗಳೂರಿನಲ್ಲಿ ಈ ಆಂದೋಲನದ ಪತ್ರಿಕಾಗೋಷ್ಠಿ ನಡೆಯಲಿದೆ.

ಇದನ್ನೂ ಓದಿ: ಪಂಚರಾಜ್ಯ ಚುನಾವಣೆ: ಬಿಜೆಪಿ ವಿರುದ್ಧ ಅಭಿಯಾನಕ್ಕೆ ಮುಂದಾದ ದೆಹಲಿ ರೈತ ಮುಖಂಡರು

ಮಾರ್ಚ್ 2 ರಂದು ಸಂಯುಕ್ತ ಕಿಸಾನ್ ಮೋರ್ಚಾ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ರೈತ ಮುಖಂಡರು ಮಾಹಿತಿ ನೀಡಿದ್ದರು. ಕರ್ನಾಟಕದ ರೈತರು ಎಂಎಸ್‌ಪಿಗಿಂತ ಕನಿಷ್ಠ ಒಂದು ಸಾವಿರ ಕಡಿಮೆ ಬೆಲೆ ಪಡೆಯುತ್ತಿದ್ದಾರೆ. ಹೀಗಾಗಿ ಮಾರ್ಚ್ 5 ರಿಂದ ಕರ್ನಾಟಕದಲ್ಲಿ ‘ಎಂಎಸ್‌ಪಿ ದಿಲಾವ್’ ಆಂದೋಲನವನ್ನು ಪ್ರಾರಂಭಿಸಲಾಗುವುದು.  ಬೆಳೆಗಳಿಗೆ ಎಂಎಸ್‌ಪಿ ಖಾತ್ರಿಪಡಿಸಿಕೊಡುವಂತೆ ಪ್ರಧಾನಮಂತ್ರಿ ಅವರನ್ನು ಒತ್ತಾಯಿಸುತ್ತೇವೆ ಎಂದು ಪತ್ರಿಕಾಗೋಷ್ಠಿಯಲ್ಲಿ ಯೋಗೇಂದ್ರ ಯಾದವ್ ತಿಳಿಸಿದ್ದರು.

ಇಡೀ ದೇಶದ ರೈತ ಚಳವಳಿಗಳು ರೈತರ ಬೆಳೆಗೆ ವೈಜ್ಞಾನಿಕವಾಗಿ ಬೆಲೆ ನಿಗದಿ ಮಾಡಿ, ನಮ್ಮ ದುಡಿಮೆಗೆ ನ್ಯಾಯಯುತ ಫಲ ಸಿಗುವಂತೆ ಮಾಡಿ, ರೈತರ ಬೆಳೆಗೆ ನ್ಯಾಯಯುತ ಬೆಲೆ ಬೇಕು ಎಂದು ಆಗ್ರಹಿಸುತ್ತಾ ಬಂದಿದ್ದಾರೆ. ದೆಹಲಿ ಮತ್ತು ದೇಶದಾದ್ಯಂತ ಇಂದು ನಡೆಯುತ್ತಿರುವ ಹೋರಾಟದ ಪ್ರಮುಖ ಹಕ್ಕೊತ್ತಾಯಗಳಲ್ಲಿ ಅದೂ ಒಂದಾಗಿದೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.

ಇದನ್ನೂ ಓದಿ: ಹತ್ರಾಸ್, ಬಿಜ್ನೋರ್‌ ಗಳಲ್ಲಿ ಬೃಹತ್ ಮಹಾಪಂಚಾಯತ್: ಸರ್ಕಾರದ ವಿರುದ್ಧ ರೈತರ ಗುಡುಗು

