Homeಮುಖಪುಟರಾಜಕೀಯ ವ್ಯವಸ್ಥೆಯನ್ನು ಟೀಕಿಸಿ ಕೆಂಗಣ್ಣಿಗೆ ಗುರಿಯಾದ ಲೇಖಕ ವಾಸುದೇವನ್

ರಾಜಕೀಯ ವ್ಯವಸ್ಥೆಯನ್ನು ಟೀಕಿಸಿ ಕೆಂಗಣ್ಣಿಗೆ ಗುರಿಯಾದ ಲೇಖಕ ವಾಸುದೇವನ್

- Advertisement -
- Advertisement -

ಕೋಝಿಕ್ಕೋಡ್‌ನಲ್ಲಿ ನಡೆದ ಕೇರಳ ಸಾಹಿತ್ಯೋತ್ಸವದ ಏಳನೇ ಆವೃತ್ತಿಯ ಉದ್ಘಾಟನಾ ಸಮಾರಂಭದಲ್ಲಿ ಮಲಯಾಳಂನ ಹೆಸರಾಂತ ಲೇಖಕ ಮತ್ತು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಎಂ.ಟಿ ವಾಸುದೇವನ್ ನಾಯರ್ ಅವರು, ರಾಜಕೀಯ ನಾಯಕರನ್ನು ಟೀಕಿಸಿ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಸಾಹಿತ್ಯ ಸಭೆಯನ್ನುದ್ದೇಶಿಸಿ ಮಾತನಾಡಿದ ವಾಸುದೇವನ್ ಅವರು, ರಾಜಕೀಯದ ಹದಗೆಟ್ಟ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ, ರಾಜಕೀಯ ಚಟುವಟಿಕೆಗಳು ಅಧಿಕಾರವನ್ನು ಪಡೆಯುವ ಸಾಧನವಾಗಿ ಮಾರ್ಪಟ್ಟಿವೆ ಎಂದು ಕಿಡಿಕಾರಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವೇದಿಕೆಯಲ್ಲಿ ಇದ್ದರು.

ವಾಸುದೇವನ್ ಅವರು ತಮ್ಮ ಭಾಷಣದಲ್ಲಿ ಯಾವುದೇ ರಾಜಕೀಯ ನಾಯಕ ಅಥವಾ ಪಕ್ಷವನ್ನು ಉಲ್ಲೇಖಿಸಿಲ್ಲ. ಆದರೂ, ಹಿರಿಯ ಲೇಖಕನ ಭಾಷಣ ಮಾಧ್ಯಮಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದು, ವಾಸುದೇವನ್ ಅವರು ವೇದಿಕೆಯಲ್ಲಿದ್ದ ಸಿಎಂ ಪಿಣರಾಯಿ ವಿಜಯನ್ ಅವರಿಗೇ ತಮ್ಮ ಮಾತಿನ ಮೂಲಕ ತಿವಿದಿದ್ದಾರೆ ಎಂದು ಕೆಲ ನೆಟ್ಟಿಗರು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಸಿಪಿಎಂ ನಾಯಕ ಮತ್ತು ಎಲ್‌ಡಿಎಫ್ ಸಂಚಾಲಕ ಇ ಪಿ ಜಯರಾಜನ್ ಅವರು, ಮುಖ್ಯಮಂತ್ರಿಯನ್ನು ಟೀಕಿಸಿದ್ದಾರೆ ಎಂಬುವುದನ್ನು ನಿರಾಕರಿಸಿದ್ದು, ಲೇಖಕರ ಭಾಷಣವನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಪ್ರತಿಪಾದಿಸಿದ್ದಾರೆ.

ವಾಸುದೇವನ್ ಹೇಳಿದ್ದೇನು?

