Homeಚಳವಳಿಪ್ರಧಾನಿಗಳೇ ಎಂಎಸ್‌ಪಿ ಎಲ್ಲಿದೆ ತೋರಿಸಿ?: ಇಂದಿನಿಂದ ರಾಜ್ಯದಲ್ಲಿ ಆಂದೋಲನ

ಪ್ರಧಾನಿಗಳೇ ಎಂಎಸ್‌ಪಿ ಎಲ್ಲಿದೆ ತೋರಿಸಿ?: ಇಂದಿನಿಂದ ರಾಜ್ಯದಲ್ಲಿ ಆಂದೋಲನ

ಸ್ವಾಮಿನಾಥನ್ ವರದಿ ಪ್ರಕಾರ ರೈತರಿಗೆ ಒಂದೂವರೆ ಪಟ್ಟು ಬೆಲೆ ಸಿಗಬೇಕು. ಆದರೆ, ಒಂದೂವರೆ ಪಟ್ಟು ಇರಲಿ, ಎಂಎಸ್‌ಪಿ ಸಹ ಸಿಗುತ್ತಿಲ್ಲ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.

- Advertisement -
- Advertisement -

ವಿವಾದಿತ ಕೃಷಿ ಕಾನೂನಗಳನ್ನು ರದ್ದುಗೊಳಿಸಬೇಕೆಂದು ಒಕ್ಕೂಟ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿರುವ ರೈತರು ಕನಿಷ್ಠ ಬೆಂಬಲ ಬೆಲೆಯ ಬಗ್ಗೆ ದೇಶದ ರೈತರ ಗಮನ ಸೆಳೆದಿದ್ದಾರೆ. ಪ್ರಧಾನಿಗಳು ಸಂಸತ್ತಿನಲ್ಲಿ ಮಾತನಾಡುತ್ತ ಎಂಎಸ್‌ಪಿ ಹಿಂದೆಯೂ ಇತ್ತು, ಈಗಲೂ ಇದೆ ಮತ್ತು ಮುಂದೆಯೂ ಇರಲಿದೆ ಎಂದು ಘೋಷಿಸಿದ್ದರು. ಆದರೆ ರೈತ ಹೋರಾಟಗಾರರು ಆ ಹೇಳಿಕೆ ಸುಳ್ಳು ಎಂದು ಆಕ್ರೋಶಪಡಿಸಿ, ಪ್ರಧಾನಿಗಳೇ ಎಂಎಸ್‌ಪಿ ಎಲ್ಲಿದೆ ತೋರಿಸಿ ಎಂದು ಪ್ರಶ್ನಿಸಿದ್ದಾರೆ. ಈ ಕುರಿತು ರಾಜ್ಯದಲ್ಲಿಯೂ ಈಗ ಬೆಂಬಲ ಬೆಲೆ ಕೊಡಿಸಿ ಆಂದೋಲನ ಆರಂಭವಾಗಿದ್ದು, ಸ್ವರಾಜ್ ಇಂಡಿಯಾದ ಅಧ್ಯಕ್ಷ ಯೋಗೇಂದ್ರ ಯಾದವ್ ಚಾಲನೆ ನೀಡಿದ್ದಾರೆ.

ರಾಜ್ಯದಲ್ಲಿ ಬೆಳೆಯಲಾಗುವ ಬೆಳೆಗಳಲ್ಲಿ ಯಾವ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಇದೆ. ಯಾವುದಕ್ಕೆ ಎಷ್ಟು ಎಂಎಸ್‌ಪಿ ಸಿಗುತ್ತಿದೆ ಎಂಬ ಮಾಹಿತಿಯೇ ಅನೇಕ ರೈತರಿಗೆ ಇಲ್ಲ. ಕೃಷಿ ಕಾನೂನುಗಳ ವಿರುದ್ಧದ ಹೋರಾಟದ ಜೊತೆಗೆ ಎಂಎಸ್‌ಪಿ ಬಗ್ಗೆ ತೀವ್ರ ಚರ್ಚೆಯನ್ನು ಹುಟ್ಟು ಹಾಕಿರುವುದು ಈ ರೈತ ಹೋರಾಟವೇ. ಇದರಿಂದ ರಾಜ್ಯದಲ್ಲಿ ಎಂಎಸ್‌ಪಿ ಬಗ್ಗೆ ಚರ್ಚೆ ನಡೆಯುತ್ತಿದೆ.

