Homeಚಳವಳಿಪ್ರಧಾನಿಗಳೇ ಎಂಎಸ್‌ಪಿ ಎಲ್ಲಿದೆ ತೋರಿಸಿ?: ಇಂದಿನಿಂದ ರಾಜ್ಯದಲ್ಲಿ ಆಂದೋಲನ

ಪ್ರಧಾನಿಗಳೇ ಎಂಎಸ್‌ಪಿ ಎಲ್ಲಿದೆ ತೋರಿಸಿ?: ಇಂದಿನಿಂದ ರಾಜ್ಯದಲ್ಲಿ ಆಂದೋಲನ

ಸ್ವಾಮಿನಾಥನ್ ವರದಿ ಪ್ರಕಾರ ರೈತರಿಗೆ ಒಂದೂವರೆ ಪಟ್ಟು ಬೆಲೆ ಸಿಗಬೇಕು. ಆದರೆ, ಒಂದೂವರೆ ಪಟ್ಟು ಇರಲಿ, ಎಂಎಸ್‌ಪಿ ಸಹ ಸಿಗುತ್ತಿಲ್ಲ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.

- Advertisement -
- Advertisement -

ವಿವಾದಿತ ಕೃಷಿ ಕಾನೂನಗಳನ್ನು ರದ್ದುಗೊಳಿಸಬೇಕೆಂದು ಒಕ್ಕೂಟ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿರುವ ರೈತರು ಕನಿಷ್ಠ ಬೆಂಬಲ ಬೆಲೆಯ ಬಗ್ಗೆ ದೇಶದ ರೈತರ ಗಮನ ಸೆಳೆದಿದ್ದಾರೆ. ಪ್ರಧಾನಿಗಳು ಸಂಸತ್ತಿನಲ್ಲಿ ಮಾತನಾಡುತ್ತ ಎಂಎಸ್‌ಪಿ ಹಿಂದೆಯೂ ಇತ್ತು, ಈಗಲೂ ಇದೆ ಮತ್ತು ಮುಂದೆಯೂ ಇರಲಿದೆ ಎಂದು ಘೋಷಿಸಿದ್ದರು. ಆದರೆ ರೈತ ಹೋರಾಟಗಾರರು ಆ ಹೇಳಿಕೆ ಸುಳ್ಳು ಎಂದು ಆಕ್ರೋಶಪಡಿಸಿ, ಪ್ರಧಾನಿಗಳೇ ಎಂಎಸ್‌ಪಿ ಎಲ್ಲಿದೆ ತೋರಿಸಿ ಎಂದು ಪ್ರಶ್ನಿಸಿದ್ದಾರೆ. ಈ ಕುರಿತು ರಾಜ್ಯದಲ್ಲಿಯೂ ಈಗ ಬೆಂಬಲ ಬೆಲೆ ಕೊಡಿಸಿ ಆಂದೋಲನ ಆರಂಭವಾಗಿದ್ದು, ಸ್ವರಾಜ್ ಇಂಡಿಯಾದ ಅಧ್ಯಕ್ಷ ಯೋಗೇಂದ್ರ ಯಾದವ್ ಚಾಲನೆ ನೀಡಿದ್ದಾರೆ.

ರಾಜ್ಯದಲ್ಲಿ ಬೆಳೆಯಲಾಗುವ ಬೆಳೆಗಳಲ್ಲಿ ಯಾವ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಇದೆ. ಯಾವುದಕ್ಕೆ ಎಷ್ಟು ಎಂಎಸ್‌ಪಿ ಸಿಗುತ್ತಿದೆ ಎಂಬ ಮಾಹಿತಿಯೇ ಅನೇಕ ರೈತರಿಗೆ ಇಲ್ಲ. ಕೃಷಿ ಕಾನೂನುಗಳ ವಿರುದ್ಧದ ಹೋರಾಟದ ಜೊತೆಗೆ ಎಂಎಸ್‌ಪಿ ಬಗ್ಗೆ ತೀವ್ರ ಚರ್ಚೆಯನ್ನು ಹುಟ್ಟು ಹಾಕಿರುವುದು ಈ ರೈತ ಹೋರಾಟವೇ. ಇದರಿಂದ ರಾಜ್ಯದಲ್ಲಿ ಎಂಎಸ್‌ಪಿ ಬಗ್ಗೆ ಚರ್ಚೆ ನಡೆಯುತ್ತಿದೆ.