ರಾಜಕೀಯ ವ್ಯವಸ್ಥೆಯ ರೂಪಾಂತರ ಬಗ್ಗೆ ವಾಸುದೇವನ್ ಟೀಕೆ ವ್ಯಕ್ತಪಡಿಸಿದ್ದಾರೆ. ರಾಜಕೀಯ ವ್ಯವಸ್ಥೆ ಸಾರ್ವಜನಿಕರಿಗೆ ಸೇವೆ ಸಲ್ಲಿಸುವುದಕ್ಕಿಂತ ಸರ್ವಾಧಿಕಾರಿಯಾಗಿ ಬದಲಾಗ್ತಿದೆ ಎಂದಿದ್ದಾರೆ. ಆದರೆ, ಪಿಣರಾಯಿ ವಿಜಯನ್ ನೇತೃತ್ವದ ಕೇರಳ ಎಲ್‌ಡಿಎಫ್ ಸರ್ಕಾರವಾಗಲಿ, ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರವನ್ನಾಗಲಿ ಅವರು ನೇರವಾಗಿ ಉಲ್ಲೇಖಿಸಿಲ್ಲ.

ಅಧಿಕಾರವನ್ನು ಸಾರ್ವಜನಿಕ ಸೇವೆಗೆ ಅವಕಾಶವೆಂದು ಗುರುತಿಸಿದ ಸಿದ್ಧಾಂತವನ್ನು ನಾವು ಸಮಾಧಿ ಮಾಡಿಯಾಗಿದೆ. ರಾಜಕೀಯದಲ್ಲಿ ನೈತಿಕ ಮೌಲ್ಯಗಳ ಕುಸಿತ ಹೊಸ ಚರ್ಚೆಯ ವಿಷಯವೇನಲ್ಲ. ಅರ್ಹರು ಚುನಾವಣೆಯಲ್ಲಿ ಗೆಲ್ಲುತ್ತಿಲ್ಲ ಎಂದು ಊಹಿಸುವ ಮೂಲಕ ಈ ಚರ್ಚೆಗಳನ್ನು ಸಾಮಾನ್ಯವಾಗಿ ಪರಿಗಣಿಸಲಾಗ್ತಿದೆ. ಇಂದು, ರಾಜಕೀಯ ಚಟುವಟಿಕೆಗಳು ಅಧಿಕಾರವನ್ನು ಪಡೆಯಲು ಅನುಮೋದಿತ ತಂತ್ರವಾಗಿದೆ. ಇದನ್ನು ಪ್ರಾಬಲ್ಯ ಅಥವಾ ನಿರಂಕುಶವಾದ ಶಕ್ತಿ ಎನ್ನಬಹುದು. ಯಾರಾದರೂ ವಿಧಾನಸಭೆ ಅಥವಾ ಸಂಸತ್‌ಗೆ ಪ್ರವೇಶಿಸಿದಾಗ ಇಡೀ ವಿಧಾನಸಭೆ ಅಥವಾ ಸಂಸತ್‌ ಅನ್ನು ನಿಯಂತ್ರಿಸುವ ಅಧಿಕಾರ ಸಿಕ್ಕಂತೆ ಯೋಚಿಸಲಾಗ್ತಿದೆ ಎಂದು ವಾಸುದೇವನ್ ತಮ್ಮ ಭಾಷಣದಲ್ಲಿ ಹೇಳಿದ್ದರು.

ವಾಸುದೇವನ್ ಪ್ರತಿಕ್ರಿಯೆ:

ತನ್ನ ಭಾಷಣ ವೈರಲ್ ಆಗಿ ರಾಜಕೀಯ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ ಎಂದು ತಿಳಿದ ಬೆನ್ನಲ್ಲೇ ಎಂ.ಟಿ ವಾಸುದೇವನ್ ಅವರು ಪ್ರತಿಕ್ರಿಯೆ ನೀಡಿದ್ದು, ನಾನು ಪ್ರಸ್ತುತ ವಾಸ್ತವತೆಯನ್ನು ಎತ್ತಿ ತೋರಿಸಿದ್ದೇನೆ ಹೊರತು, ಯಾವುದೇ ಪಕ್ಷ ಅಥವಾ ವ್ಯಕ್ತಿಯನ್ನು ಗುರಿಯಾಗಿಸಿ ಮಾತನಾಡಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಯಲ್ಲಿ ‘ರಾಮ’ನಿಗಿಂತ ‘ಮೋದಿ’ಯೇ ಹೆಚ್ಚು ಗೋಚರಿಸುತ್ತಿದ್ದಾರೆ: ಆರ್‌ಜೆಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...