ರಾಜ್ಯದಲ್ಲಿ ಮೂರು ದಿನಗಳ ಕಾಲ ಮಾರ್ಚ್ 5 ರಿಂದ 7ರ ವರೆಗೆ ’ಬೆಂಬಲ ಬೆಲೆ ಕೊಡಿಸಿ’ ಆಂದೋಲನ ನಡೆಯಲಿದೆ. ಗುಲ್ಬರ್ಗಾದಲ್ಲಿ ಮಾರ್ಚ್ 5, ಬಳ್ಳಾರಿ ಮಾರ್ಚ್ 6, ಶಿವಮೊಗ್ಗ, ಸಾಗರದಲ್ಲಿ ಮಾರ್ಚ್7 ಆಂದೋಲನ ನಡೆಯುತ್ತಿದ್ದು, ಅಂದೇ ಬೆಂಗಳೂರಿನಲ್ಲಿ ಈ ಆಂದೋಲನದ ಪತ್ರಿಕಾಗೋಷ್ಠಿ ನಡೆಯಲಿದೆ.

ಇದನ್ನೂ ಓದಿ: ಪಂಚರಾಜ್ಯ ಚುನಾವಣೆ: ಬಿಜೆಪಿ ವಿರುದ್ಧ ಅಭಿಯಾನಕ್ಕೆ ಮುಂದಾದ ದೆಹಲಿ ರೈತ ಮುಖಂಡರು

ಮಾರ್ಚ್ 2 ರಂದು ಸಂಯುಕ್ತ ಕಿಸಾನ್ ಮೋರ್ಚಾ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ರೈತ ಮುಖಂಡರು ಮಾಹಿತಿ ನೀಡಿದ್ದರು. ಕರ್ನಾಟಕದ ರೈತರು ಎಂಎಸ್‌ಪಿಗಿಂತ ಕನಿಷ್ಠ ಒಂದು ಸಾವಿರ ಕಡಿಮೆ ಬೆಲೆ ಪಡೆಯುತ್ತಿದ್ದಾರೆ. ಹೀಗಾಗಿ ಮಾರ್ಚ್ 5 ರಿಂದ ಕರ್ನಾಟಕದಲ್ಲಿ ‘ಎಂಎಸ್‌ಪಿ ದಿಲಾವ್’ ಆಂದೋಲನವನ್ನು ಪ್ರಾರಂಭಿಸಲಾಗುವುದು.  ಬೆಳೆಗಳಿಗೆ ಎಂಎಸ್‌ಪಿ ಖಾತ್ರಿಪಡಿಸಿಕೊಡುವಂತೆ ಪ್ರಧಾನಮಂತ್ರಿ ಅವರನ್ನು ಒತ್ತಾಯಿಸುತ್ತೇವೆ ಎಂದು ಪತ್ರಿಕಾಗೋಷ್ಠಿಯಲ್ಲಿ ಯೋಗೇಂದ್ರ ಯಾದವ್ ತಿಳಿಸಿದ್ದರು.

ಇಡೀ ದೇಶದ ರೈತ ಚಳವಳಿಗಳು ರೈತರ ಬೆಳೆಗೆ ವೈಜ್ಞಾನಿಕವಾಗಿ ಬೆಲೆ ನಿಗದಿ ಮಾಡಿ, ನಮ್ಮ ದುಡಿಮೆಗೆ ನ್ಯಾಯಯುತ ಫಲ ಸಿಗುವಂತೆ ಮಾಡಿ, ರೈತರ ಬೆಳೆಗೆ ನ್ಯಾಯಯುತ ಬೆಲೆ ಬೇಕು ಎಂದು ಆಗ್ರಹಿಸುತ್ತಾ ಬಂದಿದ್ದಾರೆ. ದೆಹಲಿ ಮತ್ತು ದೇಶದಾದ್ಯಂತ ಇಂದು ನಡೆಯುತ್ತಿರುವ ಹೋರಾಟದ ಪ್ರಮುಖ ಹಕ್ಕೊತ್ತಾಯಗಳಲ್ಲಿ ಅದೂ ಒಂದಾಗಿದೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.

ಇದನ್ನೂ ಓದಿ: ಹತ್ರಾಸ್, ಬಿಜ್ನೋರ್‌ ಗಳಲ್ಲಿ ಬೃಹತ್ ಮಹಾಪಂಚಾಯತ್: ಸರ್ಕಾರದ ವಿರುದ್ಧ ರೈತರ ಗುಡುಗು