ರಾಜ್ಯದಲ್ಲಿ ಮೂರು ದಿನಗಳ ಕಾಲ ಮಾರ್ಚ್ 5 ರಿಂದ 7ರ ವರೆಗೆ ’ಬೆಂಬಲ ಬೆಲೆ ಕೊಡಿಸಿ’ ಆಂದೋಲನ ನಡೆಯಲಿದೆ. ಗುಲ್ಬರ್ಗಾದಲ್ಲಿ ಮಾರ್ಚ್ 5, ಬಳ್ಳಾರಿ ಮಾರ್ಚ್ 6, ಶಿವಮೊಗ್ಗ, ಸಾಗರದಲ್ಲಿ ಮಾರ್ಚ್7 ಆಂದೋಲನ ನಡೆಯುತ್ತಿದ್ದು, ಅಂದೇ ಬೆಂಗಳೂರಿನಲ್ಲಿ ಈ ಆಂದೋಲನದ ಪತ್ರಿಕಾಗೋಷ್ಠಿ ನಡೆಯಲಿದೆ.

ಇದನ್ನೂ ಓದಿ: ಪಂಚರಾಜ್ಯ ಚುನಾವಣೆ: ಬಿಜೆಪಿ ವಿರುದ್ಧ ಅಭಿಯಾನಕ್ಕೆ ಮುಂದಾದ ದೆಹಲಿ ರೈತ ಮುಖಂಡರು

ಮಾರ್ಚ್ 2 ರಂದು ಸಂಯುಕ್ತ ಕಿಸಾನ್ ಮೋರ್ಚಾ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ರೈತ ಮುಖಂಡರು ಮಾಹಿತಿ ನೀಡಿದ್ದರು. ಕರ್ನಾಟಕದ ರೈತರು ಎಂಎಸ್‌ಪಿಗಿಂತ ಕನಿಷ್ಠ ಒಂದು ಸಾವಿರ ಕಡಿಮೆ ಬೆಲೆ ಪಡೆಯುತ್ತಿದ್ದಾರೆ. ಹೀಗಾಗಿ ಮಾರ್ಚ್ 5 ರಿಂದ ಕರ್ನಾಟಕದಲ್ಲಿ ‘ಎಂಎಸ್‌ಪಿ ದಿಲಾವ್’ ಆಂದೋಲನವನ್ನು ಪ್ರಾರಂಭಿಸಲಾಗುವುದು.  ಬೆಳೆಗಳಿಗೆ ಎಂಎಸ್‌ಪಿ ಖಾತ್ರಿಪಡಿಸಿಕೊಡುವಂತೆ ಪ್ರಧಾನಮಂತ್ರಿ ಅವರನ್ನು ಒತ್ತಾಯಿಸುತ್ತೇವೆ ಎಂದು ಪತ್ರಿಕಾಗೋಷ್ಠಿಯಲ್ಲಿ ಯೋಗೇಂದ್ರ ಯಾದವ್ ತಿಳಿಸಿದ್ದರು.

ಇಡೀ ದೇಶದ ರೈತ ಚಳವಳಿಗಳು ರೈತರ ಬೆಳೆಗೆ ವೈಜ್ಞಾನಿಕವಾಗಿ ಬೆಲೆ ನಿಗದಿ ಮಾಡಿ, ನಮ್ಮ ದುಡಿಮೆಗೆ ನ್ಯಾಯಯುತ ಫಲ ಸಿಗುವಂತೆ ಮಾಡಿ, ರೈತರ ಬೆಳೆಗೆ ನ್ಯಾಯಯುತ ಬೆಲೆ ಬೇಕು ಎಂದು ಆಗ್ರಹಿಸುತ್ತಾ ಬಂದಿದ್ದಾರೆ. ದೆಹಲಿ ಮತ್ತು ದೇಶದಾದ್ಯಂತ ಇಂದು ನಡೆಯುತ್ತಿರುವ ಹೋರಾಟದ ಪ್ರಮುಖ ಹಕ್ಕೊತ್ತಾಯಗಳಲ್ಲಿ ಅದೂ ಒಂದಾಗಿದೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.

ಇದನ್ನೂ ಓದಿ: ಹತ್ರಾಸ್, ಬಿಜ್ನೋರ್‌ ಗಳಲ್ಲಿ ಬೃಹತ್ ಮಹಾಪಂಚಾಯತ್: ಸರ್ಕಾರದ ವಿರುದ್ಧ ರೈತರ ಗುಡುಗು

