Homeಚಳವಳಿಪ್ರಧಾನಿಗಳೇ ಎಂಎಸ್‌ಪಿ ಎಲ್ಲಿದೆ ತೋರಿಸಿ?: ಇಂದಿನಿಂದ ರಾಜ್ಯದಲ್ಲಿ ಆಂದೋಲನ

ಪ್ರಧಾನಿಗಳೇ ಎಂಎಸ್‌ಪಿ ಎಲ್ಲಿದೆ ತೋರಿಸಿ?: ಇಂದಿನಿಂದ ರಾಜ್ಯದಲ್ಲಿ ಆಂದೋಲನ

ಸ್ವಾಮಿನಾಥನ್ ವರದಿ ಪ್ರಕಾರ ರೈತರಿಗೆ ಒಂದೂವರೆ ಪಟ್ಟು ಬೆಲೆ ಸಿಗಬೇಕು. ಆದರೆ, ಒಂದೂವರೆ ಪಟ್ಟು ಇರಲಿ, ಎಂಎಸ್‌ಪಿ ಸಹ ಸಿಗುತ್ತಿಲ್ಲ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.

- Advertisement -
- Advertisement -

ವಿವಾದಿತ ಕೃಷಿ ಕಾನೂನಗಳನ್ನು ರದ್ದುಗೊಳಿಸಬೇಕೆಂದು ಒಕ್ಕೂಟ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿರುವ ರೈತರು ಕನಿಷ್ಠ ಬೆಂಬಲ ಬೆಲೆಯ ಬಗ್ಗೆ ದೇಶದ ರೈತರ ಗಮನ ಸೆಳೆದಿದ್ದಾರೆ. ಪ್ರಧಾನಿಗಳು ಸಂಸತ್ತಿನಲ್ಲಿ ಮಾತನಾಡುತ್ತ ಎಂಎಸ್‌ಪಿ ಹಿಂದೆಯೂ ಇತ್ತು, ಈಗಲೂ ಇದೆ ಮತ್ತು ಮುಂದೆಯೂ ಇರಲಿದೆ ಎಂದು ಘೋಷಿಸಿದ್ದರು. ಆದರೆ ರೈತ ಹೋರಾಟಗಾರರು ಆ ಹೇಳಿಕೆ ಸುಳ್ಳು ಎಂದು ಆಕ್ರೋಶಪಡಿಸಿ, ಪ್ರಧಾನಿಗಳೇ ಎಂಎಸ್‌ಪಿ ಎಲ್ಲಿದೆ ತೋರಿಸಿ ಎಂದು ಪ್ರಶ್ನಿಸಿದ್ದಾರೆ. ಈ ಕುರಿತು ರಾಜ್ಯದಲ್ಲಿಯೂ ಈಗ ಬೆಂಬಲ ಬೆಲೆ ಕೊಡಿಸಿ ಆಂದೋಲನ ಆರಂಭವಾಗಿದ್ದು, ಸ್ವರಾಜ್ ಇಂಡಿಯಾದ ಅಧ್ಯಕ್ಷ ಯೋಗೇಂದ್ರ ಯಾದವ್ ಚಾಲನೆ ನೀಡಿದ್ದಾರೆ.

ರಾಜ್ಯದಲ್ಲಿ ಬೆಳೆಯಲಾಗುವ ಬೆಳೆಗಳಲ್ಲಿ ಯಾವ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಇದೆ. ಯಾವುದಕ್ಕೆ ಎಷ್ಟು ಎಂಎಸ್‌ಪಿ ಸಿಗುತ್ತಿದೆ ಎಂಬ ಮಾಹಿತಿಯೇ ಅನೇಕ ರೈತರಿಗೆ ಇಲ್ಲ. ಕೃಷಿ ಕಾನೂನುಗಳ ವಿರುದ್ಧದ ಹೋರಾಟದ ಜೊತೆಗೆ ಎಂಎಸ್‌ಪಿ ಬಗ್ಗೆ ತೀವ್ರ ಚರ್ಚೆಯನ್ನು ಹುಟ್ಟು ಹಾಕಿರುವುದು ಈ ರೈತ ಹೋರಾಟವೇ. ಇದರಿಂದ ರಾಜ್ಯದಲ್ಲಿ ಎಂಎಸ್‌ಪಿ ಬಗ್ಗೆ ಚರ್ಚೆ ನಡೆಯುತ್ತಿದೆ.