ರೈತರ ಎಲ್ಲಾ ಬೆಳೆಗಳಿಗೂ ಕನಿಷ್ಟ ಬೆಂಬಲ ಬೆಲೆ ನಿಗದಿ ಮಾಡಿ ಅದನ್ನು ಕಾಯ್ದೆ ಮಾಡಬೇಕು. ಬೆಂಬಲ ಬೆಲೆಗಿಂತ ಕಡಿಮೆ ದರದಲ್ಲಿ ವ್ಯಾಪಾರ ಮಾಡುವುದು ಅಪರಾಧ ಎಂದು ಘೋಷಿಸಿ, ಕನಿಷ್ಟ ಆ ದರವನ್ನು ಎಲ್ಲಾ ವ್ಯಾಪಾರಿಗಳೂ ಕೊಡಲೇಬೇಕು ಎಂಬ ಕಾನೂನು ಮಾಡಬೇಕು. ಖಾಸಗಿ ವ್ಯಾಪಾರಿಗಳು ಕೊಡದಿದ್ದರೆ ಸರ್ಕಾರ ಮುಂದೆ ನಿಂತು ರೈತರ ಬೆಳೆ ಖರೀದಿಸಿ, ಮಾರುಕಟೆ ಗೆ ವಿತರಿಸಬೇಕು. ವಾಸ್ತವದಲ್ಲಿ ಸ್ವಾಮಿನಾಥನ್ ವರದಿ ಆಧರಿಸಿ ರೈತರ ಎಲ್ಲಾ ಬೆಳೆಗಳಿಗೂ ಬೆಲೆ ನಿಗದಿ ಮಾಡಿ ಎಂದು ಕೇಳುತ್ತಿದ್ದೇವೆ ಎಂದು ರೈತ ಸಂಘಟನೆ ಹೇಳಿದೆ.

ಸ್ವಾಮಿನಾಥನ್ ವರದಿಯನ್ನು ಜಾರಿಗೆ ತರುತ್ತೇವೆ ಎಂದು ಎಲ್ಲಾ ರಾಜಕೀಯ ಪಕ್ಷಗಳೂ ಚುನಾವಣೆ ಸಂದರ್ಭದಲ್ಲಿ ಹೇಳಿದರೂ ಅಧಿಕಾರಕ್ಕೆ ಬಂದ ಕೂಡಲೇ ಹೇಳೇ ಇಲ್ಲವೇನೋ ಎಂಬಂತೆ ಮುಖ ತಿರುಗಿಸುತ್ತಿದ್ದಾರೆ. ಸ್ವಾಮಿನಾಥನ್ ವರದಿ ಪ್ರಕಾರ ರೈತರಿಗೆ ಒಂದೂವರೆ ಪಟ್ಟು ಬೆಲೆ ಸಿಗಬೇಕು. ಆದರೆ, ಒಂದೂವರೆ ಪಟ್ಟು ಇರಲಿ, ಇವರು ಒಪ್ಪಿರುವ ಕನಿಷ್ಟ ಬೆಂಬಲ ಬೆಲೆಯನ್ನೂ ರೈತರಿಗೆ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಹೋರಾಟ ನಡೆಸುತ್ತಿರುವ ರೈತರು ಸೃಷ್ಟಿಸಿರುವ ಒತ್ತಡದ ಪರಿಣಾಮವಾಗಿ ಪ್ರಧಾನಿಗಳು ಕೊನೆಗೂ ಎಂಎಸ್‌ಪಿ ಬಗ್ಗೆ ಮಾತನಾಡಿದ್ದಾರೆ. ಆದರೆ, ಎಂಎಸ್‌ಪಿ ಥಾ, ಹೈ, ರಹೇಗಾ ಎಂದಿದ್ದಾರೆ. ಅಂದರೆ ಕನಿಷ್ಟ ಬೆಂಬಲ ಬೆಲೆ ಇತ್ತು, ಇದೆ, ಇರುತ್ತೆ ಎಂದು ಅರ್ಥ. ಪ್ರಧಾನಿಯವರ ಈ ಮಾತಿಗೆ ಪ್ರತಿಕ್ರಿಯೆಯಾಗಿ, 400 ಕ್ಕೂ ಹೆಚ್ಚು ರೈತ ಸಂಘಟನೆಗಳನ್ನು ಒಳಗೊಂಡಿರುವ ಸಂಯುಕ್ತ ಕಿಸಾನ ಮೋರ್ಚಾ ಎಂಎಸ್‌ಪಿ ಕೊಡಿಸಿ ಆಂದೋಲನ ಪ್ರಾರಂಭಿಸಿದೆ. ಈ ಆಂದೋಲನ ಕರ್ನಾಟಕದಿಂದ ಆರಂಭವಾಗಲಿದೆ ಎಂದು ಎಸ್‌ಕೆಎಂ ತಿಳಿಸಿದೆ.


ಇದನ್ನೂ ಓದಿ: ರೈತ ಹೋರಾಟ: ಕಡು ಬೇಸಿಗೆ ಎದುರಿಸಲು ಸಿದ್ದರಾಗುತ್ತಿದ್ದಾರೆ ಅನ್ನದಾತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...