ರೈತರ ಎಲ್ಲಾ ಬೆಳೆಗಳಿಗೂ ಕನಿಷ್ಟ ಬೆಂಬಲ ಬೆಲೆ ನಿಗದಿ ಮಾಡಿ ಅದನ್ನು ಕಾಯ್ದೆ ಮಾಡಬೇಕು. ಬೆಂಬಲ ಬೆಲೆಗಿಂತ ಕಡಿಮೆ ದರದಲ್ಲಿ ವ್ಯಾಪಾರ ಮಾಡುವುದು ಅಪರಾಧ ಎಂದು ಘೋಷಿಸಿ, ಕನಿಷ್ಟ ಆ ದರವನ್ನು ಎಲ್ಲಾ ವ್ಯಾಪಾರಿಗಳೂ ಕೊಡಲೇಬೇಕು ಎಂಬ ಕಾನೂನು ಮಾಡಬೇಕು. ಖಾಸಗಿ ವ್ಯಾಪಾರಿಗಳು ಕೊಡದಿದ್ದರೆ ಸರ್ಕಾರ ಮುಂದೆ ನಿಂತು ರೈತರ ಬೆಳೆ ಖರೀದಿಸಿ, ಮಾರುಕಟೆ ಗೆ ವಿತರಿಸಬೇಕು. ವಾಸ್ತವದಲ್ಲಿ ಸ್ವಾಮಿನಾಥನ್ ವರದಿ ಆಧರಿಸಿ ರೈತರ ಎಲ್ಲಾ ಬೆಳೆಗಳಿಗೂ ಬೆಲೆ ನಿಗದಿ ಮಾಡಿ ಎಂದು ಕೇಳುತ್ತಿದ್ದೇವೆ ಎಂದು ರೈತ ಸಂಘಟನೆ ಹೇಳಿದೆ.

ಸ್ವಾಮಿನಾಥನ್ ವರದಿಯನ್ನು ಜಾರಿಗೆ ತರುತ್ತೇವೆ ಎಂದು ಎಲ್ಲಾ ರಾಜಕೀಯ ಪಕ್ಷಗಳೂ ಚುನಾವಣೆ ಸಂದರ್ಭದಲ್ಲಿ ಹೇಳಿದರೂ ಅಧಿಕಾರಕ್ಕೆ ಬಂದ ಕೂಡಲೇ ಹೇಳೇ ಇಲ್ಲವೇನೋ ಎಂಬಂತೆ ಮುಖ ತಿರುಗಿಸುತ್ತಿದ್ದಾರೆ. ಸ್ವಾಮಿನಾಥನ್ ವರದಿ ಪ್ರಕಾರ ರೈತರಿಗೆ ಒಂದೂವರೆ ಪಟ್ಟು ಬೆಲೆ ಸಿಗಬೇಕು. ಆದರೆ, ಒಂದೂವರೆ ಪಟ್ಟು ಇರಲಿ, ಇವರು ಒಪ್ಪಿರುವ ಕನಿಷ್ಟ ಬೆಂಬಲ ಬೆಲೆಯನ್ನೂ ರೈತರಿಗೆ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಹೋರಾಟ ನಡೆಸುತ್ತಿರುವ ರೈತರು ಸೃಷ್ಟಿಸಿರುವ ಒತ್ತಡದ ಪರಿಣಾಮವಾಗಿ ಪ್ರಧಾನಿಗಳು ಕೊನೆಗೂ ಎಂಎಸ್‌ಪಿ ಬಗ್ಗೆ ಮಾತನಾಡಿದ್ದಾರೆ. ಆದರೆ, ಎಂಎಸ್‌ಪಿ ಥಾ, ಹೈ, ರಹೇಗಾ ಎಂದಿದ್ದಾರೆ. ಅಂದರೆ ಕನಿಷ್ಟ ಬೆಂಬಲ ಬೆಲೆ ಇತ್ತು, ಇದೆ, ಇರುತ್ತೆ ಎಂದು ಅರ್ಥ. ಪ್ರಧಾನಿಯವರ ಈ ಮಾತಿಗೆ ಪ್ರತಿಕ್ರಿಯೆಯಾಗಿ, 400 ಕ್ಕೂ ಹೆಚ್ಚು ರೈತ ಸಂಘಟನೆಗಳನ್ನು ಒಳಗೊಂಡಿರುವ ಸಂಯುಕ್ತ ಕಿಸಾನ ಮೋರ್ಚಾ ಎಂಎಸ್‌ಪಿ ಕೊಡಿಸಿ ಆಂದೋಲನ ಪ್ರಾರಂಭಿಸಿದೆ. ಈ ಆಂದೋಲನ ಕರ್ನಾಟಕದಿಂದ ಆರಂಭವಾಗಲಿದೆ ಎಂದು ಎಸ್‌ಕೆಎಂ ತಿಳಿಸಿದೆ.


ಇದನ್ನೂ ಓದಿ: ರೈತ ಹೋರಾಟ: ಕಡು ಬೇಸಿಗೆ ಎದುರಿಸಲು ಸಿದ್ದರಾಗುತ್ತಿದ್ದಾರೆ ಅನ್ನದಾತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...