ರಾಜ್ಯದಲ್ಲಿ ಮೂರು ದಿನಗಳ ಕಾಲ ಮಾರ್ಚ್ 5 ರಿಂದ 7ರ ವರೆಗೆ ’ಬೆಂಬಲ ಬೆಲೆ ಕೊಡಿಸಿ’ ಆಂದೋಲನ ನಡೆಯಲಿದೆ. ಗುಲ್ಬರ್ಗಾದಲ್ಲಿ ಮಾರ್ಚ್ 5, ಬಳ್ಳಾರಿ ಮಾರ್ಚ್ 6, ಶಿವಮೊಗ್ಗ, ಸಾಗರದಲ್ಲಿ ಮಾರ್ಚ್7 ಆಂದೋಲನ ನಡೆಯುತ್ತಿದ್ದು, ಅಂದೇ ಬೆಂಗಳೂರಿನಲ್ಲಿ ಈ ಆಂದೋಲನದ ಪತ್ರಿಕಾಗೋಷ್ಠಿ ನಡೆಯಲಿದೆ.

ಇದನ್ನೂ ಓದಿ: ಪಂಚರಾಜ್ಯ ಚುನಾವಣೆ: ಬಿಜೆಪಿ ವಿರುದ್ಧ ಅಭಿಯಾನಕ್ಕೆ ಮುಂದಾದ ದೆಹಲಿ ರೈತ ಮುಖಂಡರು

ಮಾರ್ಚ್ 2 ರಂದು ಸಂಯುಕ್ತ ಕಿಸಾನ್ ಮೋರ್ಚಾ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ರೈತ ಮುಖಂಡರು ಮಾಹಿತಿ ನೀಡಿದ್ದರು. ಕರ್ನಾಟಕದ ರೈತರು ಎಂಎಸ್‌ಪಿಗಿಂತ ಕನಿಷ್ಠ ಒಂದು ಸಾವಿರ ಕಡಿಮೆ ಬೆಲೆ ಪಡೆಯುತ್ತಿದ್ದಾರೆ. ಹೀಗಾಗಿ ಮಾರ್ಚ್ 5 ರಿಂದ ಕರ್ನಾಟಕದಲ್ಲಿ ‘ಎಂಎಸ್‌ಪಿ ದಿಲಾವ್’ ಆಂದೋಲನವನ್ನು ಪ್ರಾರಂಭಿಸಲಾಗುವುದು.  ಬೆಳೆಗಳಿಗೆ ಎಂಎಸ್‌ಪಿ ಖಾತ್ರಿಪಡಿಸಿಕೊಡುವಂತೆ ಪ್ರಧಾನಮಂತ್ರಿ ಅವರನ್ನು ಒತ್ತಾಯಿಸುತ್ತೇವೆ ಎಂದು ಪತ್ರಿಕಾಗೋಷ್ಠಿಯಲ್ಲಿ ಯೋಗೇಂದ್ರ ಯಾದವ್ ತಿಳಿಸಿದ್ದರು.

ಇಡೀ ದೇಶದ ರೈತ ಚಳವಳಿಗಳು ರೈತರ ಬೆಳೆಗೆ ವೈಜ್ಞಾನಿಕವಾಗಿ ಬೆಲೆ ನಿಗದಿ ಮಾಡಿ, ನಮ್ಮ ದುಡಿಮೆಗೆ ನ್ಯಾಯಯುತ ಫಲ ಸಿಗುವಂತೆ ಮಾಡಿ, ರೈತರ ಬೆಳೆಗೆ ನ್ಯಾಯಯುತ ಬೆಲೆ ಬೇಕು ಎಂದು ಆಗ್ರಹಿಸುತ್ತಾ ಬಂದಿದ್ದಾರೆ. ದೆಹಲಿ ಮತ್ತು ದೇಶದಾದ್ಯಂತ ಇಂದು ನಡೆಯುತ್ತಿರುವ ಹೋರಾಟದ ಪ್ರಮುಖ ಹಕ್ಕೊತ್ತಾಯಗಳಲ್ಲಿ ಅದೂ ಒಂದಾಗಿದೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.

ಇದನ್ನೂ ಓದಿ: ಹತ್ರಾಸ್, ಬಿಜ್ನೋರ್‌ ಗಳಲ್ಲಿ ಬೃಹತ್ ಮಹಾಪಂಚಾಯತ್: ಸರ್ಕಾರದ ವಿರುದ್ಧ ರೈತರ ಗುಡುಗು