ರೈತರ ಎಲ್ಲಾ ಬೆಳೆಗಳಿಗೂ ಕನಿಷ್ಟ ಬೆಂಬಲ ಬೆಲೆ ನಿಗದಿ ಮಾಡಿ ಅದನ್ನು ಕಾಯ್ದೆ ಮಾಡಬೇಕು. ಬೆಂಬಲ ಬೆಲೆಗಿಂತ ಕಡಿಮೆ ದರದಲ್ಲಿ ವ್ಯಾಪಾರ ಮಾಡುವುದು ಅಪರಾಧ ಎಂದು ಘೋಷಿಸಿ, ಕನಿಷ್ಟ ಆ ದರವನ್ನು ಎಲ್ಲಾ ವ್ಯಾಪಾರಿಗಳೂ ಕೊಡಲೇಬೇಕು ಎಂಬ ಕಾನೂನು ಮಾಡಬೇಕು. ಖಾಸಗಿ ವ್ಯಾಪಾರಿಗಳು ಕೊಡದಿದ್ದರೆ ಸರ್ಕಾರ ಮುಂದೆ ನಿಂತು ರೈತರ ಬೆಳೆ ಖರೀದಿಸಿ, ಮಾರುಕಟೆ ಗೆ ವಿತರಿಸಬೇಕು. ವಾಸ್ತವದಲ್ಲಿ ಸ್ವಾಮಿನಾಥನ್ ವರದಿ ಆಧರಿಸಿ ರೈತರ ಎಲ್ಲಾ ಬೆಳೆಗಳಿಗೂ ಬೆಲೆ ನಿಗದಿ ಮಾಡಿ ಎಂದು ಕೇಳುತ್ತಿದ್ದೇವೆ ಎಂದು ರೈತ ಸಂಘಟನೆ ಹೇಳಿದೆ.

ಸ್ವಾಮಿನಾಥನ್ ವರದಿಯನ್ನು ಜಾರಿಗೆ ತರುತ್ತೇವೆ ಎಂದು ಎಲ್ಲಾ ರಾಜಕೀಯ ಪಕ್ಷಗಳೂ ಚುನಾವಣೆ ಸಂದರ್ಭದಲ್ಲಿ ಹೇಳಿದರೂ ಅಧಿಕಾರಕ್ಕೆ ಬಂದ ಕೂಡಲೇ ಹೇಳೇ ಇಲ್ಲವೇನೋ ಎಂಬಂತೆ ಮುಖ ತಿರುಗಿಸುತ್ತಿದ್ದಾರೆ. ಸ್ವಾಮಿನಾಥನ್ ವರದಿ ಪ್ರಕಾರ ರೈತರಿಗೆ ಒಂದೂವರೆ ಪಟ್ಟು ಬೆಲೆ ಸಿಗಬೇಕು. ಆದರೆ, ಒಂದೂವರೆ ಪಟ್ಟು ಇರಲಿ, ಇವರು ಒಪ್ಪಿರುವ ಕನಿಷ್ಟ ಬೆಂಬಲ ಬೆಲೆಯನ್ನೂ ರೈತರಿಗೆ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಹೋರಾಟ ನಡೆಸುತ್ತಿರುವ ರೈತರು ಸೃಷ್ಟಿಸಿರುವ ಒತ್ತಡದ ಪರಿಣಾಮವಾಗಿ ಪ್ರಧಾನಿಗಳು ಕೊನೆಗೂ ಎಂಎಸ್‌ಪಿ ಬಗ್ಗೆ ಮಾತನಾಡಿದ್ದಾರೆ. ಆದರೆ, ಎಂಎಸ್‌ಪಿ ಥಾ, ಹೈ, ರಹೇಗಾ ಎಂದಿದ್ದಾರೆ. ಅಂದರೆ ಕನಿಷ್ಟ ಬೆಂಬಲ ಬೆಲೆ ಇತ್ತು, ಇದೆ, ಇರುತ್ತೆ ಎಂದು ಅರ್ಥ. ಪ್ರಧಾನಿಯವರ ಈ ಮಾತಿಗೆ ಪ್ರತಿಕ್ರಿಯೆಯಾಗಿ, 400 ಕ್ಕೂ ಹೆಚ್ಚು ರೈತ ಸಂಘಟನೆಗಳನ್ನು ಒಳಗೊಂಡಿರುವ ಸಂಯುಕ್ತ ಕಿಸಾನ ಮೋರ್ಚಾ ಎಂಎಸ್‌ಪಿ ಕೊಡಿಸಿ ಆಂದೋಲನ ಪ್ರಾರಂಭಿಸಿದೆ. ಈ ಆಂದೋಲನ ಕರ್ನಾಟಕದಿಂದ ಆರಂಭವಾಗಲಿದೆ ಎಂದು ಎಸ್‌ಕೆಎಂ ತಿಳಿಸಿದೆ.


ಇದನ್ನೂ ಓದಿ: ರೈತ ಹೋರಾಟ: ಕಡು ಬೇಸಿಗೆ ಎದುರಿಸಲು ಸಿದ್ದರಾಗುತ್ತಿದ್ದಾರೆ ಅನ್ನದಾತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...