ರೈತರ ಎಲ್ಲಾ ಬೆಳೆಗಳಿಗೂ ಕನಿಷ್ಟ ಬೆಂಬಲ ಬೆಲೆ ನಿಗದಿ ಮಾಡಿ ಅದನ್ನು ಕಾಯ್ದೆ ಮಾಡಬೇಕು. ಬೆಂಬಲ ಬೆಲೆಗಿಂತ ಕಡಿಮೆ ದರದಲ್ಲಿ ವ್ಯಾಪಾರ ಮಾಡುವುದು ಅಪರಾಧ ಎಂದು ಘೋಷಿಸಿ, ಕನಿಷ್ಟ ಆ ದರವನ್ನು ಎಲ್ಲಾ ವ್ಯಾಪಾರಿಗಳೂ ಕೊಡಲೇಬೇಕು ಎಂಬ ಕಾನೂನು ಮಾಡಬೇಕು. ಖಾಸಗಿ ವ್ಯಾಪಾರಿಗಳು ಕೊಡದಿದ್ದರೆ ಸರ್ಕಾರ ಮುಂದೆ ನಿಂತು ರೈತರ ಬೆಳೆ ಖರೀದಿಸಿ, ಮಾರುಕಟೆ ಗೆ ವಿತರಿಸಬೇಕು. ವಾಸ್ತವದಲ್ಲಿ ಸ್ವಾಮಿನಾಥನ್ ವರದಿ ಆಧರಿಸಿ ರೈತರ ಎಲ್ಲಾ ಬೆಳೆಗಳಿಗೂ ಬೆಲೆ ನಿಗದಿ ಮಾಡಿ ಎಂದು ಕೇಳುತ್ತಿದ್ದೇವೆ ಎಂದು ರೈತ ಸಂಘಟನೆ ಹೇಳಿದೆ.

ಸ್ವಾಮಿನಾಥನ್ ವರದಿಯನ್ನು ಜಾರಿಗೆ ತರುತ್ತೇವೆ ಎಂದು ಎಲ್ಲಾ ರಾಜಕೀಯ ಪಕ್ಷಗಳೂ ಚುನಾವಣೆ ಸಂದರ್ಭದಲ್ಲಿ ಹೇಳಿದರೂ ಅಧಿಕಾರಕ್ಕೆ ಬಂದ ಕೂಡಲೇ ಹೇಳೇ ಇಲ್ಲವೇನೋ ಎಂಬಂತೆ ಮುಖ ತಿರುಗಿಸುತ್ತಿದ್ದಾರೆ. ಸ್ವಾಮಿನಾಥನ್ ವರದಿ ಪ್ರಕಾರ ರೈತರಿಗೆ ಒಂದೂವರೆ ಪಟ್ಟು ಬೆಲೆ ಸಿಗಬೇಕು. ಆದರೆ, ಒಂದೂವರೆ ಪಟ್ಟು ಇರಲಿ, ಇವರು ಒಪ್ಪಿರುವ ಕನಿಷ್ಟ ಬೆಂಬಲ ಬೆಲೆಯನ್ನೂ ರೈತರಿಗೆ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಹೋರಾಟ ನಡೆಸುತ್ತಿರುವ ರೈತರು ಸೃಷ್ಟಿಸಿರುವ ಒತ್ತಡದ ಪರಿಣಾಮವಾಗಿ ಪ್ರಧಾನಿಗಳು ಕೊನೆಗೂ ಎಂಎಸ್‌ಪಿ ಬಗ್ಗೆ ಮಾತನಾಡಿದ್ದಾರೆ. ಆದರೆ, ಎಂಎಸ್‌ಪಿ ಥಾ, ಹೈ, ರಹೇಗಾ ಎಂದಿದ್ದಾರೆ. ಅಂದರೆ ಕನಿಷ್ಟ ಬೆಂಬಲ ಬೆಲೆ ಇತ್ತು, ಇದೆ, ಇರುತ್ತೆ ಎಂದು ಅರ್ಥ. ಪ್ರಧಾನಿಯವರ ಈ ಮಾತಿಗೆ ಪ್ರತಿಕ್ರಿಯೆಯಾಗಿ, 400 ಕ್ಕೂ ಹೆಚ್ಚು ರೈತ ಸಂಘಟನೆಗಳನ್ನು ಒಳಗೊಂಡಿರುವ ಸಂಯುಕ್ತ ಕಿಸಾನ ಮೋರ್ಚಾ ಎಂಎಸ್‌ಪಿ ಕೊಡಿಸಿ ಆಂದೋಲನ ಪ್ರಾರಂಭಿಸಿದೆ. ಈ ಆಂದೋಲನ ಕರ್ನಾಟಕದಿಂದ ಆರಂಭವಾಗಲಿದೆ ಎಂದು ಎಸ್‌ಕೆಎಂ ತಿಳಿಸಿದೆ.


ಇದನ್ನೂ ಓದಿ: ರೈತ ಹೋರಾಟ: ಕಡು ಬೇಸಿಗೆ ಎದುರಿಸಲು ಸಿದ್ದರಾಗುತ್ತಿದ್ದಾರೆ ಅನ್ನದಾತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...